Homeಅಂತರಾಷ್ಟ್ರೀಯಏನು ಸಿಗುತ್ತೊ ಅದರಲ್ಲಿ ಹತ್ತಿ ಕಿವ್‌‌ ತೊರೆಯಿರಿ: ಭಾರತೀಯ ಪ್ರಜೆಗಳಿಗೆ ಸರ್ಕಾರ ಸೂಚನೆ

ಏನು ಸಿಗುತ್ತೊ ಅದರಲ್ಲಿ ಹತ್ತಿ ಕಿವ್‌‌ ತೊರೆಯಿರಿ: ಭಾರತೀಯ ಪ್ರಜೆಗಳಿಗೆ ಸರ್ಕಾರ ಸೂಚನೆ

- Advertisement -
- Advertisement -

ರಷ್ಯಾ ಸೇನೆ ಉಕ್ರೇನ್‌ ಮೇಲೆ ತನ್ನ ದಾಳಿಯನ್ನು ಮುಂದುವರೆಸುತ್ತಿರುವ ಮಧ್ಯೆ, ಭಾರತವು ತನ್ನ ಎಲ್ಲಾ ನಾಗರಿಕರನ್ನು ‘ತುರ್ತಾಗಿ ರೈಲುಗಳು ಅಥವಾ ಲಭ್ಯವಿರುವ ಯಾವುದೇ ವಿಧಾನಗಳ ಮೂಲಕ’ ಉಕ್ರೇನ್ ರಾಜಧಾನಿ ಕೈವ್‌ನಿಂದ ತೊರೆಯುವಂತೆ ಒತ್ತಾಯಿಸಿದೆ. ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆಸುತ್ತಿದ್ದಂತೆ, ಇದೂವರೆಗೂ ಉಕ್ರೇನ್ನಲ್ಲಿ 352 ನಾಗರೀಕರು ಸಾವನ್ನಪ್ಪಿದ್ದು, 1,684 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಟ್ವೀಟ್ ಮಾಡಿರುವ ಉಕ್ರೇನ್‌ನ ಕೈವ್‌ನಲ್ಲಿರುವ ಭಾರತದ ರಾಯಭಾರ ಕಚೇರಿ, “ಕೈವ್‌ನಲ್ಲಿರುವ ಭಾರತೀಯರಿಗೆ ಸಲಹೆ… ಲಭ್ಯವಿರುವ ರೈಲುಗಳ ಮೂಲಕ ಅಥವಾ ಲಭ್ಯವಿರುವ ಯಾವುದೇ ಇತರ ವಿಧಾನಗಳ ಮೂಲಕ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ಪ್ರಜೆಗಳಿಗೆ ಇಂದು ತುರ್ತಾಗಿ ಕೈವ್ ತೊರೆಯುವಂತೆ ಸೂಚಿಸಲಾಗಿದೆ” ಎಂದು ಹೇಳಿದೆ.

ಕೈವ್‌ನ ವಾಯುವ್ಯ ರಸ್ತೆಗಳಲ್ಲಿ ರಷ್ಯಾದ ಮಿಲಿಟರಿ ವಾಹನಗಳ ದೀರ್ಘ ಬೆಂಗಾವಲುಗಳ ಉಪಗ್ರಹ ಚಿತ್ರಗಳು ಹೊರಹೊಮ್ಮಿದ ಗಂಟೆಗಳ ನಂತರ ಈ ಸಲಹೆಯನ್ನು ಭಾರತೀಯ ರಾಯಭಾರಿ ಕಚೇರಿ ಈ ಪೋಸ್ಟ್ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅಮೆರಿಕಾ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ಕಂಪನಿ ಬಿಡುಗಡೆ ಮಾಡಿದ ಈ ಚಿತ್ರಗಳಲ್ಲಿ ನೂರಾರು ಟ್ಯಾಂಕ್‌ಗಳು, ಫಿರಂಗಿಗಳು, ಶಸ್ತ್ರಸಜ್ಜಿತ ಲಾಜಿಸ್ಟಿಕ್ ವಾಹನಗಳು ಕಾಣುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

ಭಾರತೀಯ ರಾಯಭಾರಿಯ ಈ ನಡೆಯನ್ನು ವಿರೋಧಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ, “ಸಾವು-ಬದುಕಿನ ನಡುವೆ ಇರುವ ಸಾವಿರಾರು ಭಾರತೀಯರಿಗೆ ‘ಸಹಾಯ’ ಮಾಡುವ ಬದಲು ‘ಆತ್ಮನಿರ್ಭರ ಸಲಹೆ’ ಮಾತ್ರ ನೀಡುವುದೇ? ಕಳೆದ 5 ದಿನಗಳಿಂದ ಉಕ್ರೇನ್‌ನಲ್ಲಿ ಮೋದಿ ಸರ್ಕಾರ ಸಾವಿರಾರು ಮಕ್ಕಳನ್ನು ಇಲ್ಲಿಂದ ಅಲ್ಲಿಗೆ ಓಡಿಸುತ್ತಿದೆಯೇ? ಇಂತಹ ವಿನಾಶದಿಂದ ಹೊರಬರುವುದು ಹೇಗೆ, ಅಷ್ಟು ದೂರವನ್ನು ಹೇಗೆ ಕ್ರಮಿಸುವುದು ಮತ್ತು ಎಲ್ಲಿಗೆ ಹೋಗಬೇಕು? ಮಕ್ಕಳ ಬದುಕಿನೊಂದಿಗೆ ಎಷ್ಟು ದಿನ ಆಟವಾಡುತ್ತಿದ್ದೀರಿ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್ ಬಿಕ್ಕಟ್ಟು: 352 ಉಕ್ರೇನಿಯನ್ ನಾಗರಿಕರು ಸಾವು, 1,684 ಮಂದಿಗೆ ಗಾಯ

ಉಕ್ರೇನ್‌ನಲ್ಲಿ ಸುಮಾರು 16,000 ಭಾರತೀಯ ವಿದ್ಯಾರ್ಥಿಗಳು ಇನ್ನೂ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಕಳೆದ ಗುರುವಾರ ರಷ್ಯಾದ ದಾಳಿ ಪ್ರಾರಂಭವಾದಾಗಿನಿಂದ ಅವರು ಅಡಗಿರುವ ಭೂಗತ ಬಂಕರ್‌ಗಳು, ಮೆಟ್ರೋ ನಿಲ್ದಾಣಗಳು ಮತ್ತು ಬಾಂಬ್ ಶೆಲ್ಟರ್‌ಗಳ ಫೋಟೊ ಮತ್ತು ವಿಡಿಯೊಗಳನ್ನು ಅನೇಕ ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಇಲ್ಲಿಯವರೆಗೆ ಸುಮಾರು 8,000 ಭಾರತೀಯ ಪ್ರಜೆಗಳು ಉಕ್ರೇನ್‌ನಿಂದ ತೆರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸೋಮವಾರ ತಿಳಿಸಿದೆ.

ಸೋಮವಾರ, ರಾಯಭಾರ ಕಚೇರಿಯು ಕೈವ್‌ನಲ್ಲಿರುವ ರೈಲ್ವೆ ನಿಲ್ದಾಣಕ್ಕೆ ಹೋಗಲು ವಿದ್ಯಾರ್ಥಿಗಳನ್ನು ಕೇಳಿತ್ತು. ಅಲ್ಲಿ ಜನರನ್ನು ಪಶ್ಚಿಮ ಪ್ರದೇಶಕ್ಕೆ ಕರೆದೊಯ್ಯಲು ಉಕ್ರೇನ್ ವಿಶೇಷ ಸ್ಥಳಾಂತರಿಸುವ ರೈಲುಗಳನ್ನು ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಪಾಸ್‌ಪೋರ್ಟ್, ಸಾಕಷ್ಟು ನಗದು ಮತ್ತು ಬೆಚ್ಚಗಿನ ಬಟ್ಟೆಗಳನ್ನು ತೆಗೆದುಕೊಂಡು ಹೋಗುವಂತೆ ಕೇಳಲಾಗಿತ್ತು.

“ಎಲ್ಲಾ ಭಾರತೀಯ ಪ್ರಜೆಗಳು ಹಾಗೂ ವಿದ್ಯಾರ್ಥಿಗಳು ಶಾಂತಿಯುತವಾಗಿ ಮತ್ತು ಒಗ್ಗಟ್ಟಿನಿಂದ ಇರುವಂತೆ ನಾವು ಪ್ರಾಮಾಣಿಕವಾಗಿ ವಿನಂತಿಸುತ್ತೇವೆ. ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಇರಬಹುದಾದ್ದರಿಂದ ಎಲ್ಲಾ ಭಾರತೀಯ ವಿದ್ಯಾರ್ಥಿಗಳು ತಾಳ್ಮೆ ಮತ್ತು ಸಂಯಮದಿಂದಿರಬೇಕು. ಆಕ್ರಮಣಕಾರಿ ನಡವಳಿಕೆಯನ್ನು ಪ್ರದರ್ಶಿಸಬಾರದು” ಎಂದು ಸಲಹೆ ನೀಡಿತ್ತು.

ಇದನ್ನೂ ಓದಿ: ’ಬಿಡಾಡಿ ದನಗಳ ಸಂರಕ್ಷಣೆಯಲ್ಲಿ ಅದ್ಭುತ ಕೆಲಸ ಮಾಡಿದ್ದೇವೆ’- ಉತ್ತರ ಪ್ರದೇಶ ಸರ್ಕಾರ

ಈ ಮಧ್ಯೆ, ಅನೇಕ ವಿದ್ಯಾರ್ಥಿಗಳು ತಮ್ಮನ್ನು ರೈಲು ಹತ್ತಲು ಅನುಮತಿಸಲಿಲ್ಲ ಅಥವಾ ಅಧಿಕಾರಿಗಳು ತಮ್ಮೊಂದಿಗೆ ಕೆಟ್ಟದಾಗಿ ನಡೆಸಿಕೊಂಡರು ಎಂದು ದೂರಿದ್ದಾರೆ.

ಆದಾಗ್ಯೂ, ಕಳೆದ ವಾರದಿಂದ ರಾಯಭಾರ ಕಚೇರಿಯ ಬಳಿ ನೆಲೆಸಿರುವ ಸುಮಾರು 400 ವಿದ್ಯಾರ್ಥಿಗಳು ಸೇರಿದಂತೆ ಸೋಮವಾರ ಕೈವ್‌ನಿಂದ ಪಶ್ಚಿಮ ಉಕ್ರೇನ್ ಕಡೆಗೆ 1,000 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸ್ಥಳಾಂತರ ಮಾಡಲಾಗಿದೆ ಎಂದು ರಾಯಭಾರ ಕಚೇರಿ ಖಚಿತಪಡಿಸಿದೆ ಎಂದು ಸರ್ಕಾರಿ ಮೂಲಗಳು ಹೇಳಿಕೊಂಡಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಭಾರತೀಯ ವಿದ್ಯಾರ್ಥಿಗಳನ್ನು ಹಂಗೇರಿ, ಪೋಲೆಂಡ್, ರೊಮೇನಿಯಾ, ಸ್ಲೋವಾಕ್ ಗಣರಾಜ್ಯಕ್ಕೆ ಸ್ಥಳಾಂತರಿಸಲಾಗುತ್ತಿದೆ. ಈ ಎಲ್ಲಾ ದೇಶಗಳು ಉಕ್ರೇನ್‌ನೊಂದಿಗೆ ಗಡಿಯನ್ನು ಹಂಚಿಕೊಡಿದ್ದು, ಅಲ್ಲಿಂದ ಅವರನ್ನು ಆಪರೇಷನ್ ಗಂಗಾ ಅಡಿಯಲ್ಲಿ ಭಾರತಕ್ಕೆ ಸ್ಥಳಾಂತರಿಸಲಾಗುತ್ತದೆ ಎನ್ನಲಾಗಿದೆ.

ರಷ್ಯಾ ಒಕ್ಕೂಟದಿಂದ ಉಕ್ರೇನ್ ಬೇರ್ಪಟ್ಟ ನಂತರ, ಅಮೆರಿಕಾ ನೇತೃತ್ವದ NATO ಜೊತೆಗೆ ಸೇರಿಕೊಕೊಳ್ಳಲು ಯತ್ನಿಸುತ್ತಿದೆ. ಅದಕ್ಕಾಗಿ, ಅಮೆರಿಕಾ ಸಾಕಷ್ಟು ಯುದ್ದ ಶಸ್ತ್ರಾಸ್ತ್ರಗಳನ್ನು ಉಕ್ರೇನ್‌ನಲ್ಲಿ ಶೇಖರಣೆ ಮಾಡಿದೆ. ಇದು ರಷ್ಯಾ ವಿರುದ್ದದ ಷಡ್ಯಂತ್ರದ ಭಾಗವಾಗಿದ್ದು, ಉಕ್ರೇನ್ನಲ್ಲಿ ನ್ಯಾಟೋ ನೆಲೆಗೂಡುವುದನ್ನು ರಷ್ಯಾ ವಿರೋಧಿಸಿತ್ತು ಮತ್ತು ಯುದ್ದಾಸ್ತ್ರಗಳನ್ನು ಹಿಂಪಡೆಯುವಂತೆ ಹಲವು ತಿಂಗಳಿನಿಂದ ನ್ಯಾಟೋಗೆ ಹೇಳುತ್ತಲೇ ಇತ್ತು. ಕೊನೆಗೆ ಕಳೆದ ಗುರುವಾರ ಬೆಳಿಗ್ಗೆ ರಷ್ಯಾ ಸೇನೆ ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...