Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

- Advertisement -
- Advertisement -

ಯುದ್ಧ ಪೀಡಿತ ಉಕ್ರೇನ್‌ನಲ್ಲಿ ‘ಇಸ್ಕಾನ್‌’ ವತಿಯಿಂದ ಜನರಿಗೆ ಆಹಾರ ಒದಗಿಸಲಾಗುತ್ತಿದೆ ಎಂದು ಪ್ರತಿಪಾದಿಸಿ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಚಿತ್ರದೊಂದಿಗೆ ವೈರಲ್ ಆಗಿರುವ ಬರಹವು ಕೋಮುದ್ವೇಷ ಬಿತ್ತುತ್ತಿದ್ದು, ಹಿಂದೂ ಮತವನ್ನು ಬಿಟ್ಟು ಉಳಿದ ಧರ್ಮಗಳು ಸಹಾಯ ಮಾಡುವ ನೆಪದಲ್ಲಿ ಆಮಿಷ ಒಡ್ಡುತ್ತದೆ ಎಂಬ ಅರ್ಥದಲ್ಲಿ ಈ ಬರಹವನ್ನು ಬರೆಯಲಾಗಿದೆ.

ವೈರಲ್‌ ಚಿತ್ರದ ಜೊತೆಗೆ, “ಉಕ್ರೇನ್‌ನಲ್ಲಿ ಸುಮಾರು 54 ಇಸ್ಕಾನ್ ದೇವಾಲಯಗಳಿಂದ ಹಸಿದವರಿಗೆ ಅನ್ನ ನೀಡಲಾಗುತ್ತಿದ್ದು, ಅಲ್ಲಿ ಅನ್ನ ನೀಡುವ ಮೊದಲು ಅನ್ಯ ಧರ್ಮಿಯರಿಗೆ ನೀವು ನಮ್ಮ ಮತಕ್ಕೆ ಬನ್ನಿ ಎಂದು ಯಾರೂ ಒತ್ತಾಯ ಮಾಡುತ್ತಿಲ್ಲ. ಇದುವೆ ನನ್ನ ಹೆಮ್ಮೆಯ ಸನಾತನ ಮತ” ಎಂಬ ಇತರ ಧರ್ಮಗಳನ್ನು ಕೀಳಾಗಿ ಬಿಂಬಿಸುವ ಬರಹಗಳನ್ನೂ ವೈರಲ್‌ ಮಾಡಲಾಗುತ್ತಿದೆ.

ಡಮರುಗ ಎಂಬ ಬಿಜೆಪಿ ಬೆಂಬಲಿಗ ಪೇಜ್‌ ಒಂದು ಈ ರೀತಿಯ ಪೋಸ್ಟ್‌ ಅನ್ನು ರಚಿಸಿ ಹಂಚಿಕೊಂಡಿದೆ. ಇದೇ ಪ್ರತಿಪಾದನೆಯಿಂದಿಗೆ ಸಾಮಾಜಿಕ ಮಾಧ್ಯಮಗಳು ಹಲವಾರು ಬಳಕೆದಾರರು ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬದಲಾಯಿಸು ಎಂದು

ಕನ್ನಡದ ಸುದ್ದಿ ಮಾಧ್ಯಮ ಬಿಟಿವಿ ಕೂಡಾ ಇದೇ ಚಿತ್ರವನ್ನು ಬಳಸಿ ಸುದ್ದಿಯೊಂದನ್ನು ವರದಿಯೊಂದನ್ನು ಮಾಡಿದೆ. ಈ ಸುದ್ದಿಯಲ್ಲಿ ಬಿಟಿವಿ, “ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದ್ದು, ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸುತ್ತಿರುವ ಉಕ್ರೇನ್​ ಜನರಿಗೆ ಇಸ್ಕಾನ್ ಸೇವೆ ಸಲ್ಲಿಸುತ್ತಿದೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಉಕ್ರೇನ್​ ಜನರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಸದ್ಯ ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಮೆಚ್ಚುಗೆಯ ಮಹಾಪೂರವೇ ಹರಿಸುತ್ತಿದ್ದಾರೆ” ಎಂದು ಎರಡು ಚಿತ್ರಗಳನ್ನು ಬಳಸಿಕೊಂಡಿದೆ.

ಆರ್ಕೈವ್ ಲಿಂಕ್‌ ಇಲ್ಲಿ ಕ್ಲಿಕ್‌ ಮಾಡಿ

ಫ್ಯಾಕ್ಟ್‌ಚೆಕ್:

ವೈರಲ್ ಫೋಟೊವನ್ನು ನಾನುಗೌರಿ.ಕಾಂ ರಿವರ್ಸ್ ಇಮೇಜ್ ಸರ್ಚ್‌ ಮೂಲಕ ಹುಡುಕಾಡಿದಾಗ ಇಸ್ಕಾನ್ ಸಂಸ್ಥೆಯು ಉಕ್ರೇನ್‌ನಲ್ಲಿ ಆಹಾರ ನೀಡುತ್ತಿದೆ ಎಂದು ವೈರಲ್ ಆದ ಈ ಚಿತ್ರಗಳನ್ನು ಹೋಲುವ ಹಲವು ಫೋಟೊಗಳು ನಮಗೆ ಲಭ್ಯವಾಗಿವೆ.

ಇದರ ಜಾಡನ್ನು ಹಿಡಿದು ನಾನುಗೌರಿ.ಕಾಂ ಮತ್ತಷ್ಟು ಹುಡುಕಾಟ ನಡೆಸಿದಾಗ ಅದು ಇಸ್ಕಾನ್ ಸಂಸ್ಥೆ ತನ್ನ ವೆಬ್ ಸೈಟ್‌ಗಾಗಿ ರೂಪಿಸಿರುವ ಹಳೆಯ ಫೋಟೋ ಎಂದು ಖಚಿತವಾಗಿದೆ.

 

ಸೋಶಿಲ್‌ ಮೀಡಿಯಾದಲ್ಲಿ ವೈರಲ್ ಮಾಡಲಾಗುತ್ತಿರುವ ಫೋಟೊವನ್ನು ಇಸ್ಕಾನ್ ಸಂಸ್ಥೆಯು ತನ್ನ ವೆಬ್‌ಸೈಟ್‌ನಲ್ಲಿ ಈ ಫೋಟೊವನ್ನು ಬಳಸಿ ಡೊನೇಟ್ ಮಾಡಿ ಎಂದು ಹಣದ ಮೊತ್ತವನ್ನು ನಮೂದಿಸಿದೆ. ಅದನ್ನು ಇಲ್ಲಿ ನೋಡಬಹುದು.

ಇಸ್ಕಾನ್ ಸಂಸ್ಥೆಯು 2015ರಲ್ಲಿ ಅಪ್‌ಲೋಡ್ ಮಾಡಿದ ಫೋಟೋವನ್ನು ಬಲಪಂಥೀಯ ಪ್ರತಿಪಾದಕ ಡಮರುಗ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ವೈರಲ್ ಪೋಸ್ಟ್‌ನೊಂದಿಗೆ ಹಂಚಿಕೊಳ್ಳಲಾಗಿದೆ.

ಕೂಡಾ ಕೊಲ್ಕತ್ತಾದ ಇಸ್ಕಾನ್‌ ಉಪಾಧ್ಯಕ್ಷ ರಾಧಾರಮಣ್‌ ದಾಸ್ ಎಂಬವರು, “ಇಸ್ಕಾನ್‌ನಲ್ಲಿ 54 ದೇವಾಲಯಗಳು ಇವೆ. ಎಲ್ಲಾ ದೇವಾಲಯಗಳು ಸೇವೆಗೆ ಸನ್ನದ್ಧವಾಗಿದೆ” ಎಂದು ಬರೆದಿದ್ದರು.

ಅವರ ಈ ಮಾತನ್ನು ತಪ್ಪಾಗಿ ತಿಳಿದಿರುವ ಬಿಟಿವಿ, “ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದ್ದು,  ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸುತ್ತಿರುವ ಉಕ್ರೇನ್​ ಜನರಿಗೆ  ಇಸ್ಕಾನ್ ಸೇವೆ ಸಲ್ಲಿಸುತ್ತಿದೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಉಕ್ರೇನ್​ ಜನರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ” ಎಂದು ಎಲ್ಲಾ ದೇವಾಲಯಗಳು ಸೇವೆ ಮಾಡುತ್ತಿವೆ ಎಂಬ ಅರ್ಥದಲ್ಲಿ ಬರೆದಿದೆ. ಜೊತೆಗೆ ಹಳೆಯ ಚಿತ್ರವನ್ನು ಕೂಡಾ ಇದು ಪೋಸ್ಟ್‌ ಮಾಡಿದೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಇಸ್ಕಾನ್ ಸೇವೆ ಸಲ್ಲಿಸುತ್ತಿವುದು ನಿಜವೇ?

ಈ ಸುದ್ದಿ ಬರೆಯುವ 22 ಗಂಟೆಗಳ ಮುಂಚೆ ಇಸ್ಕಾನ್ ನ್ಯೂಸ್‌, “ಘರ್ಷಣೆಯಿಂದ ನಿರಾಶ್ರಿತರಾದವರಿಗೆ ಭಕ್ತರು ಅನ್ನದಾನ ಮಾಡಲು ಆರಂಭಿಸಿದ್ದೇವೆ. ಉಕ್ರೇನಿಯನ್-ರಷ್ಯನ್ ಸಂಘರ್ಷದಿಂದ ಸ್ಥಳಾಂತರಗೊಂಡವರಿಗೆ ಸಹಾಯ ಮಾಡುವಲ್ಲಿ ‘ಇಸ್ಕಾನ್ ಹಂಗೇರಿ’ ಸಕ್ರಿಯವಾಗಿ ಭಾಗವಹಿಸುತ್ತಿದೆ. ಇಸ್ಕಾನ್ ಹಂಗೇರಿ ಪ್ರಸ್ತುತ ವಾರದ ದಿನಗಳಲ್ಲಿ 600 ಪ್ಲೇಟ್ ಪ್ರಸಾದವನ್ನು ಮತ್ತು ವಾರಾಂತ್ಯದಲ್ಲಿ 1200 ಪ್ಲೇಟ್‌ಗಳನ್ನು ವಿತರಿಸುವ ಸಾಮರ್ಥ್ಯವನ್ನು ಹೊಂದಿದೆ” ಎಂದು ಬರೆದಿದೆ.

ಈ ಮಧ್ಯೆ, ತಪ್ಪಾದ ಚಿತ್ರಗಳು ಮತ್ತು ಉಕ್ರೇನ್‌ನಲ್ಲಿರುವ ಇಸ್ಕಾನ್‌ ಎಲ್ಲಾ ದೇವಸ್ಥಾನಗಳಲ್ಲಿ ಆಶ್ರಯ ನೀಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ, ಸ್ವತಃ ಇಸ್ಕಾನ್‌‌‌ ನ್ಯೂಸ್‌ ಈ ಬಗ್ಗೆ ಸ್ಪಷ್ಟೀಕರಣ ನೀಡಿದೆ.

ಇಸ್ಕಾನ್‌ ನ್ಯೂಸ್‌ ಹೇಳುವಂತೆ, “ಉಕ್ರೇನ್‌ನಲ್ಲಿರುವ ಐವತ್ತಕ್ಕೂ ಹೆಚ್ಚು ಇಸ್ಕಾನ್ ದೇವಾಲಯಗಳು ಮತ್ತು ಕೇಂದ್ರಗಳು ಸಾರ್ವಜನಿಕರಿಗೆ ಆಹಾರ ಪರಿಹಾರ ಮತ್ತು ಆಶ್ರಯವನ್ನು ಒದಗಿಸುತ್ತಿವೆ ಎಂದು ಸಾಮಾಜಿಕ ಮಾಧ್ಯಮ ಮತ್ತು ಇತರ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡುತ್ತಿದೆ. ಈ ಮಾಹಿತಿ ಸುಳ್ಳು” ಎಂದು ಸ್ಪಷ್ಟೀಕರಣ ನೀಡಿದೆ.

ಲಿಂ‌ಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಇಸ್ಕಾನ್‌ ನ್ಯೂಸ್‌‌ ಖಚಿತವಾಗಿ ಹೇಳುವಂತೆ, “ಈ ಸಮಯದಲ್ಲಿ ಉಕ್ರೇನ್‌ನಲ್ಲಿರುವ ನಮ್ಮ ದೇವಾಲಯಗಳಲ್ಲಿ ಆಶ್ರಯ ಅಥವಾ ಆಹಾರ ವಿತರಣೆಯನ್ನು ಒದಗಿಸಲು ISKCON ಗೆ ಸಾಧ್ಯವಾಗುತ್ತಿಲ್ಲ. ಉಕ್ರೇನ್ ಮತ್ತು ಇಡೀ ಪ್ರದೇಶದ ಎಲ್ಲಾ ಜನರಿಗೆ ಶಾಂತಿಗಾಗಿ ನಾವು ಪ್ರಾರ್ಥಿಸುತ್ತೇವೆ” ಎಂದು ಬರೆದಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿರುವ ಚಿತ್ರವೂ ತಪ್ಪಾದ ನಿರೂಪಣೆಯೊಂದಿಗೆ ಹರಿದಾಡುತ್ತಿದೆ. ಈ ಪೋಸ್ಟ್‌ ಇತರ ಧರ್ಮವರನ್ನು ಕೀಳಾಗಿ ಕಾಣಲು ಮಾಡಿರುವ ದ್ವೇಷಪೂರಿತ ಚಿತ್ರವಾಗಿದೆ. ಇಸ್ಕಾನ್ ಸಂಸ್ಥೆಯು 2015ರಲ್ಲಿ ಈ ಚಿತ್ರವನ್ನು ಹಂಚಿಕೊಂಡಿದೆ. ಜೊತೆಗೆ ಬಿಟಿವಿ ವರದಿಯಲ್ಲಿ ತಪ್ಪುಗಳಿದ್ದು, ಅದು ಹಳೆಯ ಚಿತ್ರವನ್ನು ಬಳಸಿದೆ. ಅದರ ವರದಿ ಹೇಳುವಂತೆ ಉಕ್ರೇನ್‌ನಲ್ಲಿರುವ ಎಲ್ಲಾ 54 ದೇವಾಲಯಗಳಲ್ಲಿ ನಿರಾಶ್ರಿತರಿಗೆ ಆಹಾರ ಮತ್ತು ಆಶ್ರಯವನ್ನು ನೀಡಲಾಗುತ್ತಿಲ್ಲ.

ಹಂಗೇರಿಯ ಇಸ್ಕಾನ್‌‌ನ ಕೇವಲ ಒಂದು ದೇವಸ್ಥಾನದ ವತಿಯಿಂದ ಮಾತ್ರ ಆಹಾರ ವಿತರಣೆಯನ್ನು ಹಂಗೇರಿಯ ಏರ್‌ಪೋರ್ಟ್‌ನಲ್ಲಿ ಮಾಡಲಾಗುತ್ತಿದೆ ಎಂದು ಸ್ವತಃ ಇಸ್ಕಾನ್‌ ಹೇಳಿಕೊಂಡಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. BTV ಈಗಾಗಲೇ ಹಲವು ಸಲ ಮರ್ಯಾದೆ ಕಳೆದುಕೊಂಡಿದೆ. ಇತ್ತೀಚೆಗಂತೂ ಈ ದಿವ್ಯ ವಸಂತ ಟ್ರೋಲ್ನಿಂದ TRP ಕಳೆದುಕೊಂಡು ಸುಸ್ತಾಗಿದೆ. ಇಷ್ಟಾದರೂ ಬುದ್ಧಿ ಬಂದಿಲ್ಲ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...