Homeಕರ್ನಾಟಕಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

ಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವರ್ಕರ್‌ ಅವರನ್ನು ಶ್ಲಾಘಿಸಿ ಮಾಡಿರುವ ಪೋಸ್ಟ್‌ಗೆ ರಾಜ್ಯದ ಜನತೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಬಸವರಾಜ ಬೊಮ್ಮಾಯಿಯವರಿಗೆ ಇತಿಹಾಸದ ಪುಟಗಳನ್ನು ವಿವರಿಸಿದ್ದಾರೆ.

“ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಫೂರ್ತಿದಾಯಕವಾಗಿವೆ” ಎಂದು ಬೊಮ್ಮಾಯಿಯವರು ಪೋಸ್ಟ್ ಹಾಕಿದ್ದಾರೆ.

ಆರ್‌ಎಸ್‌ಎಸ್‌ನ ಪ್ರಮುಖ ಮುಖಗಳಲ್ಲಿ ಸಾವರ್ಕರ್‌ ಒಬ್ಬರು. ಹಿಂದುತ್ವವಾದಿಯಾಗಿದ್ದರು. ಸಾವರ್ಕರ್‌ ಜೈಲಿಗೆ ಸೇರಿದ ಬಳಿಕ ಬ್ರಿಟಿಷರಿಗೆ ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು. ಹೀಗಾಗಿ ಸಾವರ್ಕರ್‌ ಅವರನ್ನು ಪ್ರಖರ ಸ್ವಾತಂತ್ರ್ಯ ಹೋರಾಟಗಾರ ಎಂದೆಲ್ಲ ಸಂಘಪರಿವಾರ ಬಣ್ಣಿಸುವುದನ್ನು ಜನರು ಟೀಕಿಸುತ್ತಾ ಬಂದಿದ್ದಾರೆ. ಸಾವರ್ಕರ್‌ಗೆ ಅಂಟಿರುವ ಕ್ಷಮಾಪಣೆಯ ಇತಿಹಾಸವನ್ನು ಮುಚ್ಚಿಹಾಕುವ ಅಥವಾ ತಿರುಚುವ ಯತ್ನವನ್ನು ಸಂಘಪರಿವಾರವೂ ಮಾಡುತ್ತಾ ಬಂದಿದೆ.

ಇದನ್ನೂ ಓದಿರಿ: ಸಾವರ್ಕರ್‌ರನ್ನು ’ಮಾಜಿ ವೀರ ಸಾವರ್ಕರ್’ ಎಂದು ಕರೆಯಬಹುದು ಅಷ್ಟೇ: ದೊರೆಸ್ವಾಮಿ

“ಸಾವರ್ಕರ್‌ ಅವರು ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆಯುವಂತೆ ಗಾಂಧೀಜಿ ಸಲಹೆ ನೀಡಿದ್ದರು” ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ಕೆಲವು ತಿಂಗಳ ಹಿಂದೆ ಹೇಳಿದ್ದರು. “ರಾಜನಾಥ್‌ ಸಿಂಗ್ ಹೇಳಿಕೆ ಹಾಸ್ಯಾಸ್ಪದ, ಅಸಂಬದ್ಧ ಹಾಗೂ ವಿವೇಚನಾ ರಹಿತ” ಎಂದು ಗಾಂಧೀಜಿಯವರ ಮೊಮ್ಮಗ, ಜೀವನಚರಿತ್ರಕಾರ ರಾಜಮೋಹನ್‌ ಗಾಂಧಿ ಪ್ರತಿಕ್ರಿಯಿಸಿದ್ದರು.

“ಸಾವರ್ಕರ್‌ ಅವರು ಹಲವು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು ಎಂದು ಹೇಳುವುದು ತಪ್ಪೆಂದು ರಾಜನಾಥ್ ಸಿಂಗ್‌ ಹೇಳಿರುವುದು ಸಂಪೂರ್ಣ ಸುಳ್ಳು. ಅಂಡಮಾನ್ ಜೈಲಿಗೆ ಹಾಕಿದ ಕೆಲವೇ ದಿನಗಳಲ್ಲಿ 1911ರಲ್ಲಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿದ್ದರು. ಅಲ್ಲದೆ ಸಾವರ್ಕರ್‌ ಅವರು ಒಟ್ಟು ಏಳು ಕ್ಷಮಾಪಣಾ ಪತ್ರಗಳನ್ನು ಬರೆದಿದ್ದರು” ಎಂದು ರಾಜಮೋಹನ್‌ ಗಾಂಧಿ ಅವರು ‘ದಿ ವೈರ್’ ಸಂದರ್ಶನದಲ್ಲಿ ವಿವರಿಸಿದ್ದರು.

ಕ್ಷಮಾಪಣೆ ಕೇಳಲು ಇದ್ದ ಅವಕಾಶದಲ್ಲಿ ಬಿಡುಗಾಗಿ ಸಾವರ್ಕರ್‌ ಕೋರಿಕೆ ಸಲ್ಲಿಸಿದ್ದರು. “1913ರ ಕ್ಷಮಾಪಣಾ ಅರ್ಜಿಯಲ್ಲಿ ಸರ್ಕಾರ ತನ್ನ ಬಹುಮುಖ ಲಾಭ ಮತ್ತು ಕರುಣೆಯಲ್ಲಿ ನನ್ನನ್ನು ಬಿಡುಗಡೆ  ಮಾಡಲಿ” ಎಂದು ಕೇಳಿಕೊಂಡಿದ್ದರು. ಇದು ಕ್ಷಮಾಪಣೆಯಲ್ಲದೆ ಮತ್ತೇನು” ಎಂದು ಪ್ರಶ್ನಿಸಿದ್ದರು.

ಸಾವರ್ಕರ್ ಅವರ ಅಪರಾಧವನ್ನು ರಾಜಕೀಯ ಎಂದು ತೋರಿಸಲು ಗಾಂಧಿ ಪತ್ರವು ಸಲಹೆ ನೀಡಿದೆ. ಕ್ಷಮಾಪಣೆಗಾಗಿ ಮನವಿ ಮಾಡಲು ಗಾಂಧೀಜಿಯವರು ಪತ್ರ ಬರೆದಿಲ್ಲ. ಮುಖ್ಯವಾಗಿ ಸಾವರ್ಕರ್ ಅವರಿಗೆ ಗಾಂಧೀಜಿಯವರು ಪತ್ರ ಬರೆಯುವ ಒಂಬತ್ತು ವರ್ಷಗಳ ಮೊದಲೇ ಸಾವರ್ಕರ್‌ ಕ್ಷಮಾಪಣಾ ಪತ್ರಗಳನ್ನು ಬ್ರಿಟಿಷರಿಗೆ ಬರೆದಿದ್ದರು ಎಂದು ತಿಳಿಸಿದ್ದರು.

ರಾಜಮೋಹನ್ ಗಾಂಧಿಯವರ ಅಭಿಪ್ರಾಯವನ್ನೇ ಹಲವು ಇತಿಹಾಸಕಾರರು ತಿಳಿಸಿದ್ದಾರೆ. ಆದರೆ ಸಾವರ್ಕರ್ ಅವರನ್ನು ವೈಭವೀಕರಿಸುವುದು ನಡೆಯುತ್ತಲೇ ಇದೆ. ಬೊಮ್ಮಾಯಿಯವರ ಪೋಸ್ಟ್‌ನಲ್ಲೂ ಇದೇ ವೈಭವೀಕರಣ ಇರುವುದನ್ನು ಗುರುತಿಸಿರುವ ರಾಜ್ಯದ ಜನತೆ, ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿರಿ: ಮೇಲ್ಸೇತುವೆಗೆ ಸಾವರ್ಕರ್‌ ಹೆಸರು : ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ‌ ಮಾಡುವ ಅವಮಾನ. – ಸಿದ್ದು

ಸಿಎಂ ಪೋಸ್ಟ್‌ಗೆ ಜನರ ಪ್ರತಿಕ್ರಿಯೆಗಳು (ಆಯ್ದ ಕಾಮೆಂಟ್‌ಗಳು ಇಲ್ಲಿವೆ)

ಬೊಮ್ಮಾಯಿಯವರೆˌ ಬ್ರಿಟೀಷರಿಗೆ ಕ್ಷಮಾಪಣೆ ಕೇಳಿ ಪಿಂಚಣೆ ಪಡೆದ ಈ ಚಿತ್ಪಾವನ ವ್ಯಕ್ತಿಗೆ ಶುಭಾಶಯ ಹೇಳುವ ಮೊದಲು ಒಂದು ಕ್ಷಣ ನಿಮ್ಮ ತಂದೆಯವರು ನಂಬಿದ ಸಿದ್ಧಾಂತ ಸ್ಮರಿಸಿಕೊಳ್ಳಿ. ಅಧಿಕಾರದಾಸೆಗೆ ನೀವೆಲ್ಲ ಸಂಘಿಗಳ ಮನೆ ಕಾಯುವ ಬದಲಿಗೆ ಸಂಘಿಗಳು ನಿಮ್ಮ ಮನೆ ಕಾಯುವಂತೆ ಬದುಕುವುದು ಯಾವಾಗ?

 – ಜೆ.ಎಸ್.ಪಾಟೀಲ್‌

****

“ಧರ್ಮಸ್ಥಳದಲ್ಲಿ ಇದೇ ಸಾವರ್ಕರ್ ಅನುಯಾಯಿ ದಲಿತ ಯುವಕನನ್ನು ಕೊಲೆ ಮಾಡಿದ್ದಾನೆ. ಆ ಕಡೆ ನಿಮ್ಮವರಾರೂ ಸುಳಿದಿಲ್ಲ”

– ಹೇಮಾ ವೆಂಕಟ್‌‌

***

ಇವರು ಗಾಂಧಿ ಹತ್ಯೆಯ ಆರೋಪಿ ಅಲ್ವಾ? ಬ್ರಿಟಿಷರಿಗೆ ನಿರಂತರ ಕ್ಷಮಾಪಣ ಪತ್ರ ನೀಡಿ ಸದಾ ಕಾಲ ನಿಮಗೆ ವಿದೇಯನಾಗಿರುವೆ ಎಂದು ಬರೆದುಕೊಟ್ಟು ಜೈಲಿನಿಂದ ಹೊರಬಂದು ಬ್ರಿಟಿಷರ ಪಿಂಚಣಿ (ಆ ಕಾಲದ 50 ರುಪಾಯಿ) ಪಡೆದು ಬದುಕಿದ ಈತ ವೀರ ಆಗುವುದು ಹೇಗೆ? ಭಾರತದ ಸ್ವಾತಂತ್ರ್ಯಕ್ಕೆ ಆತನ ಕೊಡುಗೆ ಏನು?!

– ಶ್ರೀನಿವಾಸ ಕಾರ್ಕಳ

***

ಬ್ರಿಟಿಷರೆದುರು ಹೋರಾಡಿ ಮಡಿದ ಟಿಪ್ಪುವನ್ನು ದ್ವೇಷಿಸುವ, ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟ ಸಂಗೊಳ್ಳಿ ರಾಯಣ್ಣ, ಆಜೀವ ಬಂಧಿಯಾದ ರಾಣಿ ಚೆನ್ನಮ್ಮರ ಪರಂಪರೆಯನ್ನು ನಾಶ ಮಾಡುವ, ಮಹಾತ್ಮ ಗಾಂಧಿಯವರನ್ನೇ ನಿಂದಿಸುವ, ಅವರ ಹತ್ಯೆಯನ್ನು ಸಮರ್ಥಿಸುವ, ನೆಹರೂ ಅವರಂಥವರನ್ನು ದಿನನಿತ್ಯ ನಿಂದಿಸುವ, ದೊರೆಸ್ವಾಮಿಯವರಂಥ ಸ್ವಾತಂತ್ರ್ಯಯೋಧರನ್ನು ಹಂಗಿಸುತ್ತಲೇ ಇದ್ದ, ಸ್ವಾತಂತ್ರ್ಯ ಚಳವಳಿಯಲ್ಲಾಗಲೀ, ದೇಶ ನಿರ್ಮಾಣದಲ್ಲಾಗಲೀ ಯಾವುದೇ ಕೊಡುಗೆ ನೀಡಿರದ ಪಕ್ಷದವರಿಂದ ಬೇರೇನು ನಿರೀಕ್ಷಿಸಬಹುದು?

 – ಡಾ.ಶ್ರೀನಿವಾಸ ಕಕ್ಕಿಲಾಯ

***

ಇದನ್ನೂ ಓದಿರಿ: ಸಾವರ್ಕರ್‌ & ದಲಿತರು ಕುರಿತಂತೆ ಪೋಸ್ಟ್‌ ಕಾರ್ಡ್ ಹರಡಿದ ಮೂರು ಸುಳ್ಳುಗಳು & ವಾಸ್ತವಗಳು

ಐ ಆಮ್ ವೆರಿ ಸೋರಿ ಮಿಸ್ಟರ್ ಬೊಮ್ಮಾಯಿ ಸಾರ್. ಸೋರಿ ಡೇ ಅನ್ನು ಮರೆತಿದಕ್ಕೆ ಸೋರಿ ಸೋರಿ ಸೋರಿ. ಹ್ಯಾಪಿ ಸೋರಿ ಡೇ ಸಾರ್.

– ರಹೀಮ್ ಭಾಷಾ

***

ಬ್ರಿಟಿಷರಿಗೆ ಕ್ಷಮಾಪಣೆ ಪತ್ ರಬರೆದವರು ಸ್ವಾತಂತ್ರ್ಯ ಹೋರಾಟಗಾರ ಇವರು ಯಾವಾಗ ಹೋರಾಟ ಮಾಡಿದ್ದಾರೆ ಮಾನ್ಯ ಮುಖ್ಯಮಂತ್ರಿ ಗಳೇ? ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆಯನ್ನು ಒಮ್ಮೆ ಓದಿನೋಡಿ, ಎಲ್ಲಿಯಾದ್ರು ದಾಮೋದರ ಸಾವರ್ಕರ್ ಹೆಸರಿದೆಯಾ ನೋಡಿ…

– ಅಬ್ದುಲ್‌ ಹಮೀದ್‌

***

ಮುಖ್ಯಮಂತ್ರಿಗಳೇ, ನೀವು ಒಂದು ಜವಾಬ್ದಾರಿ ಸ್ಥಾನದಲ್ಲಿದ್ದುಕ್ಕೊಂಡು ರಾಷ್ಟ್ರಪಿತನ ಸಾವಿಗೆ ಕಾರಣವಾದ ವ್ಯಕ್ತಿಗೆ ಪುಣ್ಯ ಸ್ಮರಣೆ ಶುಭಾಶಯ ಹೇಳ್ತಾ ಇದೀರಲ್ಲ, ಬ್ರಿಟೀಷರ ಕ್ಷಮೆ ಕೇಳಿದ ಹೇಡಿ, ಬ್ರಿಟೀಷರ ಪಿಂಚಣಿ ತೆಗೆದುಕೊಂಡು ಬದುಕುತ್ತಿದ್ದ ವ್ಯಕ್ತಿಯನ್ನು ಸ್ವಾತಂತ್ರ್ಯ ಹೋರಾಟಗಾರ ಅಂದ್ರೆ ಎಲ್ಲಿಂದ ನಗಬೇಕ್ರೀ? ನಮ್ ಕರ್ಮ ನೀವು ಈ ರಾಜ್ಯದ ಮುಖ್ಯಮಂತ್ರಿ ಆಗಿರುವುದು.

 -ಕುಶಾಲ್ ಬಿದರೆ

****

“ನೀವು ವೈಯಕ್ತಿಕವಾಗಿ ಸಮರ್ಥಿಸಿಕೊಳ್ಳಿ ಸರ್. ಆದರೆ ರಾಜ್ಯ ಮುಖ್ಯಮಂತ್ರಿಯಾಗಿ ಇವರನ್ನು ಸಮರ್ಥಿಸಿಕೊಳ್ಳಬೇಡಿ. ಹೆಮ್ಮೆಯ ಭಾರತ ಮಾತೆಯ ಪುತ್ರರು- ನಮ್ಮ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನವ್ವ. ಇವರು ಎಂದು ಬ್ರಿಟಿಶರ ಬಳಿ ಕ್ಷಮೆ ಕೇಳದೆ ವೀರ ವೇಶದಿಂದ ಹೋರಾಡಿ ದೇಶಕ್ಕೆ ಪ್ರಾಣ ಬಿಟ್ಟರು. ನಿಮ್ಮ ಸಾವರ್ಕರ್‌ ಥರ ಬ್ರಿಟಿಷರ ಬಳಿ ಕ್ಷಮೆ ಕೇಳಿ ಪಿಂಚಣಿ ಪಡೆಯಲಿಲ್ಲ.

 – ಮಧುಸೂದನ್ ಗೌಡ

***

ದಯವಿಟ್ಟು ಇಂಥವನ್ನು ಯೋಧರಿಗೆ ಹೊಳಿಸಬೇಡಿ ಸರ್. ನಮ್ಮ ಯೋಧರಿಗೆ ಮಾಡುವ ಅವಮಾನ ಅದಾಗುತ್ತೆ. ನಮ್ಮ ಯೋಧರು ವೀರರು. ಎಂದೂ ತಲೆ ಬಾಗಲಾರರು.

 – ವಿಕಾಸ್ ಗೌಡ

***

ಹೀಗೆ ಸಾವಿರಾರು ಜನರು ಕಮೆಂಟ್ ಮಾಡಿದ್ದಾರೆ. ಈ ಸುದ್ದಿ ಬರೆಯುವ ವೇಳೆಗೆ ಸಿಎಂಗೆ ಪೋಸ್ಟ್‌ಗೆ ಒಂದೂವರೆ ಸಾವಿರದಷ್ಟು ಜನರು ‘ಹಹಹ’ (😆) ರಿಯಾಕ್ಷನ್‌ ಒತ್ತಿದ್ದಾರೆ. ನಗುವ ಇಮೋಜಿಯೇ ಹೆಚ್ಚಿನ ಸಂಖ್ಯೆಯಲ್ಲಿದೆ.


ಇದನ್ನೂ ಓದಿರಿ: ಸಾವರ್ಕರ್‌‌‌ಗೆ ಗೋಮಾಂಸ ತಿನ್ನುವುದರ ಬಗ್ಗೆ ಯಾವುದೆ ತಕರಾರು ಇರಲಿಲ್ಲ: ದಿಗ್ವಿಜಯ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಬರೇ ಸತ್ತು ಈ ಭೂಮಿ ಮೇಲೆ ಇಲ್ಲದವರ ಬಗ್ಗೆ ( ನೆಹರು, ಟಿಪ್ಪು, ಮೊಘಲರು, ಗಾಂಧೀ, ಔರಂಗಜೇಬ್, ಸಾವರ್ಕರ್, ಮುಂತಾದವರು.) ಬದುಕಿರುವ ಮನುಷ್ಯರ ಸಮಸ್ಯೆಗಳ ಬಗ್ಗೆ ಅಪ್ಪಿ ತಪ್ಪಿಯೂ ಮಾತಾಡಲ್ಲ . ಯಾವ ಸೀಮೆ ನಾಯಕರೋ ಇವರು.

  2. ಯಜಮಾನನ ಅನ್ನದ ಋಣ ಇರುವ ಶ್ವಾನ ಸ್ವಾಮಿ ನಿಷ್ಠೆ ಪ್ರದರ್ಶಿಸಿದೆ,ತಪ್ಪೇನು!?😁

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...