Homeಕರ್ನಾಟಕವೈದ್ಯಕೀಯ ‘ಭಾರ‘ತ: ಉಕ್ರೇನ್‌ನಲ್ಲಿ ಸಿಲುಕಿದ ಇಂಡಿಯಾ ವಿದ್ಯಾರ್ಥಿಗಳ ನೋವಿನ ಮೂಲ!

ವೈದ್ಯಕೀಯ ‘ಭಾರ‘ತ: ಉಕ್ರೇನ್‌ನಲ್ಲಿ ಸಿಲುಕಿದ ಇಂಡಿಯಾ ವಿದ್ಯಾರ್ಥಿಗಳ ನೋವಿನ ಮೂಲ!

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸುತ್ತಿರುವ ಈ ಸಂಘರ್ಷದ ಸಮಯದಲ್ಲಿ ಪೂರ್ವ ಉಕ್ರೇನ್‌ನಲ್ಲಿ ಹಲವಾರು ಭಾರತೀಯರು ಸಿಲುಕಿಕೊಂಡಿದ್ದಾರೆ. ಅವರೆಲ್ಲರೂ, ತಮ್ಮನ್ನು ಸುರಕ್ಷಿತ ನೆರೆಯ ದೇಶಗಳಾದ ರೊಮೇನಿಯಾ ಮತ್ತು ಹಂಗೇರಿಯಂತಹ ಇತರ ದೇಶಗಳಿಗೆ ಸ್ಥಳಾಂತರಿಸುವಂತೆ ಕೇಳಿಕೊಳ್ಳುತ್ತಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವ ಭಾರತೀಯರಲ್ಲಿ ಹೆಚ್ಚಿನವರು ಟೌನ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ, ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ, ಇವಾನೊ-ಫ್ರಾನ್ ಕಿವ್ಸ್ಕ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ ಮುಂತಾದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ವೈದ್ಯಕೀಯ ತರಬೇತಿ ಪಡೆಯುತ್ತಿದ್ದಾರೆ.

ಉಕ್ರೇನ್ ದೇಶವು ಗುಣಮಟ್ಟದ ಶಿಕ್ಷಣವನ್ನು ನೀಡುವ ಅನೇಕ ಜಾಗತಿಕ ಮಟ್ಟದ ವಿಶ್ವವಿದ್ಯಾನಿಲಯಗಳನ್ನು ಹೊಂದಿದೆ. ಅಲ್ಲಿನ ಆರು ವರ್ಷಗಳ ವೈದ್ಯಕೀಯ ಕೋರ್ಸ್‌‌ಗಳು ಪಾಕೆಟ್ (ಶಿಕ್ಷಣ ವೆಚ್ಚ) ಸ್ನೇಹಿಯಾಗಿರುವುದರಿಂದ ಭಾರತದ ವಿದ್ಯಾರ್ಥಿಗಳು ವಿಶೇಷವಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್‌ಗೆ ತೆರಳುತ್ತಾರೆ.

ಕರ್ನಾಟಕ ಮೂಲದ ಹಲವಾರು ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿದ್ದಾರೆ. ಅವರಲ್ಲಿ ಉಡುಪಿ ಮೂಲದ ಗ್ಲೆನ್ವಿಲ್ ಫೆರ್ನಾಂಡಿಸ್ ಕೂಡ ಒಬ್ಬರು. ಅವರು ಉಕ್ರೇನ್‌ನ ಟೌನ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ. ಇದೀಗ, ಉಕ್ರೇನ್‌ನಲ್ಲಿ ಸಂಘರ್ಷ ಏರ್ಪಟ್ಟಿರುವುದರಿಂದ ಉಡುಪಿಯಲ್ಲಿರುವ ಅವರ ತಂದೆ ಮೆಲ್ವಿನ್ ಫೆರ್ನಾಂಡಿಸ್ ಅವರು ಭಯಭೀತರಾಗಿದ್ದಾರೆ.

“ಕರ್ನಾಟಕ ಸರ್ಕಾರವು ದೀರ್ಘಾವಧಿಯಲ್ಲಿ ವೈದ್ಯಕೀಯ ಶಿಕ್ಷಣದ ವೆಚ್ಚವನ್ನು ಸುಧಾರಿಸಬೇಕು. ಕರ್ನಾಟಕದಲ್ಲಿ ಶ್ರೀಮಂತರು ವೈದ್ಯಕೀಯ ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತಿದೆ. ಆದರೆ, ಮಧ್ಯಮ ವರ್ಗದ ಕುಟುಂಬಗಳು ಇಲ್ಲಿನ ಭಾರೀ ವೆಚ್ಚವನ್ನು ಭರಿಸಲಾಗದೇ, ತಮ್ಮ ಮಕ್ಕಳನ್ನು ಕಡಿಮೆ ವೆಚ್ಚವಿರುವ ವಿದೇಶಿ ವಿವಿಗಳಿಗೆ ಕಳುಹಿಸಿ ಶಿಕ್ಷಣ ಕೊಡಿಸುವಂತಾಗಿದೆ. ಇದೇ ಕಾರಣದಿಂದಾಗಿ, ನಾವು ನಮ್ಮ ಮಗನನ್ನು ಉಕ್ರೇನ್‌ಗೆ ಕಳಿಸಬೇಕಾಯಿತು” ಎಂದು ಮೆಲ್ಟಿನ್ ಫೆರ್ನಾಂಡಿಸ್ ಹೇಳಿದ್ದಾರೆ.

“ಕರ್ನಾಟಕದಲ್ಲಿ ನೀಟ್ ಮೂಲಕ ಸೀಟು ಸಿಗದಿದ್ದರೆ ವೈದ್ಯಕೀಯ ಶಿಕ್ಷಣದ ವೆಚ್ಚ ಐದೂವರೆ ವರ್ಷಗಳ ಕೋರ್ಸ್‌ಗೆ 60 ಲಕ್ಷ ರೂ. ಆಗುತ್ತದೆ. ಆದರೆ ಉಕ್ರೇನ್‌ನಲ್ಲಿರುವ ವಿಶ್ವವಿದ್ಯಾಲಯದಲ್ಲಿ ಆರು ವರ್ಷಗಳ ವೈದ್ಯಕೀಯ ಕೋರ್ಸ್‌‌ಗೆ 35 ಲಕ್ಷದಿಂದ 40 ಲಕ್ಷ ರೂ. ಖರ್ಚಾಗುತ್ತದೆ. ನಾನು ದುಬೈನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾಗ, ನನ್ನ ಮಗನಿಗೆ ಉಕ್ರೇನ್ ಉತ್ತಮ ಆಯ್ಕೆಯಾಗುತ್ತದೆ ಎಂದು ನಾನು ನಿರ್ಧರಿಸಿ, ಅಲ್ಲಿಗೆ ಕಳುಹಿಸಿದೆ” ಎಂದು ಅವರು ಹೇಳುತ್ತಾರೆ.

ವಿದೇಶಗಳಲ್ಲಿ ಸಾಕಷ್ಟು ಸುತ್ತಾಡಿರುವ ಉಡುಪಿಯ ಶಿಕ್ಷಣ ತಜ್ಞ ವಿಜಯ್ ಪಿ.ರಾವ್ ಅವರು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ್ದು, “ಭಾರತದ ಶಿಕ್ಷಣ ವ್ಯವಸ್ಥೆಯು ಸಾಕಷ್ಟು ಅಸ್ತವ್ಯಸ್ತವಾಗಿದೆ. ಭಾರತದಲ್ಲಿ ಸಮಂಜಸವಾದ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಸಿಗದ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರೆಸಲು USSR ಮತ್ತು ಸುತ್ತಲಿನ ದೇಶಗಳಿಗೆ ಹೋಗುವುದು ಸ್ವಲ್ಪ ಬೇಸರವನ್ನುಂಟು ಮಾಡುತ್ತದೆ. ಭಾರತದಂತಹ ಬೃಹತ್ ದೇಶವು ವೈದ್ಯಕೀಯ ಶಿಕ್ಷಣವನ್ನು ಸಮಂಜಸವಾದ ವೆಚ್ಚದಲ್ಲಿ ಒದಗಿಸಲು ಸಾಧ್ಯವಾಗದೇ ಇರುವುದು ಆಶ್ಚರ್ಯಕರವಾಗಿದೆ” ಎಂದಿದ್ದಾರೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆದಿದ್ದು, ದಾಳಿಗೊಳಗಾಗುತ್ತಿರುವ ಪ್ರದೇಶದಲ್ಲಿರುವ ಜನರನ್ನು ಮಿಲಿಟರಿ ಬಂಕರ್‌ಗಳಿಗೆ ಸ್ಥಳಾಂತರಿಸಿ, ರಕ್ಷಿಸಲಾಗುತ್ತಿದೆ. ಇದುವರೆಗೆ ನೂರಾರು ಜನರು ಸಾವನ್ನಪ್ಪಿದ್ದಾರೆ. ಯುದ್ಧ ಪೀಡಿತ ದೇಶದಲ್ಲಿರುವ ಭಾರತೀಯರು, ಮತ್ತೆ ತವರಿಗೆ ಮರಳಲು ಯತ್ನಿಸುತ್ತಿದ್ದಾರೆ. ವಿದ್ಯಾರ್ಥಿಗಳನ್ನು ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ.


ಇದನ್ನೂ ಓದಿರಿ: ಉಕ್ರೇನ್‌ ರಾಜಧಾನಿ ಮೇಲೆ ರಷ್ಯಾ ದಾಳಿ: ಬೃಹತ್‌ ಕಟ್ಟಡಕ್ಕೆ ಅಪ್ಪಳಿಸಿದ ಕ್ಷಿಪಣಿ- ಮೇಯರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...