Homeಸಿನಿಮಾಕ್ರೀಡೆಮತ್ತೆ ಬರಲಿದೆ ಮೈ ನವಿರೇಳಿಸುವ ಪ್ರೊ ಕಬ್ಬಡ್ಡಿ ಸೀಸನ್ 7

ಮತ್ತೆ ಬರಲಿದೆ ಮೈ ನವಿರೇಳಿಸುವ ಪ್ರೊ ಕಬ್ಬಡ್ಡಿ ಸೀಸನ್ 7

- Advertisement -
- Advertisement -

| ಮುತ್ತುರಾಜು |

ಭಾರತದಲ್ಲಿ ಅತಿ ಹೆಚ್ಚು ಕ್ರಿಕೆಟ್ ಪ್ರೇಮಿಗಳಿದ್ದರೂ ಸಹ ಕಬ್ಬಡ್ಡಿ ನೋಡುವವರ ಸಂಖ್ಯೆಯೇನು ಕಡಿಮೆಇಲ್ಲ. ಅದರಲ್ಲೂ 2014ರಿಂದ ಪ್ರೊ ಕಬ್ಬಡ್ಡಿ ಆವೃತ್ತಿ ಆರಂಭವಾದಾಗಿನಿಂದ ಕಬ್ಬಡ್ಡಿ ನೋಡಿ ಆನಂದಿಸುವವರ ಸಂಖ್ಯೇ ಏರುತ್ತಲೇ ಇದೆ. ಕಳದ ವರ್ಷಾಂತ್ಯದಲ್ಲಿ ಜರುಗಿದ 6ನೇ ಆವೃತ್ತಿಯಲ್ಲಂತೂ ಮನೆಮಂದಿಯೆಲ್ಲ ಕಬ್ಬಡ್ಡಿ ನೋಡುವ ಮೂಲಕ ಸಂಭ್ರಮಿಸಿದರು. ಆ ಸಂಭ್ರಮ ಈಗ ಮತ್ತೆ ಬರಲಿದೆ. ಮಶಾಲ್ ಸ್ಪೋಟ್ರ್ಸ್ ಪ್ರೈವೈಟ್ ಲಿಮಿಡೆಟ್ ವತಿಯಿಂದ ನಡೆಯುವ ಪ್ರೊ ಕಬ್ಬಡ್ಡಿ ಸೀಸನ್ 7, ಜುಲೈ 20 ರಿಂದ ಆರಂಭವಾಗಲಿದ್ದು ಕಬ್ಬಡ್ಡಿ ಪ್ರೇಮಿಗಳ ಮನದಲ್ಲಿ ಉತ್ಸಾಹ ಪುಟಿದೆದ್ದಿದೆ.

ಈ ಸಲ ಕಪ್ ನಮ್ಮದೆ ಎಂದು ಬೆಂಗಳೂರಿನ ಆರ್‍ಸಿಬಿ ತಂಡದ ಪರವಾಗಿ ಅಭಿಮಾನಿಗಳು ಮೂರು ವರ್ಷದಿಂದ ಹಂಬಲಿಸಿ ಸೋತು ಕಂಗಾಲಾದಾಗ ಕಪ್ ತಂದುಕೊಟ್ಟವರು ಬೆಂಗಳೂರು ಬುಲ್ಸ್. ಹೌದು ಕ್ರಿಕೆಟ್‍ನಲ್ಲಿ ಬೆಂಗಳೂರಿಗೆ ಕಪ್ ಸಿಗದ ನೋವನ್ನು ಮರೆಸಿದ್ದು ಕಬ್ಬಡ್ಡಿಯಲ್ಲಿ ಬೆಂಗಳೂರು ಕಪ್ ಗೆದ್ದುದ್ದು. ಇದೇ ವರ್ಷ ಜನವರಿ 5ರಂದು ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಫಾರ್ಚೂನ್ ಜೈಂಟ್ಸ್ ತಂಡವನ್ನು ಮಣಿಸಿ ಬೆಂಗಳೂರು ತಂಡ ಪ್ರಶಸ್ತಿ ಜಯಿಸಿ ಸಂಭ್ರಮಿಸಿತು. ಆ ಪಂದ್ಯದ ಹೀರೋ ಪವನ್ ಕುಮಾರ್ ಶೆಹ್ರಾವತ್ ಕರ್ನಾಟಕ ಮನೆ ಮಾತಾದರು.

ಇದುವರೆಗೂ ನಡೆದ ಆರು ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಮೂರು ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೊದಲ ಬಾರಿಗೆ ಜೈಪುರ್ ಪಿಂಕ್ ಪ್ಯಾಂಥರ್ಸ್, ಎರಡನೇ ಬಾರಿಗೆ ಯು ಮುಂಬಾ ಚಾಂಪಿಯನ್ ಆದರೆ 3,4,5 ನೇ ಆವೃತ್ತಿಗಳಲ್ಲಿ ಪಟ್ನಾ ಪೈರೇಟ್ಸ್ ಸತತವಾಗಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 2018ರಲ್ಲಿ ಬೆಂಗಳೂರು ಬುಲ್ಸ್ ಅಮೋಘ ಪ್ರದರ್ಶನ ಮೂಲಕ ಚಾಂಪಿಯನ್ ಆಗಿ ಸಂಭ್ರಮಿಸಿದೆ.

12 ಐಪಿಎಲ್ ಸೀಸನ್‍ಗಳಲ್ಲಿ ಪ್ರಶಸ್ತಿ ಜಯಿಸಲಾಗದ ಬೆಂಗಳೂರು, 6 ಸೀಸನ್‍ಗಳ ಕಬ್ಬಡ್ಡಿಯಲ್ಲಿ ಪ್ರಸಸ್ತಿ ಜಯಿಸಿದೆ ಎಂಬುದು ಮೇಲ್ನೋಟಕ್ಕೆ ಕಬ್ಬಡ್ಡಿಯಲ್ಲಿ ಮುಂದಿದೆ ಎನ್ನಬಹುದು. ಇಂತಹ ಕಬ್ಬಡ್ಡಿ ಪಂದ್ಯಗಳು ಆರಂಭವಾಗಲು ಇನ್ನು ಕೇವಲ ಒಂದು ತಿಂಗಳು ಮಾತ್ರ ಬಾಕಿ ಇದೆ. ಜುಲೈನಿಂದ ಆರಂಭವಾಗಿ ಅಕ್ಟೊಬರ್‍ವರೆಗೂ ತನ್ನ ಪ್ರಭುತ್ವ ಸಾಧಿಸಲಿದೆ. ಸದ್ಯಕ್ಕೆ ವಿಶ್ವಕಪ್ ಗುಂಗಿನಲ್ಲಿ ಮುಳುಗಿರುವ ಕ್ರೀಡಾ ಪ್ರೇಮಿಗಳಿಗೆ ವಿಶ್ವಕಪ್ ಮುಗಿದ ಕೂಡಲೇ ಕಬ್ಬಡ್ಡಿಯ ರಸದೌತಣ ಸಿಗುವುದಂತೂ ಖಚಿತ. ಬೆಂಗಳೂರು ಪರವಾಗಿ ಪವನ್ ಕುಮಾರ್ ಶೆಹ್ರಾವತ್ ಮತ್ತು ನಾಯಕ ರೋಹಿತ್ ಕುಮಾರ್ ಪ್ರಮುಖ ಆಕರ್ಷಣೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...