Homeಕರ್ನಾಟಕಕೆರೆಗೆ ಹಾರ: ಆ ರೈತನ ಆತ್ಮಹತ್ಯೆಗೆ ಸಿಗುವುದೇ ಪರಿಹಾರ?

ಕೆರೆಗೆ ಹಾರ: ಆ ರೈತನ ಆತ್ಮಹತ್ಯೆಗೆ ಸಿಗುವುದೇ ಪರಿಹಾರ?

- Advertisement -
- Advertisement -

| ಸೋಮಶೇಖರ್ ಚಲ್ಯ |

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರೈತರೊಬ್ಬರು ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಎಲ್ಲರನ್ನೂ ದಂಗುಬಡಿಸಿದೆ. ತಮಿಳು ಸಿನೆಮಾ ಕತ್ತಿಯಲ್ಲಿ ನಾಡಿನ ಜನರ ಗಮನ ಸೆಳೆಯಲು ರೈತರು ವಿಡಿಯೋ ಮಾಡಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಆಘಾತಕಾರಿ ದೃಶ್ಯವಿತ್ತು. ಅದನ್ನು ಹೋಲುವ ಈ ಘಟನೆಯು ತಾಲೂಕಿನ ಐತಿಹಾಸಿಕ ಗ್ರಾಮ ಅಘಲಯದಲ್ಲಿ ನಡೆದಿದೆ.

ಎರಡು ದಿನದ ಹಿಂದೆ ಸುರೇಶ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಇಂದು ಅಂದರೆ ಜೂನ್ 17ರಂದು ಗೊತ್ತಾಗಿದೆ.  ಅದಾದ ನಂತರ ಅವರು ಮಾಡಿಟ್ಟ ವಿಡಿಯೋ ಕಂಡು ಬಂದಿದೆ. ಕೆಲವೇ ಗಂಟೆಗಳಲ್ಲಿ ಅದು ವೈರಲ್ ಆಗಿದ್ದು, ಇಂದು ಸಂಜೆ ಚನ್ನಪಟ್ಟಣದಲ್ಲಿ ಎಚ್.ಡಿ.ಕುಮಾರಸ್ವಾಮಿಯವರು ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿದ್ದಾಗ, ಅವರಿಗೂ ವಿಡಿಯೋ ತಲುಪಿದೆ. ಸಭೆಯಲ್ಲಿ ಮುಖ್ಯಮಂತ್ರಿಯವರು ಇದನ್ನು ಪ್ರಸ್ತಾಪಿಸಿ ಮಾತನಾಡಿದ್ದಾರೆ.

ಸುರೇಶ್, ಅತ್ಮಹತ್ಯೆಗೆ ಶರಣಾದ ರೈತ

ನಮ್ಮ ಊರಿನಲ್ಲಿ ನೀರಿಲ್ಲ ಕೆರೆಗಳಿಗೆ ನೀರು ತುಂಬಿಸಿ ಎಂದು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ರೈತ ಸುರೇಶ್ ರೈತರ ಸಮಸ್ಯೆಗಳನ್ನು ಮತ್ತೊಮ್ಮೆ ಚರ್ಚೆಗೆ ತಂದಿದ್ದಾರೆ. ಸಮ್ಮಿಶ್ರ ಸರ್ಕಾರದ ಬಹು ದೊಡ್ಡ ಭರವಸೆಯಾಗಿದ್ದ ಸಾಲ ಮನ್ನಾದ ಕುರಿತು ಸರ್ಕಾರ ರಚನೆಯಾದಾಗಿನಿಂದಲೂ ಚರ್ಚೆ ನಡೆಯುತ್ತಲೇ ಇದೆ. ಮಾಧ್ಯಮಗಳು ಕೂಡ ಅದೇ ವಿಷಯದ ಸುತ್ತ ಆಗಾಗ ಚರ್ಚೆ ನಡೆಸುತ್ತಿವೆ.

ಮಂಡ್ಯ ಎಂದರೆ ರೈತರಿಗೆ ಸ್ವರ್ಗ, ನೀರಿನ ಸಮಸ್ಯೆಯಿಲ್ಲ, ಸಂಪದ್ಭರಿತ ಜಿಲ್ಲೆ, ಆದರೂ ಅಲ್ಲಿಯ ರೈತರೇ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ, ರೈತರು ಸೋಮಾರಿಗಳು ಎಂಬ ಮೇಲ್ಪದರದ ಅಭಿಪ್ರಾಯಗಳು ವ್ಯಾಪಕವಾಗಿವೆ. ಆದರೆ ಅಲ್ಲಿಯ ರಿಯಾಲಿಟಿಯೇ ಬೇರೆ. ರಾಜ್ಯದಲ್ಲೇ ಅತೀ ಹೆಚ್ಚು ಭೂವಿಭಜನೆಯಾಗಿ ಅತಿ ದೊಡ್ಡ ಸಂಖ್ಯೆಯಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿರುವುದು ಈ ಜಿಲ್ಲೆಯಲ್ಲಿ. ನಿಮಗೆ ಆಶ್ಚರ್ಯವೆನಿಸಬಹುದು. ಇಂದಿಗೂ, ಮಂಡ್ಯದ ಶೇ.51 ಭಾಗಕ್ಕೆ ನೀರಾವರಿ ಸೌಲಭ್ಯವೇ ಇಲ್ಲ. ಆ ಪ್ರದೇಶಗಳು ಮಳೆಯನ್ನೇ ಅವಲಂಬಿಸಿವೆ. ಹಾಗಿದ್ದರೂ ಮಳೆ ನೀರನ್ನು ಸಂಗ್ರಹಿಸುವ ಸಾಮಥ್ರ್ಯವೂ ಕೆರೆ-ಕಟ್ಟೆಗಳಲ್ಲಿ ಕಡಿಮೆಯಾಗುತ್ತಿದೆ. ಶ್ರೀರಂಗಪಟ್ಟಣ, ಪಾಂಡವಪುರ, ಮಂಡ್ಯ, ಮದ್ದೂರು ತಾಲ್ಲೂಕಿನ ಒಂದಷ್ಟು ಪ್ರದೇಶ ಬಿಟ್ಟರೆ ಕೆ.ಆರ್.ಪೇಟೆ, ಮಳವಳ್ಳಿ, ನಾಗಮಂಗಲಗಳ ಬಹುಪಾಲು ಪ್ರದೇಶದಲ್ಲಿ ನೀರಾವರಿ ಭೂಮಿ ಕಾಣಲು ಸಾಧ್ಯವಿಲ್ಲ. ಇದನ್ನು ಗುರುತಿಸಿಯೇ ಸುಮಲತಾ ತಮ್ಮ ಚುನಾವಣಾ ಪ್ರಚಾರದಲ್ಲಿ ಕೆರೆ-ಕಟ್ಟೆಗಳ ಹೂಳೆತ್ತಿಸುವ ವಿಚಾರವನ್ನು ಹೆಚ್ಚು ಬಳಸಿಕೊಂಡಿದ್ದರು.

ಇಡೀ ರಾಜ್ಯದಲ್ಲಿ ಕೆರೆ-ಕಟ್ಟೆಗಳಲ್ಲಿ ಹೂಳು ತುಂಬಿಕೊಂಡು, ಕೆರೆಗಳೆಲ್ಲವೂ ಮೈದಾನಗಳಾಗಿ ವರ್ಷಗಳೇ ಕಳೆದಿವೆ. ಒಂದೆಡೆ ಹೂಳು ತುಂಬಿದ್ದರೆ, ಮೊತ್ತೊದೆಡೆ ಕಾಲಕ್ಕೆ ಸರಿಯಾಗಿ ಮಳೆಯೂ ಆಗದೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಸುರೇಶ್ ಹೇಳುವಂತೆ 100-150 ಅಡಿಗಳಿಗೆ ನೀರು ಸಿಗುತ್ತಿದ್ದ ಅಂರ್ತಜಲದ ಮಟ್ಟ 1500 ಅಡಿಗಳಿಗೂ ಆಳಕ್ಕೆ ಕುಸಿದಿದೆ. ಹೀಗಿರುವ ಸಂದರ್ಭದಲ್ಲಿಯೂ ಕೆರೆಯ ಹೂಳನ್ನು ತೆಗೆದು ಬೀಳುವ ಅಷ್ಟೋ-ಇಷ್ಟೋ ಮಳೆಯ ನೀರನ್ನಾದರೂ ಸಂಗ್ರಹಿಸುವಂತಹ ಕೆಲಸಕ್ಕೆ ಯಾವ ಸರ್ಕಾರಗಳೂ ಮುಂದಾಗುತ್ತಿಲ್ಲ.

ಕೆರೆಗಳ ಕೋಡಿಗಳ ಮಟ್ಟಕ್ಕೆ ಹೂಳು ತುಂಬಿಕೊಂಡಿದ್ದರೂ ಯಾವ ಶಾಸಕ-ಸಂಸದರಿಗೂ ಕೆರೆಗಳ ಹೂಳೆತ್ತುವುದು ಆದ್ಯತೆಯ ಕೆಲಸ ಎಂದೆನಿಸಿಯೇ ಇಲ್ಲ. ನೀರಿನ ಸಮಸ್ಯೆಯಷ್ಟೇ ಅಲ್ಲದೆ ಬಿತ್ತನೆ ಬೀಜ, ಬೆಳೆಗಳ ಮಾರುಕಟ್ಟೆ ಬೆಲೆ, ವೈಜ್ಞಾನಿಕ ಕೃಷಿಗಳಂತಹ ಹಲವಾರು ಸಮಸ್ಯೆಗಳನ್ನು ರೈತರು ಎದುರಿಸುತ್ತಿದ್ದಾರೆ. ಆದರೆ ಆಳುವ ಪಕ್ಷಕ್ಕೆ ಇದಾವುದರ ಅರಿವೂ ಇದ್ದಂತಿಲ್ಲ. ಮಂಡ್ಯದ ಅಷ್ಟೂ ಜನ ಶಾಸಕರು ಅದೇ ಪಕ್ಷದವರಾಗಿದ್ದಾರೆ. ಆದರೂ ಈ ಜಿಲ್ಲೆಗೆ ಯಾವ ಪ್ರಯೋಜನವೂ ಇಲ್ಲ.

ಮದ್ದೂರಿನ ಶಾಸಕ ಹಾಗೂ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಜನ ಸಮಸ್ಯೆ ಹೇಳಿಕೊಳ್ಳಲು ಹೋದರೆ ‘ಇಲ್ಲೇನ್ ಮೆಡೆಗಾರಿಕೆ ಮಾಡೋಕೆ ಬಂದಿದ್ದೀರಾ’ ಎಂದು ಜನರನ್ನು ಪಾವಸ್ಸು ಕಳಿಸುವಂತಹ ಮಟ್ಟಕ್ಕೂ, ಶ್ರೀರಂಗಪಟ್ಟಣದ ಶಾಸಕ ರವೀಂದ್ರ ಶ್ರೀಕಂಠಯ್ಯ ‘ಯಾವುದೇ ಕಾರಣಕ್ಕೂ ಮಂಡ್ಯದ ಶಾಸಕರು ಕ್ಷೇತ್ರದಲ್ಲಿ ಕೆಲಸ ಮಾಡಬಾರದು, ಜನ ಓಟಾಕಿ ಗೆಲ್ಲಿಸಿರುವ ಸುಮಲತಾ ಇಂದಲೇ ಕೆಲಸ ಮಾಡಿಸಿಕೊಳ್ಳಲಿ ಎಂದು ಹೇಳಿದ್ದಾರೆ. ಇಂತಹ ಅಪ್ರಬುದ್ಧ ಜನಪ್ರತಿನಿಧಿಗಳು ತಮಗೂ ಅದೇ ಜನ ಓಟಾಕಿದ್ದಾರೆ ಎಂದು ಮರೆತಿದ್ದಾರೆ. ಈ ರೀತಿಯ ಶಾಸಕರನ್ನು ಹೊಂದಿರುವ ಜಿಲ್ಲೆಯಲ್ಲಿ ಕೆರೆಗಳು ಮೈದಾನಗಳೂ ಆಗಬಹುದು. ಊರುಗಳು ಸ್ಮಶಾನಗಳಾಗಬಹುದು.

ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಬಳಲಿದ್ದ ರೈತ ಸುರೇಶ್, ತಮ್ಮ ಆತ್ಮಹತ್ಯೆ ಮುಂಚಿನ ವಿಡಿಯೋದಲ್ಲಿ ನಮ್ಮ ಕುಮಾರಣ್ಣನಿಗೆ ಇನ್ನು ನಾಲ್ಕು ವರ್ಷ ಅವಕಾಶ ಕೊಡಿ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ, ‘ಯಡಿಯೂರಪ್ಪ ಸಾರ್, ನೀವು ಕುಮಾರಣ್ಣನ ಸರ್ಕಾರಕ್ಕೆ ತೊಂದರೆ ಕೊಡಬೇಡಿ. ನಿಮಗೆ ಅದೃಷ್ಟ ಇದ್ದರೆ ನಿಮಗೂ ಮುಂದಿನ ಸಾರಿ ಮುಖ್ಯಮಂತ್ರಿ ಆಗುವ ಅವಕಾಶ ಸಿಗುತ್ತದೆ’ ಎಂದಿದ್ದಾರೆ. ಸಿದ್ದರಾಮಯ್ಯ & ಡಿಕೆಶಿಯವರಿಂದಲೂ ಎಚ್‍ಡಿಕೆಗೆ ಬೆಂಬಲ ಕೇಳಿದ್ದಾರೆ.

ಜೆಡಿಎಸ್ ಪಕ್ಷದ ಸರ್ಕಾರದ ಮೇಲಿನ ಅವರ ಕಾಳಜಿಯ ಕಾಲು ಭಾಗದಷ್ಟು ಕರ್ತವ್ಯಪ್ರಜ್ಞೆ ಸರ್ಕಾರಕ್ಕಿದೆಯೇ ಎಂಬ ಪ್ರಶ್ನೆಯನ್ನು ವಿಡಿಯೋ ನೋಡಿದವರು ಕೇಳುವಂತಿದೆ. ಸಾಲಮನ್ನಾ ಒಂದೇ ರೈತರ ಸಮಸ್ಯೆಗೆ ಪರಿಹಾರವಂಬಂತೆ ಬಿಂಬಿಸಿ ಎಲ್ಲಾ ಸರ್ಕಾರಗಳು ಸಾಲ ಮನ್ನಾದ ಬೊಬ್ಬೆ ಹೊಡೆಯುತ್ತಾ ಕಾಲ ಕಳೆಯುತ್ತವೆ. ರೈತ ಸಮಸ್ಯೆಯಲ್ಲಿ ಸಾಲವೂ ಒಂದಾಗಿದೆಯೇ ಹೊರತು ಸಾಲವೊಂದೇ ಸಮಸ್ಯೆಯಲ್ಲ ಹಾಗೂ ಸಾಲ ಮನ್ನಾ ಒಂದೇ ರೈತರಿಗೆ ಪರಿಹಾರವಲ್ಲ ಎಂಬದನ್ನು ಕೆ.ಆರ್.ಪೇಟೆ ತಾಲ್ಲೂಕಿನ ಅಘಲಯ ಗ್ರಾಮದ ರೈತನ ಆತ್ಮಹತ್ಯೆ ಮುಂಚಿನ ವಿಡಿಯೋ ಮತ್ತೊಮ್ಮೆ ಸಾಬೀತು ಮಾಡಿದೆ.

ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲೆಂದೇ ಓಟು ಹಾಕಿದಂತಿದ್ದ ಮಂಡ್ಯ ಜಿಲ್ಲೆಯ ಜನರಿಗೆ ಲೋಕಸಭಾ ಚುನಾವಣೆಯ ನಂತರವೂ ಅಭಿಮಾನ ಕಡಿಮೆಯಾಗಿಲ್ಲ. ಆದರೆ, ಅವರ ನೈಜ ಸಮಸ್ಯೆಗಳಿಗೆ ಈ ಸರ್ಕಾರವು ಪರಿಹಾರ ಕಲ್ಪಿಸುತ್ತದೆಯೇ ಎಂಬುದು ಈಗ ಉಳಿದಿರುವ ಪ್ರಶ್ನೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...