Homeಮುಖಪುಟಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

ಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

- Advertisement -
- Advertisement -

ಮುಸ್ಲಿಮರ ಮತದಾನದ ಹಕ್ಕನ್ನು ಹಿಂಪಡೆಯುವಂತೆ ಬಿಹಾರದ ಬಿಜೆಪಿ ಶಾಸಕ ಹರಿಭೂಷಣ್ ಠಾಕೂರ್ ಅವರು ಗುರುವಾರ ಒತ್ತಾಯಿಸಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರ ಹಕ್ಕುಗಳನ್ನು ನೀಡಬೇಕು ಎಂದು ಎಐಎಂಐಎಂ ನಾಯಕ ಅಖ್ತರುಲ್ ಇಮಾಮ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಮಾತನ್ನು ಹೇಳಿದ್ದಾರೆ. 1947ರಲ್ಲಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗ ಮುಸ್ಲಿಂ ಸಮುದಾಯಕ್ಕೆ ಪಾಕಿಸ್ತಾನದ ರೂಪದಲ್ಲಿ ತುಂಡು ಭೂಮಿ ನೀಡಲಾಗಿತ್ತು. ಅವರು ಅಲ್ಲಿಗೆ ಹೋಗಬೇಕಿತ್ತು. ಅವರು ಈ ದೇಶದಲ್ಲಿ ನಮಗೆ ಬೇಡ ಎಂದು ಠಾಕೂರ್ ಹೇಳಿದ್ದಾರೆ.

“ಮುಸ್ಲಿಮರು ಜನಸಂಖ್ಯೆಯನ್ನು ಹೆಚ್ಚಿಸುತ್ತಿದ್ದಾರೆ ಮತ್ತು ಭಾರತವನ್ನು ಮುಸ್ಲಿಂ ದೇಶವನ್ನಾಗಿ ಮಾಡಲು ಬಯಸುತ್ತಾರೆ. ಮುಸ್ಲಿಂ ನಾಯಕರು ಪ್ರತಿ ದೇಶವನ್ನು ಇಸ್ಲಾಮಿಕ್ ರಾಜ್ಯವನ್ನಾಗಿ ಮಾಡುವ ಕಾರ್ಯಸೂಚಿಯನ್ನು ಹೊಂದಿದ್ದಾರೆ. ಹಾಗೆ ಆಗಲು ನಾವು ಬಿಡಲಾರೆವು. ಆದ್ದರಿಂದ ನಾವು ಅವರಿಂದ ಮತದಾನದ ಹಕ್ಕುಗಳನ್ನು ಹಿಂಪಡೆದು ಅವರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಬೇಕೆಂದು ನಾವು ಸರ್ಕಾರವನ್ನು ಒತ್ತಾಯಿಸಿದ್ದೇವೆ” ಎಂದು ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದೂ, ಮುಸ್ಲಿಂ ಯುವ ಮಿತ್ರರಿಗೆ ಶಿಕ್ಷಣ ತಜ್ಞ ಎಂ.ಜಿ.ಹೆಗಡೆ ಪತ್ರ

ದೇಶದಲ್ಲಿ ಅವರನ್ನು ಅಲ್ಪಸಂಖ್ಯಾತರು ಎಂದು ಪರಿಗಣಿಸಲಾಗುತ್ತದೆ ಎಂದು ಠಾಕೂರ್ ಹೇಳಿದ್ದಾರೆ. “ಮುಸ್ಲಿಮ್ ಸಮುದಾಯಕ್ಕೆ ಅಲ್ಪಸಂಖ್ಯಾತ ಎಂಬ ಪದವು ಸಂವಿಧಾನದ ಅಪಹಾಸ್ಯ ಎಂದು ನಾನು ಹೇಳುತ್ತೇನೆ. ಅವರು ಅಲ್ಪಸಂಖ್ಯಾತರಲ್ಲ. ಅವರ ಜನಸಂಖ್ಯೆಯು ನಿರಂತರವಾಗಿ ಹೆಚ್ಚುತ್ತಿದೆ” ಎಂದು ಅವರು ಹೇಳಿದ್ದಾರೆ.

ಈ ಹಿಂದೆ, ಅಖ್ತರುಲ್ ಇಮಾಮ್ ಅವರು ಮತ್ತು ಎಐಎಂಐಎಂನ ಇತರ ಸದಸ್ಯರು ವಂದೇ ಮಾತರಂ ಅನ್ನು ಯಾವುದೇ ಸಾರ್ವಜನಿಕ ವೇದಿಕೆಗಳಲ್ಲಿ ವಿಶೇಷವಾಗಿ ಬಿಹಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಹಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು.

ಸಂಪ್ರದಾಯದ ಪ್ರಕಾರ, ಬಿಹಾರ ವಿಧಾನಸಭಾ ಅಧಿವೇಶನಗಳು ರಾಷ್ಟ್ರಗೀತೆ ಜನ ಗಣ ಮನ ಮತ್ತು ವಂದೇ ಮಾತರಂನೊಂದಿಗೆ ಪ್ರಾರಂಭವಾಗುತ್ತವೆ ಅಥವಾ ಕೊನೆಗೊಳ್ಳುತ್ತವೆ.

ವಂದೇ ಮಾತರಂ ಹಾಡುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ಅಖ್ತರುಲ್‌ ಇಮಾಮ್ ಹೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

“ರಾಷ್ಟ್ರಗೀತೆಯನ್ನು ಹಾಡಲು ನನಗೆ ಯಾವುದೇ ಅಭ್ಯಂತರವಿಲ್ಲ, ಆದರೆ ವಂದೇ ಮಾತರಂ ಹೇಳಲು ಅಥವಾ ಹಾಡಲು ನನ್ನ ವಿರೋಧವಿದೆ. ವಂದೇ ಮಾತರಂ ಬದಲಿಗೆ, ನಾನು ಸಂತೋಷದಿಂದ ‘ಮದರ್‌-ಎ-ವತನ್’ ಎಂದು ಹೇಳುತ್ತೇನೆ” ಎಂದು ಇಮಾಮ್‌ ಹೇಳಿದ್ದಾರೆ.

“ವಂದೇ ಮಾತರಂ ಭೂಮಿ ಮತ್ತು ಇಸ್ಲಾಂ ಅನುಮತಿಸದ ವಸ್ತುಗಳನ್ನು ಪೂಜಿಸುವಂತೆ ಹೇಳುತ್ತದೆ. ಆದ್ದರಿಂದ, ಅದನ್ನು ನಾವು ಯಾವುದೇ ವೇದಿಕೆಯಲ್ಲಿ ಹಾಡಲು ನಿರಾಕರಿಸುತ್ತೇವೆ. ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಬಹುಮತ ಹೊಂದಿದೆ. ಅವರು ವಿಧಾನ ಸಭಾ ಕಲಾಪದಿಂದ ವಂದೇ ಮಾತರಂ ಗೀತೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಭಾರತದ ಪ್ರಜಾಪ್ರಭುತ್ವವನ್ನು ಪ್ರದರ್ಶಿಸಲು ಅವರು ಪ್ರತಿಯೊಂದು ಜಾತಿ ಮತ್ತು ಧರ್ಮವನ್ನು ಗೌರವಿಸಬೇಕು” ಎಂದು ಇಮಾಮ್ ಹೇಳಿದ್ದಾರೆ.

“ವಿಧಾನಸಭಾ ಸ್ಪೀಕರ್ ವಿಜಯ್ ಸಿನ್ಹಾ ಅವರು ಉಭಯ ಸದನಗಳಲ್ಲಿ ಪ್ರತಿಯೊಬ್ಬ ಸದಸ್ಯರು ರಾಷ್ಟ್ರಗೀತೆ ಮತ್ತು ವಂದೇಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿದ್ದಾರೆ. ಇದನ್ನು ಅನುಸರಿಸದವರ ಸದನದ ಸದಸ್ಯತ್ವವನ್ನು ಸ್ಪೀಕರ್ ರದ್ದುಗೊಳಿಸಬೇಕು. ಎಐಎಂಐಎಂ ನಾಯಕರ ವರ್ತನೆ ನಮ್ಮ ದೇಶಕ್ಕೆ ಮಾಡಿದ ಅವಮಾನ. ವಂದೇ ಮಾತರಂ ಹಾಡಲು ಅವರಿಗೇಕೆ ಆಕ್ಷೇಪ?” ಎಂದು ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಸದ್ದಿಲ್ಲದೆ ಮುಸ್ಲಿಂ ವಿದ್ಯಾರ್ಥಿಗಳ ಡಾಟಾ ಸಂಗ್ರಹಿಸುತ್ತಿರುವ ರಾಜ್ಯ ಸರ್ಕಾರ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...