Homeಮುಖಪುಟಊಟ, ನಿದ್ರೆ ಇಲ್ಲ, ದೇಶಕ್ಕೆ ಮರಳುವ ಭರವಸೆಯೂ ಇಲ್ಲ: ಕಂಗಾಲಾದ ಭಾರತೀಯರು

ಊಟ, ನಿದ್ರೆ ಇಲ್ಲ, ದೇಶಕ್ಕೆ ಮರಳುವ ಭರವಸೆಯೂ ಇಲ್ಲ: ಕಂಗಾಲಾದ ಭಾರತೀಯರು

‘ಅಮೆರಿಕ, ಇಂಗ್ಲೆಂಡ್ ಸೇರಿದಂತೆ ವಿವಿಧ ರಾಷ್ಟ್ರಗಳು ತಮ್ಮ ದೇಶದ ಪ್ರಜೆಗಳನ್ನು ಉಕ್ರೇನ್‌ನಿಂದ ವಾಪಸ್ ಕರೆಸಿಕೊಳ್ಳುವಾಗ ಹೊತ್ತಿನಲ್ಲಿ ಭಾರತದ ಪ್ರಧಾನಿ ಮತ್ತು ಸಚಿವರು ಚುನಾವಣೆಯಲ್ಲಿ ಬ್ಯುಸಿಯಾಗಿದ್ದರು’ ಎಂಬ ಆರೋಪಗಳು ಬಂದಿವೆ.

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ಯುದ್ದ ಘೋಷಿಸಿ ಐದು ದಿನಗಳು ಕಳೆದಿವೆ. ರಷ್ಯಾ ಸೇನೆ ಉಕ್ರೇನ್‌ನ ವಿವಿಧ ಭಾಗಗಳ ಮೇಲೆ ದಾಳಿ ನಡೆಸುತ್ತಿದೆ. ಇದುವರೆಗೂ ನೂರಾರು ಜನರು ಸಾವನ್ನಪ್ಪಿದ್ದಾರೆ. ಪರಿಸ್ಥಿತಿ ಗಂಭೀರವಾಗಿದೆ.

ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟು ಉದ್ವಿಘ್ನಗೊಳ್ಳುತ್ತಿರುವುದನ್ನು ಗಮನಿಸಿದ ವಿವಿಧ ದೇಶಗಳು ತಮ್ಮ ಜನರನ್ನು ದೇಶಕ್ಕೆ ವಾಪಸ್ ಕರೆಸಿಕೊಂಡಿದ್ದವು. ಆದರೆ ಐದು ರಾಜ್ಯಗಳ ಚುನಾವಣಾ ಕಣದಲ್ಲಿದ್ದ ಭಾರತವು ಉಕ್ರೇನ್‌ನಿಂದ ಜನರನ್ನು ತುರ್ತಾಗಿ ಕಳೆಸಿಕೊಳ್ಳುವ ಕೆಲಸಕ್ಕೆ ಮುಂದಾಗಲಿಲ್ಲ. ಹೀಗಾಗಿ, ಭಾರತದ ವಿದ್ಯಾರ್ಥಿಗಳು ಸೇರಿದಂತೆ ಹಲವಾರು ಪ್ರಜೆಗಳು ಉಕ್ರೇನ್‌ನಲ್ಲಿ ಸಿಲುಕಿಕೊಂಡು ಭಾರತಕ್ಕೆ ಮರಳಿ ಬರುವ ಭರವಸೆಯನ್ನೇ ಕಳೆದುಕೊಂಡಿದ್ದಾರೆ.

ರಷ್ಯಾದಿಂದ ದಾಳಿಗೀಡಾಗಿರುವ ಉಕ್ರೇನ್‌ನ ಪ್ರಮುಖ ಭಾಗವಾದ ಖಾರ್ಕಿವ್‌ನಲ್ಲಿ ಸುಮಾರು 18 ಭಾರತೀಯ ವಿದ್ಯಾರ್ಥಿಗಳು ಸಿಲುಕಿದ್ದಾರೆ. ಅವರೆಲ್ಲರೂ, ಖಾರ್ಕಿವ್‌ನ ಕರಾಜಿನ್ ನ್ಯಾಷನಲ್ ಯೂನಿವರ್ಸಿಟಿಯಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. ಅವರೆಲ್ಲರೂ ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ನಾಲ್ಕು ರಾತ್ರಿಗಳಿಂದ ಮೆಟ್ರೋ ನಿಲ್ದಾಣದಲ್ಲಿದ್ದಾರೆ.

“ಉಭಯ ರಾಷ್ಟ್ರಗಳ ನಡುವೆ ಘರ್ಷಣೆ ಆರಂಭವಾದಾಗ ನಾವು ಮೆಟ್ರೋ ನಿಲ್ದಾಣಕ್ಕೆ ಬಂದೆವು. ನಾವು ತಂದಿದ್ದ ತಿನಿಸುಗಳೆಲ್ಲ ಖಾಲಿಯಾಗಿವೆ. ಆದರೆ ಈಗ ನಮಗೆ ಆಹಾರವಿಲ್ಲ. ನಾನು ಭಾನುವಾರ ಬೆಳಿಗ್ಗೆ ಸ್ವಲ್ಪ ಬ್ರೆಡ್ ತಿಂದೆ. ಅದು ಮುಗಿದ ನಂತರ, ನಮಗೆ ಆಹಾರ ದೊರೆತಿಲ್ಲ. ನಾಲ್ಕು ದಿನಗಳಿಂದ ಸರಿಯಾದ ನಿದ್ರೆಯೂ ಇಲ್ಲ” ಎಂದು ಕೇರಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಎಲಿಜಬೆತ್ ದೇವಾಸಿಯಾ ಹೇಳಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ!

ಸುಮಾರು 500 ಮಂದಿ ಆಶ್ರಯ ಪಡೆದಿರುವ ಮೆಟ್ರೊ ನಿಲ್ದಾಣಕ್ಕೆ ಭಾನುವಾರದಿಂದ ನೀರು ಪೂರೈಕೆ ಆರಂಭಿಸಲಾಗಿದೆ. ಸುತ್ತಲಿನ ಜನರು ಸ್ವಲ್ಪ ಆಹಾರದ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಇಲ್ಲಿ ನಡೆಯುತ್ತಿರುವ ಘರ್ಷಣೆಯಿಂದ ಅದೂ ಸಾಧ್ಯವಾಗದೇ ಇರಬಹುದು ಎಂದು ಎಲಿಜಬೆತ್ ತಿಳಿಸಿದ್ದಾರೆ.

ಭಾರತೀಯ ರಾಯಭಾರ ಕಚೇರಿಯು ರೈಲುಗಳ ಮೂಲಕ ದೇಶದ ಪಶ್ಚಿಮ ಭಾಗದಲ್ಲಿರುವ ನಗರಗಳಿಗೆ ಸ್ಥಳಾಂತರಗೊಳ್ಳಲು ನಮಗೆ ಹೇಳುತ್ತಿದೆ. ಆದರೆ, ಇಲ್ಲಿ ನಡೆಯುತ್ತಿರುವ ಭಾರೀ ಶೆಲ್‌ಗಳ ದಾಳಿಯಿಂದಾಗಿ ನಮಗೂ, ನಮ್ಮ ಸ್ನೇಹಿತರಿಗೆ ಮೆಟ್ರೋ ನಿಲ್ದಾಣದಿಂದ ಹೊರಬರಲು ಸಾಧ್ಯವಾಗುತ್ತಿಲ್ಲ ಎಂದು ಎಲಿಜಬೆತ್ ತಿಳಿಸಿದ್ದಾರೆ.

ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಪಡೆಯುತ್ತಿರುವ ಹರಿಯಾಣದ ಮೂಲದ ವೈದ್ಯಕೀಯ ವಿದ್ಯಾರ್ಥಿ ಅನುರಾಗ್ ಪೂನಿಯಾ ಅವರು ಭಾರತಕ್ಕೆ ವಿಮಾನ ಹತ್ತಲು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಆ ವೇಳೆ, ಉಕ್ರೇನ್ ವಿಮಾನ ನಿಲ್ದಾಣಗಳನ್ನು ಮುಚ್ಚಿದ್ದರಿಂದಾಗಿ ಅವರು ರಾಜಧಾನಿ ಕೈವ್‌ನಲ್ಲಿ ಸಿಕ್ಕಿಕೊಂಡಿದ್ದಾರೆ. ಆಗಿನಿಂದಲೂ ಭಾರತೀಯ ರಾಯಭಾರಿ ಕಚೇರಿಯಿಂದ ಕೇವಲ 20 ಮೀಟರ್ ದೂರದಲ್ಲಿರುವ ಶಾಲೆಯಲ್ಲಿ ಉಳಿದಿದ್ದಾರೆ. ಆದರೂ, ಭಾರತೀಯ ರಾಯಭಾರ ಕಚೇರಿಯು ಅನುರಾಗ್ ಅವರಿಗೆ ಅಥವಾ ಶಾಲೆಯಲ್ಲಿ ವಾಸಿಸುತ್ತಿರುವ ಉಳಿದ 450 ಜನರಿಗೆ ಸಹಾಯ ಮಾಡಲು ಸಾಧ್ಯವಾಗಿಲ್ಲ ಎಂದು ಅನುರಾಗ್ ವಿವರಿಸಿದ್ದಾರೆ.

ರೈಲುಗಳು ಮಾತ್ರ ಸಾರ್ವಜನಿಕ ಸಾರಿಗೆಯಾಗಿ ಕಾರ್ಯನಿರ್ವಹಿಸುತ್ತಿವೆ. ಉಕ್ರೇನ್ ವಿವಿಧ ಭಾಗದ ಜನರನ್ನು ಪಶ್ಚಿಮ ಗಡಿ ಪಟ್ಟಣಗಳಾದ ಇವಾನೊ ಮತ್ತು ಚೆರ್ನಿವಿಟ್ಸಿಗೆ ರೈಲುಗಳ ಮೂಲಕ ಸ್ಥಳಾಂತರಿಸಲಾಗುತ್ತಿದೆ. ಅದಕ್ಕಾಗಿ, ವಿದ್ಯಾರ್ಥಿಗಳಿಗೆ ಆಸನಗಳನ್ನು ಕಾಯ್ದಿರಿಸಗುತ್ತಿದೆ ಎಂದು ತಿಳಿದಾಗ ಸಂತೋಷವಾಯಿತು. ನಮ್ಮೊಂದಿಗಿದ್ದ “250ಕ್ಕೂ ಹೆಚ್ಚು ಜನರು ರೈಲು ನಿಲ್ದಾಣವನ್ನು ತಲುಪಿದರು. ಆದರೆ ಅಲ್ಲಿ ರಾಯಭಾರಿ ಅಧಿಕಾರಿಗಳು ಇರಲಿಲ್ಲ. ಸ್ಥಳೀಯರು ಬಂದೂಕುಗಳನ್ನು ಹಿಡಿದುಕೊಂಡು ನಮ್ಮನ್ನು ರೈಲು ಹತ್ತಲು ಬಿಡಲಿಲ್ಲ” ಎಂದು ಅನುರಾಗ್ ವಿವರಿಸಿದ್ದಾರೆ.

ರೈಲು ನಿಲ್ದಾಣದಿಂದ ನಾವು ಮತ್ತೆ ಶಾಲೆಗೆ ಮರಳಿದಾಗ ಕೇವಲ 180 ಜನರು ಉಳಿದಿದ್ದರು. ಇತರರು ಎಲ್ಲಿಗೆ ಹೋದರು ಎಂಬುದು ನಮಗೆ ತಿಳಿದಿಲ್ಲ. ನಾವು ಅವರನ್ನು ಸಂಪರ್ಕಿಸಲು ಸಾಧ್ಯವಿಲ್ಲ ಎಂದು ಅನುರಾಗ್ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ಲಂಗರ್‌‌ನ ಈ ಚಿತ್ರ ಯುದ್ದ ಪೀಡಿತ ಉಕ್ರೇನ್‌ ದೇಶದ್ದಲ್ಲ

“ಇಲ್ಲಿ ಯಾವುದೇ ಕಾನೂನು ಇಲ್ಲ ಮತ್ತು ಸರ್ಕಾರವು ಸ್ಥಳೀಯರನ್ನು ಶಸ್ತ್ರಸಜ್ಜಿತಗೊಳಿಸಿದೆ. ಬಂದೂಕು ಹಿಡಿದ ನಾಲ್ಕು ಜನರು ಬಾಗಿಲು ಮುರಿದು ನಮ್ಮ ಹಾಸ್ಟೆಲ್‌ನ ನೆಲಮಾಳಿಗೆಯಲ್ಲಿರುವ ಜಿಮ್‌ಗೆ ನುಗ್ಗಿದರು. ನಮ್ಮಲ್ಲಿ ತುಂಬಾ ಜನ ಇದ್ದುದನ್ನು ನೋಡಿ ಹೊರಟುಹೋದರು. ಈಗ, ನಾವು ಪೀಠೋಪಕರಣಗಳು ಮತ್ತು ಮರದ ಕೊಂಬೆಗಳಿಂದ ದ್ವಾರವನ್ನು ಭದ್ರಪಡಿಸಿದ್ದೇವೆ. ಮೂರು ದಿನಗಳಿಂದ ನಿದ್ದೆ ಮಾಡಿಲ್ಲ. ಭಾರತಕ್ಕೆ ಮರಳುತ್ತೇವೆ ಎಂಬ ಭರವಸೆಯೂ ನಮಗೆ ಇಲ್ಲ” ಎಂದು ಕೀವ್‌ನ ವೈದ್ಯಕೀಯ ಕಾಲೇಜಿನ ಹಾಸ್ಟಲ್‌ನಲ್ಲಿರುವ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿ ಅಧಿವೇಶ್ ಧಾಮಾ ಹೇಳಿದ್ದಾರೆ.

ಚುನಾವಣೆಯಲ್ಲಿ ಮುಳುಗಿದ್ದ ಕೇಂದ್ರ ಸರ್ಕಾರ: ಸರೋವರ್‌‌

“ಕಳೆದ ಒಂದು ತಿಂಗಳಿನಿಂದ ಉಕ್ರೇನ್ ಮತ್ತು ರಷ್ಯಾ ನಡುವಿನ ಸಂಘರ್ಷವು ಚರ್ಚೆಯಲ್ಲಿತ್ತು. ಯುದ್ದ ಆರಂಭವಾಗುವ ಅತಂಕವೂ ವ್ಯಕ್ತವಾಗುತ್ತಿತ್ತು. ಹೀಗಾಗಿ, ಅಮೆರಿಕ, ಇಂಗ್ಲೆಂಡ್ ಸೇರಿದಂತೆ ವಿವಿಧ ರಾಷ್ಟ್ರಗಳು ತಮ್ಮ ದೇಶದ ಪ್ರಜೆಗಳನ್ನು ಉಕ್ರೇನ್‌ನಿಂದ ವಾಪಸ್ ಕರೆಸಿಕೊಂಡಿವೆ. ಆದರೆ, ಭಾರತದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ಐದು ರಾಜ್ಯಗಳ ಚುನಾವಣೆಯ ಪ್ರಚಾರದಲ್ಲಿ ಮುಳುಗಿದ್ದರು. ಅವರು ಉಕ್ರೇನ್ ಬಿಕ್ಕಟ್ಟಿನ ಬಗ್ಗೆಯಾಗಲೀ, ಅಲ್ಲಿರುವ ಭಾರತೀಯ ಪರಿಸ್ಥಿತಿ- ರಕ್ಷಣೆ ಬಗೆಗಾಗಲೀ ಯೋಚಿಸಲಿಲ್ಲ. ಹೀಗಾಗಿ, ಭಾರತೀಯರು ಉಕ್ರೇನ್‌ನಲ್ಲಿ ಬದುಕಿಗಾಗಿ ಹೋರಾಡುವ ಸ್ಥಿತಿಯಲ್ಲಿದ್ದಾರೆ” ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕ ಸರೋವರ್ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಭಾರತದಲ್ಲಿ ಶಿಕ್ಷಣವು ದುಬಾರಿಯಾಗಿದೆ ಮತ್ತು ಮಾರಾಟಕ್ಕಿದೆ. ಉಳ್ಳವರು ಮಾತ್ರ ದೇಶದಲ್ಲಿ ಉತ್ತಮ ಶಿಕ್ಷಣವನ್ನು ಪಡೆಯುತ್ತಿದ್ದು, ಇಲ್ಲದವರು ಶಿಕ್ಷಣದಿಂದ ವಂಚಿತರಾಗುತ್ತಾರೆ ಅಥವಾ ತಿಳಿವಳಿಕೆ ಇರುವವರು ಕಡಿಮೆ ಖರ್ಚಿನಲ್ಲಿ ಶಿಕ್ಷಣ ಸಿಗುವ ಉಕ್ರೇನ್‌ನಂತಹ ದೇಶಗಳಿಗೆ ವಲಸೆ ಹೋಗುತ್ತಾರೆ. ಹೀಗಾಗಿ ಭಾರತದ ಹೆಚ್ಚಿನ ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ನೆಲೆಸಿದ್ದಾರೆ. ಭಾರತದಲ್ಲಿ ಸರ್ಕಾರ ಉನ್ನತ ಮತ್ತು ವೃತ್ತಿಪರ ಶಿಕ್ಷಣವು ಕೈಗೆಟುಕುವ ವೆಚ್ಚದಲ್ಲಿ ಸಿಗುವಂತಾಗಬೇಕು. ಇಲ್ಲಿನ ಯುವಜನರಿಗೆ ಇಲ್ಲೇ ಉತ್ತಮ ಶಿಕ್ಷಣ ಮತ್ತು ಉದ್ಯೋಗ ದೊರೆಯುವಂತೆ ಯೋಜನೆಗಳನ್ನು ರೂಪಿಸಬೇಕು” ಎಂದು ಸರೋವರ್ ಒತ್ತಾಯಿಸಿದ್ದಾರೆ.


ಇದನ್ನೂ ಓದಿರಿ: ವೈದ್ಯಕೀಯ ‘ಭಾರ‘ತ: ಉಕ್ರೇನ್‌ನಲ್ಲಿ ಸಿಲುಕಿದ ಇಂಡಿಯಾ ವಿದ್ಯಾರ್ಥಿಗಳ ನೋವಿನ ಮೂಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಷ್ಯಾದ ದಾಳಿ ಭೀತಿ ಇರುವುದರಿಂದ ಉಕ್ರೇನಿನಿಂದ ಭಾರತೀಯರು ತಾತ್ಕಾಲಿಕವಾಗಿ ತೊರೆಯಬೇಕೆಂದು ಭಾರತೀಯ ರಾಯಭಾರಿ ಕಛೇರಿ ಫೆಬ್ರವರಿ 14,2022ರಂದು ಸೂಚನೆ ಹೊರಡಿಸಿದೆ. ಯುದ್ಧವೆಂದ ಮೇಲೆ ಅಲ್ಲಿನ ಉನ್ನತ ರಾಜಕಾರಣಿಗಳೇ ಪ್ರಾಣಾಪಾಯದಿಂದಿರುವಾಗ,ಸೂಚನೆ ನಿರ್ಲಕ್ಷಿಸಿ ಈಗ ನಮ್ಮ ಉನ್ನತ ರಾಜಕಾರಣಿಗಳನ್ನು ಪ್ರಾಣಾಪಾಯಕ್ಕೊಡ್ಡುತ್ತಿದ್ದಾರೆ.ಹೊರದೇಶ, ಯುದ್ಧಗಳನ್ನು ನಿರ್ಲಕ್ಷಿಸಿ ನಷ್ಟವಾದರೆ ನಿರ್ಲಕ್ಷಿಸಿದವರೇ ಹೊಣೆಗಾರರು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...