Homeಕರ್ನಾಟಕಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌...

ಟ್ವೀಟ್‌ಗಳನ್ನು ನಿಲ್ಲಿಸುವುದಿಲ್ಲ, ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು: ಬಿಡುಗಡೆಯ ಬಳಿಕ ಚೇತನ್‌ ಪ್ರತಿಕ್ರಿಯೆ

- Advertisement -
- Advertisement -

“ಟ್ವೀಟ್‌ಗಳನ್ನು ಖಂಡಿತಾ ನಿಲ್ಲಿಸುವುದಿಲ್ಲ, ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು ಅಥವಾ ಕೃಷ್ಣ ದೀಕ್ಷಿತ್ ಅವರಾಗಿರಬಹುದು ಯಾರೇ ಇರಲಿ ಪ್ರಶ್ನೆ ಮಾಡುತ್ತೇವೆ; ಅದು ನಮ್ಮ ಹಕ್ಕು, ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವವನ್ನು ಉಳಿಸುವುದೇ ನಮ್ಮ ಗುರಿ” ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅಹಿಂಸಾ ಸೋಮವಾರ ಜೈಲಿನಿಂದ ಬಿಡುಯಗಡೆಯಾದ ಬಳಿಕ ಹೇಳಿದ್ದಾರೆ.

ಆಕ್ಷೇಪಾರ್ಹ ಟ್ವೀಟ್ ಮಾಡಿದ್ದಾರೆಂದು ಆರೋಪಿಸಿ ಶೇಷಾದ್ರಿಪುರಂ ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಚೇತನ್‌ ಅವರನ್ನು ಬಂಧಿಸಲಾಗಿತ್ತು. ಜಾಮೀನು ಪ್ರಕ್ರಿಯೆಗಳು ಮುಗಿದಿದ್ದು ಸೋಮವಾರ ಸಂಜೆ ಚೇತನ್‌ ಬಿಡುಗಡೆಯಾಗಿದ್ದಾರೆ.

ಚೇತನ್ ಆಗಮನಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳು, ಸಾಮಾಜಿಕ ಹೋರಾಟಗಾರರು ಘೋಷಣೆಗಳನ್ನು ಕೂಗಿದರು. ತಮಟೆ ಭಾರಿಸಿ, ಹೂವಿನ ಹೂಮಳೆಗರೆದು ಅವರನ್ನು ಬರಮಾಡಿಕೊಂಡರು. ಬಳಿಕ ಚೇತನ್‌ ಅವರನ್ನು ಹೊತ್ತು ಸಂಭ್ರಮಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, “ಹೋರಾಟ ಮುಂದುವರಿಯುತ್ತದೆ. ಪ್ರಜಾಪ್ರಭುತ್ವ ಉಳಿಸುವುದೇ ನಮ್ಮ ಗುರಿ” ಎಂದು ಘೋಷಿಸಿದರು.

“ಅನ್ಯಾಯವಿದ್ದರೆ ನಾವು ಅದನ್ನು ಪ್ರಶ್ನೆ ಮಾಡುತ್ತೇವೆ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ವಿಚಾರಗಳೇ ಪರಿವರ್ತನೆಗಳು. ಇದೇ ನಮಗೆ ಬೇಕಾಗಿರುವುದು. ಇದೇ ಭವಿಷ್ಯ. ಖಂಡಿತ ಹೋರಾಟ ಮುಂದುವರಿಸುತ್ತೇವೆ” ಎಂದರು.

“ನಾವು ಅನ್ಯಾಯದ ವಿರುದ್ಧ ನಿಂತುಕೊಳ್ಳುತ್ತೇವೆ. ಉತ್ತಮ ಸಮಾಜದ ಪರ ನಿಲ್ಲುತ್ತೇವೆ. ಸಂವಿಧಾನ ನಮಗೆ ಸಮಾನತೆಯನ್ನು ನೀಡಿದೆ. ಅನ್ಯಾಯದ ವಿರುದ್ಧ ನಾವು ಧ್ವನಿ ಎತ್ತುತ್ತಾ ಬರುತ್ತಿದ್ದೇವೆ. ಸಮಸಮಾಜದ ವಿಚಾರಕ್ಕಾಗಿ ನಾವು ದನಿ ಎತ್ತುತ್ತಿದ್ದೇವೆ, ಜೈ ಭೀಮ್‌” ಎಂದು ಅವರು ಘೋಷಣೆ ಕೂಗಿದರು.

“ಪೊಲೀಸರು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸ್ವಯಂಪ್ರೇರಿತ ಪ್ರಕರಣ ದಾಖಲು ಮಾಡಿರುವುದು ಒಂದು ಪೋಸ್ಟ್‌ ವಿರುದ್ಧ. ಅದರಲ್ಲಿ ಯಾವುದೇ ಅವಹೇಳನಕಾರಿ ವಿಚಾರಗಳಿಲ್ಲ. ಯಾರನ್ನೂ ಪ್ರಚೋದಿಸುವ ಟ್ವೀಟ್ ಮಾಡಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.

“ಶಾಸನಸಭೆಯಲ್ಲಿ ಕೆಲವರು ರೇಪ್‌ ಬಗ್ಗೆ ಮಾತನಾಡುತ್ತಾರೆ, ಅದು ಪ್ರಚೋದನಕಾರಿಯಲ್ಲವಾ? ಅವರನ್ನು ಏಕೆ ಬಂಧಿಸಿಲ್ಲ. ಅಲ್ಪಸಂಖ್ಯಾತರ ವಿರುದ್ಧ ಎಷ್ಟು ಪ್ರಚೋದನಕಾರಿಯಾಗಿ ಮಾತನಾಡುತ್ತಾರೆ. ಅವರನ್ನೇಕೆ ಬಂಧಿಸಿಲ್ಲ. ಒಂದು ಟ್ವೀಟ್‌ ಮೂಲಕ ಮಹಿಳಾ ವಿರೋಧಿ ತೀರ್ಪನ್ನು ಟೀಕಿಸಿದ್ದಕ್ಕೆ ಜೈಲಿಗೆ ಹಾಕುತ್ತೀರಲ್ಲ, ಅದು ನಿಜಕ್ಕೂ ಅಪ್ರಜಾಪ್ರಭುತ್ವ ನಡೆ” ಎಂದು ಖಂಡಿಸಿದರು.

“ಪೊಲೀಸ್ ರಾಜ್ಯ ಮಾಡಲು ಹೊರಟಿದ್ದಾರೆ. ನಾವು ಸರ್ವಾಧಿಕಾರವನ್ನು ಯಾವುದೇ ಕಾರಣಕ್ಕೂ ಒಪ್ಪಲ್ಲ. ಇದು ಪ್ರಜಾಪ್ರಭುತ್ವ. ಅದನ್ನು ಎತ್ತು ಹಿಡಿಯುವುದು ನಮ್ಮ ಕರ್ತವ್ಯ. ಆ ಕೆಲಸವನ್ನು ಮಾಡುತ್ತೇವೆ” ಎಂದರು.

“ನಾವು ಕಾನೂನು ಉಲ್ಲಂಘನೆ ಮಾಡಿಲ್ಲ. ಬುದ್ಧ, ಬಸವ, ಅಂಬೇಡ್ಕರ್‌, ಪೆರಿಯಾರ್‌, ಕುವೆಂಪು ಸಿದ್ಧಾಂತದಲ್ಲಿ ಅಷ್ಟೊಂದು ಶಕ್ತಿ ಇದೆ. ಪೆರಿಯಾರ್‌ ಅವರು ಎಂಬತ್ತು ಸಲ ಜೈಲಿಗೆ ಹೋಗಿ ಬರುತ್ತಾರೆ. ಹದಿನೈದು ವರ್ಷಗಳಲ್ಲಿ ಇಪ್ಪತ್ತಮೂರು ಸಲ ಜೈಲಿಗೆ ಹೋಗುತ್ತಾರೆ. ಇಂತಹ ವಿಚಾರಗಳನ್ನು ಹೇಳುವವರನ್ನು ಜೈಲಿಗೆ ಹಾಕಿಯೇ ಹಾಕುತ್ತಾರೆ. ಟ್ವೀಟ್‌ ಮಾಡುವುದನ್ನು ಖಂಡಿತ ನಿಲ್ಲಿಸಲ್ಲ” ಎಂದು ಗುಡುಗಿದರು.

“ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಪ್ರಶ್ನಾತೀತರಲ್ಲ. ಈ ಟ್ವೀಟ್‌ಗಳನ್ನು ಖಂಡಿತ ನಿಲ್ಲಿಸುವುದಿಲ್ಲ. ಸಿಎಂ, ಎಂಪಿ, ಎಂಎಲ್‌ಎ, ಐಪಿಎಸ್‌, ನ್ಯಾಯಾಧೀಶರು, ಮಲ್ಲಿಕಾರ್ಜುನ ಗೌಡ ಪಾಟೀಲ್ ಆಗಿರಬಹುದು, ಕೃಷ್ಣ ದೀಕ್ಷಿತ್ ಅವರಾಗಿರಬಹುದು, ಎಲ್ಲರನ್ನೂ ನಾವು ಪ್ರಶ್ನೆ ಮಾಡಿಯೇ ಮಾಡುತ್ತೇವೆ. ಇದು ಸಂವಿಧಾನಿಕ ಹಕ್ಕು” ಎಂದು ಪ್ರತಿಪಾದಿಸಿದರು.

ಹಲವು ಸಾಮಾಜಿಕ ಹೋರಾಟಗಾರರು ಈ ಸಂದರ್ಭದಲ್ಲಿ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅನ್ಯಾಯದ ವಿರುದ್ಧದ ಚೇತನರ ಹೋರಾಟ ಮುಂದುವರೆಯಲಿ. ಆಡಳಿತಾರೂಢರ ದೌರ್ಜನ್ಯ, ದಬ್ಬಾಳಿಕೆಗಳಿಗೆ ಹೆದರುವುದು ಬೇಡ.

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...