Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

- Advertisement -
- Advertisement -

ಉಕ್ರೇನ್‌-ರಷ್ಯಾ ಬಿಕ್ಕಟ್ಟಿನ ಹಿನ್ನಲೆಯಲ್ಲಿ, ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್‌‌ ಜೊತೆಗೆ ನಡೆದುಕೊಂಡು ಹೋಗುತ್ತಿರುವ ವಿಡಿಯೊವೊಂದರ ಜೊತೆಗೆ, “ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ಪುಟಿನ್, ಭಾರತದ ಪ್ರಧಾನಿ ಜೊತೆಗೆ ಮಾತುಕತೆ ನಡೆಸಲು ಮನವಿ ಮಾಡಿದ್ದರು” ಎಂಬ ಸಂದೇಶವೊಂದು ವೈರಲ್‌ ಆಗುತ್ತಿದೆ.

“ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಮೊದಲು ಮಾತುಕತೆ ನೆಡೆಸಲು ಮನವಿ ಮಾಡಿದ್ದು ಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೊತೆಗೆ ಹೊರತು ಬೇರೆ ದೇಶದ ಜೊತೆಗಲ್ಲ….ಮೋದಿ ಗತ್ತು ವಿಶ್ವಕ್ಕೆ ಗೊತ್ತು” ಎಂದು ವಿಡಿಯೊ ಜೊತೆಗಿನ ಸಂದೇಶ ಪ್ರತಿಪಾದಿಸುತ್ತದೆ.

ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಈ ವಿಡಿಯೊ ಮತ್ತು ಸಂದೇಶವನ್ನು ಹಲವಾರು ಬಳಕೆದಾರರು, ಅದರಲ್ಲೂ ಮುಖ್ಯವಾಗಿ ಬಿಜೆಪಿ ಬೆಂಬಲಿಗರು ಹಂಚಿಕೊಳ್ಳುತ್ತಿದ್ದಾರೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ಫ್ಯಾಕ್ಟ್‌ಚೆಕ್

ಉಕ್ರೇನ್‌-ರಷ್ಯಾ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಹಲವಾರು ಸಂಬಂಧಪಡದ, ಹಳೆಯ ಚಿತ್ರಗಳು ಹಾಗೂ ವಿಡಿಯೊಗಳು ಹರಿದಾಡುತ್ತಿದೆ. ವಿಡಿಯೊ ಮತ್ತು ವೈರಲ್ ಸಂದೇಶದ ಬಗ್ಗೆ ನಾನುಗೌರಿ.ಕಾಂ ಬೇರೆ ಬೇರೆಯಾಗಿ ಪರಿಶೀಲನೆ ನಡೆಸಿದೆ.

  • ವೈರಲ್ ವಿಡಿಯೊ 2021 ರ ಡಿಸೆಂಬರ್‌ 6ರದ್ದಾಗಿದೆ

ವೈರಲ್ ಸಂದೇಶ ಜೊತೆಗೆ ಹರಿದಾಡುತ್ತಿರುವ ವಿಡಿಯೊವನ್ನು ಕೆಲವು ಕೀವರ್ಡ್‌ಗಳ ಮೂಲಕ ಹುಡುಕಾಡಿದಾಗ ಈ ವಿಡಿಯೊ 2021 ರ ಡಿಸೆಂಬರ್‌ 6 ರಂದು ಮಾಡಿರುವ ವಿಡಿಯೊ ಎಂದು ತಿಳಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ 21 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯನ್ನು 2021 ರ ಡಿಸೆಂಬರ್‌ 6ರಂದು ನಡೆಸಿದ್ದರು. ಉಭಯ ನಾಯಕರು ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮತ್ತು ಕಾರ್ಯತಂತ್ರದ ಪಾಲುದಾರಿಕೆಯ ನಿರೀಕ್ಷೆಗಳನ್ನು ಚರ್ಚಿಸಿದ್ದರು. ಈ ಭೇಟಿಯ ಸಂದಂರ್ಭದಲ್ಲಿ ಮಾಡಲಾಗಿರುವ ವೀಡಿಯೊ ಇದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

  • ವೈರಲ್‌ ಸಂದೇಶ ಸುಳ್ಳಾಗಿದ್ದು, ಇದಕ್ಕೆ ಯಾವುದೇ ಆಧಾರವಿಲ್ಲ.

ವಿಡಿಯೊ ಜೊತೆಗೆ ಹರಿಡಾಡುತ್ತಿರುವ ಸಂದೇಶವು, “ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಅವರು ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನೆಡೆಸಲು ಮನವಿ ಮಾಡಿದ್ದರು” ಎಂದು ಪ್ರತಿಪಾದಿಸುತ್ತದೆ.

ವೈರಲ್ ಸಂದೇಶದಲ್ಲಿ ಹೇಳಿರುವಂತೆ, ಯುದ್ಧ ಪ್ರಾರಂಭವಾದ ನಂತರ ರಷ್ಯಾ ಅಧ್ಯಕ್ಷ ಪ್ರಧಾಮಿ ಮೋದಿ ಜೊತಗೆ ಮಾತುಕತೆಗೆ ವಿನಂತಿಸಿಯೆ ಇಲ್ಲ. ಈ ಬಗ್ಗೆ ಯಾವುದೇ ಸುದ್ದಿಗಳು ಇದುವರೆಗೂ ಲಭ್ಯವಿಲ್ಲ. ಒಂದು ವೇಳೆ ಪುಟಿನ್‌ ಈ ರೀತಿಯಾಗಿ ವಿನಂತಿಸಿದ್ದರೆ ವಿಶ್ವದ ಹಲವು ಮಾಧ್ಯಮಗಳು ವರದಿ ಮಾಡಿರುತ್ತಿದ್ದವು. ಆದರೆ ನಾನುಗೌರಿ.ಕಾಂಗೆ ಈ ರೀತಿಯ ಯಾವುದೆ ಸುದ್ದಿ ಲಭ್ಯವಾಗಿಲ್ಲ.

ಆದರೆ ರಷ್ಯಾ-ಉಕ್ರೇನ್‌ ಯದ್ಧ ಪ್ರಾರಂಭವಾದ ನಂತರ ಪ್ರಧಾನಿ ಮೋದಿ ಪುಟಿನ್‌ಗೆ ಕರೆ ಮಾಡಿ ಶಾಂತಿ ಕಾಪಾಡುವಂತೆ ಕರೆ ನೀಡಿದ್ದರು. ಜೊತೆಗೆ ಬಿಕ್ಕಟ್ಟಿನ ಬಗ್ಗೆ ವಿಶ್ವಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಎರಡು ಸಭೆಯಲ್ಲೂ ಭಾರತ ತಟಸ್ಥ ನೀತಿಯನ್ನು ಅನುಸರಿಸಿದೆ.

ಪುಟಿನ್‌ ಪ್ರಧಾನಿ ಮೋದಿಗೆ ಕರೆ ಮಾಡಿರುವ ಯಾವುದೆ ಸುದ್ದಿ ಲಭ್ಯವಾಗಿಲ್ಲ, ಬದಲಾಗಿ ಮೋದಿಯೆ ಪುಟಿನ್‌ಗೆ ಕರೆ ಮಾಡಿದ್ದರು.

ಒಟ್ಟಿನಲ್ಲಿ ವೈರಲ್‌ ವಿಡಿಯೊ ಮತ್ತು ಸಂದೇಶ ಹೇಳುವಂತೆ, ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಅವರು ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನೆಡೆಸಲು ಮನವಿ ಮಾಡಿದ್ದರು ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಅದರ ಜೊತೆಗೆ ವೈರಲ್‌ ಆಗಿರುವ ವಿಡಿಯೊ 2021 ರ ಡಿಸೆಂಬರ್‌ 6ರಂದು ನಡೆದ 21 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯದ್ದಾಗಿದೆ.

ರಷ್ಯಾ ಮತ್ತು ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ ಪ್ರಧಾನಿ ಮೋದಿ ಶಾಂತಿ ಕಾಪಾಡುವಂತೆ ಕರೆ ನೀಡಿದ್ದರು. ಆದರೂ ರಷ್ಯಾ ಮತ್ತು ಉಕ್ರೇನ್ ಯುದ್ಧ ಮುಂದುವರೆದಿದೆ. ಯುದ್ದದಿಂದಾಗಿ 14 ಮಕ್ಕಳು ಸೇರಿದಂತೆ 352 ಉಕ್ರೇನಿಯನ್ ನಾಗರಿಕರು ಮೃತಪಟ್ಟಿದ್ದು, 1,684 ಮಂದಿಗೆ ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ ಅಧೀಕೃತವಾಗಿ ಹೇಳಿದೆ.

ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟು ಪ್ರಾರಂಭವಾದ ನಂತರ ಸಂಬಂಧಪಡದ ಹಲವು ಹಳೆಯ ವಿಡಿಯೊ ಹಾಗೂ ಚಿತ್ರಗಳು ಹರಿದಾಡುತ್ತಿದೆ. ಇವುಗಳನ್ನು ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್‌ ಮಾಡಿದೆ. ಇದನ್ನು ನೀವು ಇಲ್ಲಿ   ನೋಡಬಹುದು. ಅಲ್ಲದೆ ಇತರ ಫ್ಯಾಕ್ಟ್‌ಚೆಕ್‌ ಲೇಖನಗಳಿಗೆ ನಮ್ಮ ಏನ್‌ಸುದ್ದಿ.ಕಾಂ ವೆಬ್‌ಸೈಟ್‌ಅನ್ನು ನೀವು ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...