Homeಕರ್ನಾಟಕಫ್ಯಾಕ್ಟ್‌ಚೆಕ್‌: ಸಿಎಂ ಬೊಮ್ಮಾಯಿ ಹೇಳಿದಂತೆ ವಿ. ಡಿ. ಸಾವರ್ಕರ್‌ ದೇಶಕ್ಕೆ ಸ್ಪೂರ್ತಿದಾಯಕ ವ್ಯಕ್ತಿಯೆ?

ಫ್ಯಾಕ್ಟ್‌ಚೆಕ್‌: ಸಿಎಂ ಬೊಮ್ಮಾಯಿ ಹೇಳಿದಂತೆ ವಿ. ಡಿ. ಸಾವರ್ಕರ್‌ ದೇಶಕ್ಕೆ ಸ್ಪೂರ್ತಿದಾಯಕ ವ್ಯಕ್ತಿಯೆ?

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ‘ಮುಖ್ಯಮಂತ್ರಿಯ ಅಧಿಕೃತ ಸರ್ಕಾರಿ ಜಾಲತಾಣಗಳ ಖಾತೆ’ಯಿಂದ, ರಾಷ್ಟ್ರಪಿತ ಮಹಾತ್ಮ ಗಾಂಧಿಯ ಹತ್ಯೆಯಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿರುವ, ಬಲಪಂಥಿಯ ನಾಯಕ ವಿನಾಯಕ ದಾಮೋದರ ಸಾವರ್ಕರ್‌ ಅವರಿಗೆ ಶನಿವಾರ ನಮನಗಳನ್ನು ಸಲ್ಲಿಸಿದ್ದಾರೆ. ಇದಕ್ಕೆ ಹಲವಾರು ಜನರು ಆಕ್ಷೇಪ ವ್ಯಕ್ತಪಡಿಸಿ ಮುಖ್ಯಮಂತ್ರಿಗೆ ಇತಿಹಾಸದ ಪಾಠವನ್ನೂ ಮಾಡಿದ್ದಾರೆ.

ಫೆಬ್ರವರಿ 26 ವಿ.ಡಿ. ಸಾವರ್ಕರ್‌ ಅವರು ನಿಧನವಾದ ದಿನವಾಗಿರುವುದರಿಂದ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕ ಮುಖ್ಯಮಂತ್ರಿಯ ಅಧಿಕೃತ ಟ್ವಿಟರ್‌ ಮತ್ತು ಫೇಸ್‌ಬುಕ್ ಖಾತೆಯಿಂದ, “ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಪೂರ್ತಿದಾಯಕವಾಗಿವೆ” ಎಂದು ಬರೆದುಕೊಂಡಿದ್ದಾರೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಫ್ಯಾಕ್ಟ್‌ಚೆಕ್‌

ಮುಖ್ಯಮಂತ್ರಿ ಮಾಡಿರುವ ಪೋಸ್ಟ್‌ನಲ್ಲಿ ಉಲ್ಲೇಖಿಸಿರುವಂತೆ ವಿ.ಡಿ. ಸಾವರ್ಕರ್‌ ನಿಧನ ಹೊಂದಿರುವ ದಿನಾಂಕ ಸರಿಯೇ ಆಗಿದೆ. ಉಳಿದಂತೆ ಪೋಸ್ಟ್‌ನಲ್ಲಿ ಹಲವಾರು ಅರ್ಧ ಸತ್ಯವಿದ್ದು, ಇದು ಜನರನ್ನು ತಪ್ಪು ದಾರಿಗೆ ಎಳೆಯುತ್ತದೆ. ನಾನುಗೌರಿ.ಕಾಂ ಇವುಗಳನ್ನು ಸಂಕ್ಷಿಪ್ತವಾಗಿ ಪಟ್ಟಿ ಮಾಡಿದೆ.

ಮುಖ್ಯಮಂತ್ರಿ ಮಾಡಿರುವ ಪೋಸ್ಟ್‌‌ ಮತ್ತು ಅದರಲ್ಲಿ ಇರುವ ಚಿತ್ರದಲ್ಲಿ ಮುಖ್ಯವಾಗಿ ಎರಡೇ ವಾಕ್ಯಗಳಿಗೆ. ಇದರಲ್ಲಿ ಮೊದಲ ವಾಕ್ಯ ಕೆಳಗಿನಂತಿವೆ.

  • ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು.

ಮೊದಲ ವಾಕ್ಯವನ್ನು ನಾವು ಪರಿಶೀಲಿಸಿದರೆ, ‘ಭಾರತ ಮಾತೆಯ ಹೆಮ್ಮೆಯ ಪುತ್ರ’ ಮತ್ತು ‘ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ’ ಎಂಬ ವಾಕ್ಯಗಳು ಪೂರ್ತಿ ಸತ್ಯವಲ್ಲ. 82 ವರ್ಷ ಜೀವಿಸಿ 1966 ರಲ್ಲಿ ನಿಧನ ಹೊಂದಿದ ಸಾವರ್ಕರ್‌, 1924ರಲ್ಲಿಯೇ ಅಂಡಮಾನ್ ಜೈಲಿನಿಂದ ಬಿಡುಗಡೆಯಾದ ನಂತರ ಸ್ವಾತಂತ್ಯ್ರ ಹೋರಾಟದ ಯಾವ ಆಂದೋಲನಗಳಲ್ಲೂ ಪಾಲ್ಗೊಂಡಿರುವ ಯಾವುದೆ ದಾಖಲೆ ಇಲ್ಲ.

ವಾಸ್ತವದಲ್ಲಿ ವಿ.ಡಿ. ಸಾವರ್ಕರ್‌ ಅಂಡಮಾನಿನ ಸೆಲ್ಯುಲಾರ್‌ ಜೈಲಿನಿಂದ ಹೊರಬಂದಿದ್ದು ಬ್ರಿಟೀಷರಿಗೆ ಹಲವು ಬಾರಿ ಕ್ಷಮಾಪಣೆ ಪತ್ರ ಬರೆದು, ತಾನು ಮುಂದಕ್ಕೆ ಯಾವುದೇ ಸ್ವಾತಂತ್ಯ್ರ ಹೋರಾಟದಲ್ಲಿ ಭಾಗವಹಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟ ನಂತರವಾಗಿದೆ.

ಹಿರಿಯ ಸ್ವಾತಂತ್ಯ್ರ ಹೊರಾಟಗಾರ, ಪತ್ರಕರ್ತ ಎಚ್‌.ಎಸ್‌. ದೊರೆಸ್ವಾಮಿ ಅವರು, “ಸ್ವಾತಂತ್ರ್ಯ ಸಂಗ್ರಾಮಕ್ಕೆ ಇಳಿದಿದ್ದೇ ತಪ್ಪಾಯಿತು. ನನ್ನನ್ನು ಬಿಡುಗಡೆ ಮಾಡಿ ಎಂದು ಸಾವರ್ಕರ್‌ ಬ್ರಿಟಿಷ್ ಸರ್ಕಾರವನ್ನು ಪ್ರಾರ್ಥಿಸಿದರು. ಸಾವರ್ಕರ್ ತಮ್ಮ ಜಿಲ್ಲೆ ಬಿಟ್ಟು ಬೇರೆಲ್ಲೂ ಹೋಗಕೂಡದು, ಪತ್ರಿಕೆಗೆ ಲೇಖನ ಬರೆಯಬಾರದು ಮುಂತಾದ ಷರತ್ತುಗಳನ್ನು ಹಾಕಿ ಬ್ರಿಟಿಷರು ಬಿಡುಗಡೆ ಮಾಡಿದರು” ಎಂದು ಲೇಖನವೊಂದಲ್ಲಿ ಬರೆದ್ದಾರೆ.

ಉಳಿದಂತೆ ‘ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ’ ಎಂಬ ವಾಕ್ಯವು ಕೂಡಾ ಅರ್ಧ ಸತ್ಯವಾಗಿದೆ. ವಿ.ಡಿ. ಸಾವರ್ಕರ್‌ ಸೆಲ್ಯುಲಾರ್‌ ಜೈಲಿಗೆ ಹೋಗುವುದಕ್ಕಿಂತ ಮುಂಚೆ ಸ್ವಾತಂತ್ಯ್ರ ಹೋರಾಟಗಳಲ್ಲಿ ಭಾಗವಹಿಸಿದ್ದು ನಿಜವೇ ಆಗಿದೆ ಮತ್ತು ಬರಹಗಳನ್ನು ಬರೆದಿದ್ದು ನಿಜವೇ ಆಗಿದೆ. ಆದರೆ ಸೆಲ್ಯುಲಾರ್ ಜೈಲಿನಿಂದ ಹೊರಬಂದ ನಂತರ ಅವರು ಎಲ್ಲದಕ್ಕೂ ತಿಲಾಂಜಲಿಯಿಟ್ಟರು. ಹಾಗೆ ನೋಡಿದರೆ, ಸ್ವಾತಂತ್ಯ್ರದ ಆಂದೋಲನದ ಇಡೀ ದೇಶವೇ ಭಾಗವಹಿಸಿದ ಕ್ವಿಟ್ ಇಂಡಿಯಾ ಚಳವಳಿಗೆ ಇಳಿಯಬೇಡಿ ಎಂದು ಕೂಡಾ ಸಾವರ್ಕರ್‌‌ ಯುವಕರಿಗೆ ಕರೆ ನೀಡಿದ್ದರು ಎಂದು ಇತಿಹಾಸ ತಜ್ಞರು ಉಲ್ಲೇಖಿಸುತ್ತಾರೆ.

ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟು ದೊರೆಸ್ವಾಮಿ ಅವರು, ‘ಸಾವರ್ಕರ್‌ ಅವರನ್ನು ಮಾಜಿ ವೀರ’ ಎಂದು ಉಲ್ಲೇಖಿಸುತ್ತಾರೆ. ಅಲ್ಲದೆ ಮಹಾತ್ಮ ಗಾಂಧಿ ಅವರ ಕೊಲೆಯಲ್ಲೂ ವಿ.ಡಿ. ಸಾವರ್ಕರ್‌ ಅವರ ಕೈವಾಡ ಇದೆ ಎಂದು ಸಂಶೋಧನೆಗಳು ಬಹಿರಂಗಪಡಿಸಿದೆ. ದೊರೆಸ್ವಾಮಿ ಅವರು ಬರೆದಿರುವ, “ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು’’ ಎಂಬ ಲೇಖನದಲ್ಲಿ ಗಾಂಧಿ ಕೊಲೆಯಲ್ಲಿ ಸಾವರ್ಕರ್‌ ಕೈವಾಡ ಹೇಗಿತ್ತು ಎಂದು ನಿರೂಪಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಈ ಎಲ್ಲಾ ಅಂಶಗಳನ್ನು ಗಮಸಿದರೆ, ಮುಖ್ಯಮಂತ್ರಿ ಹೇಳಿದಂತೆ ವಿ.ಡಿ. ಸಾವರ್ಕರ್‌  ಭಾರತ ಮಾತೆಯ ಹೆಮ್ಮೆಯ ಪುತ್ರ ಅಲ್ಲ. ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧನೂ ಅಲ್ಲ. ಲೇಖಕ ಮತ್ತು ಹೋರಾಟಗಾರ ಆಗಿದ್ದ ಸಾವರ್ಕರ್‌ ಆಗಿದ್ದ ಅಂಡಮಾನ್‌ನಿಂದ ಹೊರ ಬಂದ ನಂತರ ಹೋರಾಟದಿಂದ ದೂರ ಉಳಿದರು. ಕೊನೆಗೆ ವಿಶ್ವವೇ ಗೌರವ ಭಾವನೆಯಿಂದ ನೋಡುವ, ದೇಶದ ಹೆಮ್ಮ ಮಹಾತ್ಮ ಗಾಂಧಿಯ ಕೊಲೆಗೂ ಪ್ರೇರಣೆಯಾದರು ಎಂಬ ಆರೋಪ ಎದುರಿಸಿದರು.

ವಾಕ್ಯದ ಕೊನೆಯ ಪದವಾದ ‘ಪುಣ್ಯಸ್ಮರಣೆ ದಿನ’ ಎಂದರೆ, ನಿಧನ ಹೊಂದಿದ ದಿನವನ್ನು ಸೂಚಿಸುವ ಪದವಾಗಿದೆ. ಈ ಪದವು ನಿಜವಾಗಿದ್ದು, ವಿ.ಡಿ. ಸಾವರ್ಕರ್‌ ಫೆಬ್ರವರಿ 26ರಂದು ನಿಧನ ಹೊಂದಿದ್ದರು.

ಮುಖ್ಯಮಂತ್ರಿ ಬರೆದಿರುವ ಪೊಸ್ಟ್‌ನಲ್ಲಿರುವ ಎರಡನೆ ವಾಕ್ಯ, ‘ಸಾವರ್ಕರ್‌ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಪೂರ್ತಿದಾಯಕವಾಗಿವೆ’ ಎಂದು ಬರೆಯುತ್ತಾರೆ. ಅವುಗಳನ್ನು ಒಂದೊಂದಾಗಿ ನೋಡೋಣ.

  • ದೇಶಪ್ರೇಮ – ದೇಶದ ಯುವಕರಿಗೆ ಸ್ವಾತಂತ್ಯ್ರ ಹೋರಾಟಕ್ಕೆ ಇಳಿಯಬೇಡಿ ಎಂದು ಕರೆಕೊಡುವುದು ದೇಶಪ್ರೇಮ ಆಗುವುದಿಲ್ಲ.
  • ತ್ಯಾಗ, ಹೋರಾಟಗಳು – ಸ್ವಾತಂತ್ಯ್ರ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ, ಬ್ರಿಟೀಷರು ಅವರಿಗೆ ಅಂಡಮಾನಿಯಲ್ಲಿ ಆರುವರ್ಷಗಳ ಕರಿನೀರಿನ ಶಿಕ್ಷೆ ನೀಡುತ್ತಾರೆ. ಆದರೆ ಸಾವರ್ಕರ್‌ ಮೂರು ವರ್ಷಗಳಲ್ಲೇ ಹಲವಾರು ಕ್ಷಮಾಪಣೆ ಪತ್ರ ಬರೆದು ಅಲ್ಲಿಂದ ಹೊರಬರುತ್ತಾರೆ. ಆದರೆ ಬ್ರಿಟೀಷರ ಕರಿನೀರಿನ ಶಿಕ್ಷೆಗೆ ಒಳಗಾಗಿ, ಅದೇ ಜೈಲಿನಲ್ಲಿ ಸಾವಿರಾರು ಭಾರತೀಯರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಆದರೆ ಸಾವರ್ಕರ್‌ ತಮ್ಮ ತುಂಬು ಜೀವನವನ್ನು ಬದುಕಿ 1966ರಲ್ಲಿ ತಮ್ಮ 82 ನೇ ವಯಸ್ಸಿನಲ್ಲಿ ಮರಣ ಹೊಂದುತ್ತಾರೆ.
  • ಇಂದಿಗೂ ಸ್ಪೂರ್ತಿದಾಯಕ – ಸಾವರ್ಕರ್‌ ಅವರು ದೇಶವನ್ನು ವಿಭಜನೆ ಮಾಡಬೇಕು ಎಂದು ಪ್ರತಿಪಾದಿಸಿರುವ ಮೊದಲಿಗರಲ್ಲಿ ಒಬ್ಬರು ಎಂದು ಹಲವಾರು ಸಂಶೋಧಕರು ಗುರುತಿಸುತ್ತಾರೆ. ಸಾವರ್ಕರ್‌ ಅವರು ಪ್ರತಿಗಾಮಿ ಸಂಘಟನೆಯಾದ ಹಿಂದೂ ಮಹಾಸಭಾದ ಸ್ಥಾಪಕರಾಗಿದ್ದಾರೆ. ಈ ಸಂಘಟನೆ ಪ್ರಜಾಪ್ರಭುತ್ವನ್ನು ಒಪ್ಪದೆ, ದೇಶವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂದು ಪ್ರತಿಪಾದಿಸುವ ಸಂಘಟನೆಯಾಗಿದೆ.

ಒಟ್ಟಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳುವಂತೆ, ಸಾವರ್ಕರ್‌ ಅವರು ಭಾರತ ಮಾತೆಯ ಹೆಮ್ಮೆಯ ಪುತ್ರ ಅಲ್ಲ. ಅವರು ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ ಕೂಡಾ ಅಲ್ಲ. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಭಾರತಕ್ಕೆ ಹಿಂದೆಯೂ, ಇಂದಿಗೂ, ಮುಂದೆಯೂ ಸ್ಪೂರ್ತಿದಾಯಕ ಅಲ್ಲ. 

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...