Homeಕರ್ನಾಟಕಮುಸ್ಲಿಮರ ನರಮೇಧಕ್ಕೆ ಎಬಿವಿಪಿ ಸದಸ್ಯೆ ಕರೆ; ಕಾನೂನು ಕ್ರಮ ಜರುಗಿಸುವುದಾಗಿ ವಿಜಯಪುರ ಎಸ್‌ಪಿ ಪ್ರತಿಕ್ರಿಯೆ

ಮುಸ್ಲಿಮರ ನರಮೇಧಕ್ಕೆ ಎಬಿವಿಪಿ ಸದಸ್ಯೆ ಕರೆ; ಕಾನೂನು ಕ್ರಮ ಜರುಗಿಸುವುದಾಗಿ ವಿಜಯಪುರ ಎಸ್‌ಪಿ ಪ್ರತಿಕ್ರಿಯೆ

- Advertisement -
- Advertisement -

ಸಂಘಪರಿವಾರದ ಸದಸ್ಯೆ ಪೂಜಾ ವೀರಶೆಟ್ಟಿ ಎಂಬವರು ಮುಸ್ಲಿಮರ ನರಹತ್ಯೆಗೆ ವಿಜಯಪುರ ಜಿಲ್ಲೆಯಲ್ಲಿ ಕರೆ ನೀಡಿರುವ ವಿಡಿಯೊ ವೈರಲ್‌ ಆಗಿದ್ದು, “ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಯುವತಿಯ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಎಚ್‌.ಡಿ.ಆನಂದಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಪ್ರಕರಣ ಸಂಬಂಧ ‘ನಾನುಗೌರಿ.ಕಾಂ’ ತಂಡವು ಹಲವು ಬಾರಿ ಎಚ್.ಡಿ.ಆನಂದಕುಮಾರ್‌ ಅವರನ್ನು ಸಂಪರ್ಕಿಸಲು ಯತ್ನಿಸಿತ್ತು. ಆದರೆ ಅವರು ಪ್ರತಿಕ್ರಿಯೆಗೆ ಲಭ್ಯವಾಗಿರಲಿಲ್ಲ. ಇಂದು ಸಂಪರ್ಕಕ್ಕೆ ಸಿಕ್ಕಿದ ಅವರು, ‘ನಾನುಗೌರಿ.ಕಾಂ’ನೊಂದಿಗೆ ಮಾತನಾಡಿದರು. “ಕಾನೂನು ತಜ್ಞರ ಬಳಿ ಮಾತನಾಡುತ್ತಿದ್ದೇವೆ. ಅವರ ಅಭಿಪ್ರಾಯ ತೆಗೆದುಕೊಂಡು ಸೂಕ್ತ ಕ್ರಮ ಜರುಗಿಸಲಾಗುತ್ತದೆ” ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

“ಯಾರೂ ಈವರೆಗೆ ದೂರು ನೀಡಿಲ್ಲ” ಎಂದು ಅವರು ತಿಳಿಸಿದಾಗ, “ಸುಮೊಟೊ ಪ್ರಕರಣವಾದರೂ ದಾಖಲಾಗಬಹುದಿತ್ತು. ಕ್ಷುಲ್ಲಕ ಟ್ವೀಟ್‌ವೊಂದಕ್ಕೆ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅವರ ಮೇಲೆ ಪ್ರಕರಣ ದಾಖಲಾಗಿದೆ. ಕರ್ನಾಟಕದಂತಹ ರಾಜ್ಯದಲ್ಲಿ ಮುಸ್ಲಿಮರ ನರಹತ್ಯೆಗೆ ಕರೆ ನೀಡಲಾಗಿದೆ. ಹರಿದ್ವಾರದಲ್ಲಿ ನರಹತ್ಯೆಗೆ ಕರೆ ನೀಡಿದ ಬಳಿಕ ಕರ್ನಾಟಕದಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಘನತೆ ಹಾಳಾಗುತ್ತಿದೆಯಲ್ಲ” ಎಂದು ಪೊಲೀಸ್ ವರಿಷ್ಠಾಧಿಕಾರಿಯವರ ಗಮನ ಸೆಳೆಯಲಾಯಿತು. “ಈ ಕುರಿತು ತನಿಖೆಯಾಗುತ್ತಿದೆ. ತಜ್ಞರ ಅಭಿಪ್ರಾಯ ತೆಗೆದುಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ತಿಳಿಸಿದ್ದಾರೆ.

ಏನಿದು ಪ್ರಕರಣ?

ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಖಂಡಿಸಿ ವಿಜಯಪುರ ನಗರದಲ್ಲಿ ಬಜರಂಗದಳ, ವಿಎಚ್‌ಪಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ವಿಜಯಪುರ ಎಬಿವಿಪಿ ಪ್ರತಿನಿಧಿ ಪೂಜಾ ವೀರಶೆಟ್ಟಿಯವರು ಕೋಮು ಸೌಹಾರ್ದತೆ ಕದಡಲು ಯತ್ನಿಸಿದ್ದರು.

ಇದನ್ನೂ ಓದಿರಿ: ಶಿವಮೊಗ್ಗ: 7 ವರ್ಷಗಳ ಹಿಂದೆ ಕೊಲೆಯಾದ ಬಜರಂಗದಳ ಕಾರ್ಯಕರ್ತನ ತಾಯಿ ಬದುಕು ಬೀದಿಪಾಲು!

“ನಾವು ಭಾರತದವರು ಎಂಥವರು ಎಂದರೆ ನೀರು ಬೇಡ ಎಂದರೆ ಪಾನಕ ಕೊಡ್ತೀವಿ. ಹಾಲು ಬೇಡ ಅಂದರೆ ಮಜ್ಜಿಗೆ ಕೊಡ್ತೀವಿ. ನೀವು ಏನಾದರೂ ಭಾರತವನ್ನು ಹಿಜಾಬ್‌ಮಯ ಮಾಡಲು ಬಂದರೆ ಶಿವಾಜಿ ಕೈಯಲ್ಲಿನ ಕತ್ತಿ ತಗೊಂಡು ಇಂಚಿಂಚೇ ಕಡಿಯುತ್ತೇವೆ” ಎಂದು ಪ್ರಚೋದನಕಾರಿಯಾಗಿ ಪೂಜಾ ಮಾತನಾಡಿದ್ದರು.

“ಹರ್ಷಾ ಕೊಲೆ ಆರೋಪಿಗಳನ್ನು ಪೊಲೀಸರು 24 ತಾಸುಗಳಲ್ಲಿ ಬಂಧಿಸಿರುವುದು ಖುಷಿ ನೀಡಿದೆ. ಆದರೆ, ಬರಿ ಆರೋಪಿಗಳ ಬಂಧನವಾದರೆ ಸಾಲದು, ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ನಮ್ಮ ಕೈಗೆ 24 ತಾಸು ಅಲ್ಲ, ಒಂದು ತಾಸು ಅಧಿಕಾರ ಕೊಟ್ಟು ನೋಡಿ, ಆರು ಜನ ಅಲ್ಲ, ಅರವತ್ತು ಸಾವಿರ ಹಿಜಾಬ್‌ಗಳನ್ನು …” ಎಂದು ಪ್ರಚೋದಿಸಿರುವುದು ವಿಡಿಯೊದಲ್ಲಿ ದಾಖಲಾಗಿದೆ. (ಹೀಗೆ ಹೇಳಿದ ತಕ್ಷಣ ಪಕ್ಕದಲ್ಲಿದ್ದ ಮಹಿಳೆಯೊಬ್ಬರು ಪೂಜಾ ವೀರಶೆಟ್ಟಿಯರಿಗೆ ಭಾಷಣ ನಿಲ್ಲಿಸುವಂತೆ ಕೈ ಸನ್ನೆ ಮಾಡುತ್ತಾರೆ. ಪೂಜಾ ಭಾಷಣ ಕೇಳಿ ಪ್ರತಿಭಟನೆಯಲ್ಲಿದ್ದವರು ಉದ್ಘಾರ ಮಾಡುತ್ತಾರೆ).

ಪೂಜಾ ವೀರಶೆಟ್ಟಿ ವಿಡಿಯೊ ವೈರಲ್‌ ಆಗಿದ್ದು, ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕರಾದ ಜುಬೈರ್ ಟ್ವೀಟ್‌ ಮಾಡಿದ್ದಾರೆ. “ಡಿಸೆಂಬರ್ 2021ರಲ್ಲಿ ಹರಿದ್ವಾರದಲ್ಲಿ ನರಮೇಧದ ಕರೆ ನಂತರ, ಬಲಪಂಥೀಯ ಗುಂಪಿನಿಂದ ಕರ್ನಾಟಕದಲ್ಲಿ ಮುಸ್ಲಿಂ ಜನಾಂಗೀಯ ಹತ್ಯೆಗೆ ಮತ್ತೊಂದು ಕರೆಯನ್ನು ಬಹಿರಂಗವಾಗಿ ನೀಡಲಾಗಿದೆ” ಎಂದು ಅವರು ವಿಷಾದಿಸಿದ್ದಾರೆ.

ಇದೇ ಕಾರ್ಯಕ್ರಮದಲ್ಲಿ ಮಾತನಾಡಿರುವ ದುರ್ಗಾ ವಾಹಿನಿ ಮುಖಂಡರಾದ ಮಂಚಾಲೇಶ್ವರಿ ತೋಣಶ್ಯಾಳ, ‘ಕೇಂದ್ರ, ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರಗಳಿದ್ದರೂ ಹಿಂದೂಗಳು ಬೀದಿಯಲ್ಲಿ ಹೆಣ ಇಟ್ಟುಕೊಂಡು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿರುವುದು ನಾಚಿಕೆ ಸಂಗತಿಯಾಗಿದೆ‘ ಎಂದಿದ್ದರು.

‘ಹಿಂದೂ ಯುವಕರನ್ನು ಪೋಸ್ಟ್‌ಮಾರ್ಟ್ಂಗೆ ಹಚ್ಚಿದ ಮತಾಂಧರ ಪೋಸ್ಟ್‌ಮಾರ್ಟ್ಂ ಆಗಬೇಕು. ಆಗ ಹಿಂದೂಗಳಿಗೆ ನ್ಯಾಯ ಸಿಗುತ್ತದೆ’ ಎಂದು ಹೇಳಿಕೆ ನೀಡಿದ್ದರು. “ರಾಜ್ಯದಲ್ಲಿ ಹಿಂದೂಗಳ ಒಂದೇ ಒಂದು ಕೂದಲು ಕೊಂಕಾಗದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೋಡಿಕೊಳ್ಳುವ ಭರವಸೆ ನೀಡಬೇಕು. ನಿಮಗೆ ಆ ತಾಕತ್ತು, ದಮ್‌ ಇಲ್ಲವಾದರೆ ಒಮ್ಮೆ ಉತ್ತರಪ್ರದೇಶಕ್ಕೆ ಹೋಗಿ ಯೋಗಿ ಆದಿತ್ಯಾನಾಥ ಅವರ ಬಳಿ ತರಬೇತಿ ಪಡೆದುಕೊಂಡು ಬನ್ನಿ” ಎಂದು ಸಲಹೆ ನೀಡಿದ್ದರು.

“ಹಿಂದೂಗಳು ರಕ್ತ ಹರಿಸಿ ನಿಮ್ಮನ್ನು ಅಧಿಕಾರದ ಗದ್ದುಗೆ ಮೇಲೆ ಕೂರಿಸಿರುವುದು ಆಪರೇಷನ್‌ ಕಮಲ ಮಾಡಲಿ ಎಂದಲ್ಲ. ನಮ್ಮ ಆಸೆ ಬಿಜೆಪಿ ಬಾವುಟ ಹಾರಿಸಬೇಕು ಎಂಬುದಲ್ಲ, ಕೇಸರಿ ಬಾವುಟ ಹಾರಿಸಬೇಕು ಎಂಬುದಾಗಿತ್ತು” ಎಂದು ತಿಳಿಸಿದ್ದರು.

ಪೊಲೀಸರಿಂದ ಕ್ರಮ ಯಾವಾಗ?

ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್‌ ಅವರಿಗೆ ಸಂಬಂಧಿಸಿದಂತೆ ಒಂದು ಟ್ವೀಟ್‌ ಮಾಡಿದ ಕಾರಣಕ್ಕೆ ನಟ ಚೇತನ್ ಅಹಿಂಸಾ ಅವರನ್ನು ಪ್ರಕರಣದಲ್ಲಿ ಸಿಲುಕಿಸಲಾಯಿತು. “ಚೇತನ್‌ ಅಹಿಂಸಾ ಅವರು ಕೋಮುಗಳ ನಡುವೆ ಗಲಭೆಗೆ ಪ್ರಚೋದಿಸಿದ್ದಾರೆ, ನ್ಯಾಯಾಂಗದ ಮೇಲೆ ಅಪನಂಬಿಕೆ ಉಂಟು ಮಾಡಲು ಯತ್ನಿಸಿದ್ದಾರೆಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆದರೆ ಬಹಿರಂಗವಾಗಿ ಒಂದು ಸಮುದಾಯದ ವಿರುದ್ಧ ದ್ವೇಷ ಕಾರುತ್ತಿರುವವರ ಕುರಿತು ಪೊಲೀಸ್ ಇಲಾಖೆ ಯಾವ ಕ್ರಮ ಜರುಗಿಸಿದೆ” ಎಂಬ ಪ್ರಶ್ನೆಗಳು ಕೇಳಿಬಂದಿದ್ದವು. ಪ್ರಕರಣ ಸಂಬಂಧಿಸಿದಂತೆ ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿಯವರು ಪ್ರತಿಕ್ರಿಯೆ ನೀಡಿದ್ದು, ಮುಂದಿನ ಬೆಳವಣಿಗೆಗಳನ್ನು ಕಾದು ನೋಡಬೇಕಿದೆ.


ಇದನ್ನೂ ಓದಿರಿ: ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...