Homeಕರ್ನಾಟಕಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ಮಹಿಳೆ, ವಿದ್ಯಾರ್ಥಿ ಮತ್ತು ಟ್ರಾನ್ಸ್‌ಜೆಂಡರ್‌ಗಳಿಗೆ BMTC ಬಸ್ ಪ್ರಯಾಣ ಉಚಿತಗೊಳಿಸುವಂತೆ ಒತ್ತಾಯಿಸಿ ಸಹಿ ಸಂಗ್ರಹ

ದೇಶದ ಹಲವು ನಗರಗಳು ಉಚಿತ ಪ್ರಯಾಣವನ್ನು ಘೋಷಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಪ್ರಯಾಣವು ಉಚಿತ ಮಾಡಬೇಕು ಎಂದು ಅರ್ಜಿ ಒತ್ತಾಯಿಸಿದೆ

- Advertisement -
- Advertisement -

ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ಲೈಂಗಿಕ ಅಲ್ಪಸಂಖ್ಯಾತರಿಗೆ ಮತ್ತು ಹಿರಿಯ ನಾಗರಿಕರಿಗೆ ಬಿಎಂಟಿಸಿ ಬಸ್‌ಗಳ ಪ್ರಯಾಣ ಉಚಿತಗೊಳಿಸುವುದರೊಂದಿಗೆ, ಉಳಿದ ನಾಗರಿಕರಿಗೆ ಬಸ್ ದರಗಳನ್ನು ಕಡಿಮೆಗೊಳಿಸಲು ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ವಾರ್ಷಿಕವಾಗಿ ​1000 ಕೋಟಿ ರೂ​. ಹಂಚಿಕೆ ಮಾಡುವಂತೆ ಒತ್ತಾಯಿಸಿ ‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯು ಸಹಿ ಸಂಗ್ರಹ ಮಾಡುತ್ತಿದೆ. (ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ)

‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯ ಅರ್ಜಿ ಚೇಂಜ್‌.ಆರ್ಗ್‌ನಲ್ಲಿ ಇದ್ದು, “ಬಸ್ ಟಿಕೆಟ್ ದರಗಳನ್ನು ಮಹತ್ತರವಾದ ಪ್ರಮಾಣದಲ್ಲಿ ಇಳಿಕೆ ಮಾಡಿದರೆ ಸಾಮಾನ್ಯ ಜನರಿಗೆ ಬಹಳ ಅನುಕೂಲವಾಗುತ್ತದೆ. ಆರ್ಥಿಕ ಅವಕಾಶಗಳನ್ನು ಪಡೆದುಕೊಳ್ಳಲು ನೆರವಾಗಿ ಜೀವನ ಸುಧಾರಿಸುತ್ತದೆ. ಮಹಿಳೆಯರಿಗೆ, ಟ್ರಾನ್ಸ್ ಜೆಂಡರ್ ಸಮುದಾಯದವರಿಗೆ, ಹಿರಿಯ ನಾಗರಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಸ್ ಪ್ರಯಾಣವನ್ನು ಉಚಿತಗೊಳಿಸುವುದರಿಂದ ಹೆಚ್ಚಿನ ಓಡಾಡುವ ಶಕ್ತಿ ಲಭಿಸುತ್ತದೆ” ಎಂದು ಅರ್ಜಿ ಹೇಳಿದೆ.

ಇದನ್ನೂ ಓದಿ: ವಿದ್ಯಾರ್ಥಿನಿಯನ್ನು ರಾತ್ರಿ ವೇಳೆ ಬಸ್‌ನಿಂದ ಕೆಳಗಿಳಿಸಿದ ಬಿಎಂಟಿಸಿ ಕಂಡಕ್ಟರ್‌‌: ದೂರು, ಪ್ರತಿದೂರು ದಾಖಲು 

“ಕರ್ನಾಟಕ ಸರ್ಕಾರ 2022-23ರ ಆಯವ್ಯಯದಲ್ಲಿ ಬಿಎಂಟಿಸಿಗೆ, ಬಸ್ ಟಿಕೆಟ್ ದರಗಳನ್ನು ಕಡಿಮೆಗೊಳಿಸಲು ಹಾಗೂ ಮಹಿಳೆಯರಿಗೆ ಬಸ್ ಪ್ರಯಾಣವನ್ನು ಉಚಿತವಾಗಿ ಲಭ್ಯಗೊಳಿಸಲು ಹಣವನ್ನು ಹಂಚಿಕೆ ಮಾಡಬೇಕು” ಎಂದು ಅರ್ಜಿ ಒತ್ತಾಯಿಸಿದೆ.

ದೇಶದ ಇತರ ನಗರಗಳಲ್ಲೂ ಬಸ್‌ಗಳ ದರಗಳು ಕಡಿಮೆಯಿದ್ದು, ಮಹಿಳೆಯರಿಗೆ ಅಲ್ಲಿನ ಸರ್ಕಾರ ಉಚಿತ ಪ್ರಯಾಣ ಘೋಷಿಸಿದೆ ಎಂದು ಅರ್ಜಿ ಉಲ್ಲೇಖಿಸಿದ್ದು, ಬೃಹತ್ ಶ್ರೀಮಂತಿಕೆ ಇರುವಂತಹ ಬೆಂಗಳೂರು ನಗರದಲ್ಲಿ ಕೂಡಾ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಮಾಡಕೊಡಬೇಕು ಎಂದು ಒತ್ತಾಯಿಸಿದೆ.

ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಬಿಎಂಟಿಸಿ ಬಸ್ಸುಗಳು ಬೆಂಗಳೂರು ನಗರದ ಜೀವನಾಡಿಯಾಗಿದೆ. ಆದರೆ ಬಿಎಂಟಿಸಿ ಬಸ್ ಟಿಕೆಟ್ ದರಗಳು ಭಾರತದ ಇತರೆ ಯಾವುದೇ ನಗರಗಳಲ್ಲಿರುವ ಬಸ್ ಟಿಕೆಟ್ ದರಗಳಿಂತಲೂ ಅತ್ಯಂತ ದುಬಾರಿಯಾಗಿದೆ ಎಂದು ಹೇಳಿರುವ ಅರ್ಜಿ ಹೇಳಿದೆ.

ಇದನ್ನೂ ಓದಿ:ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ 

“ಬಿಎಂಟಿಸಿ ಬಸ್ಸುಗಳು ಈ ಅತ್ಯಂತ ದುಬಾರಿ ಟಿಕೆಟ್ ದರಗಳು ಈಗಾಗಲೇ ಕಡಿಮೆಯಾಗಿರುವ ನಗರಬಡವರ ಆದಾಯಕ್ಕೆ ಕೊಳ್ಳಿ ಇಟ್ಟಿದೆ. ಅನೇಕ ಜನರು ಸಾರಿಗೆವೆಚ್ಚಗಳನ್ನು ಉಳಿಸುವುದಕ್ಕಾಗಿ ದೂರದವರೆಗೂ ನಡೆದುಕೊಂಡೇ ಹೋಗುವಂತಾಗಿದೆ. ಇಡೀ ಕುಟುಂಬದ ಸದಸ್ಯರು ಸಾರಿಗೆ ವೆಚ್ಚಗಳನ್ನುಭರಿಸುವುದು ಸಾಧ್ಯವಾಗದೇ ಇರುವ ಕಾರಣದಿಂದಾಗಿ ಆರೋಗ್ಯ ಅಥವಾ ತಮ್ಮ ಮಕ್ಕಳ ಪೌಷ್ಠಿಕತೆ ಹಾಗೂ ಶಿಕ್ಷಣದಂತಹ ಇತರೆ ವೆಚ್ಚಗಳನ್ನು ಅನಿವಾರ್ಯವಾಗಿ ಕಡಿತಗೊಳಿಸಬೇಕಾಗುತ್ತಿದೆ” ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಅರ್ಜಿಯು, “ಬಿಎಂಟಿಸಿ ಬಸ್ ಟಿಕೆಟ್ ದರಗಳನ್ನು ಸಾಮಾನ್ಯ ಜನರಿಗೆ ಅರ್ಧದಷ್ಟು ಕಡಿಮೆಗೊಳಿಸಬೇಕು.
ಮಹಿಳೆಯರು, ಮಂಗಳಮುಖಿಯರು ಹಾಗೂ ಹಿರಿಯ ನಾಗರಿಕರಿಗೆ ಬಿಎಂಟಿಸಿ ಪ್ರಯಾಣವನ್ನು ಉಚಿತಗೊಳಿಸಬೇಕು. ವಿದ್ಯಾರ್ಥಿ ಬಸ್ ಪಾಸುಗಳನ್ನು ಉಚಿತಗೊಳಿಸಿ; ವಿದ್ಯಾರ್ಥಿಗಳು ಪಾಸ್ ಬಳಸಿ ನಗರದಯಾವುದೇ ಭಾಗಕ್ಕೆ ಬೇಕಾದರೂ ಓಡಾಡುವಂತೆ ಮಾಡಬೇಕು. ಪ್ರಸ್ತುತ ಬಸ್ ಸೇವೆ ಸಮರ್ಪಕವಾಗಿ ಇಲ್ಲದಿರುವಂತಹ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಬಸ್‌ಗಳನ್ನು ಬಿಡುವುದು ಹಾಗೂ ಟ್ರಿಪ್‌ಗಳನ್ನು ಹೆಚ್ಚಿಸಬೇಕು” ಎಂದು ಒತ್ತಾಯಿಸಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ‘ಬೆಂಗಳೂರು ಬಸ್‌ ಪ್ರಯಾಣಿಕರ ವೇದಿಕೆ’ಯ ಸಂಚಾಲಕರಾದ ಅಮೃತರಾಜ್, “ನಮ್ಮ ಸಹಿ ಸಂಗ್ರಹಕ್ಕೆ ಉತ್ತಮವಾದ ಬೆಂಬಲ ಸಿಗುತ್ತಿದೆ. ಸುಮಾರು 20 ಸಾವಿರ ಸಹಿ ಸಂಗ್ರಹ ಮಾಡುವ ಉದ್ದೇಶವಿದೆ. ಜನರ ಸಹಿಯನ್ನು ಸಂಗ್ರಹಿಸಿ ಇನ್ನು ಎರಡು ದಿನಗಳ ನಂತರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇವೆ” ಎಂದು ಹೇಳಿದ್ದಾರೆ.

ಅರ್ಜಿಗೆ ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ವೇತನ ಪಾವತಿ ವಿಳಂಬ ವಿರೋಧಿಸಿ ಬಿಎಂಟಿಸಿ ಉದ್ಯೋಗಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...