Homeಕರ್ನಾಟಕಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌...

ಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌ ಪ್ರತಿಕ್ರಿಯೆ

- Advertisement -
- Advertisement -

“ಟ್ವೀಟ್‌ಗಳನ್ನು ಖಂಡಿತಾ ನಿಲ್ಲಿಸುವುದಿಲ್ಲ, ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು ಅಥವಾ ಕೃಷ್ಣ ದೀಕ್ಷಿತ್ ಅವರಾಗಿರಬಹುದು ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು, ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವವನ್ನು ಉಳಿಸುವುದೇ ನಮ್ಮ ಗುರಿ” ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಸೋಮವಾರ ಜೈಲಿನಿಂದ ಬಿಡುಯಗಡೆಯಾದ ಬಳಿಕ ಹೇಳಿದ್ದಾರೆ.

ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆಂದು ಆರೋಪಿಸಿ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಚೇತನ್‌ ಅವರನ್ನು ಬಂಧಿಸಲಾಗಿತ್ತು. ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು ಸೋಮವಾರ ಸಂಜೆ ಚೇತನ್‌ ಬಿಡುಗಡೆಯಾಗಿದ್ದಾರೆ.

ಚೇತನ್ ಆಗಮನಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳು, ಸಾಮಾಜಿಕ ಹೋರಾಟಗಾರರು ಘೋಷಣೆಗಳನ್ನು ಕೂಗಿದರು. ತಮಟೆ ಭಾರಿಸಿ, ಹೂವಿನ ಹೂಮಳೆಗರೆದು ಅವರನ್ನು ಬರಮಾಡಿಕೊಂಡರು. ಬಳಿಕ ಚೇತನ್‌ ಅವರನ್ನು ಹೊತ್ತು ಸಂಭ್ರಮಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, “ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವ ಉಳಿಸುವುದೇ ನಮ್ಮ ಗುರಿ” ಎಂದು ಘೋಷಿಸಿದರು.

“ಅನ್ಯಾಯವಿದ್ದರೆ ನಾವು ಅದನ್ನು ಪ್ರಶ್ನೆ ಮಾಡುತ್ತೇವೆ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ವಿಚಾರಗಳೇ ಪರಿವರ್ತನೆಗಳು. ಇದೇ ನಮಗೆ ಬೇಕಾಗಿರುವುದು. ಇದೇ ಭವಿಷ್ಯ. ಖಂಡಿತ ಹೋರಾಟ ಮುಂದುವರಿಸುತ್ತೇವೆ” ಎಂದರು.

“ನಾವು ಅನ್ಯಾಯದ ವಿರುದ್ಧ ನಿಂತುಕೊಳ್ಳುತ್ತೇವೆ. ಉತ್ತಮ ಸಮಾಜದ ಪರ ನಿಲ್ಲುತ್ತೇವೆ. ಸಂವಿಧಾನ ನಮಗೆ ಸಮಾನತೆಯನ್ನು ನೀಡಿದೆ. ಅನ್ಯಾಯದ ವಿರುದ್ಧ ನಾವು ಧ್ವನಿ ಎತ್ತುತ್ತಾ ಬರುತ್ತಿದ್ದೇವೆ. ಸಮಸಮಾಜದ ವಿಚಾರಕ್ಕಾಗಿ ನಾವು ದನಿ ಎತ್ತುತ್ತಿದ್ದೇವೆ, ಜೈ ಭೀಮ್‌” ಎಂದು ಅವರು ಘೋಷಣೆ ಕೂಗಿದರು.

“ಪೊಲೀಸರು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿರುವುದು ಒಂದು ಪೋಸ್ಟ್‌ ವಿರುದ್ಧ. ಅದರಲ್ಲಿ ಯಾವುದೇ ಅವಹೇಳನಕಾರಿ ವಿಚಾರಗಳಿಲ್ಲ. ಯಾರನ್ನೂ ಪ್ರಚೋದಿಸುವ ಟ್ವೀಟ್ ಮಾಡಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

“ಶಾಸನಸಭೆಯಲ್ಲಿ ಕೆಲವರು ರೇಪ್‌ ಬಗ್ಗೆ ಮಾತನಾಡುತ್ತಾರೆ, ಅದು ಪ್ರಚೋದನಕಾರಿಯಲ್ಲವಾ? ಅವರನ್ನು ಏಕೆ ಬಂಧಿಸಿಲ್ಲ. ಅಲ್ಪಸಂಖ್ಯಾತರ ವಿರುದ್ಧ ಎಷ್ಟು ಪ್ರಚೋದನಕಾರಿಯಾಗಿ ಮಾತನಾಡುತ್ತಾರೆ. ಅವರನ್ನೇಕೆ ಬಂಧಿಸಿಲ್ಲ. ಒಂದು ಟ್ವೀಟ್‌ ಮೂಲಕ ಮಹಿಳಾ ವಿರೋಧಿ ತೀರ್ಪನ್ನು ಟೀಕಿಸಿದ್ದಕ್ಕೆ ಜೈಲಿಗೆ ಹಾಕುತ್ತೀರಲ್ಲ, ಅದು ನಿಜಕ್ಕೂ ಅಪ್ರಜಾಪ್ರಭುತ್ವ ನಡೆ” ಎಂದು ಖಂಡಿಸಿದರು.

“ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆ. ನಾವು ಸರ್ವಾಧಿಕಾರವನ್ನು ಯಾವುದೇ ಕಾರಣಕ್ಕೂ ಒಪ್ಪಲ್ಲ. ಇದು ಪ್ರಜಾಪ್ರಭುತ್ವ. ಅದನ್ನು ಎತ್ತು ಹಿಡಿಯುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಮಾಡುತ್ತೇವೆ” ಎಂದರು.

“ನಾವು ಕಾನೂನು ಉಲ್ಲಂಘನೆ ಮಾಡಿಲ್ಲ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ಸಿದ್ಧಾಂತದಲ್ಲಿ ಅಷ್ಟೊಂದು ಶಕ್ತಿ ಇದೆ. ಪೆರಿಯಾರ್‌ ಅವರು ಎಂಬತ್ತು ಸಲ ಜೈಲಿಗೆ ಹೋಗಿ ಬರುತ್ತಾರೆ. ಹದಿನೈದು ವರ್ಷಗಳಲ್ಲಿ ಇಪ್ಪತ್ತಮೂರು ಸಲ ಜೈಲಿಗೆ ಹೋಗುತ್ತಾರೆ. ಇಂತಹ ವಿಚಾರಗಳನ್ನು ಹೇಳುವವರನ್ನು ಜೈಲಿಗೆ ಹಾಕಿಯೇ ಹಾಕುತ್ತಾರೆ. ಟ್ವೀಟ್‌ ಮಾಡುವುದನ್ನು ಖಂಡಿತ ನಿಲ್ಲಿಸಲ್ಲ” ಎಂದು ಗುಡುಗಿದರು.

“ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಪ್ರಶ್ನಾತೀತರಲ್ಲ. ಈ ಟ್ವೀಟ್‌ಗಳನ್ನು ಖಂಡಿತ ನಿಲ್ಲಿಸುವುದಿಲ್ಲ. ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು, ಕೃಷ್ಣ ದೀಕ್ಷಿತ್ ಅವರಾಗಿರಬಹುದು, ಎಲ್ಲರನ್ನೂ ನಾವು ಪ್ರಶ್ನೆ ಮಾಡಿಯೇ ಮಾಡುತ್ತೇವೆ. ಇದು ಸಂವಿಧಾನಿಕ ಹಕ್ಕು” ಎಂದು ಪ್ರತಿಪಾದಿಸಿದರು.

ಹಲವು ಸಾಮಾಜಿಕ ಹೋರಾಟಗಾರರು ಈ ಸಂದರ್ಭದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅನ್ಯಾಯದ ವಿರುದ್ಧದ ಚೇತನರ ಹೋರಾಟ ಮುಂದುವರೆಯಲಿ. ಆಡಳಿತಾರೂಢರ ದೌರ್ಜನ್ಯ, ದಬ್ಬಾಳಿಕೆಗಳಿಗೆ ಹೆದರುವುದು ಬೇಡ.

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...