Homeಕರ್ನಾಟಕ‘ಕೋವಿಡ್‌ ಆಕ್ಸಿಜನ್ ದುರಂತ: ಚಾ.ನಗರ ಸಂತ್ರಸ್ತರಿಗೆ ಇನ್ನೂ ಸಿಗದ ಪರಿಹಾರ’

‘ಕೋವಿಡ್‌ ಆಕ್ಸಿಜನ್ ದುರಂತ: ಚಾ.ನಗರ ಸಂತ್ರಸ್ತರಿಗೆ ಇನ್ನೂ ಸಿಗದ ಪರಿಹಾರ’

- Advertisement -
- Advertisement -

ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 2021ನೇ ಮೇ 2ರ ಮಧ್ಯರಾತ್ರಿ ಆಕ್ಸಿಜನ್ ಪೂರೈಕೆಯಾಗದೆ 37 ಮಂದಿ ಮೃತರಾಗಿ ಈಗಾಗಲೇ 9 ತಿಂಗಳು ಕಳೆದಿದ್ದು, ಸಂತ್ರಸ್ತರಿಗೆ ಇನ್ನೂ ಪೂರ್ಣ ಪರಿಹಾರ ದೊರೆತಿಲ್ಲ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದ್ದಾರೆ.

ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರ್ಘಟನೆ ಸಂಬಂಧ ಮೈಸೂರಿನಲ್ಲಿ ‘ಸಂತ್ರಸ್ತರೊಂದಿಗೆ ಸಮಾಲೋಚನೆ ಸಭೆ’ ನಡೆಸಿದ ಬಳಿಕ ಮಾತನಾಡಿದ ಅವರು, “ಘಟನೆಗೆ ಸಂಬಂಧಿಸಿದಂತೆ ನೇಮಕಗೊಂಡ ನ್ಯಾಯಮೂರ್ತಿ ವೇಣುಗೋಪಾಲಗೌಡ ಸಮಿತಿ ವರದಿಯಲ್ಲಿ ಘಟನೆಗೆ ಆಕ್ಸಿಜನ್ ಕೊರತೆಯೇ ಪ್ರಮುಖ ಕಾರಣವಾಗಿದ್ದು, ಅಂದಿನ ಜಿಲ್ಲಾಧಿಕಾರಿಗಳ ಕಾರ್ಯವೈಖರಿಯ ವಿಫಲತೆಯಿಂದ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ. ಆದರೆ ಜಿಲ್ಲಾಧಿಕಾರಿಗಳು ಸೇರಿದಂತೆ ಯಾವ ಒಬ್ಬ ವೈದ್ಯಾಧಿಕಾರಿಯ ವಿರುದ್ಧವೂ ಸರ್ಕಾರ ಇದುವರೆಗೂ ಸೂಕ್ತ ಕ್ರಮ ತೆಗೆದುಕೊಂಡಿಲ್ಲ” ಎಂದು ಅವರು ದೂರಿದರು.

ಇನ್ನೊಂದು ಕಡೆ ಸರ್ಕಾರ ನೇಮಕ ಮಾಡಿರುವ ಏಕಸದಸ್ಯ ಆಯೋಗದ ಅಧ್ಯಕ್ಷ ಬಿ.ಎಪಾಟೀಲ್ ಅವರ ವರದಿ ಸಹ ಬಹಿರಂಗಗೊಂಡಿಲ್ಲ. ಒಟ್ಟು 37 ಮೃತರ ಕುಟುಂಬಸ್ಥರ ಪೈಕಿ ಕೇವಲ 24 ಮಂದಿಯ ಕುಟುಂಬಸ್ಥರಿಗೆ ಅಲ್ಪಸ್ವಲ್ಪ ಪರಿಹಾರ ನೀಡಿದೆ. ಇನ್ನು 13 ಸಂತ್ರಸ್ಥ ಕುಟುಂಬಸ್ಥರಿಗೆ ಪರಿಹಾರದ ಒಂದು ನಯಾಪೈಸೆಯೂ ನೀಡಿರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದುರ್ಘಟನೆಗೆ ಬಲಿಯಾದವರಲ್ಲಿ ಶೇಕಡ 50ಕ್ಕಿಂತ ಹೆಚ್ಚು ಜನರು ಎಸ್.ಸಿ., ಎಸ್.ಟಿ. ಸಮುದಾಯದವರಾಗಿದ್ದು, ಕೂಲಿ ಕಾರ್ಮಿಕರು ಹೆಚ್ಚಾಗಿದ್ದಾರೆ. ಆಧಾರ ಸ್ಥಂಭವಾಗಿದ್ದ ಮನೆಯ ಮುಖ್ಯಸ್ಥ ಇಲ್ಲದೆ ಈ ಬಡಪಾಯಿ ಕುಟುಂಬಸ್ಥರ ಜೀವನ ಅಸ್ತವ್ಯಸ್ತವಾಗಿದೆ. ಸಂತ್ರಸ್ತರ ಕುಟುಂಬಸ್ಥರಲ್ಲಿ ಮಕ್ಕಳು ಸಹ ಇದ್ದು, ಆ ಮಕ್ಕಳ ವಿದ್ಯಾಭ್ಯಾಸಕ್ಕೆ, ಆರೈಕೆಗೆ ಬಹಳ ತೊಂದರೆ ಆಗುತ್ತಿದೆ ಎಂದು ವಿವರಿಸಿದರು.

ಸಂತ್ರಸ್ತರ ಈ ದುಸ್ಥಿತಿಯನ್ನು ನೋಡಿಕೊಂಡು ರಾಜ್ಯ ಸರ್ಕಾರ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿರುವುದು ವಿಪರ್ಯಾಸವಾಗಿದೆ. ಸಂತ್ರಸ್ತರಿಗೆ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಸಂತ್ರಸ್ತ ಕುಟುಂಬಸ್ಥರಿಗೆ 50 ಲಕ್ಷ ರೂಪಾಯಿ ಪರಿಹಾರ, ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ನೀಡಲಾಗುವುದು. ಅಂತಿಮವಾಗಿ ಸಂತ್ರಸ್ತರಿಗೆ ನ್ಯಾಯ ಸಿಗುವರೆಗೂ ಎಸ್.ಡಿ.ಪಿ.ಐ. ತನ್ನ ಹೋರಾಟ ಮುಂದುವರಿಸಲಿದೆ ಎಂದು ಎಚ್ಚರಿಸಿದ್ದಾರೆ.

ಸಭೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್, ಚಾಮರಾಜನಗರ ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅಬ್ರಾರ್ ಅಹಮದ್, ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ, ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್, ಅಫ್ಸರ್ ಕೂಡ್ಲಿಪೇಟೆ, ಹೈಕೋರ್ಟ್ ವಕೀಲರಾದ ಮಜೀದ್ ಖಾನ್, ರಾಜ್ಯ ಮಾಧ್ಯಮ ಸಂಯೋಜಕರಾದ ರಿಯಾಜ್ ಕಡಂಬು, ಚಾಮರಾಜನಗರ ನಗರಸಭಾ ಸದಸ್ಯ ಮಹೇಶ್ ಹಾಗೂ ಸಂತ್ರಸ್ತ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.


ಇದನ್ನೂ ಓದಿರಿ: ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....