Homeಅಂಕಣಗಳುಕಾನೂನುಗಳಿಗಿಂತ ಧರ್ಮವೇ ದೊಡ್ಡದಂತಲ್ಲಾ!

ಕಾನೂನುಗಳಿಗಿಂತ ಧರ್ಮವೇ ದೊಡ್ಡದಂತಲ್ಲಾ!

- Advertisement -
- Advertisement -

ಕಾನೂನುಗಳಿಗಿಂತ ನನ್ನ ಧರ್ಮವೇ ದೊಡ್ಡದು, ಆದ್ದರಿಂದ ನಾನು ಕಾನೂನುಗಳಿಗೆ ಹೆದರುವುದಿಲ್ಲ ಎಂಬಂತಹ ಮಾತೊಂದು ಪತ್ರಿಕೆಗಳಲ್ಲಿ ಹರಿದಾಡಿದಾಗ ಗ್ಯಾರಂಟಿ ಈ ಮಾತನ್ನು ತಾಲೀಬಾನಿಗಳು ಆಡಿರಬಹುದು ಅಥವ ಯಾವುದಾದರೂ ಮೂಲಭೂತಾವಾದಿ ಸಂಘಟನೆಯ ಲೀಡರು ಆಡಿರಬಹುದೆಂದು ಅಷ್ಟೇನು ಗಾಬರಿಯಿಲ್ಲದೆ ಹುಡುಕಿದಾಗ ಈ ಮಾತನ್ನಾಡಿದವರು ನಮ್ಮ ಶರಣ ಪರಂಪರೆಯ ಪ್ರಖರ ವಿಚಾರವಾದಿ ಸ್ವಾಮಿಜಿಯೊಬ್ಬರು ಎಂಬುದು ಗೊತ್ತಾದಾಗ ಏರಿ ನೀರುಂಬೊಡೆ, ಬೇಲಿ ಹೊಲ ಮೇಯ್ದೊಡೆ, ನಾರಿ ತನ್ನ ಮನೆಯಲ್ಲಿ ಕದ್ದೊಡೆ ಬದುಕುವುದೇನಯ್ಯ ಎಂಬಂತಾಯ್ತಲ್ಲಾ.

ಮಧ್ಯ ಕರ್ನಾಟಕದ ಒಂದೆರಡು ಜಿಲ್ಲಾ ಪ್ರದೇಶದಲ್ಲಿ ಗೊತ್ತಿರುವ ಜಗದ್ಗುರುವೊಬ್ಬರು ಹೀಗೆ ಮಾತಾಡುತ್ತಿರಬೇಕಾದರೆ, ಅವರು ಕಾನೂನು ಮೀರಿ ಬಹಳ ವರ್ಷಗಳೇ ಆಗಿರಬೇಕು. ಮಠದ ಸಂವಿಧಾನದ ಪ್ರಕಾರ ಅರವತ್ತು ವರ್ಷಕ್ಕೆ ನಿವೃತ್ತಿ ಪಡೆದು, ಮರಿ ಸ್ವಾಮಿಗೆ ಪಟ್ಟಕಟ್ಟಿ ತಾವು ಪಕ್ಕದಲ್ಲಿ ನಿಲ್ಲಬೇಕಿತ್ತು. ಆದರೆ ಮಠದ ಪರಂಪರೆ ಬದಿಗೊತ್ತಿ, ಅರವತ್ತು ವರ್ಷವನ್ನ ಹಿಂದಿಕ್ಕಿ ಮುಂದುವರಿದ ಜಗದ್ಗುರುವಿನ ನಡೆಗೆ ಬೇಸತ್ತ ಭಕ್ತಾದಿಗಳು ಕಾನೂನು ಮೊರೆಹೋಗಿದ್ದಾರಂತಲ್ಲಾ! ಅದಕ್ಕೆ ಹೆದರಿದ ಜಗದ್ಗುರು ನಾನು ಕಾನೂನಿಗೆ ಹೆದರುವುದಿಲ್ಲ ಎಂದರಂತಲ್ಲಾ ಥೂತ್ತೇರಿ.

ಈ ನೆಲದ ಕಾನೂನಿಗಾಗಲಿ ಮಠದ ಕಾನೂನಿಗಾಗಲಿ ಹೆದರುವುದಿಲ್ಲ ಎಂದಮೇಲೆ ಭಂಡತನ ಆವರಿಸುತ್ತೆ. ಆನಂತರ ಮಾಡುವ ಎಲ್ಲ ಕೆಲಸಗಳು ಭಂಡತನದಿಂದಲೇ ಕೂಡಿರುತ್ತವೆ. ಬಹು ಹಿಂದೆ ಜಗದ್ಗುರುಗಳೇ ಬಿಗಿದ ಭಾಷಣವಿದು. ಆ ಮಾತಿನ ಪ್ರಯೋಗಕ್ಕಿಳಿದಂತಿರುವ ಜಗದ್ಗುರುಗಳು ಮಠದ ಆಸ್ತಿಯನ್ನೇ ಸ್ವಂತದ ಆಸ್ತಿಯನ್ನಾಗಿ ಮಾಡಿಕೊಳ್ಳುತ್ತ ಅದನ್ನ ದಕ್ಕಿಸಿಕೊಳ್ಳಲು ಟ್ರಸ್ಟು ಮಾಡಿಕೊಂಡು, ಪ್ರತಿಭಟಿಸುವಂತಹ ಭಕ್ತಾದಿಗಳನ್ನು ಬೆದರಿಸಲು ಶಿವಸೈನ್ಯವನ್ನೇ ಕಟ್ಟಿದ್ದಾರಂತಲ್ಲಾ! ಇಂತಹ ಸಾಹಸಗಳನ್ನು ಮಾಡಿದ ಮೇಲೆ ಪ್ರಭುತ್ವದ ರಕ್ಷಣೆ ಬೇಕಿರುತ್ತದೆ. ಅದಕ್ಕಾಗಿ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳನ್ನು ಕರೆದು ಹಿಗ್ಗಾಮುಗ್ಗ ಹೊಗಳಿದರಂತಲ್ಲಾ! ಹಿಂದೆ ರಾಜಕಾರಣಿಗಳನ್ನು ನಿರ್ದಾಕ್ಷಿಣ್ಯವಾಗಿ ಟೀಕಿಸುತ್ತಾ, ಅವರ ಕರ್ತವ್ಯಗಳನ್ನು ಅರಿವು ಮಾಡಿಕೊಡುತ್ತಿದ್ದ ಜಗದ್ಗುರುಗಳಿಂದ ಹೊಗಳಿಸಿಕೊಂಡ ಹಾಲಿ ಮತ್ತು ಮಾಜಿಗಳು ಗಲಿಬಿಲಿಗೊಂಡು, ಮತ್ತೊಮ್ಮೆ ಪಾದಗಳಿಗೆ ಪೊಡಮರುವಷ್ಟರಲಿ, ಪೊಲೀಸ್ ಅಧಿಕಾರಿಯೊಬ್ಬರು ಅನಾಮತ್ತು ಜಗದ್ಗುರುವಿನ ಪದತಳಕ್ಕೆ ಡೈ ಹೊಡೆದು ಇಲ್ಲದ ಬಾಲವಾಡಿಸಿದರಂತಲ್ಲಾ.. ಥೂತ್ತೇರಿ.

ಇದೇ ಮಠದ ಭವ್ಯಪರಂಪರೆಯಲ್ಲಿ ಹಿಂದಿನ ಜಗದ್ಗುರುಗಳು ನಡೆಸುತ್ತಿದ್ದ ಸಮಾರಂಭಕ್ಕೆ ಸಮವಸ್ತ್ರದಲ್ಲಿ ಬಂದ ಪೊಲೀಸ್ ಅಧಿಕಾರಿ ಸ್ವಾಮೀಜಿ ಕಾಲಿಗೆ ಬೀಳಲು ಹೋದಾಗ ಸ್ವಾಮಿಗಳು ಅದನ್ನ ತಡೆದು “ನೀವು ಸಮವಸ್ತ್ರದಲ್ಲಿರುವ ಸರಕಾರಿ ಅಧಿಕಾರಿ, ಕಾನೂನು ರಕ್ಷಿಸಬೇಕಾದವರು, ಆದ್ದರಿಂದ ಒಂದು ಮಠದ ಸ್ವಾಮಿ ಕಾಲಿಗೆ ಬೀಳಬಾರದು. ಹಾಗೆ ಗೌರವ ಕೊಡುವುದಿದ್ದರೆ ಸಮವಸ್ತ್ರ ತೆಗೆದು ಖಾಸಗಿ ಕಾರಿನಲ್ಲಿ ಬಂದು ಆಶೀರ್ವಾದ ಪಡೆಯಿರಿ” ಎಂದದ್ದು ಮಠದ ಪರಂಪರೆಯಲ್ಲಿ ಐತಿಹಾಸಿಕ ಘಟನೆಯಾಗಿ ಉಳಿದಿದೆಯಲ್ಲಾ. ಆದರೇನು ಈಚೆಗೆ ಇಲ್ಲಿಗೆ ಬಂದ ಐಪಿಎಸ್ ಅಧಿಕಾರಿಯೊಬ್ಬ ಜಗದ್ಗುರುವಿನ ಕಾಲಿಗೆ ದೀರ್ಘ ದಂಡ ಹೊಡೆದುದ್ದಲ್ಲದೆ ಧರ್ಮವೇ ದೊಡ್ಡದು ಎಂದುಬಿಟ್ಟರಲ್ಲಾ. ಈ ಅಧಿಕಾರಿಯ ಮಾತನ್ನ ಅನುಮೋದಿಸುವುದಾದರೆ, ಆಯ್ತು ಕಾನೂನಿಗಿಂತ ಧರ್ಮ ದೊಡ್ಡದು ಅಂದುಕೊಂಡರೆ, ಸದ್ಯ ತಮ್ಮ ಧರ್ಮ ಹಿಡಿದುಕೊಂಡು ಭಂಡತನ ಪ್ರದರ್ಶನ ಮಾಡುತ್ತಿರುವ ಜಗದ್ಗುರುವಿನ ಎದುರು ಭಕ್ತಾದಿಗಳು ಸಿಡಿದೆದ್ದರೆ ಧರ್ಮವಿರೋಧಿ ಕಾನೂನನ್ನ ಮುಲಾಜಿಲ್ಲದೆ ಜಾರಿ ಮಾಡಲು ರೆಡಿಯಿರುವ ಈ ಪೊಲೀಸ್ ಅಧಿಕಾರಿ ಮತ್ತು ಜಗದ್ಗುರುಗಳ ಪಾದವನ್ನೆ ನೋಡುವ ಜಿಲ್ಲಾಧಿಕಾರಿಗಳ ದೆಸೆಯಿಂದ ನೆಲದ ಕಾನೂನು ನೆಲಸಮವಾಗುತ್ತಿದೆಯಂತಲ್ಲಾ, ಥೂತ್ತೆರಿ.

ದೆಹಲಿಯ ಕೆಂಪುಕೋಟೆಯ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ ಆದರೆ ನೂರು ವರ್ಷದ ನಂತರ ಅಥವ ಐನೂರು ವರ್ಷಗಳೂ ಆಗಬಹುದೆಂದು ಘಂಟಾಘೋಷವಾಗಿ ಹೇಳುತ್ತ ಅದನ್ನ ಸಮರ್ಥಿಸುತ್ತಿರುವ ಬಿಜೆಪಿಯ ಮೇಧಾವಿ ಮಂತ್ರಿಗಳಾದ ಈಶ್ವರಪ್ಪನ ಕೇಸರಿ ಮಾತುಗಳ ಬಗ್ಗೆ ಪತ್ರಕರ್ತರು ಜೆಡಿಎಸ್ ನಾಯಕ ಕುಮಾರಣ್ಣನಿಗೆ ಕೇಳಲಾಗಿ, ಕುಮಾರಣ್ಣ ಥೇಟ್ ಈಶ್ವರಪ್ಪನಂತೆಯೇ ಮಾತನಾಡಿದರಲ್ಲಾ.

“ಕೇಸರಿ ಅನತಕ್ಕಂತದ್ದೇನಿದೆ, ಅದು ಒಂದು ಬಟ್ಟೆ ಅಂತ ನಾವು ಪರಿಗಣಿಸಿ ಮಾತನಾಡತಕ್ಕಂತದ್ದೇನಿದೆ, ಆ ಒಂದು ವಿಷಯ ಇವತ್ತು ಪಡಕಂತಿರತಕ್ಕಂತ ಪ್ರಚಾರಯೇನಿದೆ, ಅದನ್ನ ನಾವು ಪರಿಶೀಲನೆ ಮಾಡಿದ್ರೆ ಈ ಕೇಸರಿ ಸಾಮಾನ್ಯದಾದಂತಹ ಜನ ಧರಸತಕ್ಕಂತ ಬಟ್ಟೆ ಅಲ್ಲ. ಅದೊಂದು ಶ್ರೇಷ್ಠವಾದ ಬಟ್ಟೆ ಅನತಕ್ಕಂತ ವಿಷಯವನ್ನ ನಮ್ಮ ಪರಂಪರೆಲಿ ನಮ್ಮ ಹಿರಿಯರು ತೋರಿಸಿಕೊಟ್ಟಿರತಕ್ಕಂತ ವಿಷಯ ಏನಿದೆ ಆ ಬಗ್ಗೆ ನಾವು ಹಗುರವಾಗಿ ಮಾತನಾಡಕ್ಕಂತದ್ದು ಸರಿಕಾಣದಿಲ್ಲ, ಅನತಕ್ಕಂತದ್ದು ನನ್ನ ಅಭಿಪ್ರಾಯ” ಎಂದರಂತಲ್ಲಾ. ಈ ಮಾತನ್ನ ಕೇಳಿಸಿಕೊಂಡ ಶಿವಮೊಗ್ಗದ ಕಡೆ ಜೆಡಿಎಸ್‌ನವರು ಕುಮಾರಣ್ಣ ಈಶ್ವರಪ್ಪನಂತೆ ಮಾತನಾಡುವುದಾದರೆ ನಾವ್ಯಾಕೆ ಜೆಡಿಎಸ್‌ನಲ್ಲಿರಬೇಕು ಎಂದು ಅನ್ಯ ಪಾರ್ಟಿಯ ಕಡೆ ಗುಳೆ ಹೊರಟಿದ್ದಾರಂತಲ್ಲಾ..

ಥೂತ್ತೇರಿ.


ಇದನ್ನೂ ಓದಿ: ಸತ್ಯ ಹೇಳಿದ್ರೆ ಪಾರ್ಟಿಯಿಂದ್ಲೆ ತಗೀತರಲ್ರಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...