Homeಕರ್ನಾಟಕಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ಸಂಘ ಪರಿವಾರ ಇಬ್ಬಂದಿ ನೀತಿ ಅನುಸರಿಸುತ್ತಿದೆ ಎಂದು ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

“ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಅವರು ಕೊಲೆಯಾಗಿದ್ದರ ಬಗ್ಗೆ ಇಲ್ಲಿಯ (ಕರಾವಳಿ) ಮುಖಂಡರು ಇದುವರೆಗೂ ಬಾಯಿ ತೆರೆದಿಲ್ಲ. ಇನ್ನು ಧರ್ಮಸ್ಥಳದ ದಲಿತ ವ್ಯಕ್ತಿ ದಿನೇಶ ಅವರು ಕೊಲೆಯಾಗಿರುವುದನ್ನು ಖಂಡಿಸುತ್ತಾರಾ?” ಎಂದು ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ ಪ್ರಶ್ನಿಸಿದ್ದಾರೆ.

‘ನಾನುಗೌರಿ.ಕಾಂ’ನೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರುವ ಅವರು, “ನಮ್ಮಲ್ಲಿ ಕೊಲೆಯಾದವರು ಮುಖ್ಯವಲ್ಲ, ಯಾರು ಕೊಲೆ ಮಾಡಿದ್ದೆನ್ನುವುದು ಮುಖ್ಯ. ಹಾಗಾಗಿ ಶರತ್ ಮಡಿವಾಳನ ಜೀವಕ್ಕಿರುವ ಬೆಲೆ ವಿನಾಯಕ ಬಾಳಿಗರ ಜೀವಕ್ಕಿಲ್ಲ. ಹರ್ಷನ ಜೀವಕ್ಕಿರುವ ಬೆಲೆ ದಿನೇಶರ ಜೀವಕ್ಕಿಲ್ಲ” ಎಂದು ವಿಷಾದಿಸಿದ್ದಾರೆ.

“ಅಷ್ಟೇ ಯಾಕೆ ಪಾಕ್ ಸೈನಿಕರಿಂದ ಹತರಾದ ಯೋಧರಿಗಿರುವ ಬೆಲೆ ಗಾಲ್ವಾನ್‍ನಲ್ಲಿ ಚೀನೀ ಸೈನಿಕರ ದಾಳಿಯಲ್ಲಿ ಹುತಾತ್ಮರಾದ ಸೈನಿಕರಿಗಿಲ್ಲ. ಅದೇ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಚೀನಾ ಅಪಹರಿಸಿದ ಹತ್ತು ಮಂದಿ ಭಾರತೀಯ ಸೈನಿಕರ ಬಗ್ಗೆ ನಮ್ಮಲ್ಲಿ ಯಾವತ್ತಾದರೂ ಚರ್ಚೆ ನಡೆದಿದೆಯೇ? ಊಹುಂ! ನಮ್ಮಲ್ಲಿ ನೀರವ ಮೌನ” ಎಂದು ಹೇಳಿದ್ದಾರೆ.

ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

“ನಮ್ಮ ದೇಶಭಕ್ತಿ ಉಕ್ಕಿ ಹರಿಯಬೇಕಾದರೆ, ನಮ್ಮ ಘೋಷಣೆಗಳು ಮುಗಿಲು ಮುಟ್ಟಬೇಕಾದರೆ, ನಮ್ಮ ಜನರ ಹಾಗೂ ನಾಯಕರ ಎದೆಯ ವಿಸ್ತೀರ್ಣ ಜಗತ್ತಿಗೆ ತಿಳಿಯಬೇಕಾದರೆ ನಮ್ಮ ಶತ್ರು ಮುಸ್ಲಿಮನಾಗಿರಬೇಕು ಇಲ್ಲವೇ ನಮ್ಮ ಸಂತ್ರಸ್ತರು ಸಮಾಜದ ಗಣ್ಯ ವರ್ಗದವರಾಗಿರಬೇಕು” ಎಂದು ಅವರು ಟೀಕಿಸಿದ್ದಾರೆ.

“ಇಲ್ಲಿ ಮುಸ್ಲಿಮರ ಜೀವಕ್ಕೆ ಬೆಲೆಯಿಲ್ಲ. ಆದರೆ ಮುಸ್ಲಿಮರಿಂದ ಕೊಲೆಯಾದ ದೇಹಕ್ಕೆ ಬೆಲೆಯಿದೆ. ಇದು ಸಿರಿವಂತರ ಸಮಾಜ, ಇದು ಗಣ್ಯರ ಸಮಾಜ, ಇದು ಮೇಲ್ವರ್ಗದವರ ಸಮಾಜ. ಇಲ್ಲಿ ದೊಡ್ಡವರ, ಉಳ್ಳವರ ಪ್ರಾಣಕ್ಕೆ ಬೆಲೆಯೇ ಹೊರತು, ತಳವರ್ಗದ, ಬಡವರ ಪ್ರಾಣಕ್ಕಲ್ಲ. ಇದು ಇಂದಿನ ವಿದ್ಯಾಮಾನ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಕರಾವಳಿಯ ಸಾಮಾನ್ಯರು ಬುದ್ಧಿವಂತರಾಗುತ್ತಿದ್ದಾರೆ’

“ನಮ್ಮ ಕರಾವಳಿ ಯಾಕೆ ಶಾಂತವಾಗಿದೆ? ಮಂಗಳೂರಿನಲ್ಲಿ ನಾಗವನ ದೇವಸ್ಥಾನಕ್ಕೆ ಅಪಚಾರವಾದರೂ ಕೂಡ ನಮ್ಮವರು ಶಾಂತವಾಗಿದ್ದಾರೆ. ದೂರದ ಶಿವಮೊಗ್ಗದಲ್ಲಿ ಸಂಘಟನೆಯ ಯುವಕರನ್ನು ಕೊಲೆ ಮಾಡಿದರೂ ನಮ್ಮ ಮಂಗಳೂರು ಶಾಂತವಾಗಿದೆ. ಕರಾವಳಿಯ ಜನ ಬುದ್ಧಿವಂತರು. ಇದಕ್ಕೆಲ್ಲ ಮುಖ್ಯ ಕಾರಣ- ಕರಾವಳಿ ಜನ ತಮ್ಮ ಮಕ್ಕಳನ್ನು ಒಳ್ಳೆಯ ವಿದ್ಯಾವಂತರನ್ನಾಗಿ ಮಾಡುತ್ತಿರುವುದು” ಎಂದು ಸುನಿಲ್ ಬಜಿಲಕೇರಿ ತಿಳಿಸಿದ್ದಾರೆ.

“ಒಂದು ಸಂದರ್ಭದಲ್ಲಿ ಕರಾವಳಿಯ ಹಿಂದುಳಿದ ವರ್ಗದ ಮನೆಗಳಲ್ಲಿ ಕಾರ್ಪೆಂಟರ್, ಮೆಕಾನಿಕ್, ಪ್ಲಂಬರ್ ಪೇಂಟರ್ ಮತ್ತು ಕೂಲಿ ಕೆಲಸ, ಮೇಸ್ತ್ರಿ ಕೆಲಸ ಮಾಡುವವರೇ ಹೆಚ್ಚಾಗಿದ್ದರು. ಈ ಹಿಂದುಳಿದ ವರ್ಗದ ಇಂಥ ಯುವಕರನ್ನು ಪ್ರಚೋದಿಸಲು ಸುಲಭವಾಗುತ್ತಿತ್ತು. ಸುರತ್ಕಲ್ ಪ್ರದೇಶದಲ್ಲಿ ಸತ್ಯಜಿತ್ ಹಿಡಿತವಿದ್ದು ಅವರು ತನ್ನ ಯುವಕರನ್ನು ಯಾವುದೇ ಗಲಭೆಗೆ ಹೋಗದಂತೆ ನಿಯಂತ್ರಿಸಿದ್ದಾರೆ. ಕಾರಣ ಅವರಿಗೆ ಬಿಜೆಪಿಯ ಕುತಂತ್ರ ತಿಳಿದದ್ದು, ಕುದ್ರೋಳಿ ಬಜಿಲಕೇರಿ ಇವತ್ತು ತುಂಬಾ ಶಾಂತವಾಗಿದೆ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...