Homeಕರ್ನಾಟಕಫ್ಯಾಕ್ಟ್‌ಚೆಕ್‌: ಸಿಎಂ ಬೊಮ್ಮಾಯಿ ಹೇಳಿದಂತೆ ವಿ. ಡಿ. ಸಾವರ್ಕರ್‌ ದೇಶಕ್ಕೆ ಸ್ಪೂರ್ತಿದಾಯಕ ವ್ಯಕ್ತಿಯೆ?

ಫ್ಯಾಕ್ಟ್‌ಚೆಕ್‌: ಸಿಎಂ ಬೊಮ್ಮಾಯಿ ಹೇಳಿದಂತೆ ವಿ. ಡಿ. ಸಾವರ್ಕರ್‌ ದೇಶಕ್ಕೆ ಸ್ಪೂರ್ತಿದಾಯಕ ವ್ಯಕ್ತಿಯೆ?

- Advertisement -
- Advertisement -

ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ‘ಮುಖ್ಯಮಂತ್ರಿಯ ಅಧಿಕೃತ ಸರ್ಕಾರಿ ಜಾಲತಾಣಗಳ ಖಾತೆ’ಯಿಂದ, ರಾಷ್ಟ್ರಪಿತ ಮಹಾತ್ಮ ಗಾಂಧಿಯ ಹತ್ಯೆಯಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿರುವ, ಬಲಪಂಥಿಯ ನಾಯಕ ವಿನಾಯಕ ದಾಮೋದರ ಸಾವರ್ಕರ್‌ ಅವರಿಗೆ ಶನಿವಾರ ನಮನಗಳನ್ನು ಸಲ್ಲಿಸಿದ್ದಾರೆ. ಇದಕ್ಕೆ ಹಲವಾರು ಜನರು ಆಕ್ಷೇಪ ವ್ಯಕ್ತಪಡಿಸಿ ಮುಖ್ಯಮಂತ್ರಿಗೆ ಇತಿಹಾಸದ ಪಾಠವನ್ನೂ ಮಾಡಿದ್ದಾರೆ.

ಫೆಬ್ರವರಿ 26 ವಿ.ಡಿ. ಸಾವರ್ಕರ್‌ ಅವರು ನಿಧನವಾದ ದಿನವಾಗಿರುವುದರಿಂದ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕ ಮುಖ್ಯಮಂತ್ರಿಯ ಅಧಿಕೃತ ಟ್ವಿಟರ್‌ ಮತ್ತು ಫೇಸ್‌ಬುಕ್ ಖಾತೆಯಿಂದ, “ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಪೂರ್ತಿದಾಯಕವಾಗಿವೆ” ಎಂದು ಬರೆದುಕೊಂಡಿದ್ದಾರೆ. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಫ್ಯಾಕ್ಟ್‌ಚೆಕ್‌

ಮುಖ್ಯಮಂತ್ರಿ ಮಾಡಿರುವ ಪೋಸ್ಟ್‌ನಲ್ಲಿ ಉಲ್ಲೇಖಿಸಿರುವಂತೆ ವಿ.ಡಿ. ಸಾವರ್ಕರ್‌ ನಿಧನ ಹೊಂದಿರುವ ದಿನಾಂಕ ಸರಿಯೇ ಆಗಿದೆ. ಉಳಿದಂತೆ ಪೋಸ್ಟ್‌ನಲ್ಲಿ ಹಲವಾರು ಅರ್ಧ ಸತ್ಯವಿದ್ದು, ಇದು ಜನರನ್ನು ತಪ್ಪು ದಾರಿಗೆ ಎಳೆಯುತ್ತದೆ. ನಾನುಗೌರಿ.ಕಾಂ ಇವುಗಳನ್ನು ಸಂಕ್ಷಿಪ್ತವಾಗಿ ಪಟ್ಟಿ ಮಾಡಿದೆ.

ಮುಖ್ಯಮಂತ್ರಿ ಮಾಡಿರುವ ಪೋಸ್ಟ್‌‌ ಮತ್ತು ಅದರಲ್ಲಿ ಇರುವ ಚಿತ್ರದಲ್ಲಿ ಮುಖ್ಯವಾಗಿ ಎರಡೇ ವಾಕ್ಯಗಳಿಗೆ. ಇದರಲ್ಲಿ ಮೊದಲ ವಾಕ್ಯ ಕೆಳಗಿನಂತಿವೆ.

  • ಭಾರತ ಮಾತೆಯ ಹೆಮ್ಮೆಯ ಪುತ್ರ, ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ, ಶ್ರೀ ವಿನಾಯಕ ದಾಮೋದರ್ ಸಾವರ್ಕರ್ ಪುಣ್ಯಸ್ಮರಣೆಯ ದಿನದಂದು ಅವರಿಗೆ ಶತಶತ ನಮನಗಳು.

ಮೊದಲ ವಾಕ್ಯವನ್ನು ನಾವು ಪರಿಶೀಲಿಸಿದರೆ, ‘ಭಾರತ ಮಾತೆಯ ಹೆಮ್ಮೆಯ ಪುತ್ರ’ ಮತ್ತು ‘ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ’ ಎಂಬ ವಾಕ್ಯಗಳು ಪೂರ್ತಿ ಸತ್ಯವಲ್ಲ. 82 ವರ್ಷ ಜೀವಿಸಿ 1966 ರಲ್ಲಿ ನಿಧನ ಹೊಂದಿದ ಸಾವರ್ಕರ್‌, 1924ರಲ್ಲಿಯೇ ಅಂಡಮಾನ್ ಜೈಲಿನಿಂದ ಬಿಡುಗಡೆಯಾದ ನಂತರ ಸ್ವಾತಂತ್ಯ್ರ ಹೋರಾಟದ ಯಾವ ಆಂದೋಲನಗಳಲ್ಲೂ ಪಾಲ್ಗೊಂಡಿರುವ ಯಾವುದೆ ದಾಖಲೆ ಇಲ್ಲ.

ವಾಸ್ತವದಲ್ಲಿ ವಿ.ಡಿ. ಸಾವರ್ಕರ್‌ ಅಂಡಮಾನಿನ ಸೆಲ್ಯುಲಾರ್‌ ಜೈಲಿನಿಂದ ಹೊರಬಂದಿದ್ದು ಬ್ರಿಟೀಷರಿಗೆ ಹಲವು ಬಾರಿ ಕ್ಷಮಾಪಣೆ ಪತ್ರ ಬರೆದು, ತಾನು ಮುಂದಕ್ಕೆ ಯಾವುದೇ ಸ್ವಾತಂತ್ಯ್ರ ಹೋರಾಟದಲ್ಲಿ ಭಾಗವಹಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟ ನಂತರವಾಗಿದೆ.

ಹಿರಿಯ ಸ್ವಾತಂತ್ಯ್ರ ಹೊರಾಟಗಾರ, ಪತ್ರಕರ್ತ ಎಚ್‌.ಎಸ್‌. ದೊರೆಸ್ವಾಮಿ ಅವರು, “ಸ್ವಾತಂತ್ರ್ಯ ಸಂಗ್ರಾಮಕ್ಕೆ ಇಳಿದಿದ್ದೇ ತಪ್ಪಾಯಿತು. ನನ್ನನ್ನು ಬಿಡುಗಡೆ ಮಾಡಿ ಎಂದು ಸಾವರ್ಕರ್‌ ಬ್ರಿಟಿಷ್ ಸರ್ಕಾರವನ್ನು ಪ್ರಾರ್ಥಿಸಿದರು. ಸಾವರ್ಕರ್ ತಮ್ಮ ಜಿಲ್ಲೆ ಬಿಟ್ಟು ಬೇರೆಲ್ಲೂ ಹೋಗಕೂಡದು, ಪತ್ರಿಕೆಗೆ ಲೇಖನ ಬರೆಯಬಾರದು ಮುಂತಾದ ಷರತ್ತುಗಳನ್ನು ಹಾಕಿ ಬ್ರಿಟಿಷರು ಬಿಡುಗಡೆ ಮಾಡಿದರು” ಎಂದು ಲೇಖನವೊಂದಲ್ಲಿ ಬರೆದ್ದಾರೆ.

ಉಳಿದಂತೆ ‘ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ’ ಎಂಬ ವಾಕ್ಯವು ಕೂಡಾ ಅರ್ಧ ಸತ್ಯವಾಗಿದೆ. ವಿ.ಡಿ. ಸಾವರ್ಕರ್‌ ಸೆಲ್ಯುಲಾರ್‌ ಜೈಲಿಗೆ ಹೋಗುವುದಕ್ಕಿಂತ ಮುಂಚೆ ಸ್ವಾತಂತ್ಯ್ರ ಹೋರಾಟಗಳಲ್ಲಿ ಭಾಗವಹಿಸಿದ್ದು ನಿಜವೇ ಆಗಿದೆ ಮತ್ತು ಬರಹಗಳನ್ನು ಬರೆದಿದ್ದು ನಿಜವೇ ಆಗಿದೆ. ಆದರೆ ಸೆಲ್ಯುಲಾರ್ ಜೈಲಿನಿಂದ ಹೊರಬಂದ ನಂತರ ಅವರು ಎಲ್ಲದಕ್ಕೂ ತಿಲಾಂಜಲಿಯಿಟ್ಟರು. ಹಾಗೆ ನೋಡಿದರೆ, ಸ್ವಾತಂತ್ಯ್ರದ ಆಂದೋಲನದ ಇಡೀ ದೇಶವೇ ಭಾಗವಹಿಸಿದ ಕ್ವಿಟ್ ಇಂಡಿಯಾ ಚಳವಳಿಗೆ ಇಳಿಯಬೇಡಿ ಎಂದು ಕೂಡಾ ಸಾವರ್ಕರ್‌‌ ಯುವಕರಿಗೆ ಕರೆ ನೀಡಿದ್ದರು ಎಂದು ಇತಿಹಾಸ ತಜ್ಞರು ಉಲ್ಲೇಖಿಸುತ್ತಾರೆ.

ಈ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟು ದೊರೆಸ್ವಾಮಿ ಅವರು, ‘ಸಾವರ್ಕರ್‌ ಅವರನ್ನು ಮಾಜಿ ವೀರ’ ಎಂದು ಉಲ್ಲೇಖಿಸುತ್ತಾರೆ. ಅಲ್ಲದೆ ಮಹಾತ್ಮ ಗಾಂಧಿ ಅವರ ಕೊಲೆಯಲ್ಲೂ ವಿ.ಡಿ. ಸಾವರ್ಕರ್‌ ಅವರ ಕೈವಾಡ ಇದೆ ಎಂದು ಸಂಶೋಧನೆಗಳು ಬಹಿರಂಗಪಡಿಸಿದೆ. ದೊರೆಸ್ವಾಮಿ ಅವರು ಬರೆದಿರುವ, “ಹೇಡಿಯಾಗಿ ಬದಲಾದ ವಿ.ಡಿ ಸಾವರ್ಕರ್ ಗಾಂಧಿ ಕೊಲೆಗೆ ಪ್ರೇರಕರಾಗಿದ್ದರು’’ ಎಂಬ ಲೇಖನದಲ್ಲಿ ಗಾಂಧಿ ಕೊಲೆಯಲ್ಲಿ ಸಾವರ್ಕರ್‌ ಕೈವಾಡ ಹೇಗಿತ್ತು ಎಂದು ನಿರೂಪಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ಈ ಎಲ್ಲಾ ಅಂಶಗಳನ್ನು ಗಮಸಿದರೆ, ಮುಖ್ಯಮಂತ್ರಿ ಹೇಳಿದಂತೆ ವಿ.ಡಿ. ಸಾವರ್ಕರ್‌  ಭಾರತ ಮಾತೆಯ ಹೆಮ್ಮೆಯ ಪುತ್ರ ಅಲ್ಲ. ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧನೂ ಅಲ್ಲ. ಲೇಖಕ ಮತ್ತು ಹೋರಾಟಗಾರ ಆಗಿದ್ದ ಸಾವರ್ಕರ್‌ ಆಗಿದ್ದ ಅಂಡಮಾನ್‌ನಿಂದ ಹೊರ ಬಂದ ನಂತರ ಹೋರಾಟದಿಂದ ದೂರ ಉಳಿದರು. ಕೊನೆಗೆ ವಿಶ್ವವೇ ಗೌರವ ಭಾವನೆಯಿಂದ ನೋಡುವ, ದೇಶದ ಹೆಮ್ಮ ಮಹಾತ್ಮ ಗಾಂಧಿಯ ಕೊಲೆಗೂ ಪ್ರೇರಣೆಯಾದರು ಎಂಬ ಆರೋಪ ಎದುರಿಸಿದರು.

ವಾಕ್ಯದ ಕೊನೆಯ ಪದವಾದ ‘ಪುಣ್ಯಸ್ಮರಣೆ ದಿನ’ ಎಂದರೆ, ನಿಧನ ಹೊಂದಿದ ದಿನವನ್ನು ಸೂಚಿಸುವ ಪದವಾಗಿದೆ. ಈ ಪದವು ನಿಜವಾಗಿದ್ದು, ವಿ.ಡಿ. ಸಾವರ್ಕರ್‌ ಫೆಬ್ರವರಿ 26ರಂದು ನಿಧನ ಹೊಂದಿದ್ದರು.

ಮುಖ್ಯಮಂತ್ರಿ ಬರೆದಿರುವ ಪೊಸ್ಟ್‌ನಲ್ಲಿರುವ ಎರಡನೆ ವಾಕ್ಯ, ‘ಸಾವರ್ಕರ್‌ ದೇಶಪ್ರೇಮ, ತ್ಯಾಗ, ಹೋರಾಟಗಳು ಇಂದಿಗೂ ಸ್ಪೂರ್ತಿದಾಯಕವಾಗಿವೆ’ ಎಂದು ಬರೆಯುತ್ತಾರೆ. ಅವುಗಳನ್ನು ಒಂದೊಂದಾಗಿ ನೋಡೋಣ.

  • ದೇಶಪ್ರೇಮ – ದೇಶದ ಯುವಕರಿಗೆ ಸ್ವಾತಂತ್ಯ್ರ ಹೋರಾಟಕ್ಕೆ ಇಳಿಯಬೇಡಿ ಎಂದು ಕರೆಕೊಡುವುದು ದೇಶಪ್ರೇಮ ಆಗುವುದಿಲ್ಲ.
  • ತ್ಯಾಗ, ಹೋರಾಟಗಳು – ಸ್ವಾತಂತ್ಯ್ರ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ, ಬ್ರಿಟೀಷರು ಅವರಿಗೆ ಅಂಡಮಾನಿಯಲ್ಲಿ ಆರುವರ್ಷಗಳ ಕರಿನೀರಿನ ಶಿಕ್ಷೆ ನೀಡುತ್ತಾರೆ. ಆದರೆ ಸಾವರ್ಕರ್‌ ಮೂರು ವರ್ಷಗಳಲ್ಲೇ ಹಲವಾರು ಕ್ಷಮಾಪಣೆ ಪತ್ರ ಬರೆದು ಅಲ್ಲಿಂದ ಹೊರಬರುತ್ತಾರೆ. ಆದರೆ ಬ್ರಿಟೀಷರ ಕರಿನೀರಿನ ಶಿಕ್ಷೆಗೆ ಒಳಗಾಗಿ, ಅದೇ ಜೈಲಿನಲ್ಲಿ ಸಾವಿರಾರು ಭಾರತೀಯರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಆದರೆ ಸಾವರ್ಕರ್‌ ತಮ್ಮ ತುಂಬು ಜೀವನವನ್ನು ಬದುಕಿ 1966ರಲ್ಲಿ ತಮ್ಮ 82 ನೇ ವಯಸ್ಸಿನಲ್ಲಿ ಮರಣ ಹೊಂದುತ್ತಾರೆ.
  • ಇಂದಿಗೂ ಸ್ಪೂರ್ತಿದಾಯಕ – ಸಾವರ್ಕರ್‌ ಅವರು ದೇಶವನ್ನು ವಿಭಜನೆ ಮಾಡಬೇಕು ಎಂದು ಪ್ರತಿಪಾದಿಸಿರುವ ಮೊದಲಿಗರಲ್ಲಿ ಒಬ್ಬರು ಎಂದು ಹಲವಾರು ಸಂಶೋಧಕರು ಗುರುತಿಸುತ್ತಾರೆ. ಸಾವರ್ಕರ್‌ ಅವರು ಪ್ರತಿಗಾಮಿ ಸಂಘಟನೆಯಾದ ಹಿಂದೂ ಮಹಾಸಭಾದ ಸ್ಥಾಪಕರಾಗಿದ್ದಾರೆ. ಈ ಸಂಘಟನೆ ಪ್ರಜಾಪ್ರಭುತ್ವನ್ನು ಒಪ್ಪದೆ, ದೇಶವನ್ನು ಹಿಂದೂ ರಾಷ್ಟ್ರ ಮಾಡಬೇಕು ಎಂದು ಪ್ರತಿಪಾದಿಸುವ ಸಂಘಟನೆಯಾಗಿದೆ.

ಒಟ್ಟಿನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹೇಳುವಂತೆ, ಸಾವರ್ಕರ್‌ ಅವರು ಭಾರತ ಮಾತೆಯ ಹೆಮ್ಮೆಯ ಪುತ್ರ ಅಲ್ಲ. ಅವರು ಭಾರತದ ಸ್ವಾತಂತ್ರಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವೀರ ಯೋಧ, ಕ್ರಾಂತಿಕಾರಿ ಲೇಖಕ, ಪ್ರಖರ ರಾಷ್ಟ್ರವಾದಿ ಕೂಡಾ ಅಲ್ಲ. ಅವರ ದೇಶಪ್ರೇಮ, ತ್ಯಾಗ, ಹೋರಾಟಗಳು ಭಾರತಕ್ಕೆ ಹಿಂದೆಯೂ, ಇಂದಿಗೂ, ಮುಂದೆಯೂ ಸ್ಪೂರ್ತಿದಾಯಕ ಅಲ್ಲ. 

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ವಿದ್ಯಾರ್ಥಿನಿ ಸಾವಿನ ಬಗ್ಗೆ ಸುಳ್ಳು ಬರೆದು ಕೋಮುದ್ವೇಷ ಹರಡುತ್ತಿರುವ ‘ಪೋಸ್ಟ್‌ ಕಾರ್ಡ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...