Homeಮುಖಪುಟ’ಬಿಡಾಡಿ ದನಗಳ ಸಂರಕ್ಷಣೆಯಲ್ಲಿ ಅದ್ಭುತ ಕೆಲಸ ಮಾಡಿದ್ದೇವೆ’- ಉತ್ತರ ಪ್ರದೇಶ ಸರ್ಕಾರ

’ಬಿಡಾಡಿ ದನಗಳ ಸಂರಕ್ಷಣೆಯಲ್ಲಿ ಅದ್ಭುತ ಕೆಲಸ ಮಾಡಿದ್ದೇವೆ’- ಉತ್ತರ ಪ್ರದೇಶ ಸರ್ಕಾರ

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ರೈತರು ನೂರಾರು ಬಿಡಾಡಿ ದನಗಳನ್ನು ಸಿಎಂ ಯೋಗಿ ಆದಿತ್ಯನಾಥ್‌ ಅವರು ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದ ತೆರೆದ ಮೈದಾನಕ್ಕೆ ಬಿಟ್ಟಿದ್ದರು. ಈ ಬೆನ್ನಲೆ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರ “ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ನಿರ್ಗತಿಕ ಜಾನುವಾರುಗಳ ಸಂರಕ್ಷಣೆಯ ವಿಷಯದಲ್ಲಿ “ಅದ್ಭುತ ಕೆಲಸ” ಮಾಡಿದೆ ಎಂದು ಹೇಳಿದೆ.

“ರಾಜ್ಯ ಸರ್ಕಾರ ಮತ್ತು ರಾಜ್ಯದ ಜನರು ದನಗಳ ಸಂರಕ್ಷಣೆ ವಿಚಾರದಲ್ಲಿ ಸಂಪೂರ್ಣವಾಗಿ ಸಂವೇದನಾಶೀಲರಾಗಿದ್ದಾರೆ. ರಾಜ್ಯ ಸರ್ಕಾರವು ಈ ವಿಷಯದಲ್ಲಿ ಗಮನಾರ್ಹ ಕೆಲಸವನ್ನು ಮಾಡಿರುವುದರಿಂದ ದೀರ್ಘಕಾಲದಿಂದ ಬಾಕಿ ಉಳಿದಿರುವ ಸಮಸ್ಯೆಯನ್ನು ಪರಿಹರಿಸಲಾಗಿದೆ. ಕೆಲವೇ ಕೆಲವು ಗೋವುಗಳು ರಸ್ತೆ ಮತ್ತು ಕೃಷಿ ಕ್ಷೇತ್ರದಲ್ಲಿ ಓಡಾಡುತ್ತಿವೆ. ಉಳಿದಂತೆ ನಿರ್ಗತಿಕ ಗೋವುಗಳು ಇಲ್ಲಿ ಅಲೆದಾಡುತ್ತಿಲ್ಲ ಎಂದು ತಿಳಿಸುತ್ತಿದ್ದೇವೆ” ಎಂದು ಯುಪಿ ಸರ್ಕಾರವು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಐದನೇ ಹಂತದ ಮತದಾನದ ಮುನ್ನಾದಿನದಂದು (ಫೆ.16) ಈ ಹೇಳಿಕೆ ಬಂದಿದೆ. ಬಿಡಾಡಿ ದನಗಳು ಉತ್ತರ ಪ್ರದೇಶದಲ್ಲಿ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೊಲಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸುತ್ತಿದ್ದು, ಇದು ಯುಪಿಯಲ್ಲಿ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

ಈ ಬಿಡಾಡಿ ದನಗಳಿಂದ ತಮ್ಮ ಬೆಳೆಯನ್ನು ರಕ್ಷಿಸಲು ರೈತರು ತಮ್ಮ ಹೊಲಗಳಿಗೆ ಮುಳ್ಳುತಂತಿಯಿಂದ ಬೇಲಿ ಹಾಕುತ್ತಿದ್ದಾರೆ. ತಮ್ಮ ಬೆಳೆಗಳನ್ನು ರಕ್ಷಿಸಲು ನಿದ್ರೆಯಿಲ್ಲದ ಇಡೀ ರಾತ್ರಿಯನ್ನು ಕಳೆಯುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಈ ಸಮಸ್ಯೆ ಯುಪಿಯಲ್ಲಿ ಚುನಾವನೆ ಮೇಲೂ ಪ್ರಭಾವ ಬಿರಲಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ತ್ಮ ಚುನಾವಣಾ ಭಾಷಣದಲ್ಲಿ ಬಿಡಾಡಿ ದನಗಳ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ದರು. ಕಳೆದ ವಾರ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡರೆ ಬಿಡಾಡಿ ದನಗಳ ಸಮಸ್ಯೆ ಬಗೆಹರಿಯಲಿದೆ ಎಂದು ಭರವಸೆ ನೀಡಿದ್ದರು.

ಬಿಡಾಡಿ ಪ್ರಾಣಿಗಳಿಂದ ನೀವು ಎದುರಿಸುವ ಸಮಸ್ಯೆಗಳ ನಿವಾರಣೆಗೆ ಮಾರ್ಚ್ 10ರ ನಂತರ ಹೊಸ ವ್ಯವಸ್ಥೆ ಮಾಡಲಾಗುವುದು. ಹಾಲು ನೀಡದ ಪ್ರಾಣಿಗಳ ಸಗಣಿಯಿಂದ ಆದಾಯ ಗಳಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಚುನಾವಣಾ ರ್‍ಯಾಲಿಯಲ್ಲಿ ಭರವಸೆ ನೀಡಿದ್ದರು.

ಪ್ರಸ್ತುತ, ಸ್ವ-ಸಹಾಯ ಗುಂಪುಗಳು ನಡೆಸುತ್ತಿರುವ 572 ಗೋಶಾಲಾಗಳು ಯುಪಿ ಗೋಶಾಲಾ ಕಾಯ್ದೆಯಡಿ ರಾಜ್ಯದಲ್ಲಿ ನೋಂದಾಯಿಸಲ್ಪಟ್ಟಿವೆ. ಅವುಗಳಲ್ಲಿ 394 ಸಕ್ರಿಯವಾಗಿವೆ ಎಂದು ಯುಪಿ ಸರ್ಕಾರದ ಹೇಳಿಕೆ ತಿಳಿಸಿದೆ.

“ದೌರ್ಬಲ, ವೃದ್ಧ, ನಿರ್ಗತಿಕ ಮತ್ತು ರೋಗಪೀಡಿತ ಪ್ರಾಣಿಗಳಿಗೆ ಆಶ್ರಯ ನೀಡುವ ಜೊತೆಗೆ ಜಾನುವಾರುಗಳ ಪೋಷಣೆ ಮತ್ತು ಸಂತಾನೋತ್ಪತ್ತಿ ಉದ್ದೇಶದಿಂದ ಈ ಗೋಶಾಲೆಗಳನ್ನು ಸ್ಥಾಪಿಸಲಾಗಿದೆ. ಈ ಗೋಶಾಲೆಗಳಲ್ಲಿ ನಿರ್ಗತಿಕ ಪ್ರಾಣಿಗಳು ಮತ್ತು ಸ್ಥಳೀಯ ಆಡಳಿತ ಮತ್ತು ಪೊಲೀಸರಿಂದ ಪಡೆದ ಜಾನುವಾರುಗಳನ್ನು ಇರಿಸಿ ನೋಡಿಕೊಳ್ಳಲಾಗುತ್ತದೆ” ಎಂದು ರಾಜ್ಯ ಸರ್ಕಾರ ಹೇಳಿದೆ.

ಹಿಂದಿನ ಸರ್ಕಾರಗಳು ಈ ವಿಷಯದಲ್ಲಿ ಸಾಕಷ್ಟು ಕ್ರಮಕೈಗೊಂಡಿಲ್ಲ. ಇಂತಹ ನಿರ್ಗತಿಕ ಜಾನುವಾರುಗಳ ಸಂರಕ್ಷಣೆಗಾಗಿ ಹಿಂದಿನ ಸರ್ಕಾರಗಳು ಯಾವುದೇ ಪ್ರಯತ್ನಗಳನ್ನು ಮಾಡಲಿಲ್ಲ ಎಂದು ಆರೋಪಿಸಿದೆ.

ಇಂದು ಉತ್ತರ ಪ್ರದೇಶದ 12 ಜಿಲ್ಲೆಗಳಿಗೆ ಸೇರಿದ 61 ಕ್ಷೇತ್ರಗಳಲ್ಲಿ ಐದನೇ ಹಂತದ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಯುಪಿಯ 403 ವಿಧಾನಸಭಾ ಸ್ಥಾನಗಳಲ್ಲಿ 231 ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ನಡೆದಿದೆ.


ಇದನ್ನೂ ಓದಿ: ಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...