Homeಕರ್ನಾಟಕಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

- Advertisement -
- Advertisement -

ಸಾರ್ವಜನಿಕ ಸ್ಥಳದಲ್ಲಿ ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದನ್ನು ಪ್ರಶ್ನಿಸಿ, ದಲಿತರು ಮಾಡಿಕೊಟ್ಟ ಕಬ್ಬಿನ ಹಾಲನ್ನು ಕುಡಿಯಬೇಕಾ? ಎಂದು ದೌರ್ಜನ್ಯವೆಸಗಿ ಇಬ್ಬರು ದಲಿತರ ಮೇಲೆ ಹಲ್ಲೆ ನಡೆಸಿರುವ ಘಟನೆ ಅರಕಲಗೂಡು ತಾಲ್ಲೂಕು ರುದ್ರಪಟ್ಟಣ ಸಮೀಪ ನಡೆದಿದೆ.

ರಾಮನಾಥಪುರ ಹೋಬಳಿಯ ರುದ್ರಪಟ್ಟಣ  ಗ್ರಾಮದ ಪರಿಶಿಷ್ಟ ಸಮುದಾಯದ  ಚಂದ್ರ ಹಾಗೂ ಅವರ ಮಗ ನಿತಿನ್‌ ಹಲ್ಲೆಗೊಳಗಾಗಿದ್ದು, ಇಲ್ಲಿನ ಕೊಣನೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಚಂದ್ರ ಅವರು ದೂರು ನೀಡಿದ್ದು, “ಗಂಗೂರಿನ ಹ್ಯಾಂಡ್‌‌ ಪೋಸ್ಟ್‌ನಲ್ಲಿ ಅಂದರೆ ರಾಮನಾಥಪುರ- ಬೆಟ್ಟದಪುರ ರಸ್ತೆಯ ಪಕ್ಕದಲ್ಲಿ ಕಬ್ಬಿನ ಹಾಲಿನ ಗಾಡಿಯನ್ನು ಇಟ್ಟುಕೊಂಡು ಸುಮಾರು ಆರು ತಿಂಗಳಿಂದ ಜೀವನ ನಡೆಸುತ್ತಿದ್ದೆವು. ದಿನಾಂಕ 27-02-2022ರ ಬೆಳಿಗ್ಗೆ 10.50ರ ವೇಳೆಯಲ್ಲಿ ಗಂಗೂರಿನ ನಿವಾಸಿ ಸುನಿಲ್‌ ಎಂಬಾತ ನನ್ನ ಬಳಿ ಬಂದು ಗಾಡಿ ತೆಗೆಯಬೇಕೆಂದು ಹೇಳಿದನು. ಹೊಲೆಯ ಮಾದಿಗರು ಮಾಡಿರುವ ಹಾಲನ್ನು ಎಲ್ಲರೂ ಕುಡಿಯಬೇಕಾ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಲು ಶುರು ಮಾಡಿದರು” ಎಂದು ಘಟನೆಯನ್ನು ವಿವರಿಸಿದ್ದಾರೆ.

“ರಸ್ತೆ ಬದಿಯಲ್ಲಿ ಗಾಡಿ ಹಾಕಲು ಯಾರ ಅಪ್ಪಣೆಯೂ ಬೇಕಾಗಿಲ್ಲ. ಜಾಗ ನಿನ್ನದಾಗಿದ್ದರೆ  ಹೇಳು, ಗಾಡಿ ತೆಗೆಯುತ್ತೇನೆ. ಆರು ತಿಂಗಳಿಂದ ನಿನ್ನ ತೋಟದ ಮುಂದೆ ಅಂಗಡಿ ಹಾಕಿರುವುದರಿಂದ ದಿನವೂ ನೂರು ರೂಪಾಯಿ ಪಡೆದುಕೊಂಡಿದ್ದೀಯ. ನೀನು ಈ ರೀತಿ ಮಾತನಾಡುವುದು ಸರಿಯೇ ಎಂದು ಕೇಳಿದೆ” ಎಂದು ದೂರುದಾರ ಚಂದ್ರ ತಿಳಿಸಿದ್ದಾರೆ.

“ನಾನು ಪ್ರಶ್ನೆ ಕೇಳಿದ್ದನ್ನು ಸಹಿಸದ ಅವರು, ಕೀಳು ಜಾತಿಯವನಾದ ನೀನು ನನ್ನನ್ನೇ ಪ್ರಶ್ನಿಸುತ್ತೀಯ ಎಂದನು. ಬಳಿಕ ಹಿಂತಿರುಗಿ ಅವರ ತಂದೆ ರಾಜೇಗೌಡ ಹಾಗೂ ಸಂಬಂಧಿಕರು, ಸ್ನೇಹಿತರನ್ನು ಕರೆದುಕೊಂಡು ಬಂದು ಏಕಾಏಕಿ ನನ್ನ ಮಗನ ಮೇಲೆ ಹಲ್ಲೆ ನಡೆಸಲಾಯಿತು” ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಗಂಗೂರಿನ ವ್ಯಕ್ತಿ, ಸವರ್ಣಿಯ ಜಾತಿಗೆ ಸೇರಿದ ಗುಂಡ, ಆತನ ಸ್ನೇಹಿತರು ಹಾಗೂ ಎರಂಬನಹಳ್ಳಿ ನಿವಾಸಿ ಸೈಯದ್‌ ಎಂಬವರು ಹಲ್ಲೆ ನಡೆಸಿದ್ದಾರೆ. ಗಾಡಿಯಲ್ಲಿದ್ದ ಕಬ್ಬನ್ನು ಎಳೆದು ಹಾಕಿ ಗಾಡಿಯನ್ನು ದ್ವಂಸ ಮಾಡಲು ಯತ್ನಿಸಿದ್ದಾರೆ. ನನ್ನ ಹೊಟ್ಟೆ ಮೇಲೆ ಯಾಕೆ ಹೊಡೆಯುತ್ತೀರಿ ಎಂದು ಕೇಳಿದೆ. ಆಗ ಸುನಿಲ್, ರಾಜೇಗೌಡ, ಅವರ ಸಂಬಂಧಿಕರು, ಸ್ನೇಹಿತರು ಹಾಗೂ ಸೈಯದ್‌‌ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಅದೇ ರಸ್ತೆಯಲ್ಲಿ ಹೋಗುತ್ತಿದ್ದ ರುದ್ರಪಟ್ಟಣದ ಮಲ್ಲೇಶ್‌, ಜಾವಿದ್ ಪಾಷಾ ನಮ್ಮನ್ನು ಬಿಡಿಸಿಕೊಳ್ಳಲು ಯತ್ನಿಸಿದರು. ಆಗ ನಾನು ಮತ್ತು ನನ್ನ ಮಗ ಪ್ರಾಣಾಪಾಯದಿಂದ ಓಡಿಬಂದೆವು. ಅಲ್ಲೇ ಇದ್ದ ಮಹೇಶ್ ಎಂಬವರು ಮೊಬೈಲ್‌ನಲ್ಲಿ ಘಟನೆಯನ್ನು ಸೆರೆ ಹಿಡಿದಿದ್ದಾರೆ. ವಿಡಿಯೊ ಮಾಡದಂತೆ ಎಚ್ಚರಿಕೆ ನೀಡುತ್ತಾ ಮಹೇಶ್‌ ಮೇಲೂ ಸುನಿಲ್‌ನ ಸ್ನೇಹಿತನೊಬ್ಬ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಮಹೇಶ್ ಅಲ್ಲಿಂದ ಓಡಿ ಹೋದರು. ಘಟನೆಯ ಬಳಿಕ ಕೊಣನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೇವೆ” ಎಂದು ಚಂದ್ರ ತಿಳಿಸಿದ್ದಾರೆ.

“ಸವರ್ಣೀಯ ಸಮುದಾಯದಿಂದ ನಮಗೆ ಪ್ರಾಣಾಪಾಯ ಉಂಟಾಗಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು” ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ಎಫ್‌ಐಆರ್‌ ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಂದು ವತ್ತು ಊಟ ತಿನ್ನೋಕೆ ಯೋಗ್ಯ್ತೆ ಇಲ್ದೆ ಹೋದ್ರು ನೀವು ಜಾತಿ ಅನ್ನೋದನ್ನ ಬಿಡ್ಬೇಡ. ಯಲ್ಲಿವರ್ಗು ಜಾತಿ ಜಾತಿ ಅನ್ನೋ ತಾರತಮ್ಯ ನಿಮ್ಮ ಮನಸಲ್ಲಿ ಇರುತೋ ಅಲ್ಲಿ ವರ್ಗು ನೀವು ನಮ್ಮ ಭಾರತೀಯ ಪ್ರಜೆಗಳಾಗಲು ಅಯೋಗ್ಯ ನಾಗಿರುವಿರಿ.

  2. ಸವರಣೀಯರ ಜೊತೆ ಸೇರಿ ಸಾಬ್ರು ಯಾಕ್ರೀ ದಲಿತರ ಮೇಲೆ ಹಲ್ಲೆ ಮಾಡಬೇಕು? ಆ ಸಾಬರಿಗೆ ಪೊಲೀಸರು ಬುದ್ಧಿ ಕಲಿಸಬೇಕು.

  3. Jati jati anta badkolo janakke yak bytira jati na srusti madiro bolimaklu ge keli sarkara ke duddu beku meesalati hesralli looti madoke bere daari sikkideyalla adakke janaranna melu keelu anno gumpu madi tamase nodtare sarkara nadso ru modlu samanate tarbeku yav mantrigalu bandru aste nam desa uddara agodilla

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...