Homeಕರ್ನಾಟಕಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ. ಡಿ.ಕೆ.ಶಿವಕುಮಾರ್‌ ಅವರ ಹೋರಾಟ ಸಂಚಲನ ಮೂಡಿಸಿದೆ: ಮುರುಘ ಶರಣರು

- Advertisement -
- Advertisement -

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯ ಹೊರಟ ಯಶಸ್ವಿಯಾಗಲಿ ಎಂದು ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಮುರುಘಾ ಶರಣರು ಹಾರೈಸಿದ್ದಾರೆ.

ಬಿಡದಿ ಮತ್ತು ಕೆಂಗೇರಿ ನಡುವಣ ಕೇತಗಾನಹಳ್ಳಿಯ ಬಳಿ ಹಲವು ಸ್ವಾಮೀಜಿಗಳೊಂದಿಗೆ ಪಾದಯಾತ್ರೆಗೆ ಸೇರಿಕೊಂಡು ಮಾತನಾಡಿದ ಅವರು ‘ಹೋರಾಟ ಯಶಸ್ವಿಯಾಗಲಿ’ ಎಂದು ಶುಭ ಕೋರಿದರು.

‘ರಾಜ್ಯದಲ್ಲಿ ವಿವಿಧ ನೀರಾವರಿ ಹೋರಾಟಗಳು ನಡೆಯುತ್ತಿವೆ. ಇಲ್ಲಿ ಮೇಕೆದಾಟು ಯೋಜನೆ, ಉತ್ತರ ಕರ್ನಾಟಕದಲ್ಲಿ ಮಹದಾಯಿ ಯೋಜನೆಗಾಗಿ ಹೋರಾಟ ನಡೆಯುತ್ತಿವೆ. ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಈ ಕಾಲಘಟ್ಟದ ಅನಿವಾರ್ಯ’ ಎಂದು ಶರಣರು ತಿಳಿಸಿದರು.

’ನೀರು ನಮ್ಮ ಹಕ್ಕು. ಆ ದಿಸೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಯಶಸ್ವಿ ಹೋರಾಟ ನಡೆಯುತ್ತಿದೆ. ಇಲ್ಲಿ ನಾವು ಅವರ ಶಕ್ತಿ, ಯುಕ್ತಿ ಹಾಗೂ ಭಕ್ತಿಯನ್ನು ನೋಡಬಹುದು. ನಮಗೂ ಈ ಹೋರಾಟದಲ್ಲಿ ಭಾಗವಹಿಸಬೇಕು ಎಂಬ ಅಪೇಕ್ಷೆ, ಒತ್ತಾಯ ಎಲ್ಲವೂ ಇದೆ’ ಎಂದರು.

ಸ್ವಾಮೀಜಿಗಳಾಗಿ ನಮ್ಮ ಮೊದಲ ಕರ್ತವ್ಯ ಎಂದರೆ ಸಮಾಜದಲ್ಲಿ ಸಾಮರಸ್ಯ ಹಾಗೂ ಶಾಂತಿ ಕಾಪಾಡುವುದು. ನೊಂದವರಿಗೆ ಸಾಂತ್ವನ ಹೇಳುವುದು, ಸತ್ಕಾರ್ಯಕ್ಕೆ ಬೆಂಬಲ ನೀಡುವುದು. ಇಲ್ಲಿ ಸತ್ಕಾರ್ಯ ನಡೆಯುತ್ತಿದೆ. ಅದು ಮೇಕೆದಾಟು ಯೋಜನೆ ಆಗಲೇಬೇಕು ಎಂಬ ಹೋರಾಟ. ಇದಕ್ಕೆ ನಾವು ಬೆಂಬಲ ನೀಡುತ್ತಿದ್ದೇವೆ ಎಂದು ಘೋಷಿಸಿದರು.

‘ನಮಗೆ ಯಾವುದೇ ಪ್ರಾದೇಶಿಕ ಭಾವನೆ ಇಲ್ಲ. ಈ ಭಾಗದ ಜನರ ಹಿತಕ್ಕೆ ಮೇಕೆದಾಟು ಯೋಜನೆ ಆಗಲಿ ಎಂದು ಆಗ್ರಹಿಸಿ, ನಿಮ್ಮ ಹೋರಾಟಕ್ಕೆ ಜಯ ಸಿಗಲಿ ಎಂದು ಹಾರೈಸುತ್ತೇವೆ. ಹವಾನಿಯಂತ್ರಿತ ಕೊಠಡಿಯಲ್ಲಿ ನೆಮ್ಮದಿಯಾಗಿ ಕಾಲ ಕಳೆಯಬಹುದಾಗಿದ್ದರೂ ಜನರ ಹಿತಕ್ಕಾಗಿ ಉರಿ ಬಿಸಿಲಿನಲ್ಲಿ ಶಿವಕುಮಾರ್ ಅವರು ಪಾದಯಾತ್ರೆ ಮಾಡುತ್ತಿದ್ದಾರೆ. ಅವರ ಈ ಹೋರಾಟ ರಾಜ್ಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಅವರ ಈ ಹೋರಾಟಕ್ಕೆ ನಮ್ಮ ಸಂಪೂರ್ಣ ಸಹಕಾರ ಇದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಸ್ವಾಮೀಜಿಗಳ ಕಾಲಿಗೆರಗಿ ನಮಸ್ಕರಿಸಿದರು. ಬಳಿಕ ಮಾತನಾಡಿದ ಅವರು, ‘ಮುರುಘ ಮಠದ ಶರಣರು ಎಲ್ಲ ಧರ್ಮ ಗುರುಗಳ ಜೊತೆಯಲ್ಲಿ ಪಾದಯಾತ್ರೆಗೆ ಆಗಮಿಸಿದ್ದಾರೆ. ಮಾದಾರ ಚನ್ನಯ್ಯ ಸ್ವಾಮೀಜಿಗಳು, ಮಡಿವಾಳ ಸ್ವಾಮೀಜಿ, ಗಂಗಾವತಿ ಸ್ವಾಮೀಜಿ, ಹಾವೇರಿ ಸ್ವಾಮೀಜಿ, ಹರಿಹರ ಸ್ವಾಮೀಜಿ ಸೇರಿದಂತೆ ಎಲ್ಲರೂ ಈ ಐತಿಹಾಸಿಕ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಬಂದಿದ್ದಾರೆ. ಕುಡಿಯುವ ನೀರಿಗಾಗಿ ಸ್ವಾಮೀಜಿಗಳು ನಮ್ಮ ಕಾರ್ಯಕರ್ತರು ಹಾಗೂ ನಾಯಕರ ಜತೆ ಹೆಜ್ಜೆ ಹಾಕುತ್ತಿದ್ದಾರೆ’ ಎಂದು ಸಂತಸ ವ್ಯಕ್ತಪಡಿಸಿದರು.

ಈ ಪಾದಯಾತ್ರೆಗೆ ಮುರುಘ ಮಠದ ಶರಣರ ನೇತೃತ್ವ ರಾಜ್ಯದ ಇತಿಹಾಸ ಪುಟಕ್ಕೆ ಸೇರಲಿದೆ. ಎಲ್ಲ ಧರ್ಮ ಪೀಠಗಳನ್ನು ಸ್ಥಾಪಿಸಿದ ಏಕೈಕ ಸ್ವಾಮೀಜಿ ಎಂದರೆ ಅದು ನಮ್ಮ ಮುರುಘಾ ಮಠದ ಶರಣರು ಎಂದು ಶ್ಲಾಘಿಸಿದರು.

ಈ ಯಾತ್ರೆ ಯಾವ ಶುಭ ಗಳಿಗೆಯಲ್ಲಿ ಆರಂಭವಾಗಿದೆ ಎಂದರೆ- ಬುದ್ಧ ಬಸವರು ಮನೆಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತ ಶಿಲುಬೆಗೆ ಏರಿದ ಗಳಿಗೆಯಲ್ಲಿ, ಪ್ರವಾದಿ ಪೈಗಂಬರ್ ದಿವ್ಯವಾಣಿ ಕೇಳಿದ ಗಳಿಗೆಯಲ್ಲಿ, ಮಹಾತ್ಮಾಗಾಂಧಿ ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ, ಭೀಮಾಭಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ಕಟ್ಟಿದ ಗಳಿಗೆಯಲ್ಲಿ, ಸೋನಿಯಾ ಗಾಂಧಿ ಅವರು ಪ್ರಧಾನಮಂತ್ರಿ ಸ್ಥಾನ ತ್ಯಾಗ ಮಾಡಿ ಅದನ್ನು ಮನಮೋಹನ್ ಸಿಂಗ್ ಅವರಿಗೆ ಕೊಟ್ಟ ಗಳಿಗೆಯಲ್ಲಿ ಈ ಪಾದಯಾತ್ರೆ ಆರಂಭವಾಗಿದೆ. ಇಂತಹ ಶುಭ ಗಳಿಗೆಯಲ್ಲಿ ಮುರುಘಾ ಶರಣರು ಬಂದು ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಣ್ಣಿಸಿದರು.

‘ಇದು ನಮ್ಮ ಹೋರಾಟವಲ್ಲ, ನಿಮ್ಮ ಹೋರಾಟ. ಈ ಹೋರಾಟಕ್ಕೆ ಶ್ರೀಗಳನ್ನು ನಾನು ಸ್ವಾಗತ ಮಾಡುತ್ತೇನೆ’ ಎಂದರು.


ಇದನ್ನೂ ಓದಿರಿ: ರಾಮನಗರದಿಂದ ಮತ್ತೆ ಮೇಕೆದಾಟು ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....