Homeಮುಖಪುಟಧರ್ಮಸ್ಥಳದಲ್ಲಿ ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪಾದಯಾತ್ರೆ

ಧರ್ಮಸ್ಥಳದಲ್ಲಿ ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪಾದಯಾತ್ರೆ

- Advertisement -
- Advertisement -

ಬಜರಂಗದಳ ಮುಖಂಡನಿಂದ ಹತ್ಯೆಗೊಳಗಾದ ದಲಿತ ಯುವಕನಿಗೆ ನ್ಯಾಯ ಸಿಗಬೇಕು ಮತ್ತು ಆರೋಪಿ ಕೃಷ್ಣನನ್ನು ಬಂಧಿಸಬೇಕೆಂದು ಎಂದು ಒತ್ತಾಯಿಸಿ ಬೆಳ್ತಂಗಡಿಯಿಂದ ಧರ್ಮಸ್ಥಳದ ಕನ್ಯಾಡಿವರೆಗೆ ಶುಕ್ರವಾರ ಸಂಜೆ 7 ಗಂಟೆಗೆ ಪಾದಯಾತ್ರೆ ನಡೆಸಲು ಕಾಂಗ್ರೆಸ್ ಮತ್ತು ಪ್ರಗತಿಪರ ಸಂಘಟನೆಗಳು ನಿರ್ಧರಿಸಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಬಳಿಯ ಕನ್ಯಾಡಿ ಗ್ರಾಮದ ಪರಶಿಷ್ಟ ಜಾತಿಗೆ ಸೇರಿದ ದಿನೇಶ್ (40) ಎಂಬ ಯುವಕನನ್ನು ಅದೇ ಗ್ರಾಮದ ಕೃಷ್ಣ ಎಂಬ ಬಜರಂಗದಳ ಮುಖಂಡನೊಬ್ಬ ತೀವ್ರವಾಗಿ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಆತ ಹಲ್ಲೆ ಮಾಡುತ್ತಿರುವ ದೃಶ್ಯಗಳು ಸಿಸಿ ಕ್ಯಾಮರದಲ್ಲಿ ಸೆರಯಾಗಿವೆ. ಅದರಲ್ಲಿ ದಿನೇಶ್ ಎಂಬ ದಲಿತ ಯುವಕನನ್ನು ಬಜರಂಗದಳ ಮುಖಂಡ ಕೃಷ್ಣ ಎಳೆದಾಡಿ, ಥಳಿಸುವುದು ದಾಖಲಾಗಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ವಿವರ

ಫೆಬ್ರವರಿ 23 ರಂದು ಕೃಷ್ಣ ಎಂಬ ಬಜರಂಗದಳ ಮುಖಂಡನು ದಿನೇಶ್‌ಗೆ ನಿನ್ನ ಜಮೀನನ ದಾಖಲೆಗಳನ್ನು ನಾನು ಮಾಡಿಕೊಟ್ಟಿದ್ದೇನೆ. ಆದರೆ ನೀನು ಯಾವಾಗಲೂ ಕಾಂಗ್ರೆಸ್ ಕಾಂಗ್ರೆಸ್ ಎಂದು ಬೊಬ್ಬೆ ಹಾಕುತ್ತೀಯೆ ಎಂದು ಬೈದಿದ್ದಾರೆ. ಆಗ ಕೊಲೆಗೀಡಾದ ದಿನೇಶ್ ಇಲ್ಲ ನನ್ನ ಜಮೀನಿನ ದಾಖಲೆಗಳನ್ನು ಕಾಂಗ್ರೆಸ್‌ನವರು ಮಾಡಿಕೊಟ್ಟಿದ್ದಾರೆ ಸಾರ್ವಜನಿಕವಾಗಿ ಹೇಳಿದ್ದಾನೆ. ಇದರಿಂದ ರೊಚ್ಚಿಗೆದ್ದ ಕೃಷ್ಣ ದಿನೇಶ್‌ಗೆ ಮನಬಂದಂತೆ ಥಳಿಸಿದ್ದಾನೆ. ಆತನ ಹೊಟ್ಟೆ ಮೇಲೆ ಕೈಯಿಂದ ಗುದ್ದಿ, ಕಾಲಿನಿಂದ ಒದ್ದಿದ್ದಾನೆ. ಇಷ್ಟೆಲ್ಲಾ ಹೊಡೆದಾಗ ದಿನೇಶ್ ತನ್ನ ಬಳಿ ಹಣವಿಲ್ಲದ ಕಾರಣ ಹೊಟ್ಟೆ ನೋವೆಂದು ಮನೆಯಲ್ಲಿ ಅಳುತ್ತಾ, ಒದ್ದಾಡುತ್ತಿದ್ದನು. ಆಗ ಕಾರಣ ಕೇಳಿದಾಗ ಕೃಷ್ಣ ಥಳಿಸಿದ್ದನ್ನು ಮನೆಯವರಿಗೆ ತಿಳಿಸಿದ್ದಾನೆ.

ಇದರಿಂದ ಕುಪಿತಗೊಂಡ ಮನೆಯವರು ಕೃಷ್ಣನ ಬಳಿ ಜಗಳವಾಡಿ, ನೀನೆ ಆಸ್ಪತ್ರೆಗೆ ತೋರಿಸು ಎಂದು ತಾಕೀತು ಮಾಡಿದ್ದಾರೆ. ಕೃಷ್ಣ ಫೆಬ್ರವರಿ 24 ರಂದು ಸಂತ್ರಸ್ತ ದಿನೇಶ್‌ ರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ, ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿದ್ದಾನೆ ಎಂದು ವೈದ್ಯರ ಬಳಿ ಸುಳ್ಳು ಹೇಳಿದ್ದಾನೆ. ಆದರೆ ಹೊಟ್ಟೆಯಲ್ಲಿನ ಒಳನೋವುಗಳಿಂದ ಬಳಲುತ್ತಿದ್ದ ದಿನೇಶ್ ಚಿಕಿತ್ಸೆ ಫಲಕಾರಿಯಾಗದೆ ಫೆಬ್ರವರಿ 25ರ ಬೆಳಗ್ಗಿನ ಜಾವ 2.30ರಲ್ಲಿ  ನಿಧನರಾಗಿದ್ದಾರೆ.

ಈ ಕುರಿತು ಮೃತನ ತಾಯಿ ಪದ್ಮಾವತಿಯವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪೊಲೀಸರು ದಲಿತ ದೌರ್ಜನ್ಯ ತಡೆ ಕಾಯ್ದೆ ಸೇರಿ ಇತರ ಕಾಲಂಗಳಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಚಾರಣೆ ನಡೆಯುತ್ತಿದೆ. ಆದರೆ ಇದುವರೆಗೂ ಆರೋಪಿಯ ಬಂಧನವಾಗಿಲ್ಲ.

ಪ್ರಕರಣದ ಆರೋಪಿ ಕೃಷ್ಣ ಎಂಬಾತನು ಭಾಸ್ಕರ್ ಧರ್ಮಸ್ಥಳ ಎಂಬ ಸ್ಥಳೀಯ ಬಜರಂಗದಳದ ಜಿಲ್ಲಾ ಸಂಚಾಲಕನ ಸಹೋದರ ಎನ್ನಲಾಗಿದೆ.

“ಬೆಳ್ತಂಗಡಿಯ ಸಾಮಾಜಿಕ ಹೋರಾಟಗಾರ ಶೇಖರ್‌ ಲಾಯಿಲರವರು ನಾನುಗೌರಿ ಜೊತೆಗೆ ಮಾತನಾಡಿ, “ಆರೋಪಿಗಳು ಪ್ರಬಲ ರಾಜಕೀಯ ಬೆಂಬಲ ಹೊಂದಿರುವ ಕಾರಣಕ್ಕೆ ಅವರನ್ನು ಇನ್ನೂ ಬಂಧಿಸಿಲ್ಲ. ಇದು ಕೊಲೆ ಪ್ರಕರಣವಾಗಿದೆ ಮತ್ತು ಎಸ್‌ಸಿ, ಎಸ್ಟಿ ಅಟ್ರಾಸಿಟಿ ಕಾಯ್ದೆಯಡಿ ಬರುತ್ತದೆ. ಆದರೂ ಆರೋಪಿಗಳನ್ನು ಬಂಧಿಸಿಲ್ಲ. ಹಾಗಾಗಿ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ನೇತೃತ್ವದಲ್ಲಿ ಪ್ರಗತಿಪರ ಸಂಘಟನಗಳು ಬೆಳ್ತಂಗಡಿಯಿಂದ ಧರ್ಮಸ್ಥಳ ಕನ್ಯಾಡಿವರೆಗೂ ಪಾದಯಾತ್ರೆ ನಡೆಸುತ್ತೇವೆ” ಎಂದಿದ್ದಾರೆ.


ಇದನ್ನೂ ಓದಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...