Homeಮುಖಪುಟಭಾರತದಲ್ಲಿ ವೈದ್ಯಕೀಯ ಅಧ್ಯಯನ ಮಾಡಿ, ಸಣ್ಣ ವಿದೇಶಿ ರಾಷ್ಟ್ರಗಳಲ್ಲ: ಪ್ರಧಾನಿ ಮೋದಿ

ಭಾರತದಲ್ಲಿ ವೈದ್ಯಕೀಯ ಅಧ್ಯಯನ ಮಾಡಿ, ಸಣ್ಣ ವಿದೇಶಿ ರಾಷ್ಟ್ರಗಳಲ್ಲ: ಪ್ರಧಾನಿ ಮೋದಿ

- Advertisement -
- Advertisement -

ಭಾಷೆಯ ಅಡೆತಡೆಯ ನಡುವೆಯೂ ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕಾಗಿ ಅನೇಕ ಸಣ್ಣ ದೇಶಗಳಿಗೆ ತೆರಳುತ್ತಿದ್ದಾರೆ ಎಂದು ಹೇಳಿರುವ ಪ್ರಧಾನಿ ಮೋದಿ, ಖಾಸಗಿ ವಲಯವು ಈ ಕ್ಷೇತ್ರದಲ್ಲಿ ದೊಡ್ಡ ಅಸ್ತಿತ್ವವನ್ನು ಸಾಧಿಸುವಂತೆ ಶನಿವಾರ ಒತ್ತಾಯಿಸಿದ್ದಾರೆ.

ಆರೋಗ್ಯ ಕ್ಷೇತ್ರದ ಕುರಿತು ಒಕ್ಕೂಟ ಸರ್ಕಾರದ ಬಜೆಟ್ ಘೋಷಣೆಗಳ ಕುರಿತು ವೆಬ್‌ನಾರ್‌ನಲ್ಲಿ ಮಾತನಾಡಿದ ಮೋದಿ, “ವೈದ್ಯಕೀಯ ಶಿಕ್ಷಣಕ್ಕೆ ಭೂಮಿ ಹಂಚಿಕೆಗಾಗಿ ರಾಜ್ಯ ಸರ್ಕಾರಗಳು ‘ಉತ್ತಮ ನೀತಿಗಳನ್ನು’ ರೂಪಿಸಬೇಕು, ಇದರಿಂದ ಭಾರತವು ಜಾಗತಿಕ ಬೇಡಿಕೆಯನ್ನು ಪೂರೈಸಲು ಹೆಚ್ಚಿನ ಸಂಖ್ಯೆಯ ವೈದ್ಯರು ಮತ್ತು ಅರೆವೈದ್ಯರನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ” ಎಂದು ಸಲಹೆ ನೀಡಿದ್ದಾರೆ.

ಭಾರತದ ಭಾರಿ ಸಂಖ್ಯೆಯ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವವರು ರಷ್ಯಾ ನಡೆಸುತ್ತಿರುವ ದಾಳಿಯಿಂದಾಗಿ ಉಕ್ರೇನ್‌‌ನಲ್ಲಿ ಸಿಲುಕಿಕೊಂಡಿದ್ದಾರೆ. ಈ ಸಮಯದಲ್ಲಿ ಪ್ರಧಾನಿಯ ಈ ಹೇಳಿಕೆಗಳು ಬಹಳ ಪ್ರಾಮುಖ್ಯತೆ ಪಡೆದಿವೆ. ಆದರೆ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಎರಡು ದೇಶಗಳ ನಡುವೆ ನಡೆಯುತ್ತಿವ ಬಿಕ್ಕಟ್ಟಿನ ಬಗ್ಗೆ ನೇರವಾಗಿ ಪ್ರಸ್ತಾಪಿಸಲಿಲ್ಲ.

ಭಾರತೀಯ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ವೈದ್ಯಕೀಯ ಶಿಕ್ಷಣದ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುತ್ತಿದ್ದಾರೆ, ಇದರಿಂದಾಗಿ ನೂರಾರು ಶತಕೋಟಿ ರೂಪಾಯಿಗಳು ದೇಶದಿಂದ ಹೊರದೇಶಕ್ಕೆ ಹರಿಯುತ್ತಿವೆ ಎಂದು ಪ್ರಧಾನಿ ಹೇಳಿದ್ದಾರೆ.

“ಇಂದು ನಮ್ಮ ಮಕ್ಕಳು ಅಧ್ಯಯನಕ್ಕಾಗಿ ವಿಶೇಷವಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಸಣ್ಣ ದೇಶಗಳಿಗೆ ಹೋಗುತ್ತಿದ್ದಾರೆ. ಅಲ್ಲಿ ಭಾಷೆಯ ಸಮಸ್ಯೆ ಇದ್ದರೂ, ಅಲ್ಲಿಗೆ ಹೋಗುತ್ತಿದ್ದಾರೆ… ನಮ್ಮ ದೇಶದ ಖಾಸಗಿ ಕ್ಷೇತ್ರವು ಈ ಕ್ಷೇತ್ರವನ್ನು ದೊಡ್ಡ ರೀತಿಯಲ್ಲಿ ಪ್ರವೇಶಿಸಲು ಸಾಧ್ಯವಿಲ್ಲವೇ? ನಮ್ಮ ರಾಜ್ಯ ಸರ್ಕಾರಗಳು ಈ ಬಗ್ಗೆ ಭೂ ಮಂಜೂರಾತಿಗೆ ಒಳ್ಳೆಯ ನೀತಿಯನ್ನು ರೂಪಿಸುವುದಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಕಳೆದ ಹಲವು ದಶಕಗಳಲ್ಲಿ ಭಾರತೀಯ ವೈದ್ಯರು ತಮ್ಮ ಕೆಲಸದಿಂದ ವಿಶ್ವದಾದ್ಯಂತ ದೇಶದ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜನರಿಗೆ ಗುಣಮಟ್ಟದ ಆರೋಗ್ಯ ಮತ್ತು ಕ್ಷೇಮ ಸೇವೆಗಳನ್ನು ಒದಗಿಸಲು ತನ್ನ ಸರ್ಕಾರ ಪ್ರಯತ್ನ ಮಾಡಿದೆ ಎಂದು ಮೋದಿ ಹೇಲಿದ್ದಾರೆ.

ಸರ್ಕಾರವು ‘ಒಂದು ಭಾರತ ಒಂದು ಆರೋಗ್ಯ’ ಎಂಬ ಮನೋಭಾವದಿಂದ ಕೆಲಸ ಮಾಡುತ್ತಿದೆ, ಇದರಿಂದ ದೂರದ ಸ್ಥಳಗಳಲ್ಲಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗುತ್ತಿದೆ. ಗುಣಮಟ್ಟದ ಆರೋಗ್ಯ ಸೌಲಭ್ಯವು ದೊಡ್ಡ ನಗರಗಳಿಗೆ ಮಾತ್ರ ಸೀಮಿತವಾಗಬಾರದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮಾನ್ಯ ಪ್ರಧಾನೀಯವರೇ ಭಾರತದಲ್ಲಿ ಒಂದು ವರ್ಷಕ್ಕೆ ಕಟ್ಟಲಾಗುವ ಫೀಸಿನಲ್ಲಿ ಸಣ್ಣಪುಟ್ಟ ರಾಷ್ಟ್ರಗಳಿಗೆ ಹೋದರೆ ವೈದ್ಯಕೀಯ ಶಿಕ್ಷಣವೇ ಮುಗಿಸಿ ಬರಬಹುದು

  2. ಈವಯ್ಯನಿಗೆ ವೈದ್ಯಕೀಯ ವಿಧ್ಯಾರ್ಥಿಗಳು ಸಣ್ಣ ಸಣ್ಣ ದೇಶಕ್ಕೆ ಹೋಗ್ತಾರೆ ಅಂತಾ ಇನ್ನೂ ತಿಳಿದಿಲ್ಲಾ… ಇಲ್ಲಿ ಸರಕಾರಿ ಸೀಟುಗಳಿರೋದು ಬರೀ‌ ೨೦೫೫. ಮತ್ತು ಖಾಸಗೀ ಕಾಲೆಜುಗಳದು ೩೦೦೦ ಸೀಟುಗಳು.. ಖಾಸಗೀ ಕಾಲೆಝುಗಳಲ್ಲಿ ವರುಷಕ್ಕೆ ಫ಼ೀಸು ೧೫೦೦೦೦೦. ಇದನ್ನ ತುಂಬಲು ಆಗದೆ ಸಣ್ಣ ಸಣ್ಣ ದೇಶಗಳಿಗೆ ಕಲಿಲಿಕ್ಕೆ ಹೋಗ್ತಾರೆ ಈ ಚಿಕ್ಕ ವಿಷಯ ಈವಯ್ಯನಿಗೆ ಗೊತ್ತಾಗದೇ ಮತ್ತೆ ಖಾಸಗಿ ಕ್ಷೇತ್ರಗಳಿಗೆ ಕಾಲೇಕಾಲೇ ಉ ತೆರೆಯಲು ಹೇಳ್ತಾ ಇದ್ದರೆ ಯಾಕೊ ಇವರಿಗೆ ಖಾಸಗಿ ಕ್ಷೇತ್ರಗಳ ಮೇಲೆ ಬಾಳ‌ ಪ್ರೀತಿ ಇದ್ದಂಗೈತೆ.

    ಯಾಕೆ ಇವರೇ ಅಂದ್ರೆ ಸರಕಾರದವರೇ ವೈದ್ಯಕೀಯ ಶಿಕ್ಷಣ ಕಾಲೇಜುಗಳನ್ನ ಪ್ರಾರಂಭಿಸಬಾರದು..?

  3. ಮೋದಿ ಜಿ ಯವರ ಅಜಂಡವೇ ಭಾರತದಲ್ಲಿ ಎಲ್ಲವನ್ನು ಖಾಸಗೀಕರಣ ಮಾಡುವುದು ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...