Homeಕರ್ನಾಟಕಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

ಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

- Advertisement -
- Advertisement -

ಉಕ್ರೇನಿಯನ್ ಮತ್ತು ರಷ್ಯಾ ಪಡೆಗಳ ನಡುವಿನ ಸಮರದಲ್ಲಿ ಉಕ್ರೇನ್ ರಾಜಧಾನಿ ಕೀವ್‌ನಲ್ಲಿರುವ ಅಪಾರ್ಟ್ಮೆಂಟ್‌ಗೆ ಕ್ಷಿಪಣಿ ಅಪ್ಪಳಿಸಿದೆ ಎಂದು ಕೀವ್‌‌ ಮೇಯರ್ ವಿಟಾಲಿ ಕ್ಲಿಟ್ಸ್ಕೊ ಹೇಳಿದ್ದಾರೆ. ಆದರೆ ಯಾವುದೇ ಸಾವುಗಳು ಅಥವಾ ಗಾಯಗೊಂಡವರ ವರದಿಯಾಗಿಲ್ಲ.

ಜುಲಿಯಾನಿ ವಿಮಾನ ನಿಲ್ದಾಣದ ಬಳಿ ಕೀವ್‌ನ ನೈಋತ್ಯ ಹೊರವಲಯದಲ್ಲಿರುವ ಅಪಾರ್ಟ್‌ಮೆಂಟ್‌ ಬ್ಲಾಕ್‌ಗೆ ಶನಿವಾರ ಕ್ಷಿಪಣಿ ಅಪ್ಪಳಿಸಿದೆ. ನಂತರ ತುರ್ತು ಮತ್ತು ರಕ್ಷಣಾ ಸೇವೆಗಳು ಘಟನಾ ಸ್ಥಳಕ್ಕೆ ಧಾವಿಸಿವೆ ಎಂದು ವಿಟಾಲಿ ಕ್ಲಿಟ್ಸ್ಕೊ ಹೇಳಿದ್ದಾರೆ.

ಸಂದೇಶ ಕಳುಹಿಸುವ ಅಪ್ಲಿಕೇಶನ್‌ನಲ್ಲಿ ಅವರು ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಕಟ್ಟಡದ ಒಂದು ಬದಿಗೆ ಕ್ಷಪಣಿ ಅಪ್ಪಳಿಸಿರುವುದನ್ನು ಅವರು ತಿಳಿಸಿದ್ದಾರೆ. ಹಲವು ಮಹಡಿಗಳ ಅಪಾರ್ಟ್‌‌ಮೆಂಟ್ ಹಾನಿಗೊಳಗಾಗಿದೆ.

ನಿರಾಶ್ರಿತ ಶಿಬಿರಗಳಲ್ಲಿ ಉಳಿಯಲು ಕ್ಲಿಟ್ಸ್ಕೊ ಕೀವ್‌‌ ಜನರಲ್ಲಿ ಒತ್ತಾಯಿಸಿದ್ದಾರೆ. “ಶತ್ರುಗಳು ವೈಮಾನಿಕ ದಾಳಿ ಮಾಡುತ್ತಾರೆ” ಎಂದು ಅವರು ಎಚ್ಚರಿಸಿದ್ದಾರೆ.

ಕೀವ್‌‌ನಿಂದ ವರದಿ ಮಾಡಿರುವ ಅಲ್ ಜಜೀರಾದ ಆಂಡ್ರ್ಯೂ ಸಿಮ್ಮನ್ಸ್, “ರಾತ್ರಿಯಿಡೀ ದಾಳಿಗೊಳಗಾದ ಹಲವು ಕಟ್ಟಡಗಳಲ್ಲಿ ಈ ಎತ್ತರದ ಅಪಾರ್ಟ್‌‌ಮೆಂಟ್‌ ಕೂಡ ಒಂದಾಗಿದೆ” ಎಂದು ತಿಳಿಸಿದ್ದಾರೆ.

“ಈ ನಗರದ ಬೀದಿಗಳಲ್ಲಿ ವೈಮಾನಿಕವಾಗಿ ನಡೆಯುತ್ತಿರುವ ಹಿಂಸಾಚಾರ ಅತ್ಯಂತ ಭೀಕರವಾಗಿದೆ” ಎಂದು ಅವರು ತಿಳಿಸಿದ್ದಾರೆ. “ಭೀಕರ ಶಬ್ಧ, ಭಯಾನಕ ಶಬ್ದ” ಎಂದು ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ. “ರಾಜಧಾನಿಯನ್ನು ವಶಪಡಿಸಿಕೊಳ್ಳುವ ಮುಂದಿನ ಹಂತದ ಕುರಿತು ಎಚ್ಚರಿಕೆಯ ಘಂಟೆಯನ್ನು ರಷ್ಯಾ ಪಡೆ ನೀಡುತ್ತಿದೆ” ಎಂದು ಅವರು ವರದಿ ಮಾಡಿದ್ದಾರೆ.

ವಾಯು ಮತ್ತು ಜಲಮಾರ್ಗದ ಕ್ರೂಸ್ ಕ್ಷಿಪಣಿಗಳನ್ನು ಬಳಸಿಕೊಂಡು ಉಕ್ರೇನ್‌ನ ಮಿಲಿಟರಿ ಮೂಲಸೌಕರ್ಯವನ್ನು ಗುರಿಮಾಡಿಕೊಳ್ಳಲಾಗಿದೆ ಎಂದು ರಷ್ಯಾದ ಮಿಲಿಟರಿ ಶನಿವಾರ ಹೇಳಿದೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ನಡೆದ ಕಾದಾಟದಿಂದಾಗಿ ಇಬ್ಬರು ಮಕ್ಕಳು ಸೇರಿದಂತೆ 35 ಜನರು ಗಾಯಗೊಂಡಿದ್ದಾರೆ ಎಂದು ಕ್ಲಿಟ್ಸ್ಕೊ ಮಾಹಿತಿ ನೀಡಿದ್ದಾರೆ. ಅವರು ನಾಗರಿಕರನ್ನು ಮಾತ್ರ ಉಲ್ಲೇಖಿಸುತ್ತಿದ್ದಾರೆಯೇ ಎಂಬ ಮಾಹಿತಿ ಸ್ಪಷ್ಟವಾಗಿಲ್ಲ.

ಉಕ್ರೇನ್‌ನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಅವರು ಹಾನಿಗೊಳಗಾದ ಅಪಾರ್ಟ್ಮೆಂಟ್ ಬ್ಲಾಕ್‌ನ ಚಿತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಕೀವ್‌‌ ನಮ್ಮ ಭವ್ಯವಾದ, ಶಾಂತಿಯುತ ನಗರ. ರಷ್ಯಾದ ಸೇನೆ, ಕ್ಷಿಪಣಿಗಳ ದಾಳಿಯ ನಡುವೆ ಮತ್ತೊಂದು ರಾತ್ರಿ ಜನರು ಬದುಕುಳಿದರು. ದಾಳಿ ಮಾಡಿದವರಲ್ಲಿ ಒಬ್ಬರು ಕೀವ್‌ಲ್ಲಿರುವ ವಸತಿ ಅಪಾರ್ಟ್ಮೆಂಟ್‌ಗೆ ಹೊಡೆದಿದ್ದಾರೆ” ಎಂದು ಅವರು ಬರೆದಿದ್ದಾರೆ.

ನಾನು ಜಗತ್ತನ್ನು ಒತ್ತಾಯಿಸುತ್ತೇನೆ: ರಷ್ಯಾವನ್ನು ಸಂಪೂರ್ಣವಾಗಿ ಹೊರಗಿಡಿ, ರಾಯಭಾರಿಗಳನ್ನು ಹೊರಹಾಕಿ, ತೈಲ ನಿರ್ಬಂಧ ಹೇರಿ. ಅದರ ಆರ್ಥಿಕತೆಯನ್ನು ಕಸಿದುಕೊಳ್ಳಿ. ರಷ್ಯಾದ ಯುದ್ಧ ಅಪರಾಧಿಗಳನ್ನು ತಡೆಯಿರಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...