Homeಮುಖಪುಟಮಣಿಪುರ ಚುನಾವಣೆ: ಡಗ್ಸ್ ಮಾಫಿಯಾ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ವಿರುದ್ದ ಅಮಿತ್ ಶಾ ಪ್ರಚಾರ!

ಮಣಿಪುರ ಚುನಾವಣೆ: ಡಗ್ಸ್ ಮಾಫಿಯಾ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ವಿರುದ್ದ ಅಮಿತ್ ಶಾ ಪ್ರಚಾರ!

- Advertisement -
- Advertisement -

ಮಣಿಪುರ ರಾಜ್ಯದಲ್ಲಿನ ಡ್ರಗ್ಸ್ ಮಾಫಿಯಾದ ವಿರುದ್ಧ ಹೋರಾಡಿದ್ದ ದಕ್ಷ ಪೊಲೀಸ್ ಅಧಿಕಾರಿ ಬೃಂದಾ ತೌನೋಜಮ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಪೂರ್ವ ಇಂಫಾಲದ ಯೈಸ್ಕುಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಚುನಾವಣಾ ಕಣಕ್ಕಿಳಿದಿದ್ದಾರೆ. ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನೆ ಮನೆ ಪ್ರಚಾರ ಮಾಡುತ್ತಿದ್ದಾರೆ.

ಬೃಂದಾ ತೌನೋಜಮ್ ಅವರು ಜೆಡಿ(ಯು) ಪಕ್ಷದಿಂದ ಬಿಜೆಪಿಯ ಹಾಲಿ ಶಾಸಕ ಮತ್ತು ಹಾಲಿ ಮಣಿಪುರ ಕಾನೂನು ಸಚಿವ ತೊಕ್ಚೋಮ್ ಸತ್ಯಬ್ರತ ಸಿಂಗ್ ವಿರುದ್ಧ ಚುನಾವಣೆ ಎದುರಿಸುತ್ತಿದ್ದಾರೆ.

43 ವರ್ಷದ ಬೃಂದಾ ತೌನೋಜಮ್ ಅಪಾರ ಯುವ ಅಭಿಮಾನಿಗಳನ್ನು ಹೊಂದಿದ್ದಾರೆ. ಮಣಿಪುರ ಪೊಲೀಸರ ಮಾದಕ ದ್ರವ್ಯ ವಿರೋಧಿ ಘಟಕದ ಉಪ ಮುಖ್ಯಸ್ಥರಾಗಿದ್ದ ಅವರು ತಮ್ಮ ನೇತೃತ್ವದಲ್ಲಿ 2018 ರಲ್ಲಿ ₹ 27 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಉನ್ನತ ಪ್ರಕರಣದ ನಂತರ ಪ್ರಸಿದ್ಧರಾದರು. ಆ ವರ್ಷ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗೆ ಶೌರ್ಯ ಪ್ರಶಸ್ತಿಯನ್ನು ನೀಡಿತ್ತು. ಆದರೆ ಆ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಲು ಸಿಎಂ ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದ ಬೃಂದಾ ತೌನೋಜಮ್ ಪ್ರಶಸ್ತಿ ವಾಪಸ್ ಮಾಡಿದರು ಮಾತ್ರವಲ್ಲದೆ ಸಿಎಂ ಜೊತೆ ಜಗಳವಾಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

“ಬಿಜೆಪಿಯ ಹಾಲಿ ಸಚಿವರಿಗೆ ನನ್ನ ವಿರುದ್ಧ ಪ್ರಚಾರ ಮಾಡಲು ಕೇಂದ್ರ ಗೃಹ ಸಚಿವರನ್ನು ಕರೆಸಿಕೊಳ್ಳುತ್ತಿದ್ದಾರೆ ಎಂದರೆ ಅದನ್ನು ನಾನು ಪ್ರಶಂಸೆಯಾಗಿ ತೆಗೆದುಕೊಳ್ಳುತ್ತೇನೆ. ನನ್ನ ಹೋರಾಟ ಡ್ರಗ್ಸ್ ಹಾವಳಿ ಮತ್ತು ಭ್ರಷ್ಟಾಚಾರದ ವಿರುದ್ಧ. ಒಬ್ಬ ಪೋಲೀಸ್ ಆಗಿ ಜನರಿಗೆ ಹೆಚ್ಚಿನ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ನಾನು ರಾಜ್ಯ ವಿಧಾನಸಭೆಯಲ್ಲಿ ಪ್ರಭಾವ ಬೀರಲು ಬಯಸುತ್ತೇನೆ” ತೌನೋಜಮ್ ಹೇಳಿದ್ದಾರೆ.

ಮಣಿಪುರದಲ್ಲಿ ಹಾಲಿ ಆಡಳಿತರದಲ್ಲಿರುವ ಎನ್‌ಡಿಎ ಸರ್ಕಾರವು ಡ್ರಗ್ಸ್ ಮಾಫಿಯಾವನ್ನು ಬೆಂಬಲಿಸುತ್ತಿದೆ ಎಂದು ಮಾಜಿ ಪೊಲೀಸ್ ಅಧಿಕಾರಿ ಆರೋಪಿಸಿದ್ದಾರೆ. ಖುದ್ದು ಸಿಎಂ ಆರೋಪಿಗಳ ರಕ್ಷಣೆಗೆ ನಿಲ್ಲುತ್ತಾರೆ. ಹಾಗಾಗಿ ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂಬುದು ಅವರ ಅಭಿಮತವಾಗಿದೆ. ಅವರ ಮಾವ ರಾಜ್ಯದ ವಿರುದ್ಧದ ಶಸಸ್ತ್ರ ಹೋರಾಟದ ನೇತೃತ್ವ ವಹಿಸಿದ್ದರು. ಆದರೆ ತನೋಜಮ್ ಉತ್ತರ ಪೊಲೀಸ್ ಅಧಿಕಾರಿಯಾಗಿ ಹೆಸರು ಗಳಿಸಿದ್ದಾರೆ.

2017 ರಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ (ಎಎಫ್‌ಎಸ್‌ಪಿಎ) ವಿರುದ್ಧ ಪ್ರತಿಭಟನೆಯ ಸಂಕೇತವಾಗಿ 16 ವರ್ಷಗಳ ಅಪ್ರತಿಮ ಉಪವಾಸವನ್ನು ಕೊನೆಗೊಳಿಸಿದ “ಮಣಿಪುರದ ಉಕ್ಕಿನ ಮಹಿಳೆ” ಇರೋಮ್ ಶರ್ಮಿಳಾ ಚಾನು ಕೂಡ ಯುವಜನರಿಂದ ಭಾರಿ ಬೆಂಬಲ ಪಡೆದಿದ್ದರು. ಅವರು ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಅವು ಮತಗಳಾಗಿ ಬದಲಾಗಲಿಲ್ಲ. ಹಾಗಾಗಿ ಅವರು ಸೋಲಬೇಕಾಯಿತು. ಅದನ್ನು ತನೋಜಮ್ ಮುರಿಯುವರೆ ಕಾದು ನೋಡಬೇಕಿದೆ.

ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 05 ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಘೋಷಣೆಯಾಗಲಿದೆ.


ಇದನ್ನೂ ಓದಿ : ಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...