Homeಮುಖಪುಟಯುಪಿ 5ನೇ ಹಂತದ ಚುನಾವಣೆ ಇಂದು: ಬಿಜೆಪಿ ಭದ್ರಕೋಟೆ ಛಿದ್ರವಾಗುವುದೇ?

ಯುಪಿ 5ನೇ ಹಂತದ ಚುನಾವಣೆ ಇಂದು: ಬಿಜೆಪಿ ಭದ್ರಕೋಟೆ ಛಿದ್ರವಾಗುವುದೇ?

- Advertisement -
- Advertisement -

ಲಖನೌ: ಉತ್ತರ ಪ್ರದೇಶದ 12 ಜಿಲ್ಲೆಗಳಿಗೆ ಸೇರಿದ 61 ಕ್ಷೇತ್ರಗಳಲ್ಲಿ ಇಂದು ಐದನೇ ಹಂತದ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಇಂದು ಮತದಾನ ನಡೆಯಲಿರುವ ಮಧ್ಯ ಯುಪಿ ಮತ್ತು ಅವಧ್ ‌ಪ್ರಾಂತ್ಯದಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳು ಪ್ರಭಾವ ಹೊಂದಿವೆ. ರಾಮ ಮಂದಿರ ನಿರ್ಮಾಣದ ಆಂದೋಲನದ ಕೇಂದ್ರಬಿಂದುವಾಗಿದ್ದ ಅಯೋಧ್ಯೆಯತ್ತ ಎಲ್ಲರ ಕಣ್ಣು ನೆಟ್ಟಿದೆ. ಈ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದಿಂದ ಪವನ್ ಪಾಂಡೆ ವಿರುದ್ಧ ಬಿಜೆಪಿ ಶಾಸಕ ವಿಪಿ ಗುಪ್ತಾ ಸ್ಪರ್ಧಿಸಲಿದ್ದಾರೆ.

ದೇವಾಲಯ ಅಭಿವೃದ್ಧಿ ಹೆಸರಲ್ಲಿ ಅಯೋಧ್ಯೆ ಸಣ್ಣ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಅಯೋಧ್ಯೆಯ ಚರ್ಚಾ ವಿಷಯವಾಗಿದೆ. ಯೋಗಿ ಆದಿತ್ಯನಾಥ್ ಅವರೂ ವ್ಯಾಪಾರಿಗಳ ಕೂಗು ಆಲಿಸುವುದಾಗಿ ಹೇಳಿದ್ದಾರೆ. ಎಸ್‌ಪಿ ಹಾಗೂ ಪ್ರತಿಪಕ್ಷಗಳು ಇದೇ ವಿಷಯವನ್ನು ಮುನ್ನೆಲೆಗೆ ತಂದಿದ್ದು, ರಾಮಮಂದಿರ ಸಂಗತಿಗೆ ಹಿನ್ನೆಡೆಯಾಗಿದೆ. (ಈ ಕುರಿತ ವಿಶೇಷ ವರದಿ ಇಲ್ಲಿ ಓದಿರಿ)

ಇದನ್ನೂ ಓದಿರಿ: ಯುಪಿ ಚುನಾವಣೆ 5ನೇ ಹಂತದ ಮತದಾನ: ಸಂಕಷ್ಟದಲ್ಲಿರುವ ಅಮೇಥಿ ಕ್ಷೇತ್ರದ ರೈತರು

ಪ್ರಯಾಗ್‌ರಾಜ್ (ಅಲಹಾಬಾದ್‌) ಭಾಗದಲ್ಲಿ ಇಂದು ಮತದಾನ ನಡೆಯಲಿದೆ. ಹಿಂದೂಗಳ ಪವಿತ್ರ ಸ್ಥಳವೆಂದೇ ಕರೆಯುವ ‘ಸಂಗಮ್‌‌’ ಇಲ್ಲಿದೆ. ಹಲವಾರು ಕೋಚಿಂಗ್ ಸೆಂಟರ್‌ಗಳಿಂದಾಗಿ ಎಲ್ಲಾ ಸಮುದಾಯಗಳ ವಿದ್ಯಾರ್ಥಿ ಸಮುದಾಯ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದೆ. ಹಿಂದಿನ ಕಾಂಗ್ರೆಸ್ ಭದ್ರಕೋಟೆಯಾದ ಅಮೇಠಿಯಲ್ಲಿಯೂ ಇಂದು ಮತದಾನ ನಡೆಯುತ್ತಿದೆ.

2017ರ ಚುನಾವಣೆಯಲ್ಲಿ ಇಲ್ಲಿನ 61 ಸ್ಥಾನಗಳಲ್ಲಿ 50 ಸ್ಥಾನಗಳನ್ನು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಗೆದ್ದಿರುವುದರಿಂದ ಈ ಹಂತವು ಬಿಜೆಪಿಗೆ ನಿರ್ಣಾಯಕವಾಗಿದೆ. ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷವು ಬಿಜೆಪಿಗೆ ದೊಡ್ಡ ಸವಾಲಾಗಿದೆ.

ಈ ಭಾಗದಲ್ಲಿ ಕ್ರಿಮಿನಲ್‌ಗಳು ಮತ್ತು ಮಾಫಿಯಾಗಳ ವಿರುದ್ಧ ಕ್ರಮ ವಹಿಸಿರುವುದಾಗಿ ಬಿಜೆಪಿ ಚುನಾವಣಾ ಪ್ರಚಾರ ಮಾಡಿದ್ದರೆ, ಪ್ರತಿಪಕ್ಷಗಳು ಬಿಡಾಡಿ ದನಗಳ ವಿಷಯದಲ್ಲಿ ಬಿಜೆಪಿಯ ವಿರುದ್ಧ ಕಹಳೆ ಊದಿವೆ. ನಿರುದ್ಯೋಗ ಮತ್ತು ಗ್ರಾಮೀಣ ಜನರ ಸಂಕಟಗಳ ಕುರಿತು ಪ್ರತಿಪಕ್ಷಗಳು ಮಾತನಾಡಿವೆ.

ಇದನ್ನೂ ಓದಿರಿ: ಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

ಇಂದು ಮತದಾನ ನಡೆಯಲಿರುವ ಜಿಲ್ಲೆಗಳಲ್ಲಿ ಸುಲ್ತಾನ್‌ಪುರ, ಚಿತ್ರಕೂಟ, ಪ್ರತಾಪ್‌ಗಢ, ಕೌಶಂಬಿ, ಪ್ರಯಾಗ್‌ರಾಜ್, ಬಾರಾಬಕಿ, ಬಹ್ರೈಚ್, ಶ್ರಾವಸ್ತಿ ಮತ್ತು ಗೊಂಡಾ ಸೇರಿವೆ.

ಕೌಶಂಬಿ ಜಿಲ್ಲೆಯ ಸಿರತ್ತು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸೇರಿದಂತೆ 5ನೇ ಹಂತದ ಕಣದಲ್ಲಿ ಹಲವು ಪ್ರಮುಖರು ಕಣದಲ್ಲಿದ್ದಾರೆ. ಕೇಶವ್ ಪ್ರಸಾದ್ ಅವರು ಅಪ್ನಾ ದಳ (ಕಾಮರವಾಡಿ) ಅಭ್ಯರ್ಥಿ ಪಲ್ಲವಿ ಪಟೇಲ್ ಅವರನ್ನು ಎದುರಿಸುತ್ತಿದ್ದಾರೆ. ಅಲಹಾಬಾದ್ ಪಶ್ಚಿಮದಿಂದ ಸಿದ್ಧಾರ್ಥ್ ನಾಥ್ ಸಿಂಗ್, ಪಟ್ಟಿಯಿಂದ (ಪ್ರತಾಪಗಢದಿಂದ) ರಾಜೇಂದ್ರ ಸಿಂಗ್ ಅಲಿಯಾಸ್ ಮೋತಿ ಸಿಂಗ್, ಅಲಹಾಬಾದ್ ದಕ್ಷಿಣದಿಂದ ನಂದ ಗೋಪಾಲ್ ಗುಪ್ತ ನಾಡಿ ಮತ್ತು ಮಂಕಾಪುರದಿಂದ (ಗೊಂಡಾ) ರಮಾಪತಿ ಶಾಸ್ತ್ರಿ ಸ್ಪರ್ಧೆಯಲ್ಲಿರುವ ಸಚಿವರಾಗಿದ್ದಾರೆ.

1993ರಿಂದ ಕುಂದಾದಿಂದ ಶಾಸಕರಾಗಿರುವ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ ಅವರು ಮತ್ತೊಮ್ಮೆ ತಮ್ಮ ಪಕ್ಷ ಜನಸತ್ತಾ ದಳದಿಂದ ಕಣದಲ್ಲಿದ್ದಾರೆ. ಅವರ ಹಳೆಯ ಸಹಾಯಕ ಗುಲ್ಶನ್ ಯಾದವ್ ಅವರು ಸಮಾಜವಾದಿ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದಾರೆ.

ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಅವರ ತಾಯಿ ಮತ್ತು ಅಪ್ನಾ ದಳ (ಕೆ) ನಾಯಕ ಕೃಷ್ಣಾ ಪಟೇಲ್ ಕೂಡ ಪ್ರತಾಪಗಢ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಅಪ್ನಾ ದಳ (ಕೆ), ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಆರಾಧನಾ ಮಿಶ್ರ ಮೋನಾ ಅವರು ಪ್ರತಾಪ್‌ಗಢದ ರಾಮ್‌ಪುರ ಖಾಸ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಫೆಬ್ರವರಿ 23ರಂದು ರಾಜ್ಯದಲ್ಲಿ ನಾಲ್ಕನೇ ಹಂತದ ಮತದಾನ ನಡೆದಿತ್ತು. ಯುಪಿಯ 403 ವಿಧಾನಸಭಾ ಸ್ಥಾನಗಳಲ್ಲಿ 231 ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ನಡೆದಿದೆ.


ಇದನ್ನೂ ಓದಿರಿ: ‘ನನ್ನನ್ನು ಕ್ಷಮಿಸಿ’: ವೇದಿಕೆ ಮೇಲೆಯೆ ಕಿವಿ ಹಿಡಿದು ‘ಬಸ್ಕಿ’ ಹೊಡೆದ ಯುಪಿ ಬಿಜೆಪಿ ಶಾಸಕ ಭೂಪೇಶ್ ಚೌಬೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...