Homeಅಂತರಾಷ್ಟ್ರೀಯಏನು ಸಿಗುತ್ತೊ ಅದರಲ್ಲಿ ಹತ್ತಿ ಕಿವ್‌‌ ತೊರೆಯಿರಿ: ಭಾರತೀಯ ಪ್ರಜೆಗಳಿಗೆ ಸರ್ಕಾರ ಸೂಚನೆ

ಏನು ಸಿಗುತ್ತೊ ಅದರಲ್ಲಿ ಹತ್ತಿ ಕಿವ್‌‌ ತೊರೆಯಿರಿ: ಭಾರತೀಯ ಪ್ರಜೆಗಳಿಗೆ ಸರ್ಕಾರ ಸೂಚನೆ

- Advertisement -
- Advertisement -

ರಷ್ಯಾ ಸೇನೆ ಉಕ್ರೇನ್‌ ಮೇಲೆ ತನ್ನ ದಾಳಿಯನ್ನು ಮುಂದುವರೆಸುತ್ತಿರುವ ಮಧ್ಯೆ, ಭಾರತವು ತನ್ನ ಎಲ್ಲಾ ನಾಗರಿಕರನ್ನು ‘ತುರ್ತಾಗಿ ರೈಲುಗಳು ಅಥವಾ ಲಭ್ಯವಿರುವ ಯಾವುದೇ ವಿಧಾನಗಳ ಮೂಲಕ’ ಉಕ್ರೇನ್ ರಾಜಧಾನಿ ಕೈವ್‌ನಿಂದ ತೊರೆಯುವಂತೆ ಒತ್ತಾಯಿಸಿದೆ. ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆಸುತ್ತಿದ್ದಂತೆ, ಇದೂವರೆಗೂ ಉಕ್ರೇನ್ನಲ್ಲಿ 352 ನಾಗರೀಕರು ಸಾವನ್ನಪ್ಪಿದ್ದು, 1,684 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಟ್ವೀಟ್ ಮಾಡಿರುವ ಉಕ್ರೇನ್‌ನ ಕೈವ್‌ನಲ್ಲಿರುವ ಭಾರತದ ರಾಯಭಾರ ಕಚೇರಿ, “ಕೈವ್‌ನಲ್ಲಿರುವ ಭಾರತೀಯರಿಗೆ ಸಲಹೆ… ಲಭ್ಯವಿರುವ ರೈಲುಗಳ ಮೂಲಕ ಅಥವಾ ಲಭ್ಯವಿರುವ ಯಾವುದೇ ಇತರ ವಿಧಾನಗಳ ಮೂಲಕ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ಪ್ರಜೆಗಳಿಗೆ ಇಂದು ತುರ್ತಾಗಿ ಕೈವ್ ತೊರೆಯುವಂತೆ ಸೂಚಿಸಲಾಗಿದೆ” ಎಂದು ಹೇಳಿದೆ.

ಕೈವ್‌ನ ವಾಯುವ್ಯ ರಸ್ತೆಗಳಲ್ಲಿ ರಷ್ಯಾದ ಮಿಲಿಟರಿ ವಾಹನಗಳ ದೀರ್ಘ ಬೆಂಗಾವಲುಗಳ ಉಪಗ್ರಹ ಚಿತ್ರಗಳು ಹೊರಹೊಮ್ಮಿದ ಗಂಟೆಗಳ ನಂತರ ಈ ಸಲಹೆಯನ್ನು ಭಾರತೀಯ ರಾಯಭಾರಿ ಕಚೇರಿ ಈ ಪೋಸ್ಟ್ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅಮೆರಿಕಾ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ಕಂಪನಿ ಬಿಡುಗಡೆ ಮಾಡಿದ ಈ ಚಿತ್ರಗಳಲ್ಲಿ ನೂರಾರು ಟ್ಯಾಂಕ್‌ಗಳು, ಫಿರಂಗಿಗಳು, ಶಸ್ತ್ರಸಜ್ಜಿತ ಲಾಜಿಸ್ಟಿಕ್ ವಾಹನಗಳು ಕಾಣುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

ಭಾರತೀಯ ರಾಯಭಾರಿಯ ಈ ನಡೆಯನ್ನು ವಿರೋಧಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ, “ಸಾವು-ಬದುಕಿನ ನಡುವೆ ಇರುವ ಸಾವಿರಾರು ಭಾರತೀಯರಿಗೆ ‘ಸಹಾಯ’ ಮಾಡುವ ಬದಲು ‘ಆತ್ಮನಿರ್ಭರ ಸಲಹೆ’ ಮಾತ್ರ ನೀಡುವುದೇ? ಕಳೆದ 5 ದಿನಗಳಿಂದ ಉಕ್ರೇನ್‌ನಲ್ಲಿ ಮೋದಿ ಸರ್ಕಾರ ಸಾವಿರಾರು ಮಕ್ಕಳನ್ನು ಇಲ್ಲಿಂದ ಅಲ್ಲಿಗೆ ಓಡಿಸುತ್ತಿದೆಯೇ? ಇಂತಹ ವಿನಾಶದಿಂದ ಹೊರಬರುವುದು ಹೇಗೆ, ಅಷ್ಟು ದೂರವನ್ನು ಹೇಗೆ ಕ್ರಮಿಸುವುದು ಮತ್ತು ಎಲ್ಲಿಗೆ ಹೋಗಬೇಕು? ಮಕ್ಕಳ ಬದುಕಿನೊಂದಿಗೆ ಎಷ್ಟು ದಿನ ಆಟವಾಡುತ್ತಿದ್ದೀರಿ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್ ಬಿಕ್ಕಟ್ಟು: 352 ಉಕ್ರೇನಿಯನ್ ನಾಗರಿಕರು ಸಾವು, 1,684 ಮಂದಿಗೆ ಗಾಯ

ಉಕ್ರೇನ್‌ನಲ್ಲಿ ಸುಮಾರು 16,000 ಭಾರತೀಯ ವಿದ್ಯಾರ್ಥಿಗಳು ಇನ್ನೂ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಕಳೆದ ಗುರುವಾರ ರಷ್ಯಾದ ದಾಳಿ ಪ್ರಾರಂಭವಾದಾಗಿನಿಂದ ಅವರು ಅಡಗಿರುವ ಭೂಗತ ಬಂಕರ್‌ಗಳು, ಮೆಟ್ರೋ ನಿಲ್ದಾಣಗಳು ಮತ್ತು ಬಾಂಬ್ ಶೆಲ್ಟರ್‌ಗಳ ಫೋಟೊ ಮತ್ತು ವಿಡಿಯೊಗಳನ್ನು ಅನೇಕ ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಇಲ್ಲಿಯವರೆಗೆ ಸುಮಾರು 8,000 ಭಾರತೀಯ ಪ್ರಜೆಗಳು ಉಕ್ರೇನ್‌ನಿಂದ ತೆರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸೋಮವಾರ ತಿಳಿಸಿದೆ.

ಸೋಮವಾರ, ರಾಯಭಾರ ಕಚೇರಿಯು ಕೈವ್‌ನಲ್ಲಿರುವ ರೈಲ್ವೆ ನಿಲ್ದಾಣಕ್ಕೆ ಹೋಗಲು ವಿದ್ಯಾರ್ಥಿಗಳನ್ನು ಕೇಳಿತ್ತು. ಅಲ್ಲಿ ಜನರನ್ನು ಪಶ್ಚಿಮ ಪ್ರದೇಶಕ್ಕೆ ಕರೆದೊಯ್ಯಲು ಉಕ್ರೇನ್ ವಿಶೇಷ ಸ್ಥಳಾಂತರಿಸುವ ರೈಲುಗಳನ್ನು ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಪಾಸ್‌ಪೋರ್ಟ್, ಸಾಕಷ್ಟು ನಗದು ಮತ್ತು ಬೆಚ್ಚಗಿನ ಬಟ್ಟೆಗಳನ್ನು ತೆಗೆದುಕೊಂಡು ಹೋಗುವಂತೆ ಕೇಳಲಾಗಿತ್ತು.

“ಎಲ್ಲಾ ಭಾರತೀಯ ಪ್ರಜೆಗಳು ಹಾಗೂ ವಿದ್ಯಾರ್ಥಿಗಳು ಶಾಂತಿಯುತವಾಗಿ ಮತ್ತು ಒಗ್ಗಟ್ಟಿನಿಂದ ಇರುವಂತೆ ನಾವು ಪ್ರಾಮಾಣಿಕವಾಗಿ ವಿನಂತಿಸುತ್ತೇವೆ. ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಇರಬಹುದಾದ್ದರಿಂದ ಎಲ್ಲಾ ಭಾರತೀಯ ವಿದ್ಯಾರ್ಥಿಗಳು ತಾಳ್ಮೆ ಮತ್ತು ಸಂಯಮದಿಂದಿರಬೇಕು. ಆಕ್ರಮಣಕಾರಿ ನಡವಳಿಕೆಯನ್ನು ಪ್ರದರ್ಶಿಸಬಾರದು” ಎಂದು ಸಲಹೆ ನೀಡಿತ್ತು.

ಇದನ್ನೂ ಓದಿ: ’ಬಿಡಾಡಿ ದನಗಳ ಸಂರಕ್ಷಣೆಯಲ್ಲಿ ಅದ್ಭುತ ಕೆಲಸ ಮಾಡಿದ್ದೇವೆ’- ಉತ್ತರ ಪ್ರದೇಶ ಸರ್ಕಾರ

ಈ ಮಧ್ಯೆ, ಅನೇಕ ವಿದ್ಯಾರ್ಥಿಗಳು ತಮ್ಮನ್ನು ರೈಲು ಹತ್ತಲು ಅನುಮತಿಸಲಿಲ್ಲ ಅಥವಾ ಅಧಿಕಾರಿಗಳು ತಮ್ಮೊಂದಿಗೆ ಕೆಟ್ಟದಾಗಿ ನಡೆಸಿಕೊಂಡರು ಎಂದು ದೂರಿದ್ದಾರೆ.

ಆದಾಗ್ಯೂ, ಕಳೆದ ವಾರದಿಂದ ರಾಯಭಾರ ಕಚೇರಿಯ ಬಳಿ ನೆಲೆಸಿರುವ ಸುಮಾರು 400 ವಿದ್ಯಾರ್ಥಿಗಳು ಸೇರಿದಂತೆ ಸೋಮವಾರ ಕೈವ್‌ನಿಂದ ಪಶ್ಚಿಮ ಉಕ್ರೇನ್ ಕಡೆಗೆ 1,000 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸ್ಥಳಾಂತರ ಮಾಡಲಾಗಿದೆ ಎಂದು ರಾಯಭಾರ ಕಚೇರಿ ಖಚಿತಪಡಿಸಿದೆ ಎಂದು ಸರ್ಕಾರಿ ಮೂಲಗಳು ಹೇಳಿಕೊಂಡಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಭಾರತೀಯ ವಿದ್ಯಾರ್ಥಿಗಳನ್ನು ಹಂಗೇರಿ, ಪೋಲೆಂಡ್, ರೊಮೇನಿಯಾ, ಸ್ಲೋವಾಕ್ ಗಣರಾಜ್ಯಕ್ಕೆ ಸ್ಥಳಾಂತರಿಸಲಾಗುತ್ತಿದೆ. ಈ ಎಲ್ಲಾ ದೇಶಗಳು ಉಕ್ರೇನ್‌ನೊಂದಿಗೆ ಗಡಿಯನ್ನು ಹಂಚಿಕೊಡಿದ್ದು, ಅಲ್ಲಿಂದ ಅವರನ್ನು ಆಪರೇಷನ್ ಗಂಗಾ ಅಡಿಯಲ್ಲಿ ಭಾರತಕ್ಕೆ ಸ್ಥಳಾಂತರಿಸಲಾಗುತ್ತದೆ ಎನ್ನಲಾಗಿದೆ.

ರಷ್ಯಾ ಒಕ್ಕೂಟದಿಂದ ಉಕ್ರೇನ್ ಬೇರ್ಪಟ್ಟ ನಂತರ, ಅಮೆರಿಕಾ ನೇತೃತ್ವದ NATO ಜೊತೆಗೆ ಸೇರಿಕೊಕೊಳ್ಳಲು ಯತ್ನಿಸುತ್ತಿದೆ. ಅದಕ್ಕಾಗಿ, ಅಮೆರಿಕಾ ಸಾಕಷ್ಟು ಯುದ್ದ ಶಸ್ತ್ರಾಸ್ತ್ರಗಳನ್ನು ಉಕ್ರೇನ್‌ನಲ್ಲಿ ಶೇಖರಣೆ ಮಾಡಿದೆ. ಇದು ರಷ್ಯಾ ವಿರುದ್ದದ ಷಡ್ಯಂತ್ರದ ಭಾಗವಾಗಿದ್ದು, ಉಕ್ರೇನ್ನಲ್ಲಿ ನ್ಯಾಟೋ ನೆಲೆಗೂಡುವುದನ್ನು ರಷ್ಯಾ ವಿರೋಧಿಸಿತ್ತು ಮತ್ತು ಯುದ್ದಾಸ್ತ್ರಗಳನ್ನು ಹಿಂಪಡೆಯುವಂತೆ ಹಲವು ತಿಂಗಳಿನಿಂದ ನ್ಯಾಟೋಗೆ ಹೇಳುತ್ತಲೇ ಇತ್ತು. ಕೊನೆಗೆ ಕಳೆದ ಗುರುವಾರ ಬೆಳಿಗ್ಗೆ ರಷ್ಯಾ ಸೇನೆ ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....