Homeಅಂತರಾಷ್ಟ್ರೀಯರಷ್ಯಾ ಮೇಲೆ ಆರ್ಥಿಕ ನಿರ್ಬಂಧ: ಗೂಗಲ್ ಪೇ, ಆಪಲ್ ಪೇ ಸ್ಥಗಿತದಿಂದ ಪರದಾಡಿದ ನಾಗರಿಕರು

ರಷ್ಯಾ ಮೇಲೆ ಆರ್ಥಿಕ ನಿರ್ಬಂಧ: ಗೂಗಲ್ ಪೇ, ಆಪಲ್ ಪೇ ಸ್ಥಗಿತದಿಂದ ಪರದಾಡಿದ ನಾಗರಿಕರು

ಅಂಕಿಅಂಶಗಳ ಪ್ರಕಾರ, 29% ರಷ್ಯನ್ನರು ಗೂಗಲ್ ಪೇ ಬಳಸುತ್ತಾರೆ ಮತ್ತು 20% ಜನರು ಆಪಲ್ ಪೇ ಬಳಸುತ್ತಾರೆ..

- Advertisement -
- Advertisement -

ಉಕ್ರೇನ್ ಮೇಲೆ ರಷ್ಯಾ ಯುದ್ಧ ಘೋಷಿಸಿದ ನಂತರ, ಅಮೆರಿಕ, ಇಂಗ್ಲೆಂಡ್ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ರಷ್ಯಾ ಮೇಲೆ ಹಲವಾರು ನಿರ್ಬಂಧಗಳನ್ನು ಹೇರಿವೆ. ಅಂತರರಾಷ್ಟ್ರೀಯ ಹಣಕಾಸು ವಹಿವಾಟುಗಳಿಗೆ ಬಳಸಲಾಗುತ್ತಿರುವ ಸ್ವಿಫ್ಟ್‌ (Society for Worldwide Interbank Financial Telecommunications) ಪಾವತಿ ವ್ಯವಸ್ಥೆಯನ್ನೂ ರಷ್ಯಾದ ಕೆಲವು ಬ್ಯಾಂಕುಗಳಲ್ಲಿ ಬಳಕೆ ಮಾಡಲಾಗದಂತೆ ನಿರ್ಬಂಧಿಸಲಾಗಿದೆ. ಇದರಿಂದಾಗಿ, ಸೋಮವಾರ ಅಮೆರಿಕನ್ ಡಾಲರ್ ವಿರುದ್ಧ ರಷ್ಯಾದ ಕರೆನ್ಸಿ ಸುಮಾರು 30% ರಷ್ಟು ಕುಸಿತ ಕಂಡಿದೆ.

ಈ ಎಲ್ಲಾ ಕಾರಣಗಳಿಂದಾಗಿ ರಷ್ಯಾ ಜನರ ದೈನಂದಿನ ವಹಿವಾಟಿನ ಮೇಲೆ ಅಪಾರ ಪರಿಣಾಮ ಬೀರಿದ್ದು, ಜನರು ಹಣಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಷ್ಯಾದಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗುವ ಸಾಧ್ಯತೆಯನ್ನು ಅರಿತವರು, ನಗದು ಹಣ ಪಡೆಯಲು ಹಲವಾರು ದಿನಗಳಿಂದ ಬ್ಯಾಂಕ್‌ಗಳು ಮತ್ತು ಎಟಿಎಂಗಳಿಗೆ ಅಲೆದಾಡುತ್ತಿದ್ದಾರೆ. ಬ್ಯಾಂಕ್-ಎಟಿಎಂಗಳ ಮುಂದೆ ದೀರ್ಘ ಸಾಲುಗಳಲ್ಲಿ ನಿಂತಿದ್ದಾರೆ.

ಅಮೆರಿಕ ರಷ್ಯಾದ ಮೇಲೆ ಆರ್ಥಿಕ ನಿರ್ಬಂಧಗಳನ್ನು ಮುಂದುವರಿಸಿದ್ದು, ರಷ್ಯಾದಲ್ಲಿ ಆಪಲ್ ಪೇ ಮತ್ತು ಗೂಗಲ್ ಪೇ ಸೇವೆಗಳನ್ನು ನಿರ್ಬಂಧಿಸಲಾಗಿದೆ. ಇದು ರಷ್ಯಾ ಜನರ ಆನ್‌ಲೈನ್ ವಹಿವಾಟಿನ ಮೇಲೆ ಪರಿಣಾಮ ಬೀರಿದೆ.

ರಷ್ಯಾದ ಹಲವಾರು ಬ್ಯಾಂಕ್‌ಗಳಲ್ಲಿನ ಗ್ರಾಹಕರು ತಮ್ಮ ಬ್ಯಾಂಕ್ ಕಾರ್ಡ್‌ಗಳನ್ನು ಆಪಲ್ ಪೇ ಮತ್ತು ಗೂಗಲ್ ಪೇ ಜೊತೆಗೆ ಬಳಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. “ನಿರ್ಬಂಧಕ್ಕೆ ಸಿಲುಕಿರುವ ಬ್ಯಾಂಕುಗಳ ಗ್ರಾಹಕರು (ವಿಟಿಬಿ ಗ್ರೂಪ್, ಸೋವ್ಕಾಂ ಬ್ಯಾಂಕ್, ನೋವಿಕೊಂ ಬ್ಯಾಂಕ್, ಪ್ರಾಮ್ಸ್ವ್ಯಾಜ್ ಬ್ಯಾಂಕ್, ಒಟ್ಕ್ರಿಟಿ) ತಮ್ಮ ಬ್ಯಾಂಕಿಂಗ್ ಕಾರ್ಡ್‌ಗಳನ್ನು ಆಪಲ್ ಪೇ ಮತ್ತು ಗೂಗಲ್ ಪೇ ಸೇವೆಗಳೊಂದಿಗೆ ಬಳಸಲು ಸಾಧ್ಯವಾಗುತ್ತಿಲ್ಲ. ಆದರೆ, ಈ ಕಾರ್ಡ್‌ಗಳ ಮೂಲಕ ಸ್ಥಳೀಯ ಪಾವತಿಗಳನ್ನು ಮಾಡಲು ರಷ್ಯಾದ್ಯಂತ ಸಾಧ್ಯವಿದೆ” ಎಂದು ರಷ್ಯನ್ ಸೆಂಟ್ರಲ್ ಬ್ಯಾಂಕ್ ತಿಳಿಸಿದೆ.

ಗೂಗಲ್ ಪೇ ಮತ್ತು ಆಪಲ್ ಪೇಗಳು ಅಮೆರಿಕ ರೀತಿಯಲ್ಲಿ ರಷ್ಯಾದಲ್ಲಿ ಜನಪ್ರಿಯವಾಗಿಲ್ಲ. ರಷ್ಯಾದ ಜನರು ಅಲ್ಲಿನ ಅತ್ಯಂತ ಜನಪ್ರಿಯ ಮೊಬೈಲ್ ಪಾವತಿ ಸೇವೆಯಾಗಿರುವ, ರಷ್ಯಾದ ಒಡೆತನದ್ದೇ ಆದ ಸ್ಬರ್‌ ಬ್ಯಾಂಕ್ ಆನ್ಲೈನ್ ಪೇ, ಯೂಮನಿ (ಹಿಂದೆ ಯಾಂಡೆಕ್ಸ್ ಮನಿ) ಮತ್ತು ಕ್ಯುವಿಗಳನ್ನು ಬಳಸುತ್ತಿದ್ದಾರೆ ಎಂದು ದಿ ವೆರ್ಜ್ ವರದಿ ಮಾಡಿದೆ.

ಅಂಕಿಅಂಶಗಳ ಪ್ರಕಾರ, 29% ರಷ್ಯನ್ನರು ಗೂಗಲ್ ಪೇ ಬಳಸುತ್ತಾರೆ ಮತ್ತು 20% ಜನರು ಆಪಲ್ ಪೇ ಬಳಸುತ್ತಾರೆ ಎಂದು ವರದಿ ಹೇಳಿದೆ.

ರಷ್ಯಾದ ಎರಡು ದೊಡ್ಡ ಹಣಕಾಸು ಸಂಸ್ಥೆಗಳಾದ ಸ್ಬರ್‌ ಬ್ಯಾಂಕ್ ಮತ್ತು ವಿಟಿಬಿ ಬ್ಯಾಂಕ್‌ಗಳ ಮೇಲೆ ಅಮೆರಿಕ ನಿರ್ಬಂಧಗಳನ್ನು ಹೇರಿದೆ. ಆದೇ ರೀತಿಯಲ್ಲಿ ಯುನೈಟೆಡ್ ಕಿಂಗ್‌ಡಂ ರಷ್ಯಾದ ಐದು ಬ್ಯಾಂಕ್‌ಗಳ ವಹಿವಾಟು ಮತ್ತು ಆಸ್ತಿಗಳನ್ನು ಸ್ಥಗಿತಗೊಳಿಸಿದೆ.


ಇದನ್ನೂ ಓದಿ: ರಷ್ಯಾ-ಉಕ್ರೇನ್‌ ಬಿಕ್ಕಟ್ಟು: ಕ್ಷಿಪಣಿ ದಾಳಿ; ಕರ್ನಾಟಕ ಮೂಲದ ವಿದ್ಯಾರ್ಥಿ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...