Homeಮುಖಪುಟ’ಬಿಡಾಡಿ ದನಗಳ ಸಂರಕ್ಷಣೆಯಲ್ಲಿ ಅದ್ಭುತ ಕೆಲಸ ಮಾಡಿದ್ದೇವೆ’- ಉತ್ತರ ಪ್ರದೇಶ ಸರ್ಕಾರ

’ಬಿಡಾಡಿ ದನಗಳ ಸಂರಕ್ಷಣೆಯಲ್ಲಿ ಅದ್ಭುತ ಕೆಲಸ ಮಾಡಿದ್ದೇವೆ’- ಉತ್ತರ ಪ್ರದೇಶ ಸರ್ಕಾರ

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ರೈತರು ನೂರಾರು ಬಿಡಾಡಿ ದನಗಳನ್ನು ಸಿಎಂ ಯೋಗಿ ಆದಿತ್ಯನಾಥ್‌ ಅವರು ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದ ತೆರೆದ ಮೈದಾನಕ್ಕೆ ಬಿಟ್ಟಿದ್ದರು. ಈ ಬೆನ್ನಲೆ ಹೇಳಿಕೆ ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರ “ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ನಿರ್ಗತಿಕ ಜಾನುವಾರುಗಳ ಸಂರಕ್ಷಣೆಯ ವಿಷಯದಲ್ಲಿ “ಅದ್ಭುತ ಕೆಲಸ” ಮಾಡಿದೆ ಎಂದು ಹೇಳಿದೆ.

“ರಾಜ್ಯ ಸರ್ಕಾರ ಮತ್ತು ರಾಜ್ಯದ ಜನರು ದನಗಳ ಸಂರಕ್ಷಣೆ ವಿಚಾರದಲ್ಲಿ ಸಂಪೂರ್ಣವಾಗಿ ಸಂವೇದನಾಶೀಲರಾಗಿದ್ದಾರೆ. ರಾಜ್ಯ ಸರ್ಕಾರವು ಈ ವಿಷಯದಲ್ಲಿ ಗಮನಾರ್ಹ ಕೆಲಸವನ್ನು ಮಾಡಿರುವುದರಿಂದ ದೀರ್ಘಕಾಲದಿಂದ ಬಾಕಿ ಉಳಿದಿರುವ ಸಮಸ್ಯೆಯನ್ನು ಪರಿಹರಿಸಲಾಗಿದೆ. ಕೆಲವೇ ಕೆಲವು ಗೋವುಗಳು ರಸ್ತೆ ಮತ್ತು ಕೃಷಿ ಕ್ಷೇತ್ರದಲ್ಲಿ ಓಡಾಡುತ್ತಿವೆ. ಉಳಿದಂತೆ ನಿರ್ಗತಿಕ ಗೋವುಗಳು ಇಲ್ಲಿ ಅಲೆದಾಡುತ್ತಿಲ್ಲ ಎಂದು ತಿಳಿಸುತ್ತಿದ್ದೇವೆ” ಎಂದು ಯುಪಿ ಸರ್ಕಾರವು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಐದನೇ ಹಂತದ ಮತದಾನದ ಮುನ್ನಾದಿನದಂದು (ಫೆ.16) ಈ ಹೇಳಿಕೆ ಬಂದಿದೆ. ಬಿಡಾಡಿ ದನಗಳು ಉತ್ತರ ಪ್ರದೇಶದಲ್ಲಿ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಹೊಲಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸುತ್ತಿದ್ದು, ಇದು ಯುಪಿಯಲ್ಲಿ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.

ಇದನ್ನೂ ಓದಿ: ಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

ಈ ಬಿಡಾಡಿ ದನಗಳಿಂದ ತಮ್ಮ ಬೆಳೆಯನ್ನು ರಕ್ಷಿಸಲು ರೈತರು ತಮ್ಮ ಹೊಲಗಳಿಗೆ ಮುಳ್ಳುತಂತಿಯಿಂದ ಬೇಲಿ ಹಾಕುತ್ತಿದ್ದಾರೆ. ತಮ್ಮ ಬೆಳೆಗಳನ್ನು ರಕ್ಷಿಸಲು ನಿದ್ರೆಯಿಲ್ಲದ ಇಡೀ ರಾತ್ರಿಯನ್ನು ಕಳೆಯುತ್ತಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ.

ಈ ಸಮಸ್ಯೆ ಯುಪಿಯಲ್ಲಿ ಚುನಾವನೆ ಮೇಲೂ ಪ್ರಭಾವ ಬಿರಲಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ತ್ಮ ಚುನಾವಣಾ ಭಾಷಣದಲ್ಲಿ ಬಿಡಾಡಿ ದನಗಳ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ದರು. ಕಳೆದ ವಾರ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡರೆ ಬಿಡಾಡಿ ದನಗಳ ಸಮಸ್ಯೆ ಬಗೆಹರಿಯಲಿದೆ ಎಂದು ಭರವಸೆ ನೀಡಿದ್ದರು.

ಬಿಡಾಡಿ ಪ್ರಾಣಿಗಳಿಂದ ನೀವು ಎದುರಿಸುವ ಸಮಸ್ಯೆಗಳ ನಿವಾರಣೆಗೆ ಮಾರ್ಚ್ 10ರ ನಂತರ ಹೊಸ ವ್ಯವಸ್ಥೆ ಮಾಡಲಾಗುವುದು. ಹಾಲು ನೀಡದ ಪ್ರಾಣಿಗಳ ಸಗಣಿಯಿಂದ ಆದಾಯ ಗಳಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಚುನಾವಣಾ ರ್‍ಯಾಲಿಯಲ್ಲಿ ಭರವಸೆ ನೀಡಿದ್ದರು.

ಪ್ರಸ್ತುತ, ಸ್ವ-ಸಹಾಯ ಗುಂಪುಗಳು ನಡೆಸುತ್ತಿರುವ 572 ಗೋಶಾಲಾಗಳು ಯುಪಿ ಗೋಶಾಲಾ ಕಾಯ್ದೆಯಡಿ ರಾಜ್ಯದಲ್ಲಿ ನೋಂದಾಯಿಸಲ್ಪಟ್ಟಿವೆ. ಅವುಗಳಲ್ಲಿ 394 ಸಕ್ರಿಯವಾಗಿವೆ ಎಂದು ಯುಪಿ ಸರ್ಕಾರದ ಹೇಳಿಕೆ ತಿಳಿಸಿದೆ.

“ದೌರ್ಬಲ, ವೃದ್ಧ, ನಿರ್ಗತಿಕ ಮತ್ತು ರೋಗಪೀಡಿತ ಪ್ರಾಣಿಗಳಿಗೆ ಆಶ್ರಯ ನೀಡುವ ಜೊತೆಗೆ ಜಾನುವಾರುಗಳ ಪೋಷಣೆ ಮತ್ತು ಸಂತಾನೋತ್ಪತ್ತಿ ಉದ್ದೇಶದಿಂದ ಈ ಗೋಶಾಲೆಗಳನ್ನು ಸ್ಥಾಪಿಸಲಾಗಿದೆ. ಈ ಗೋಶಾಲೆಗಳಲ್ಲಿ ನಿರ್ಗತಿಕ ಪ್ರಾಣಿಗಳು ಮತ್ತು ಸ್ಥಳೀಯ ಆಡಳಿತ ಮತ್ತು ಪೊಲೀಸರಿಂದ ಪಡೆದ ಜಾನುವಾರುಗಳನ್ನು ಇರಿಸಿ ನೋಡಿಕೊಳ್ಳಲಾಗುತ್ತದೆ” ಎಂದು ರಾಜ್ಯ ಸರ್ಕಾರ ಹೇಳಿದೆ.

ಹಿಂದಿನ ಸರ್ಕಾರಗಳು ಈ ವಿಷಯದಲ್ಲಿ ಸಾಕಷ್ಟು ಕ್ರಮಕೈಗೊಂಡಿಲ್ಲ. ಇಂತಹ ನಿರ್ಗತಿಕ ಜಾನುವಾರುಗಳ ಸಂರಕ್ಷಣೆಗಾಗಿ ಹಿಂದಿನ ಸರ್ಕಾರಗಳು ಯಾವುದೇ ಪ್ರಯತ್ನಗಳನ್ನು ಮಾಡಲಿಲ್ಲ ಎಂದು ಆರೋಪಿಸಿದೆ.

ಇಂದು ಉತ್ತರ ಪ್ರದೇಶದ 12 ಜಿಲ್ಲೆಗಳಿಗೆ ಸೇರಿದ 61 ಕ್ಷೇತ್ರಗಳಲ್ಲಿ ಐದನೇ ಹಂತದ ಮತದಾನ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಗೆ ಆರಂಭವಾಗಿ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಯುಪಿಯ 403 ವಿಧಾನಸಭಾ ಸ್ಥಾನಗಳಲ್ಲಿ 231 ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ನಡೆದಿದೆ.


ಇದನ್ನೂ ಓದಿ: ಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...