Homeಅಂತರಾಷ್ಟ್ರೀಯರಷ್ಯಾ ಮೇಲೆ ಆರ್ಥಿಕ ನಿರ್ಬಂಧ: ಗೂಗಲ್ ಪೇ, ಆಪಲ್ ಪೇ ಸ್ಥಗಿತದಿಂದ ಪರದಾಡಿದ ನಾಗರಿಕರು

ರಷ್ಯಾ ಮೇಲೆ ಆರ್ಥಿಕ ನಿರ್ಬಂಧ: ಗೂಗಲ್ ಪೇ, ಆಪಲ್ ಪೇ ಸ್ಥಗಿತದಿಂದ ಪರದಾಡಿದ ನಾಗರಿಕರು

ಅಂಕಿಅಂಶಗಳ ಪ್ರಕಾರ, 29% ರಷ್ಯನ್ನರು ಗೂಗಲ್ ಪೇ ಬಳಸುತ್ತಾರೆ ಮತ್ತು 20% ಜನರು ಆಪಲ್ ಪೇ ಬಳಸುತ್ತಾರೆ..

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಿಸಿದ ನಂತರ, ಅಮೆರಿಕ, ಇಂಗ್ಲೆಂಡ್ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ರಷ್ಯಾ ಮೇಲೆ ಹಲವಾರು ನಿರ್ಬಂಧಗಳನ್ನು ಹೇರಿವೆ. ಅಂತರರಾಷ್ಟ್ರೀಯ ಹಣಕಾಸು ವಹಿವಾಟುಗಳಿಗೆ ಬಳಸಲಾಗುತ್ತಿರುವ ಸ್ವಿಫ್ಟ್‌ (Society for Worldwide Interbank Financial Telecommunications) ಪಾವತಿ ವ್ಯವಸ್ಥೆಯನ್ನೂ ರಷ್ಯಾದ ಕೆಲವು ಬ್ಯಾಂಕುಗಳಲ್ಲಿ ಬಳಕೆ ಮಾಡಲಾಗದಂತೆ ನಿರ್ಬಂಧಿಸಲಾಗಿದೆ. ಇದರಿಂದಾಗಿ, ಸೋಮವಾರ ಅಮೆರಿಕನ್ ಡಾಲರ್ ವಿರುದ್ಧ ರಷ್ಯಾದ ಕರೆನ್ಸಿ ಸುಮಾರು 30% ರಷ್ಟು ಕುಸಿತ ಕಂಡಿದೆ.

ಈ ಎಲ್ಲಾ ಕಾರಣಗಳಿಂದಾಗಿ ರಷ್ಯಾ ಜನರ ದೈನಂದಿನ ವಹಿವಾಟಿನ ಮೇಲೆ ಅಪಾರ ಪರಿಣಾಮ ಬೀರಿದ್ದು, ಜನರು ಹಣಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಷ್ಯಾದಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗುವ ಸಾಧ್ಯತೆಯನ್ನು ಅರಿತವರು, ನಗದು ಹಣ ಪಡೆಯಲು ಹಲವಾರು ದಿನಗಳಿಂದ ಬ್ಯಾಂಕ್‌ಗಳು ಮತ್ತು ಎಟಿಎಂಗಳಿಗೆ ಅಲೆದಾಡುತ್ತಿದ್ದಾರೆ. ಬ್ಯಾಂಕ್-ಎಟಿಎಂಗಳ ಮುಂದೆ ದೀರ್ಘ ಸಾಲುಗಳಲ್ಲಿ ನಿಂತಿದ್ದಾರೆ.

ಅಮೆರಿಕ ರಷ್ಯಾದ ಮೇಲೆ ಆರ್ಥಿಕ ನಿರ್ಬಂಧಗಳನ್ನು ಮುಂದುವರಿಸಿದ್ದು, ರಷ್ಯಾದಲ್ಲಿ ಆಪಲ್ ಪೇ ಮತ್ತು ಗೂಗಲ್ ಪೇ ಸೇವೆಗಳನ್ನು ನಿರ್ಬಂಧಿಸಲಾಗಿದೆ. ಇದು ರಷ್ಯಾ ಜನರ ಆನ್‌ಲೈನ್ ವಹಿವಾಟಿನ ಮೇಲೆ ಪರಿಣಾಮ ಬೀರಿದೆ.

ರಷ್ಯಾದ ಹಲವಾರು ಬ್ಯಾಂಕ್‌ಗಳಲ್ಲಿನ ಗ್ರಾಹಕರು ತಮ್ಮ ಬ್ಯಾಂಕ್ ಕಾರ್ಡ್‌ಗಳನ್ನು ಆಪಲ್ ಪೇ ಮತ್ತು ಗೂಗಲ್ ಪೇ ಜೊತೆಗೆ ಬಳಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. “ನಿರ್ಬಂಧಕ್ಕೆ ಸಿಲುಕಿರುವ ಬ್ಯಾಂಕುಗಳ ಗ್ರಾಹಕರು (ವಿಟಿಬಿ ಗ್ರೂಪ್, ಸೋವ್ಕಾಂ ಬ್ಯಾಂಕ್, ನೋವಿಕೊಂ ಬ್ಯಾಂಕ್, ಪ್ರಾಮ್ಸ್ವ್ಯಾಜ್ ಬ್ಯಾಂಕ್, ಒಟ್ಕ್ರಿಟಿ) ತಮ್ಮ ಬ್ಯಾಂಕಿಂಗ್ ಕಾರ್ಡ್‌ಗಳನ್ನು ಆಪಲ್ ಪೇ ಮತ್ತು ಗೂಗಲ್ ಪೇ ಸೇವೆಗಳೊಂದಿಗೆ ಬಳಸಲು ಸಾಧ್ಯವಾಗುತ್ತಿಲ್ಲ. ಆದರೆ, ಈ ಕಾರ್ಡ್‌ಗಳ ಮೂಲಕ ಸ್ಥಳೀಯ ಪಾವತಿಗಳನ್ನು ಮಾಡಲು ರಷ್ಯಾದ್ಯಂತ ಸಾಧ್ಯವಿದೆ” ಎಂದು ರಷ್ಯನ್ ಸೆಂಟ್ರಲ್ ಬ್ಯಾಂಕ್ ತಿಳಿಸಿದೆ.

ಗೂಗಲ್ ಪೇ ಮತ್ತು ಆಪಲ್ ಪೇಗಳು ಅಮೆರಿಕ ರೀತಿಯಲ್ಲಿ ರಷ್ಯಾದಲ್ಲಿ ಜನಪ್ರಿಯವಾಗಿಲ್ಲ. ರಷ್ಯಾದ ಜನರು ಅಲ್ಲಿನ ಅತ್ಯಂತ ಜನಪ್ರಿಯ ಮೊಬೈಲ್ ಪಾವತಿ ಸೇವೆಯಾಗಿರುವ, ರಷ್ಯಾದ ಒಡೆತನದ್ದೇ ಆದ ಸ್ಬರ್‌ ಬ್ಯಾಂಕ್ ಆನ್ಲೈನ್ ಪೇ, ಯೂಮನಿ (ಹಿಂದೆ ಯಾಂಡೆಕ್ಸ್ ಮನಿ) ಮತ್ತು ಕ್ಯುವಿಗಳನ್ನು ಬಳಸುತ್ತಿದ್ದಾರೆ ಎಂದು ದಿ ವೆರ್ಜ್ ವರದಿ ಮಾಡಿದೆ.

ಅಂಕಿಅಂಶಗಳ ಪ್ರಕಾರ, 29% ರಷ್ಯನ್ನರು ಗೂಗಲ್ ಪೇ ಬಳಸುತ್ತಾರೆ ಮತ್ತು 20% ಜನರು ಆಪಲ್ ಪೇ ಬಳಸುತ್ತಾರೆ ಎಂದು ವರದಿ ಹೇಳಿದೆ.

ರಷ್ಯಾದ ಎರಡು ದೊಡ್ಡ ಹಣಕಾಸು ಸಂಸ್ಥೆಗಳಾದ ಸ್ಬರ್‌ ಬ್ಯಾಂಕ್ ಮತ್ತು ವಿಟಿಬಿ ಬ್ಯಾಂಕ್‌ಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ಹೇರಿದೆ. ಆದೇ ರೀತಿಯಲ್ಲಿ ಯುನೈಟೆಡ್ ಕಿಂಗ್‌ಡಂ ರಷ್ಯಾದ ಐದು ಬ್ಯಾಂಕ್‌ಗಳ ವಹಿವಾಟು ಮತ್ತು ಆಸ್ತಿಗಳನ್ನು ಸ್ಥಗಿತಗೊಳಿಸಿದೆ.


ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಬಿಕ್ಕಟ್ಟು: ಕ್ಷಿಪಣಿ ದಾಳಿ; ಕರ್ನಾಟಕ ಮೂಲದ ವಿದ್ಯಾರ್ಥಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...