Homeಮುಖಪುಟಯುಪಿ 5ನೇ ಹಂತದ ಚುನಾವಣೆ ಇಂದು: ಬಿಜೆಪಿ ಭದ್ರಕೋಟೆ ಛಿದ್ರವಾಗುವುದೇ?

ಯುಪಿ 5ನೇ ಹಂತದ ಚುನಾವಣೆ ಇಂದು: ಬಿಜೆಪಿ ಭದ್ರಕೋಟೆ ಛಿದ್ರವಾಗುವುದೇ?

- Advertisement -
- Advertisement -

ಲಖನೌ: ಉತ್ತರ ಪ್ರದೇಶದ 12 ಜಿಲ್ಲೆಗಳಿಗೆ ಸೇರಿದ 61 ಕ್ಷೇತ್ರಗಳಲ್ಲಿ ಇಂದು ಐದನೇ ಹಂತದ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಇಂದು ಮತದಾನ ನಡೆಯಲಿರುವ ಮಧ್ಯ ಯುಪಿ ಮತ್ತು ಅವಧ್ ‌ಪ್ರಾಂತ್ಯದಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳು ಪ್ರಭಾವ ಹೊಂದಿವೆ. ರಾಮ ಮಂದಿರ ನಿರ್ಮಾಣದ ಆಂದೋಲನದ ಕೇಂದ್ರಬಿಂದುವಾಗಿದ್ದ ಅಯೋಧ್ಯೆಯತ್ತ ಎಲ್ಲರ ಕಣ್ಣು ನೆಟ್ಟಿದೆ. ಈ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದಿಂದ ಪವನ್ ಪಾಂಡೆ ವಿರುದ್ಧ ಬಿಜೆಪಿ ಶಾಸಕ ವಿಪಿ ಗುಪ್ತಾ ಸ್ಪರ್ಧಿಸಲಿದ್ದಾರೆ.

ದೇವಾಲಯ ಅಭಿವೃದ್ಧಿ ಹೆಸರಲ್ಲಿ ಅಯೋಧ್ಯೆ ಸಣ್ಣ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಅಯೋಧ್ಯೆಯ ಚರ್ಚಾ ವಿಷಯವಾಗಿದೆ. ಯೋಗಿ ಆದಿತ್ಯನಾಥ್ ಅವರೂ ವ್ಯಾಪಾರಿಗಳ ಕೂಗು ಆಲಿಸುವುದಾಗಿ ಹೇಳಿದ್ದಾರೆ. ಎಸ್‌ಪಿ ಹಾಗೂ ಪ್ರತಿಪಕ್ಷಗಳು ಇದೇ ವಿಷಯವನ್ನು ಮುನ್ನೆಲೆಗೆ ತಂದಿದ್ದು, ರಾಮಮಂದಿರ ಸಂಗತಿಗೆ ಹಿನ್ನೆಡೆಯಾಗಿದೆ. (ಈ ಕುರಿತ ವಿಶೇಷ ವರದಿ ಇಲ್ಲಿ ಓದಿರಿ)

ಇದನ್ನೂ ಓದಿರಿ: ಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಪ್ರಯಾಗ್‌ರಾಜ್ (ಅಲಹಾಬಾದ್‌) ಭಾಗದಲ್ಲಿ ಇಂದು ಮತದಾನ ನಡೆಯಲಿದೆ. ಹಿಂದೂಗಳ ಪವಿತ್ರ ಸ್ಥಳವೆಂದೇ ಕರೆಯುವ ‘ಸಂಗಮ್‌‌’ ಇಲ್ಲಿದೆ. ಹಲವಾರು ಕೋಚಿಂಗ್ ಸೆಂಟರ್‌ಗಳಿಂದಾಗಿ ಎಲ್ಲಾ ಸಮುದಾಯಗಳ ವಿದ್ಯಾರ್ಥಿ ಸಮುದಾಯ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದೆ. ಹಿಂದಿನ ಕಾಂಗ್ರೆಸ್ ಭದ್ರಕೋಟೆಯಾದ ಅಮೇಠಿಯಲ್ಲಿಯೂ ಇಂದು ಮತದಾನ ನಡೆಯುತ್ತಿದೆ.

2017ರ ಚುನಾವಣೆಯಲ್ಲಿ ಇಲ್ಲಿನ 61 ಸ್ಥಾನಗಳಲ್ಲಿ 50 ಸ್ಥಾನಗಳನ್ನು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಗೆದ್ದಿರುವುದರಿಂದ ಈ ಹಂತವು ಬಿಜೆಪಿಗೆ ನಿರ್ಣಾಯಕವಾಗಿದೆ. ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು ಬಿಜೆಪಿಗೆ ದೊಡ್ಡ ಸವಾಲಾಗಿದೆ.

ಈ ಭಾಗದಲ್ಲಿ ಕ್ರಿಮಿನಲ್‌ಗಳು ಮತ್ತು ಮಾಫಿಯಾಗಳ ವಿರುದ್ಧ ಕ್ರಮ ವಹಿಸಿರುವುದಾಗಿ ಬಿಜೆಪಿ ಚುನಾವಣಾ ಪ್ರಚಾರ ಮಾಡಿದ್ದರೆ, ಪ್ರತಿಪಕ್ಷಗಳು ಬಿಡಾಡಿ ದನಗಳ ವಿಷಯದಲ್ಲಿ ಬಿಜೆಪಿಯ ವಿರುದ್ಧ ಕಹಳೆ ಊದಿವೆ. ನಿರುದ್ಯೋಗ ಮತ್ತು ಗ್ರಾಮೀಣ ಜನರ ಸಂಕಟಗಳ ಕುರಿತು ಪ್ರತಿಪಕ್ಷಗಳು ಮಾತನಾಡಿವೆ.

ಇದನ್ನೂ ಓದಿರಿ: ಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

ಇಂದು ಮತದಾನ ನಡೆಯಲಿರುವ ಜಿಲ್ಲೆಗಳಲ್ಲಿ ಸುಲ್ತಾನ್‌ಪುರ, ಚಿತ್ರಕೂಟ, ಪ್ರತಾಪ್‌ಗಢ, ಕೌಶಂಬಿ, ಪ್ರಯಾಗ್‌ರಾಜ್, ಬಾರಾಬಕಿ, ಬಹ್ರೈಚ್, ಶ್ರಾವಸ್ತಿ ಮತ್ತು ಗೊಂಡಾ ಸೇರಿವೆ.

ಕೌಶಂಬಿ ಜಿಲ್ಲೆಯ ಸಿರತ್ತು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸೇರಿದಂತೆ 5ನೇ ಹಂತದ ಕಣದಲ್ಲಿ ಹಲವು ಪ್ರಮುಖರು ಕಣದಲ್ಲಿದ್ದಾರೆ. ಕೇಶವ್ ಪ್ರಸಾದ್ ಅವರು ಅಪ್ನಾ ದಳ (ಕಾಮರವಾಡಿ) ಅಭ್ಯರ್ಥಿ ಪಲ್ಲವಿ ಪಟೇಲ್ ಅವರನ್ನು ಎದುರಿಸುತ್ತಿದ್ದಾರೆ. ಅಲಹಾಬಾದ್ ಪಶ್ಚಿಮದಿಂದ ಸಿದ್ಧಾರ್ಥ್ ನಾಥ್ ಸಿಂಗ್, ಪಟ್ಟಿಯಿಂದ (ಪ್ರತಾಪಗಢದಿಂದ) ರಾಜೇಂದ್ರ ಸಿಂಗ್ ಅಲಿಯಾಸ್ ಮೋತಿ ಸಿಂಗ್, ಅಲಹಾಬಾದ್ ದಕ್ಷಿಣದಿಂದ ನಂದ ಗೋಪಾಲ್ ಗುಪ್ತ ನಾಡಿ ಮತ್ತು ಮಂಕಾಪುರದಿಂದ (ಗೊಂಡಾ) ರಮಾಪತಿ ಶಾಸ್ತ್ರಿ ಸ್ಪರ್ಧೆಯಲ್ಲಿರುವ ಸಚಿವರಾಗಿದ್ದಾರೆ.

1993ರಿಂದ ಕುಂದಾದಿಂದ ಶಾಸಕರಾಗಿರುವ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ ಅವರು ಮತ್ತೊಮ್ಮೆ ತಮ್ಮ ಪಕ್ಷ ಜನಸತ್ತಾ ದಳದಿಂದ ಕಣದಲ್ಲಿದ್ದಾರೆ. ಅವರ ಹಳೆಯ ಸಹಾಯಕ ಗುಲ್ಶನ್ ಯಾದವ್ ಅವರು ಸಮಾಜವಾದಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದಾರೆ.

ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಅವರ ತಾಯಿ ಮತ್ತು ಅಪ್ನಾ ದಳ (ಕೆ) ನಾಯಕ ಕೃಷ್ಣಾ ಪಟೇಲ್ ಕೂಡ ಪ್ರತಾಪಗಢ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಅಪ್ನಾ ದಳ (ಕೆ), ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಆರಾಧನಾ ಮಿಶ್ರ ಮೋನಾ ಅವರು ಪ್ರತಾಪ್‌ಗಢದ ರಾಮ್‌ಪುರ ಖಾಸ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಫೆಬ್ರವರಿ 23ರಂದು ರಾಜ್ಯದಲ್ಲಿ ನಾಲ್ಕನೇ ಹಂತದ ಮತದಾನ ನಡೆದಿತ್ತು. ಯುಪಿಯ 403 ವಿಧಾನಸಭಾ ಸ್ಥಾನಗಳಲ್ಲಿ 231 ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ನಡೆದಿದೆ.


ಇದನ್ನೂ ಓದಿರಿ: ‘ನನ್ನನ್ನು ಕ್ಷಮಿಸಿ’: ವೇದಿಕೆ ಮೇಲೆಯೆ ಕಿವಿ ಹಿಡಿದು ‘ಬಸ್ಕಿ’ ಹೊಡೆದ ಯುಪಿ ಬಿಜೆಪಿ ಶಾಸಕ ಭೂಪೇಶ್ ಚೌಬೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...