Homeಕರ್ನಾಟಕರಾಜ್ಯ ಸರ್ಕಾರಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಕರೆ: ಲಿಂಗತ್ವ ಅಲ್ಪಸಂಖ್ಯಾತರಿಗೆ 1% ಮೀಸಲು

ರಾಜ್ಯ ಸರ್ಕಾರಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಕರೆ: ಲಿಂಗತ್ವ ಅಲ್ಪಸಂಖ್ಯಾತರಿಗೆ 1% ಮೀಸಲು

- Advertisement -
- Advertisement -

ಕರ್ನಾಟಕದ ಕೆಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಇದರ ಭಾಗವಾಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಜಿಗಳನ್ನು ಆಹ್ವಾನಿಸಿದ್ದು, ಇದರಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ (ಟ್ರಾನ್ಸ್‌ಜೆಂಡರ್‌‌) 1% ಮೀಸಲಾತಿಯನ್ನು ನೀಡಿದೆ. ಈ ಮೂಲಕ, ಆ ಸಮುದಾಯದ ಶಿಕ್ಷಕರನ್ನು ನೇಮಿಸಿಕೊಳ್ಳುತ್ತಿರುವ ದೇಶದ ಮೊದಲ ರಾಜ್ಯವಾಗಿ ಕರ್ನಾಟಕ ಗುರುತಿಸಿಕೊಳ್ಳುತ್ತಿದೆ.

ಹಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದುರಾಗಿದ್ದು, ಕೆಲವೆಡೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಡಿಸೆಂಬರ್ 2021ರಲ್ಲಿ, ಹಣಕಾಸು ಇಲಾಖೆಯು ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಿದ ನಂತರ, ಸಾರ್ವಜನಿಕ ಶಿಕ್ಷಣ ಇಲಾಖೆಯು 6 ರಿಂದ 8ನೇ ತರಗತಿಗಳಿಗೆ 15,000 ಶಿಕ್ಷಕರನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭಿಸಲು ಮುಂದಾಗಿದೆ. 15,000 ಹುದ್ದಗಳ ಪೈಕಿ 5,000 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಮೀಸಲಿಡಲಾಗಿದೆ.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಗ್ರಾಮೀಣ ಕೋಟಾ, ದೈಹಿಕವಾಗಿ ಅಶಕ್ತರು, ಮಹಿಳಾ ಮೀಸಲಾತಿಗಳ ಜೊತೆಗೆ, ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್ಜೆಂಡರ್ ಕೋಟಾವನ್ನು ಪಡೆಯಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 50% ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಎರಡು ವರ್ಷಗಳ ಕಾಲ ಬೋಧನೆಯಲ್ಲಿ ಡಿಪ್ಲೊಮಾ (ಬಿಎಡ್) ಪಡೆದಿರಬೇಕು ಎಂದು ಶಿಕ್ಷಣ ಇಲಾಖೆ ಹೇಳಿದೆ.

“ಎಲ್ಲಾ ಇಲಾಖೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಅವಕಾಶ ನೀಡಲು ಸರ್ಕಾರವು 1% ಕೋಟಾವನ್ನು ಜಾರಿಗೊಳಿಸಿದೆ. ನಾವು ಶಿಕ್ಷಕರ ನೇಮಕಾತಿಗೆ ಕರೆ ನೀಡಿದ್ದೇವೆ, ಟಾನ್ಸ್‌ಜೆಂಡರ್‌ಗಳಿಗೆ ಮೀಸಲಾತಿ ನೀಡಲಾಗಿದೆ. ಇದು ಮಹತ್ವದ ಹೆಜ್ಜೆಯಾಗಿದ್ದು, ಈ ಸಮುದಾಯವು ಮುಖ್ಯವಾಹಿನಿಗೆ ಸೇರಲು ಸಹಾಯ ಮಾಡುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಡಿಸೆಂಬರ್ 2021ರಲ್ಲಿ, ಕರ್ನಾಟಕ ಪೊಲೀಸ್ ಇಲಾಖೆಯು ಟ್ರಾನ್ಸ್‌ಜೆಂಡರ್‌ಗಳನ್ನು ಸೇವೆಗೆ ಸೇರಿಸಲು ನಿರ್ಧರಿಸಿತ್ತು. ಅದರಂತೆ, ಮೀಸಲು ಸಬ್-ಇನ್ಸ್ಪೆಕ್ಟರ್ (ಆರ್ಎಸ್ಐ) ಶ್ರೇಣಿಯ 70 ಹುದ್ದೆಗಳಿಗೆ ಅರ್ಹ ಪುರುಷರು, ಮಹಿಳೆಯರು ಮತ್ತು ಟ್ರಾನ್ಸ್‌ಜೆಂಡರ್‌ಗಳು ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ.

“ಕರ್ನಾಟಕದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಬಗ್ಗೆ ರಾಜ್ಯ ಸರ್ಕಾರ ಸಮೀಕ್ಷೆ ನಡೆಸಿಲ್ಲ. ಆ ಸಮುದಾಯದ ಬಗ್ಗೆ ಸರ್ಕಾರದ ಬಳಿ ಸರಿಯಾದ ಮಾಹಿತಿ ಇಲ್ಲ. ಆ ಸಮುದಾಯದ ಜನರ ಶಿಕ್ಷಣ ಅಥವಾ ಸಾಮಾಜಿಕ-ಆರ್ಥಿಕ ಸ್ಥಿತಿಯ ಬಗ್ಗೆ ಯಾವುದೇ ಡೇಟಾ ಇಲ್ಲದಿರುವಾಗ, ಅಂತಹ ಅಧಿಸೂಚನೆಯು ಅವರಿಗೆ ಹೇಗೆ ಸಹಾಯ ಮಾಡುತ್ತದೆ? ಅಧಿಸೂಚನೆಯ ಪ್ರಕಾರ, ಟ್ರಾನ್ಸ್‌ಜೆಂಡರ್‌ಗಳಿಗಾಗಿ 150 ಪೋಸ್ಟ್‌ಗಳಿವೆ. ಶಿಕ್ಷಣಕ್ಕೆ ಬಂದಾಗ ಎಷ್ಟು ಅರ್ಹರು ಇದ್ದಾರೆ ಎಂಬುದು ನಮಗೆ ತಿಳಿದಿಲ್ಲ. ಅವರ ಶಿಕ್ಷಣಕ್ಕೆ ಸರ್ಕಾರ ಮೊದಲು ಒತ್ತು ನೀಡಬೇಕು’’ ಎಂದು ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿರಿ: ಅಂಬೇಡ್ಕರ್‌‌ ವಿಚಾರಧಾರೆಯೇ ಪ್ರೇರಣೆ: ಮೈಸೂರು ವಿವಿಯಲ್ಲಿ ಪಿಎಚ್‌.ಡಿ ಮಾಡುತ್ತಿರುವ ಟ್ರಾನ್ಸ್‌ಜೆಂಡರ್‌ ಮಹಿಳೆಯ ಮನದಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...