HomeಮುಖಪುಟNEET ನಿಂದಲೇ ಕನ್ನಡಿಗನ ಸಾವು - NEET ಪರೀಕ್ಷೆ ರದ್ದುಗೊಳಿಸಿ: ಇಂದು ಟ್ವಿಟರ್ ಅಭಿಯಾನ

NEET ನಿಂದಲೇ ಕನ್ನಡಿಗನ ಸಾವು – NEET ಪರೀಕ್ಷೆ ರದ್ದುಗೊಳಿಸಿ: ಇಂದು ಟ್ವಿಟರ್ ಅಭಿಯಾನ

ನನ್ನ ಮಗಳು ದ್ವಿತೀಯ ಪಿಯುಸಿ ಜೀವಶಾಸ್ತ್ರದಲ್ಲಿ 100ಕ್ಕೆ100 ಅಂಕ ಗಳಿಸಿದ್ದಾಳೆ. ಇಂಗ್ಲೀಷ್ ಸೇರಿದಂತೆ ಇತರ ವಿಷಯಗಳಲ್ಲಿ 90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾಳೆ. ಆದರೆ ಆಕೆಗೆ ನೀಟ್ ಪರೀಕ್ಷೆ ಸರಿ ಹೊಂದುತ್ತಿಲ್ಲ..

- Advertisement -
- Advertisement -

ರಷ್ಯಾ ಉಕ್ರೇನ್ ಮೇಲೆ ಯುದ್ದ ಘೋಷಿಸಿದಾಗಿನಿಂದ ಉಕ್ರೇನ್‌ನಲ್ಲಿನ 20,000 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಆತಂಕಿತರಾಗಿದ್ದಾರೆ. ಕರ್ನಾಟಕದ ವಿದ್ಯಾರ್ಥಿಯೊಬ್ಬ ರಷ್ಯನ ಶೆಲ್ ದಾಳಿಗೆ ಸಿಕ್ಕಿ ಮೃತಪಟ್ಟಿದ್ದಾನೆ. ಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳು ಯುದ್ದದ ಕರಿನೆರಳಿನಲ್ಲಿ ಊಟ್ರ, ನಿದ್ರೆಯಿಲ್ಲದೆ ದಿನದೂಡುತ್ತಿದ್ದಾರೆ. ಈ ಎಲ್ಲದಕ್ಕೂ ಭಾರತದ ಶಿಕ್ಷಣ ವ್ಯವಸ್ಥೆ ಕಾರಣವಾಗಿದೆ ಎಂದು ದೂರಿರುವ ಕನ್ನಡಿಗರು NEET ಪರೀಕ್ಷೆ ರದ್ದುಗೊಳಿಸಲು ಒತ್ತಾಯಿಸಿ ಟ್ವಿಟರ್ ಅಭಿಯಾನ ಆರಂಭಿಸಿದ್ದಾರೆ.

ಪಿಯುಸಿಯಲ್ಲಿ 97% ಅಂಕ ಗಳಿಸಿದ್ದರೂ, ನನ್ನ ಮಗ ರಾಜ್ಯದಲ್ಲಿ ವೈದ್ಯಕೀಯ ಸೀಟು ಪಡೆಯಲು ಸಾಧ್ಯವಾಗಲಿಲ್ಲ. ವೈದ್ಯಕೀಯ ಸೀಟು ಪಡೆಯಲು ಕೋಟ್ಯಂತರ ರೂಪಾಯಿ ನೀಡಬೇಕು ಮತ್ತು ವಿದ್ಯಾರ್ಥಿಗಳು ಕಡಿಮೆ ಹಣ ಖರ್ಚು ಮಾಡಿ ವಿದೇಶದಲ್ಲಿ ಅದೇ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಉಕ್ರೇನ್‌ನಲ್ಲಿ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಕರನಾಟಕದ ವಿದ್ಯಾರ್ಥಿ ನವೀನ್ ತಂದೆ ಶೇಖರಪ್ಪ ಹೇಳಿದ್ದಾರೆ.

ಭಾರತದಲ್ಲಿ ವೈದ್ಯರ ಕೊರತೆಯಿದೆ. ಹಾಗೆಯೇ ಪ್ರತಿವರ್ಷ 16 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ಶಿಕ್ಷಣ ಪಡೆಯುವ ಆಕಾಂಕ್ಷಿಗಳಿರುತ್ತಾರೆ. ಆದರೆ ಕೆಲವೇ ಸಾವಿರ ಸರ್ಕಾರಿ ಸೀಟುಗಳಿದ್ದು ಅದಕ್ಕಾಗಿ NEET ಪರೀಕ್ಷೆಯಲ್ಲಿ ತೀವ್ರ ಪೈಪೋಟಿ ನಡೆಯುತ್ತದೆ. ದುಬಾರಿ ಶುಲ್ಕ ಕಟ್ಟಿ ಖಾಸಗಿ ಕಾಲೇಜುಗಳಲ್ಲಿ ಓದಿಸಲು ಸಾಮರ್ಥ್ಯವಿಲ್ಲದ ಮಧ್ಯಮ ವರ್ಗ ಉಕ್ರೇನ್ – ರಷ್ಯಾದಂತಹ ದೇಶಗಳಿಗೆ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣಕ್ಕಾಗಿ ಕಳಿಸಬೇಕಾದ ಪರಿಸ್ಥಿತಿಯಿದೆ ಎಂದು ಹಲವರು ಆರೋಪಿಸಿದ್ದಾರೆ.

ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ನವೀನ್ ನಂತ ಬುದ್ಧಿವಂತ ಹುಡುಗ 2ನೆ ಪಿಯುಸಿಯಲ್ಲಿ 97% ತೆಗೆದರು ನಮ್ಮ ಕರ್ನಾಟಕದಲ್ಲಿ ಅವನಿಗೆ ಮೆಡಿಕಲ್ ಸೀಟ್ ಸಿಗಲಿಲ್ಲ ಅದಕ್ಕೆ ಕಾರಣ #NEET ಪರೀಕ್ಷೆ. ಈ #Neet ಪರೀಕ್ಷೆಯಿಂದ ನಮ್ಮ ಕರ್ನಾಟಕದ ಮಕ್ಕಳಿಗೆ ಅನ್ಯಾಯವಾಗಿದೆ. ಈ #NEET ಪರೀಕ್ಷೆಯನ್ನು ಮೊದಲು ರದ್ದುಮಾಡಿ ನಮ್ಮ ಕರ್ನಾಟಕದ #CET ಯನ್ನು ಮರುಸ್ಥಾಪಿಸಬೇಕಾಗಿದೆ. #banNEET #SaveKarnatakaStudents ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅಭಿಪ್ರಾಯಪಟ್ಟಿದ್ದಾರೆ.

ನನ್ನ ಮಗಳು ದ್ವಿತೀಯ ಪಿಯುಸಿ ಜೀವಶಾಸ್ತ್ರದಲ್ಲಿ 100ಕ್ಕೆ100 ಅಂಕ ಗಳಿಸಿದ್ದಾಳೆ. ಇಂಗ್ಲೀಷ್ ಸೇರಿದಂತೆ ಇತರ ವಿಷಯಗಳಲ್ಲಿ 90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾಳೆ. ಆದರೆ ಆಕೆಗೆ ನೀಟ್ ಪರೀಕ್ಷೆ ಸರಿ ಹೊಂದುತ್ತಿಲ್ಲ.. ಇಷ್ಟೇ ಕಾಲೇಜು, ಇಷ್ಟೇ ಸೀಟುಗಳಿದ್ದು ನೀವು ಸ್ಪರ್ಧಿಸಿ ಎನ್ನುವುದು ಮ್ಯೂಸಿಕಲ್ ಚೇರ್ ಆಟವಿದ್ದಂತೆ. ಅಲ್ಲಿ ಗೆಲ್ಲುವವರು ಕೆಲವರು ಮಾತ್ರ. ನಾವು ಮಧ್ಯಮ ವರ್ಗವಾಗಿದ್ದು ಹೆಚ್ಚಿನ ಹಣ ಕೊಟ್ಟು ಖಾಸಗಿ ಮೆಡಿಕಲ್ ಸೀಟು ಪಡೆಯಲು ಸಾಧ್ಯವಿಲ್ಲ. ಹಾಗಾಗಿ ನನ್ನ ಮಗಳನ್ನು ವೈದ್ಯಕೀಯ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ ಕಳುಹಿಸಲು ತೀರ್ಮಾನ ಮಾಡಿದೆ”. – ಇದು ಉಕ್ರೇನ್‌ನ ಚರ್ನಿವಿಟ್ಸಿಯ ಬುಕೋವಿಯನ್ ಸ್ಟೇಟ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ತಮ್ಮ ಮಗಳನ್ನು ಓದಿಸುತ್ತಿರುವ ಕನಕಪುರದ ನಿವಾಸಿ ಶಿವರಾಜುರವರ ಅಭಿಮತವಾಗಿದೆ.

ವಿಲನ್ನು #NEET ಮಾತ್ರ ಅಲ್ಲ. ಖಾಸಗಿ ಮೆಡಿಕಲ್ ಕಾಲೇಜು ಲಾಬಿ ಮತ್ತು ಅದರ ಮಾಲಕ ರಾಜಕಾರಣಿಗಳು ಸಮಸ್ಯೆಯ ಮೂಲ. ನಾಳೆ ವಿವರವಾಗಿ ಬರೆಯುವೆ. #BanNEET ಎಂದು ಹಿರಿಯ ಪತ್ರಕರ್ತರಾದ ರಾಜರಾಂ ತಲ್ಲೂರುರವರು ಅಭಿಪ್ರಾಯಪಟ್ಟಿದ್ದಾರೆ.

ಇದು ಸರಿಯಾದ ಸಮಯ. ಎಲ್ಲ ಖಾಸಗಿ ಮೆಡಿಕಲ್, ಇಂಜಿನಿಯರಿಂಗ್ ಕಾಲೇಜುಗಳ ರಾಷ್ಟ್ರೀಕರಣವಾಗಬೇಕು. ಸರ್ಕಾರವೇ ಉನ್ನತ ಹಂತದ ಶಿಕ್ಷಣವನ್ನು ಕಡಿಮೆ ದರದಲ್ಲಿ ಕೊಡಬೇಕು. ಕ್ಯಾಪಿಟೇಷನ್ ಲಾಬಿ ಕೊನೆಗೊಳ್ಳಬೇಕು. ಕೋಟಿಗಟ್ಟಲೆ ಹಣ ಕೊಟ್ಟು ಮೆಡಿಕಲ್ ಓದುವ ವೈದ್ಯನಿಂದ ನೀವು ಏನನ್ನು ನಿರೀಕ್ಷಿಸಬಹುದು. ಈ ದಂಧೆ ನಿಲ್ಲಲಿ. ಪ್ರತಿಭಾವಂತ ವಿದ್ಯಾರ್ಥಿಗಳು ಭಾರತದಲ್ಲೇ ಓದಲಿ, ಸಿರಿವಂತರು, ರಾಜಕಾರಣಿಗಳ ಉದ್ಯಮಿಗಳ ಮಕ್ಕಳು ಬೇಕಿದ್ದರೆ ವಿದೇಶಗಳಲ್ಲಿ ಓದಿಕೊಳ್ಳಲಿ. ಎಲ್ಲದಕ್ಕಿಂತ ಮೊದಲು ಕನ್ನಡದ ಮಕ್ಕಳ ಕತ್ತು ಹಿಸುಕುತ್ತಿರುವ ನೀಟ್ ತೊಲಗಲಿ ಎಂದು ಕರವೇ ಸಾಮಾಜಿಕ ಜಾಲತಾಣ ಮುಖ್ಯಸ್ಥರದ ದಿನೇಶ್ ಕುಮಾರ್ ಆಗ್ರಹಿಸಿದ್ದಾರೆ.

ನೀಟ್! ಪರಿಕ್ಷೆಯು ಕನ್ನಡಿಗರ ಪಾಲಿಗೆ ಸಮಸ್ಯೆ ಆಗಿರುವುದರಿಂದ, ಈ NEET ಪರಿಕ್ಷಾ ವ್ಯವಸ್ಥೆಯಿಂದ ಕರ್ನಾಟಕವು ಹೊರಬರಬೇಕೆಂದು ಸರ್ಕಾರವನ್ನು ಒತ್ತಾಯಿಸಿ ಟ್ವಿಟರ್ ಅಭಿಯಾನ.
ಇಂದು ಸಂಜೆ 5 ಗಂಟೆಯಿಂದ ಎಂದು ಕರವೇ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು ಕರೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ “ಶೇ.90 ರಷ್ಟು ಭಾರತೀಯ ವಿದ್ಯಾರ್ಥಿಗಳು ಇಲ್ಲಿನ ವೈದ್ಯಕೀಯ ಪ್ರವೇಶ ಪರೀಕ್ಷೆಗಳಲ್ಲಿ ಫೇಲ್ ಆದ ಕಾರಣಕ್ಕೆ ವಿದೇಶಕ್ಕೆ ಹೋಗುತ್ತಾರೆ” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ಅದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.


ಇದನ್ನೂ ಓದಿ: ಊಟ, ನಿದ್ರೆ ಇಲ್ಲ, ದೇಶಕ್ಕೆ ಮರಳುವ ಭರವಸೆಯೂ ಇಲ್ಲ: ಕಂಗಾಲಾದ ಭಾರತೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...