Homeಕರ್ನಾಟಕಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

ಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

- Advertisement -
- Advertisement -

ಉಕ್ರೇನಿಯನ್ ಮತ್ತು ರಷ್ಯಾ ಪಡೆಗಳ ನಡುವಿನ ಸಮರದಲ್ಲಿ ಉಕ್ರೇನ್ ರಾಜಧಾನಿ ಕೀವ್‌ನಲ್ಲಿರುವ ಅಪಾರ್ಟ್ಮೆಂಟ್‌ಗೆ ಕ್ಷಿಪಣಿ ಅಪ್ಪಳಿಸಿದೆ ಎಂದು ಕೀವ್‌‌ ಮೇಯರ್ ವಿಟಾಲಿ ಕ್ಲಿಟ್ಸ್ಕೊ ಹೇಳಿದ್ದಾರೆ. ಆದರೆ ಯಾವುದೇ ಸಾವುಗಳು ಅಥವಾ ಗಾಯಗೊಂಡವರ ವರದಿಯಾಗಿಲ್ಲ.

ಜುಲಿಯಾನಿ ವಿಮಾನ ನಿಲ್ದಾಣದ ಬಳಿ ಕೀವ್‌ನ ನೈಋತ್ಯ ಹೊರವಲಯದಲ್ಲಿರುವ ಅಪಾರ್ಟ್‌ಮೆಂಟ್‌ ಬ್ಲಾಕ್‌ಗೆ ಶನಿವಾರ ಕ್ಷಿಪಣಿ ಅಪ್ಪಳಿಸಿದೆ. ನಂತರ ತುರ್ತು ಮತ್ತು ರಕ್ಷಣಾ ಸೇವೆಗಳು ಘಟನಾ ಸ್ಥಳಕ್ಕೆ ಧಾವಿಸಿವೆ ಎಂದು ವಿಟಾಲಿ ಕ್ಲಿಟ್ಸ್ಕೊ ಹೇಳಿದ್ದಾರೆ.

ಸಂದೇಶ ಕಳುಹಿಸುವ ಅಪ್ಲಿಕೇಶನ್‌ನಲ್ಲಿ ಅವರು ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಕಟ್ಟಡದ ಒಂದು ಬದಿಗೆ ಕ್ಷಪಣಿ ಅಪ್ಪಳಿಸಿರುವುದನ್ನು ಅವರು ತಿಳಿಸಿದ್ದಾರೆ. ಹಲವು ಮಹಡಿಗಳ ಅಪಾರ್ಟ್‌‌ಮೆಂಟ್ ಹಾನಿಗೊಳಗಾಗಿದೆ.

ನಿರಾಶ್ರಿತ ಶಿಬಿರಗಳಲ್ಲಿ ಉಳಿಯಲು ಕ್ಲಿಟ್ಸ್ಕೊ ಕೀವ್‌‌ ಜನರಲ್ಲಿ ಒತ್ತಾಯಿಸಿದ್ದಾರೆ. “ಶತ್ರುಗಳು ವೈಮಾನಿಕ ದಾಳಿ ಮಾಡುತ್ತಾರೆ” ಎಂದು ಅವರು ಎಚ್ಚರಿಸಿದ್ದಾರೆ.

ಕೀವ್‌‌ನಿಂದ ವರದಿ ಮಾಡಿರುವ ಅಲ್ ಜಜೀರಾದ ಆಂಡ್ರ್ಯೂ ಸಿಮ್ಮನ್ಸ್, “ರಾತ್ರಿಯಿಡೀ ದಾಳಿಗೊಳಗಾದ ಹಲವು ಕಟ್ಟಡಗಳಲ್ಲಿ ಈ ಎತ್ತರದ ಅಪಾರ್ಟ್‌‌ಮೆಂಟ್‌ ಕೂಡ ಒಂದಾಗಿದೆ” ಎಂದು ತಿಳಿಸಿದ್ದಾರೆ.

“ಈ ನಗರದ ಬೀದಿಗಳಲ್ಲಿ ವೈಮಾನಿಕವಾಗಿ ನಡೆಯುತ್ತಿರುವ ಹಿಂಸಾಚಾರ ಅತ್ಯಂತ ಭೀಕರವಾಗಿದೆ” ಎಂದು ಅವರು ತಿಳಿಸಿದ್ದಾರೆ. “ಭೀಕರ ಶಬ್ಧ, ಭಯಾನಕ ಶಬ್ದ” ಎಂದು ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ. “ರಾಜಧಾನಿಯನ್ನು ವಶಪಡಿಸಿಕೊಳ್ಳುವ ಮುಂದಿನ ಹಂತದ ಕುರಿತು ಎಚ್ಚರಿಕೆಯ ಘಂಟೆಯನ್ನು ರಷ್ಯಾ ಪಡೆ ನೀಡುತ್ತಿದೆ” ಎಂದು ಅವರು ವರದಿ ಮಾಡಿದ್ದಾರೆ.

ವಾಯು ಮತ್ತು ಜಲಮಾರ್ಗದ ಕ್ರೂಸ್ ಕ್ಷಿಪಣಿಗಳನ್ನು ಬಳಸಿಕೊಂಡು ಉಕ್ರೇನ್‌ನ ಮಿಲಿಟರಿ ಮೂಲಸೌಕರ್ಯವನ್ನು ಗುರಿಮಾಡಿಕೊಳ್ಳಲಾಗಿದೆ ಎಂದು ರಷ್ಯಾದ ಮಿಲಿಟರಿ ಶನಿವಾರ ಹೇಳಿದೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ನಡೆದ ಕಾದಾಟದಿಂದಾಗಿ ಇಬ್ಬರು ಮಕ್ಕಳು ಸೇರಿದಂತೆ 35 ಜನರು ಗಾಯಗೊಂಡಿದ್ದಾರೆ ಎಂದು ಕ್ಲಿಟ್ಸ್ಕೊ ಮಾಹಿತಿ ನೀಡಿದ್ದಾರೆ. ಅವರು ನಾಗರಿಕರನ್ನು ಮಾತ್ರ ಉಲ್ಲೇಖಿಸುತ್ತಿದ್ದಾರೆಯೇ ಎಂಬ ಮಾಹಿತಿ ಸ್ಪಷ್ಟವಾಗಿಲ್ಲ.

ಉಕ್ರೇನ್‌ನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಅವರು ಹಾನಿಗೊಳಗಾದ ಅಪಾರ್ಟ್ಮೆಂಟ್ ಬ್ಲಾಕ್‌ನ ಚಿತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಕೀವ್‌‌ ನಮ್ಮ ಭವ್ಯವಾದ, ಶಾಂತಿಯುತ ನಗರ. ರಷ್ಯಾದ ಸೇನೆ, ಕ್ಷಿಪಣಿಗಳ ದಾಳಿಯ ನಡುವೆ ಮತ್ತೊಂದು ರಾತ್ರಿ ಜನರು ಬದುಕುಳಿದರು. ದಾಳಿ ಮಾಡಿದವರಲ್ಲಿ ಒಬ್ಬರು ಕೀವ್‌ಲ್ಲಿರುವ ವಸತಿ ಅಪಾರ್ಟ್ಮೆಂಟ್‌ಗೆ ಹೊಡೆದಿದ್ದಾರೆ” ಎಂದು ಅವರು ಬರೆದಿದ್ದಾರೆ.

ನಾನು ಜಗತ್ತನ್ನು ಒತ್ತಾಯಿಸುತ್ತೇನೆ: ರಷ್ಯಾವನ್ನು ಸಂಪೂರ್ಣವಾಗಿ ಹೊರಗಿಡಿ, ರಾಯಭಾರಿಗಳನ್ನು ಹೊರಹಾಕಿ, ತೈಲ ನಿರ್ಬಂಧ ಹೇರಿ. ಅದರ ಆರ್ಥಿಕತೆಯನ್ನು ಕಸಿದುಕೊಳ್ಳಿ. ರಷ್ಯಾದ ಯುದ್ಧ ಅಪರಾಧಿಗಳನ್ನು ತಡೆಯಿರಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿರಿ: ಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...