Homeಕರ್ನಾಟಕವಿಜಯಪುರ: ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಎಬಿವಿಪಿ ಸದಸ್ಯೆ ಮೇಲೆ ಎಫ್‌ಐಆರ್‌

ವಿಜಯಪುರ: ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಎಬಿವಿಪಿ ಸದಸ್ಯೆ ಮೇಲೆ ಎಫ್‌ಐಆರ್‌

- Advertisement -
- Advertisement -

ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ್ದ ಆರೋಪದ ಮೇಲೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯೆಯ ವಿರುದ್ಧ ವಿಜಯಪುರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಮುಸ್ಲಿಮರ ವಿರುದ್ಧ ವಿಶೇಷವಾಗಿ ಹಿಜಾಬ್ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವ ಆರು ವಿದ್ಯಾರ್ಥಿನಿಯರ ವಿರುದ್ಧ ಬಹಿರಂಗ ಹಿಂಸಾಚಾರಕ್ಕೆ ಪೂಜಾ ಕರೆ ನೀಡಿದ್ದರು. ಜೊತೆಗೆ 60,000 ಮುಸ್ಲಿಮರನ್ನು ಕೊಲ್ಲುವುದಾಗಿ ಪೂಜಾ ಹೇಳಿದ್ದಾರೆಂಬ ವಿಡಿಯೊವನ್ನು ಹಲವಾರು ವೆರಿಫೈಡ್‌ ಟ್ವಿಟರ್ ಬಳಕೆದಾರರು ಹಂಚಿಕೊಂಡಿದ್ದರು.

ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು), 504 (ಶಾಂತಿ ಕದಡುವ ಉದ್ದೇಶ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ ಕುಮಾರ್ ತಿಳಿಸಿದ್ದಾರೆ.

ಪೂಜಾ ಬಂಧನವಾಗಿಲ್ಲ. ‘ಸಕಾಲದಲ್ಲಿ ಅವರನ್ನು ಬಂಧಿಸಲಾಗುವುದು’ ಎಂದು ಎಸ್‌ಪಿ ತಿಳಿಸಿದ್ದಾರೆ. ಆರೋಪಿಯ ವಯಸ್ಸು ಮತ್ತು ಇತರ ವಿವರಗಳು ಲಭ್ಯವಾಗಿಲ್ಲ. ಅವುಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪೂಜಾ ವೀರಶೆಟ್ಟಿಯವರ ಭಾಷಣಕ್ಕೆ ಸಂಬಂಧಿಸಿದಂತೆ ವಿರೋಧಗಳು ವ್ಯಕ್ತವಾಗುತ್ತಿದ್ದರೂ ಪ್ರಕರಣ ದಾಖಲಾಗಿರಲಿಲ್ಲ. ಈ ಸಂಬಂಧ  ‘ನಾನುಗೌರಿ.ಕಾಂ’ ಎರಡು ದಿನಗಳ ಹಿಂದೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್‌.ಡಿ.ಆನಂದ್‌ಕುಮಾರ್‌ ಅವರನ್ನು ಸಂಪರ್ಕಿಸಿತ್ತು.

“ಯಾರೂ ಇದುವರೆಗೆ ದೂರು ನೀಡಿಲ್ಲ. ಕಾನೂನು ತಜ್ಞರ ಬಳಿ ಮಾತನಾಡುತ್ತಿದ್ದೇವೆ. ಅವರ ಅಭಿಪ್ರಾಯ ತೆಗೆದುಕೊಂಡು ಸೂಕ್ತ ಕ್ರಮ ಜರುಗಿಸಲಾಗುತ್ತದೆ” ಎಂದು ಎಸ್‌ಪಿ ತಿಳಿಸಿದ್ದರು.

“ಸುಮೊಟೊ ಪ್ರಕರಣವಾದರೂ ದಾಖಲಾಗಬಹುದಿತ್ತು. ಕ್ಷುಲ್ಲಕ ಟ್ವೀಟ್‌ವೊಂದಕ್ಕೆ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಅವರ ಮೇಲೆ ಪ್ರಕರಣ ದಾಖಲಾಗಿದೆ. ಕರ್ನಾಟಕದಂತಹ ರಾಜ್ಯದಲ್ಲಿ ಮುಸ್ಲಿಮರ ನರಹತ್ಯೆಗೆ ಕರೆ ನೀಡಲಾಗಿದೆ. ಹರಿದ್ವಾರದಲ್ಲಿ ನರಹತ್ಯೆಗೆ ಕರೆ ನೀಡಿದ ಬಳಿಕ ಕರ್ನಾಟಕದಲ್ಲಿ ಈ ಘಟನೆ ನಡೆದಿದೆ. ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಘನತೆ ಹಾಳಾಗುತ್ತಿದೆಯಲ್ಲ” ಎಂದು ಪ್ರಶ್ನಿಸಿದಾಗ, “ಈ ಕುರಿತು ತನಿಖೆಯಾಗುತ್ತಿದೆ. ತಜ್ಞರ ಅಭಿಪ್ರಾಯ ತೆಗೆದುಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಆನಂದ್‌ಕುಮಾರ್‌ ಹೇಳಿದ್ದರು.

ಏನಿದು ಪ್ರಕರಣ?

ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಖಂಡಿಸಿ ವಿಜಯಪುರ ನಗರದಲ್ಲಿ ಬಜರಂಗದಳ, ವಿಎಚ್‌ಪಿ ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ವಿಜಯಪುರ ಎಬಿವಿಪಿ ಪ್ರತಿನಿಧಿ ಪೂಜಾ ವೀರಶೆಟ್ಟಿಯವರು ಕೋಮು ಸೌಹಾರ್ದತೆ ಕದಡಲು ಯತ್ನಿಸಿದ್ದರು.

“ನಾವು ಭಾರತದವರು ಎಂಥವರು ಎಂದರೆ ನೀರು ಬೇಡ ಎಂದರೆ ಪಾನಕ ಕೊಡ್ತೀವಿ. ಹಾಲು ಬೇಡ ಅಂದರೆ ಮಜ್ಜಿಗೆ ಕೊಡ್ತೀವಿ. ನೀವು ಏನಾದರೂ ಭಾರತವನ್ನು ಹಿಜಾಬ್‌ಮಯ ಮಾಡಲು ಬಂದರೆ ಶಿವಾಜಿ ಕೈಯಲ್ಲಿನ ಕತ್ತಿ ತಗೊಂಡು ಇಂಚಿಂಚೇ ಕಡಿಯುತ್ತೇವೆ” ಎಂದು ಪ್ರಚೋದನಕಾರಿಯಾಗಿ ಪೂಜಾ ಮಾತನಾಡಿದ್ದರು.

“ಹರ್ಷಾ ಕೊಲೆ ಆರೋಪಿಗಳನ್ನು ಪೊಲೀಸರು 24 ತಾಸುಗಳಲ್ಲಿ ಬಂಧಿಸಿರುವುದು ಖುಷಿ ನೀಡಿದೆ. ಆದರೆ, ಬರಿ ಆರೋಪಿಗಳ ಬಂಧನವಾದರೆ ಸಾಲದು, ಅವರಿಗೆ ತಕ್ಕ ಶಿಕ್ಷೆಯಾಗಬೇಕು. ನಿಮ್ಮ ಕೈಯಲ್ಲಿ ಆಗದಿದ್ದರೆ ನಮ್ಮ ಕೈಗೆ 24 ತಾಸು ಅಲ್ಲ, ಒಂದು ತಾಸು ಅಧಿಕಾರ ಕೊಟ್ಟು ನೋಡಿ, ಆರು ಜನ ಅಲ್ಲ, ಅರವತ್ತು ಸಾವಿರ ಹಿಜಾಬ್‌ಗಳನ್ನು …” ಎಂದು ಪ್ರಚೋದಿಸಿರುವುದು ವಿಡಿಯೊದಲ್ಲಿ ದಾಖಲಾಗಿದೆ. (ಹೀಗೆ ಹೇಳಿದ ತಕ್ಷಣ ಪಕ್ಕದಲ್ಲಿದ್ದ ಮಹಿಳೆಯೊಬ್ಬರು ಪೂಜಾ ವೀರಶೆಟ್ಟಿಯರಿಗೆ ಭಾಷಣ ನಿಲ್ಲಿಸುವಂತೆ ಕೈ ಸನ್ನೆ ಮಾಡುತ್ತಾರೆ. ಪೂಜಾ ಭಾಷಣ ಕೇಳಿ ಪ್ರತಿಭಟನೆಯಲ್ಲಿದ್ದವರು ಉದ್ಘಾರ ಮಾಡುತ್ತಾರೆ.

ಪೂಜಾ ವೀರಶೆಟ್ಟಿ ವಿಡಿಯೊ ವೈರಲ್‌ ಆಗಿದ್ದು, ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕರಾದ ಜುಬೈರ್ ಟ್ವೀಟ್‌ ಮಾಡಿದ್ದರು. “ಡಿಸೆಂಬರ್ 2021ರಲ್ಲಿ ಹರಿದ್ವಾರದಲ್ಲಿ ನರಮೇಧದ ಕರೆ ನಂತರ, ಬಲಪಂಥೀಯ ಗುಂಪಿನಿಂದ ಕರ್ನಾಟಕದಲ್ಲಿ ಮುಸ್ಲಿಂ ಜನಾಂಗೀಯ ಹತ್ಯೆಗೆ ಮತ್ತೊಂದು ಕರೆಯನ್ನು ಬಹಿರಂಗವಾಗಿ ನೀಡಲಾಗಿದೆ” ಎಂದು ಅವರು ವಿಷಾದಿಸಿದ್ದರು.

 

ಇದೇ ಕಾರ್ಯಕ್ರಮದಲ್ಲಿ ಮಾತನಾಡಿರುವ ದುರ್ಗಾ ವಾಹಿನಿ ಮುಖಂಡರಾದ ಮಂಚಾಲೇಶ್ವರಿ ತೋಣಶ್ಯಾಳ, ‘ಕೇಂದ್ರ, ರಾಜ್ಯದಲ್ಲಿ ನಮ್ಮದೇ ಬಿಜೆಪಿ ಸರ್ಕಾರಗಳಿದ್ದರೂ ಹಿಂದೂಗಳು ಬೀದಿಯಲ್ಲಿ ಹೆಣ ಇಟ್ಟುಕೊಂಡು ಪ್ರತಿಭಟನೆ ಮಾಡುವ ಪರಿಸ್ಥಿತಿ ಬಂದಿರುವುದು ನಾಚಿಕೆ ಸಂಗತಿಯಾಗಿದೆ‘ ಎಂದಿದ್ದರು.

‘ಹಿಂದೂ ಯುವಕರನ್ನು ಪೋಸ್ಟ್‌ಮಾರ್ಟ್ಂಗೆ ಹಚ್ಚಿದ ಮತಾಂಧರ ಪೋಸ್ಟ್‌ಮಾರ್ಟ್ಂ ಆಗಬೇಕು. ಆಗ ಹಿಂದೂಗಳಿಗೆ ನ್ಯಾಯ ಸಿಗುತ್ತದೆ’ ಎಂದು ಹೇಳಿಕೆ ನೀಡಿದ್ದರು. “ರಾಜ್ಯದಲ್ಲಿ ಹಿಂದೂಗಳ ಒಂದೇ ಒಂದು ಕೂದಲು ಕೊಂಕಾಗದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೋಡಿಕೊಳ್ಳುವ ಭರವಸೆ ನೀಡಬೇಕು. ನಿಮಗೆ ಆ ತಾಕತ್ತು, ದಮ್‌ ಇಲ್ಲವಾದರೆ ಒಮ್ಮೆ ಉತ್ತರಪ್ರದೇಶಕ್ಕೆ ಹೋಗಿ ಯೋಗಿ ಆದಿತ್ಯಾನಾಥ ಅವರ ಬಳಿ ತರಬೇತಿ ಪಡೆದುಕೊಂಡು ಬನ್ನಿ” ಎಂದು ಸಲಹೆ ನೀಡಿದ್ದರು.

“ಹಿಂದೂಗಳು ರಕ್ತ ಹರಿಸಿ ನಿಮ್ಮನ್ನು ಅಧಿಕಾರದ ಗದ್ದುಗೆ ಮೇಲೆ ಕೂರಿಸಿರುವುದು ಆಪರೇಷನ್‌ ಕಮಲ ಮಾಡಲಿ ಎಂದಲ್ಲ. ನಮ್ಮ ಆಸೆ ಬಿಜೆಪಿ ಬಾವುಟ ಹಾರಿಸಬೇಕು ಎಂಬುದಲ್ಲ, ಕೇಸರಿ ಬಾವುಟ ಹಾರಿಸಬೇಕು ಎಂಬುದಾಗಿತ್ತು” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಹರ್ಷನ ಜೀವಕ್ಕಿರುವ ಬೆಲೆ ದಲಿತ ವ್ಯಕ್ತಿ ದಿನೇಶನ ಜೀವಕ್ಕಿಲ್ಲವೇ?: ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...