Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

ಫ್ಯಾಕ್ಟ್‌ಚೆಕ್: ಇಸ್ಕಾನ್‌‌ನ ಈ ಚಿತ್ರ ಉಕ್ರೇನಿದ್ದಲ್ಲ; ದಾರಿ ತಪ್ಪಿಸಿದ ಬಿಟಿವಿ ವರದಿ!

- Advertisement -
- Advertisement -

ಯುದ್ಧ ಪೀಡಿತ ಉಕ್ರೇನ್‌ನಲ್ಲಿ ‘ಇಸ್ಕಾನ್‌’ ವತಿಯಿಂದ ಜನರಿಗೆ ಆಹಾರ ಒದಗಿಸಲಾಗುತ್ತಿದೆ ಎಂದು ಪ್ರತಿಪಾದಿಸಿ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಚಿತ್ರದೊಂದಿಗೆ ವೈರಲ್ ಆಗಿರುವ ಬರಹವು ಕೋಮುದ್ವೇಷ ಬಿತ್ತುತ್ತಿದ್ದು, ಹಿಂದೂ ಮತವನ್ನು ಬಿಟ್ಟು ಉಳಿದ ಧರ್ಮಗಳು ಸಹಾಯ ಮಾಡುವ ನೆಪದಲ್ಲಿ ಆಮಿಷ ಒಡ್ಡುತ್ತದೆ ಎಂಬ ಅರ್ಥದಲ್ಲಿ ಈ ಬರಹವನ್ನು ಬರೆಯಲಾಗಿದೆ.

ವೈರಲ್‌ ಚಿತ್ರದ ಜೊತೆಗೆ, “ಉಕ್ರೇನ್‌ನಲ್ಲಿ ಸುಮಾರು 54 ಇಸ್ಕಾನ್ ದೇವಾಲಯಗಳಿಂದ ಹಸಿದವರಿಗೆ ಅನ್ನ ನೀಡಲಾಗುತ್ತಿದ್ದು, ಅಲ್ಲಿ ಅನ್ನ ನೀಡುವ ಮೊದಲು ಅನ್ಯ ಧರ್ಮಿಯರಿಗೆ ನೀವು ನಮ್ಮ ಮತಕ್ಕೆ ಬನ್ನಿ ಎಂದು ಯಾರೂ ಒತ್ತಾಯ ಮಾಡುತ್ತಿಲ್ಲ. ಇದುವೆ ನನ್ನ ಹೆಮ್ಮೆಯ ಸನಾತನ ಮತ” ಎಂಬ ಇತರ ಧರ್ಮಗಳನ್ನು ಕೀಳಾಗಿ ಬಿಂಬಿಸುವ ಬರಹಗಳನ್ನೂ ವೈರಲ್‌ ಮಾಡಲಾಗುತ್ತಿದೆ.

ಡಮರುಗ ಎಂಬ ಬಿಜೆಪಿ ಬೆಂಬಲಿಗ ಪೇಜ್‌ ಒಂದು ಈ ರೀತಿಯ ಪೋಸ್ಟ್‌ ಅನ್ನು ರಚಿಸಿ ಹಂಚಿಕೊಂಡಿದೆ. ಇದೇ ಪ್ರತಿಪಾದನೆಯಿಂದಿಗೆ ಸಾಮಾಜಿಕ ಮಾಧ್ಯಮಗಳು ಹಲವಾರು ಬಳಕೆದಾರರು ಚಿತ್ರವನ್ನು ಹಂಚಿಕೊಂಡಿದ್ದಾರೆ. ಇದನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬದಲಾಯಿಸು ಎಂದು

ಕನ್ನಡದ ಸುದ್ದಿ ಮಾಧ್ಯಮ ಬಿಟಿವಿ ಕೂಡಾ ಇದೇ ಚಿತ್ರವನ್ನು ಬಳಸಿ ಸುದ್ದಿಯೊಂದನ್ನು ವರದಿಯೊಂದನ್ನು ಮಾಡಿದೆ. ಈ ಸುದ್ದಿಯಲ್ಲಿ ಬಿಟಿವಿ, “ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದ್ದು, ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸುತ್ತಿರುವ ಉಕ್ರೇನ್​ ಜನರಿಗೆ ಇಸ್ಕಾನ್ ಸೇವೆ ಸಲ್ಲಿಸುತ್ತಿದೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಉಕ್ರೇನ್​ ಜನರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಸದ್ಯ ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಮೆಚ್ಚುಗೆಯ ಮಹಾಪೂರವೇ ಹರಿಸುತ್ತಿದ್ದಾರೆ” ಎಂದು ಎರಡು ಚಿತ್ರಗಳನ್ನು ಬಳಸಿಕೊಂಡಿದೆ.

ಆರ್ಕೈವ್ ಲಿಂಕ್‌ ಇಲ್ಲಿ ಕ್ಲಿಕ್‌ ಮಾಡಿ

ಫ್ಯಾಕ್ಟ್‌ಚೆಕ್:

ವೈರಲ್ ಫೋಟೊವನ್ನು ನಾನುಗೌರಿ.ಕಾಂ ರಿವರ್ಸ್ ಇಮೇಜ್ ಸರ್ಚ್‌ ಮೂಲಕ ಹುಡುಕಾಡಿದಾಗ ಇಸ್ಕಾನ್ ಸಂಸ್ಥೆಯು ಉಕ್ರೇನ್‌ನಲ್ಲಿ ಆಹಾರ ನೀಡುತ್ತಿದೆ ಎಂದು ವೈರಲ್ ಆದ ಈ ಚಿತ್ರಗಳನ್ನು ಹೋಲುವ ಹಲವು ಫೋಟೊಗಳು ನಮಗೆ ಲಭ್ಯವಾಗಿವೆ.

ಇದರ ಜಾಡನ್ನು ಹಿಡಿದು ನಾನುಗೌರಿ.ಕಾಂ ಮತ್ತಷ್ಟು ಹುಡುಕಾಟ ನಡೆಸಿದಾಗ ಅದು ಇಸ್ಕಾನ್ ಸಂಸ್ಥೆ ತನ್ನ ವೆಬ್ ಸೈಟ್‌ಗಾಗಿ ರೂಪಿಸಿರುವ ಹಳೆಯ ಫೋಟೋ ಎಂದು ಖಚಿತವಾಗಿದೆ.

 

ಸೋಶಿಲ್‌ ಮೀಡಿಯಾದಲ್ಲಿ ವೈರಲ್ ಮಾಡಲಾಗುತ್ತಿರುವ ಫೋಟೊವನ್ನು ಇಸ್ಕಾನ್ ಸಂಸ್ಥೆಯು ತನ್ನ ವೆಬ್‌ಸೈಟ್‌ನಲ್ಲಿ ಈ ಫೋಟೊವನ್ನು ಬಳಸಿ ಡೊನೇಟ್ ಮಾಡಿ ಎಂದು ಹಣದ ಮೊತ್ತವನ್ನು ನಮೂದಿಸಿದೆ. ಅದನ್ನು ಇಲ್ಲಿ ನೋಡಬಹುದು.

ಇಸ್ಕಾನ್ ಸಂಸ್ಥೆಯು 2015ರಲ್ಲಿ ಅಪ್‌ಲೋಡ್ ಮಾಡಿದ ಫೋಟೋವನ್ನು ಬಲಪಂಥೀಯ ಪ್ರತಿಪಾದಕ ಡಮರುಗ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ವೈರಲ್ ಪೋಸ್ಟ್‌ನೊಂದಿಗೆ ಹಂಚಿಕೊಳ್ಳಲಾಗಿದೆ.

ಕೂಡಾ ಕೊಲ್ಕತ್ತಾದ ಇಸ್ಕಾನ್‌ ಉಪಾಧ್ಯಕ್ಷ ರಾಧಾರಮಣ್‌ ದಾಸ್ ಎಂಬವರು, “ಇಸ್ಕಾನ್‌ನಲ್ಲಿ 54 ದೇವಾಲಯಗಳು ಇವೆ. ಎಲ್ಲಾ ದೇವಾಲಯಗಳು ಸೇವೆಗೆ ಸನ್ನದ್ಧವಾಗಿದೆ” ಎಂದು ಬರೆದಿದ್ದರು.

ಅವರ ಈ ಮಾತನ್ನು ತಪ್ಪಾಗಿ ತಿಳಿದಿರುವ ಬಿಟಿವಿ, “ಉಕ್ರೇನ್‍ನಲ್ಲಿ ಇಸ್ಕಾನ್ 54 ಕ್ಕೂ ಅಧಿಕ ದೇವಾಲಯಗಳನ್ನು ಹೊಂದಿದ್ದು,  ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸುತ್ತಿರುವ ಉಕ್ರೇನ್​ ಜನರಿಗೆ  ಇಸ್ಕಾನ್ ಸೇವೆ ಸಲ್ಲಿಸುತ್ತಿದೆ. ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿರುವ ಉಕ್ರೇನ್​ ಜನರಿಗೆ ಆಹಾರ ಪೂರೈಕೆ ಮಾಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗುತ್ತಿದೆ” ಎಂದು ಎಲ್ಲಾ ದೇವಾಲಯಗಳು ಸೇವೆ ಮಾಡುತ್ತಿವೆ ಎಂಬ ಅರ್ಥದಲ್ಲಿ ಬರೆದಿದೆ. ಜೊತೆಗೆ ಹಳೆಯ ಚಿತ್ರವನ್ನು ಕೂಡಾ ಇದು ಪೋಸ್ಟ್‌ ಮಾಡಿದೆ.

ಇದನ್ನೂ ಓದಿ: BJP ಸದಸ್ಯರನ್ನೆ ‘ಬಿಜೆಪಿ ಬೆಂಬಲಿಸುವ ಸಾಮಾನ್ಯ ಮುಸ್ಲಿಮರು’ ಎಂದು ಚಿತ್ರಿಸಿದ ‘ಟಿವಿ9 ಭಾರತವರ್ಷ’

ಇಸ್ಕಾನ್ ಸೇವೆ ಸಲ್ಲಿಸುತ್ತಿವುದು ನಿಜವೇ?

ಈ ಸುದ್ದಿ ಬರೆಯುವ 22 ಗಂಟೆಗಳ ಮುಂಚೆ ಇಸ್ಕಾನ್ ನ್ಯೂಸ್‌, “ಘರ್ಷಣೆಯಿಂದ ನಿರಾಶ್ರಿತರಾದವರಿಗೆ ಭಕ್ತರು ಅನ್ನದಾನ ಮಾಡಲು ಆರಂಭಿಸಿದ್ದೇವೆ. ಉಕ್ರೇನಿಯನ್-ರಷ್ಯನ್ ಸಂಘರ್ಷದಿಂದ ಸ್ಥಳಾಂತರಗೊಂಡವರಿಗೆ ಸಹಾಯ ಮಾಡುವಲ್ಲಿ ‘ಇಸ್ಕಾನ್ ಹಂಗೇರಿ’ ಸಕ್ರಿಯವಾಗಿ ಭಾಗವಹಿಸುತ್ತಿದೆ. ಇಸ್ಕಾನ್ ಹಂಗೇರಿ ಪ್ರಸ್ತುತ ವಾರದ ದಿನಗಳಲ್ಲಿ 600 ಪ್ಲೇಟ್ ಪ್ರಸಾದವನ್ನು ಮತ್ತು ವಾರಾಂತ್ಯದಲ್ಲಿ 1200 ಪ್ಲೇಟ್‌ಗಳನ್ನು ವಿತರಿಸುವ ಸಾಮರ್ಥ್ಯವನ್ನು ಹೊಂದಿದೆ” ಎಂದು ಬರೆದಿದೆ.

ಈ ಮಧ್ಯೆ, ತಪ್ಪಾದ ಚಿತ್ರಗಳು ಮತ್ತು ಉಕ್ರೇನ್‌ನಲ್ಲಿರುವ ಇಸ್ಕಾನ್‌ ಎಲ್ಲಾ ದೇವಸ್ಥಾನಗಳಲ್ಲಿ ಆಶ್ರಯ ನೀಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ, ಸ್ವತಃ ಇಸ್ಕಾನ್‌‌‌ ನ್ಯೂಸ್‌ ಈ ಬಗ್ಗೆ ಸ್ಪಷ್ಟೀಕರಣ ನೀಡಿದೆ.

ಇಸ್ಕಾನ್‌ ನ್ಯೂಸ್‌ ಹೇಳುವಂತೆ, “ಉಕ್ರೇನ್‌ನಲ್ಲಿರುವ ಐವತ್ತಕ್ಕೂ ಹೆಚ್ಚು ಇಸ್ಕಾನ್ ದೇವಾಲಯಗಳು ಮತ್ತು ಕೇಂದ್ರಗಳು ಸಾರ್ವಜನಿಕರಿಗೆ ಆಹಾರ ಪರಿಹಾರ ಮತ್ತು ಆಶ್ರಯವನ್ನು ಒದಗಿಸುತ್ತಿವೆ ಎಂದು ಸಾಮಾಜಿಕ ಮಾಧ್ಯಮ ಮತ್ತು ಇತರ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡುತ್ತಿದೆ. ಈ ಮಾಹಿತಿ ಸುಳ್ಳು” ಎಂದು ಸ್ಪಷ್ಟೀಕರಣ ನೀಡಿದೆ.

ಲಿಂ‌ಕ್‌ಗೆ ಇಲ್ಲಿ ಕ್ಲಿಕ್ ಮಾಡಿ 

ಇಸ್ಕಾನ್‌ ನ್ಯೂಸ್‌‌ ಖಚಿತವಾಗಿ ಹೇಳುವಂತೆ, “ಈ ಸಮಯದಲ್ಲಿ ಉಕ್ರೇನ್‌ನಲ್ಲಿರುವ ನಮ್ಮ ದೇವಾಲಯಗಳಲ್ಲಿ ಆಶ್ರಯ ಅಥವಾ ಆಹಾರ ವಿತರಣೆಯನ್ನು ಒದಗಿಸಲು ISKCON ಗೆ ಸಾಧ್ಯವಾಗುತ್ತಿಲ್ಲ. ಉಕ್ರೇನ್ ಮತ್ತು ಇಡೀ ಪ್ರದೇಶದ ಎಲ್ಲಾ ಜನರಿಗೆ ಶಾಂತಿಗಾಗಿ ನಾವು ಪ್ರಾರ್ಥಿಸುತ್ತೇವೆ” ಎಂದು ಬರೆದಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿರುವ ಚಿತ್ರವೂ ತಪ್ಪಾದ ನಿರೂಪಣೆಯೊಂದಿಗೆ ಹರಿದಾಡುತ್ತಿದೆ. ಈ ಪೋಸ್ಟ್‌ ಇತರ ಧರ್ಮವರನ್ನು ಕೀಳಾಗಿ ಕಾಣಲು ಮಾಡಿರುವ ದ್ವೇಷಪೂರಿತ ಚಿತ್ರವಾಗಿದೆ. ಇಸ್ಕಾನ್ ಸಂಸ್ಥೆಯು 2015ರಲ್ಲಿ ಈ ಚಿತ್ರವನ್ನು ಹಂಚಿಕೊಂಡಿದೆ. ಜೊತೆಗೆ ಬಿಟಿವಿ ವರದಿಯಲ್ಲಿ ತಪ್ಪುಗಳಿದ್ದು, ಅದು ಹಳೆಯ ಚಿತ್ರವನ್ನು ಬಳಸಿದೆ. ಅದರ ವರದಿ ಹೇಳುವಂತೆ ಉಕ್ರೇನ್‌ನಲ್ಲಿರುವ ಎಲ್ಲಾ 54 ದೇವಾಲಯಗಳಲ್ಲಿ ನಿರಾಶ್ರಿತರಿಗೆ ಆಹಾರ ಮತ್ತು ಆಶ್ರಯವನ್ನು ನೀಡಲಾಗುತ್ತಿಲ್ಲ.

ಹಂಗೇರಿಯ ಇಸ್ಕಾನ್‌‌ನ ಕೇವಲ ಒಂದು ದೇವಸ್ಥಾನದ ವತಿಯಿಂದ ಮಾತ್ರ ಆಹಾರ ವಿತರಣೆಯನ್ನು ಹಂಗೇರಿಯ ಏರ್‌ಪೋರ್ಟ್‌ನಲ್ಲಿ ಮಾಡಲಾಗುತ್ತಿದೆ ಎಂದು ಸ್ವತಃ ಇಸ್ಕಾನ್‌ ಹೇಳಿಕೊಂಡಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. BTV ಈಗಾಗಲೇ ಹಲವು ಸಲ ಮರ್ಯಾದೆ ಕಳೆದುಕೊಂಡಿದೆ. ಇತ್ತೀಚೆಗಂತೂ ಈ ದಿವ್ಯ ವಸಂತ ಟ್ರೋಲ್ನಿಂದ TRP ಕಳೆದುಕೊಂಡು ಸುಸ್ತಾಗಿದೆ. ಇಷ್ಟಾದರೂ ಬುದ್ಧಿ ಬಂದಿಲ್ಲ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...