Homeಮುಖಪುಟಭಾರತದಲ್ಲಿ ವೈದ್ಯಕೀಯ ಅಧ್ಯಯನ ಮಾಡಿ, ಸಣ್ಣ ವಿದೇಶಿ ರಾಷ್ಟ್ರಗಳಲ್ಲ: ಪ್ರಧಾನಿ ಮೋದಿ

ಭಾರತದಲ್ಲಿ ವೈದ್ಯಕೀಯ ಅಧ್ಯಯನ ಮಾಡಿ, ಸಣ್ಣ ವಿದೇಶಿ ರಾಷ್ಟ್ರಗಳಲ್ಲ: ಪ್ರಧಾನಿ ಮೋದಿ

- Advertisement -
- Advertisement -

ಭಾಷೆಯ ಅಡೆತಡೆಯ ನಡುವೆಯೂ ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕಾಗಿ ಅನೇಕ ಸಣ್ಣ ದೇಶಗಳಿಗೆ ತೆರಳುತ್ತಿದ್ದಾರೆ ಎಂದು ಹೇಳಿರುವ ಪ್ರಧಾನಿ ಮೋದಿ, ಖಾಸಗಿ ವಲಯವು ಈ ಕ್ಷೇತ್ರದಲ್ಲಿ ದೊಡ್ಡ ಅಸ್ತಿತ್ವವನ್ನು ಸಾಧಿಸುವಂತೆ ಶನಿವಾರ ಒತ್ತಾಯಿಸಿದ್ದಾರೆ.

ಆರೋಗ್ಯ ಕ್ಷೇತ್ರದ ಕುರಿತು ಒಕ್ಕೂಟ ಸರ್ಕಾರದ ಬಜೆಟ್ ಘೋಷಣೆಗಳ ಕುರಿತು ವೆಬ್‌ನಾರ್‌ನಲ್ಲಿ ಮಾತನಾಡಿದ ಮೋದಿ, “ವೈದ್ಯಕೀಯ ಶಿಕ್ಷಣಕ್ಕೆ ಭೂಮಿ ಹಂಚಿಕೆಗಾಗಿ ರಾಜ್ಯ ಸರ್ಕಾರಗಳು ‘ಉತ್ತಮ ನೀತಿಗಳನ್ನು’ ರೂಪಿಸಬೇಕು, ಇದರಿಂದ ಭಾರತವು ಜಾಗತಿಕ ಬೇಡಿಕೆಯನ್ನು ಪೂರೈಸಲು ಹೆಚ್ಚಿನ ಸಂಖ್ಯೆಯ ವೈದ್ಯರು ಮತ್ತು ಅರೆವೈದ್ಯರನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ” ಎಂದು ಸಲಹೆ ನೀಡಿದ್ದಾರೆ.

ಭಾರತದ ಭಾರಿ ಸಂಖ್ಯೆಯ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವವರು ರಷ್ಯಾ ನಡೆಸುತ್ತಿರುವ ದಾಳಿಯಿಂದಾಗಿ ಉಕ್ರೇನ್‌‌ನಲ್ಲಿ ಸಿಲುಕಿಕೊಂಡಿದ್ದಾರೆ. ಈ ಸಮಯದಲ್ಲಿ ಪ್ರಧಾನಿಯ ಈ ಹೇಳಿಕೆಗಳು ಬಹಳ ಪ್ರಾಮುಖ್ಯತೆ ಪಡೆದಿವೆ. ಆದರೆ ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಎರಡು ದೇಶಗಳ ನಡುವೆ ನಡೆಯುತ್ತಿವ ಬಿಕ್ಕಟ್ಟಿನ ಬಗ್ಗೆ ನೇರವಾಗಿ ಪ್ರಸ್ತಾಪಿಸಲಿಲ್ಲ.

ಭಾರತೀಯ ವಿದ್ಯಾರ್ಥಿಗಳು, ಅದರಲ್ಲೂ ವಿಶೇಷವಾಗಿ ವೈದ್ಯಕೀಯ ಶಿಕ್ಷಣದ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗುತ್ತಿದ್ದಾರೆ, ಇದರಿಂದಾಗಿ ನೂರಾರು ಶತಕೋಟಿ ರೂಪಾಯಿಗಳು ದೇಶದಿಂದ ಹೊರದೇಶಕ್ಕೆ ಹರಿಯುತ್ತಿವೆ ಎಂದು ಪ್ರಧಾನಿ ಹೇಳಿದ್ದಾರೆ.

“ಇಂದು ನಮ್ಮ ಮಕ್ಕಳು ಅಧ್ಯಯನಕ್ಕಾಗಿ ವಿಶೇಷವಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಸಣ್ಣ ದೇಶಗಳಿಗೆ ಹೋಗುತ್ತಿದ್ದಾರೆ. ಅಲ್ಲಿ ಭಾಷೆಯ ಸಮಸ್ಯೆ ಇದ್ದರೂ, ಅಲ್ಲಿಗೆ ಹೋಗುತ್ತಿದ್ದಾರೆ… ನಮ್ಮ ದೇಶದ ಖಾಸಗಿ ಕ್ಷೇತ್ರವು ಈ ಕ್ಷೇತ್ರವನ್ನು ದೊಡ್ಡ ರೀತಿಯಲ್ಲಿ ಪ್ರವೇಶಿಸಲು ಸಾಧ್ಯವಿಲ್ಲವೇ? ನಮ್ಮ ರಾಜ್ಯ ಸರ್ಕಾರಗಳು ಈ ಬಗ್ಗೆ ಭೂ ಮಂಜೂರಾತಿಗೆ ಒಳ್ಳೆಯ ನೀತಿಯನ್ನು ರೂಪಿಸುವುದಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಕಳೆದ ಹಲವು ದಶಕಗಳಲ್ಲಿ ಭಾರತೀಯ ವೈದ್ಯರು ತಮ್ಮ ಕೆಲಸದಿಂದ ವಿಶ್ವದಾದ್ಯಂತ ದೇಶದ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜನರಿಗೆ ಗುಣಮಟ್ಟದ ಆರೋಗ್ಯ ಮತ್ತು ಕ್ಷೇಮ ಸೇವೆಗಳನ್ನು ಒದಗಿಸಲು ತನ್ನ ಸರ್ಕಾರ ಪ್ರಯತ್ನ ಮಾಡಿದೆ ಎಂದು ಮೋದಿ ಹೇಲಿದ್ದಾರೆ.

ಸರ್ಕಾರವು ‘ಒಂದು ಭಾರತ ಒಂದು ಆರೋಗ್ಯ’ ಎಂಬ ಮನೋಭಾವದಿಂದ ಕೆಲಸ ಮಾಡುತ್ತಿದೆ, ಇದರಿಂದ ದೂರದ ಸ್ಥಳಗಳಲ್ಲಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗುತ್ತಿದೆ. ಗುಣಮಟ್ಟದ ಆರೋಗ್ಯ ಸೌಲಭ್ಯವು ದೊಡ್ಡ ನಗರಗಳಿಗೆ ಮಾತ್ರ ಸೀಮಿತವಾಗಬಾರದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಮಾನ್ಯ ಪ್ರಧಾನೀಯವರೇ ಭಾರತದಲ್ಲಿ ಒಂದು ವರ್ಷಕ್ಕೆ ಕಟ್ಟಲಾಗುವ ಫೀಸಿನಲ್ಲಿ ಸಣ್ಣಪುಟ್ಟ ರಾಷ್ಟ್ರಗಳಿಗೆ ಹೋದರೆ ವೈದ್ಯಕೀಯ ಶಿಕ್ಷಣವೇ ಮುಗಿಸಿ ಬರಬಹುದು

  2. ಈವಯ್ಯನಿಗೆ ವೈದ್ಯಕೀಯ ವಿಧ್ಯಾರ್ಥಿಗಳು ಸಣ್ಣ ಸಣ್ಣ ದೇಶಕ್ಕೆ ಹೋಗ್ತಾರೆ ಅಂತಾ ಇನ್ನೂ ತಿಳಿದಿಲ್ಲಾ… ಇಲ್ಲಿ ಸರಕಾರಿ ಸೀಟುಗಳಿರೋದು ಬರೀ‌ ೨೦೫೫. ಮತ್ತು ಖಾಸಗೀ ಕಾಲೆಜುಗಳದು ೩೦೦೦ ಸೀಟುಗಳು.. ಖಾಸಗೀ ಕಾಲೆಝುಗಳಲ್ಲಿ ವರುಷಕ್ಕೆ ಫ಼ೀಸು ೧೫೦೦೦೦೦. ಇದನ್ನ ತುಂಬಲು ಆಗದೆ ಸಣ್ಣ ಸಣ್ಣ ದೇಶಗಳಿಗೆ ಕಲಿಲಿಕ್ಕೆ ಹೋಗ್ತಾರೆ ಈ ಚಿಕ್ಕ ವಿಷಯ ಈವಯ್ಯನಿಗೆ ಗೊತ್ತಾಗದೇ ಮತ್ತೆ ಖಾಸಗಿ ಕ್ಷೇತ್ರಗಳಿಗೆ ಕಾಲೇಕಾಲೇ ಉ ತೆರೆಯಲು ಹೇಳ್ತಾ ಇದ್ದರೆ ಯಾಕೊ ಇವರಿಗೆ ಖಾಸಗಿ ಕ್ಷೇತ್ರಗಳ ಮೇಲೆ ಬಾಳ‌ ಪ್ರೀತಿ ಇದ್ದಂಗೈತೆ.

    ಯಾಕೆ ಇವರೇ ಅಂದ್ರೆ ಸರಕಾರದವರೇ ವೈದ್ಯಕೀಯ ಶಿಕ್ಷಣ ಕಾಲೇಜುಗಳನ್ನ ಪ್ರಾರಂಭಿಸಬಾರದು..?

  3. ಮೋದಿ ಜಿ ಯವರ ಅಜಂಡವೇ ಭಾರತದಲ್ಲಿ ಎಲ್ಲವನ್ನು ಖಾಸಗೀಕರಣ ಮಾಡುವುದು ಅಲ್ಲವೇ?

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...