Homeಮುಖಪುಟಹೀಗೂ ನೆನೆಯಬಹುದು ಹಿರಿಯರನ್ನು: ಸಾಮಾಜಿಕ ಕಾರ್ಯಗಳ ಮೂಲಕ ಪ್ರತಿ ವರ್ಷ ಅಜ್ಜ-ಅಜ್ಜಿ ನೆನಯುವ ಎಸ್. ರುದ್ರೇಶ್ವರ

ಹೀಗೂ ನೆನೆಯಬಹುದು ಹಿರಿಯರನ್ನು: ಸಾಮಾಜಿಕ ಕಾರ್ಯಗಳ ಮೂಲಕ ಪ್ರತಿ ವರ್ಷ ಅಜ್ಜ-ಅಜ್ಜಿ ನೆನಯುವ ಎಸ್. ರುದ್ರೇಶ್ವರ

- Advertisement -
- Advertisement -

ಶಾಲೆಗಳಿಗೆ ಟಿವಿ, ಡ್ರಮ್‌ ಸೆಟ್ ಕೊಡುಗೆ ನೀಡುವುದು, ವೃದ್ಧಾಶ್ರಮಕ್ಕೆ ರೆಪ್ರಿಜರೇಟರ್ ನೀಡುವುದು, ಬಡವರಿಗೆ, ಅಲೆಮಾರಿಗಳಿಗೆ ಬೆಡ್‌ಶೀಟ್ – ಸ್ವೆಟರ್ ಕೊಡಿಸುವುದು, ಮಾಸ್ಕ್-ಸ್ಯಾನಿಟೈಸರ ಕೊಡಿಸುವುದು.. ಹೀಗೆ ಪ್ರತಿ ವರ್ಷ ಸಮಾಜ ಮುಖಿ ಕೆಲಸಗಳ ಮೂಲಕ ವಿಶಿಷ್ಟವಾಗಿ ತಮ್ಮ ಅಜ್ಜ-ಅಜ್ಜಿಯರನ್ನು ನೆನೆಯುತ್ತಾರೆ ರಾಮನಗರದ ಜನಪರ ಪತ್ರಕರ್ತರು ಮತ್ತು ಸಂಶೋಧನಾ ವಿದ್ಯಾರ್ಥಿಯಾದ ಎಸ್. ರುದ್ರೇಶ್ವರ.

ಅವರು ತಮ್ಮ ಅಜ್ಜ ಅಜ್ಜಿ ಕೂನಮುದ್ದನಹಳ್ಳಿಯ ಪಾರ್ವತಮ್ಮ ಮತ್ತು ಸಿದ್ದವೀರಯ್ಯ ಹಾಗೂ ಕೆಂಚನಕುಪ್ಪೆಯ ಜಯಮ್ಮ ಮತ್ತು ಶಾಂತಯ್ಯ ಅವರ ಸ್ಮರಣಾರ್ಥವಾಗಿ ಪ್ರತಿ ವರ್ಷ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳನ್ನು ಕಳೆದ 9 ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ಈ ಬಾರಿ ಹತ್ತನೇ ವರ್ಷದ ಸ್ಮರಣಾರ್ಥ ಕಾರ್ಯಕ್ರಮದ ಅಂಗವಾಗಿ ರಾಮನಗರದ ಸಂವರ್ಧನ ಶಾಲೆಗೆ(ವಿಶೇಷ ಮಕ್ಕಳ ಪುನಶ್ಚೇತನ ಕೇಂದ್ರ) ಟಿವಿ ವಿತರಣೆಯನ್ನು ಮಾ.3ರಂದು ಬೆಳಿಗ್ಗೆ 11 ಗಂಟೆಗೆ ವಿತರಣೆ ಮಾಡಲಿದ್ದಾರೆ.

 

ಪ್ರಸ್ತುತ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ‘ರಾಮನಗರ ಜಿಲ್ಲೆಯ ಬುಡಕಟ್ಟುಗಳ ಸಾಂಸ್ಕೃತಿಕ ಸ್ಥಿತ್ಯಂತರಗಳು’ ಎಂಬ ವಿಷಯವನ್ನು ಕುರಿತು ಪಿಎಚ್.ಡಿ. ಪದವಿಗಾಗಿ ಸಂಶೋಧನಾ ಕಾರ್ಯವನ್ನು ಕೈಗೊಂಡಿರುವ ಇವರ ಜನಪರ ಕಾಳಜಿ ಮತ್ತು ಸಮಾಜಮುಖಿ ಚಿಂತನೆ ಅನನ್ಯವಾದುದು. ಅಲ್ಲದೆ ಹಾಯ್ ರಾಮನಗರ ಎಂಬ ಆನ್‌ಲೈನ್ ಪತ್ರಿಕೆ ನಡೆಸುವ ಮೂಲಕ ಪತ್ರಕರ್ತರಾಗಿಯೂ ಹೆಸರು ಗಳಿಸಿದ್ದಾರೆ. ರಾಮನಗರದ ಕೂಗಳತೆ ದೂರದಲ್ಲಿರುವ ಕೂಟಗಲ್ ಎಂಬ ಗ್ರಾಮದಲ್ಲಿನ ಇರುಳಿಗ ಸಮುದಾಯ ಜನರು ಯಾವುದೇ ಮೂಲಸೌಕರ್ಯಗಳಿಲ್ಲದೆ ಬಳಲುತ್ತಿದ್ದಾರೆ ತಮ್ಮ ಬರಹ ಮತ್ತು ವಿಡಿಯೋಗಳ ಮೂಲಕ ಸತತವಾಗಿ ಗಮನ ಸೆಳೆದ ರುದ್ರೇಶ್ವರ್‌ರವರು ಅಲ್ಲಿಗೆ ಅಧಿಕಾರಿಗಳು ಭೇಟಿ ನೀಡಿ ಹಕ್ಕುಪತ್ರ ನೀಡುವಂತೆ ಮಾಡುವಲ್ಲಿ ಪಾತ್ರ ವಹಿಸಿದ್ದಾರೆ.

ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ತಮ್ಮ ಅಜ್ಜಿ-ತಾತರಾದಂತಹ ಪಾರ್ವತಮ್ಮ-ಸಿದ್ಧವೀರಯ್ಯ, ಜಯಮ್ಮ-ಶಾಂತಯ್ಯ ಅವರ ನೆನಪಿನಲ್ಲಿ ಶಕ್ತ್ಯಾನುಸಾರ ನೆರವು ನೀಡುವ ಮೂಲಕ ಸಮಾಜಮುಖಿ ಚಿಂತನೆಯನ್ನು ಪ್ರಕಟಿಸುತ್ತಾ ಬಂದಿದ್ದಾರೆ.

ಈ ಹಿಂದೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯ ಮಾಡುವ ಸಿಬ್ಬಂದಿಗೆ ಸ್ವೆಟರ್ ಗಳ ವಿತರಣೆ, ಕೂಟಗಲ್ ಬಳಿ ವಾಸಿಸುತ್ತಿರುವ ಇರುಳಿಗ ಸಮುದಾಯದ ಕುಟುಂಬಗಳಿಗೆ ಸ್ವೆಟರ್ ವಿತರಣೆ, ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ವಿತರಣೆ, ಪ್ರಗತಿ ವಿದ್ಯಾ ಸಂಸ್ಥೆಗೆ ಡ್ರಮ್ ಸೆಟ್ ವಿತರಣೆ, ಅಮೃತ ವಿಕಲಚೇತನ ವೃದ್ಧಾಶ್ರಮಕ್ಕೆ ರೆಪ್ರಿಜರೇಟರ್ ವಿತರಣೆ ಸೇರಿದಂತೆ ಪ್ರತಿ ವರ್ಷವೂ ವಿಭಿನ್ನ ಕಾರ್ಯಕ್ರಮಗಳ ಮೂಲಕ ಸಮಾಜಿಕ ಚಟುವಟಿಕೆಗಳನ್ನು ಮುಂದುವರೆಸಿದ್ದಾರೆ.

ಜೊತೆಗೆ ತಮ್ಮ ಮಗಳಾದ ಆರ್. ಯಶಿಕಾ ಹುಟ್ಟುಹಬ್ಬದ ಅಂಗವಾಗಿ ಪ್ರತಿ ವರ್ಷವೂ ಮತದಾನ ಕುರಿತು ಜಾಗೃತಿ, ಕೋವಿಡ್ ಕುರಿತು ಜಾಗೃತಿ ಹಾಗೂ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಮಹಿಳೆಯರನ್ನು ಗೌರಿ ಹಬ್ಬದಂದು ಮನೆಗೆ ಕರೆದು ಬಾಗಿನ ನೀಡುತ್ತಾ ಬಂದಿದ್ದಾರೆ. ಇವರ ಕಾರ್ಯಕಗಳಿಂದ ಪ್ರೇರಣೆಗೊಂಡ ಕೆಲ ಸ್ನೇಹಿತರೂ ಸಹ ತಮ್ಮ ಜನ್ಮ ದಿನದಂದು, ತಮ್ಮ ಮನೆಯ ಶುಭ ಸಮಾರಂಭಗಳಂದು ಇದೇ ಬಗೆಯ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.

ರುದ್ರೇಶ್ವರರವರು ಕರ್ನಾಟಕ ಜಾನಪದ ಪರಿಷತ್ತಿನ ರಾಮನಗರ ತಾಲ್ಲೂಕು ಘಟಕದ ಅಧ್ಯಕ್ಷರಾಗಿ, ಜಿಲ್ಲಾ ಲೇಖಕರ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾಗಿ, ಭಾರತೀಯ ಯೂತ್ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾಧ್ಯಕ್ಷರಾಗಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಸಕ್ರಿಯವಾಗಿ ದುಡಿಯುತ್ತಿದ್ದಾರೆ.

“ಸಮಾಜಮುಖಿ ಕೆಲಸಗಳನ್ನು ಎಲ್ಲರೂ ಮಾಡಬಹುದು, ಆದರೆ ಮನಸ್ಸು ಇರಬೇಕು ಅಷ್ಟೆ. ನಾವು ಕಳೆದುಕೊಂಡಿರುವ ಅಜ್ಜ-ಅಜ್ಜಿಯನ್ನು ಒಳ್ಳೆಯ ಕೆಲಸ ಮಾಡುವ ಮೂಲಕ ನೆನಪಿಸಿಕೊಳ್ಳಬೇಕು. ಈಗ ಬಹುತೇಕ ಮನೆಗಳಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿದೆ. ಹಿರಿಯರಿಗೆ ಶಕ್ತಿ ತುಂಬಲು ಸರ್ಕಾರದ ವತಿಯಿಂದ ಕಾನೂನುಗಳು ಜಾರಿಯಾದರೂ ಪ್ರಯೋಜನವಾಗುತ್ತಿಲ್ಲ” ಎನ್ನುತ್ತಾರೆ ಎಸ್. ರುದ್ರೇಶ್ವರ

ಹಿರಿಯರು ಸಮಾಜದ ಆಸ್ತಿ. ವಯಸ್ಸಾದ ಹಿರಿಯರು ಬೇಡವಾದ ಜೀವಗಳಲ್ಲ. ಅವರಲ್ಲಿರುವ ಜೀವನದ ಅನುಭವಗಳು ಹತಾಶೆಗೆ ಒಳಗಾಗಿರುವ ಯುವ ಸಮುದಾಯಕ್ಕೆ ಮಾದರಿಯಾಗುತ್ತವೆ. ಹಿರಿಯರನ್ನು ದೇಶದ ಸಂಪತ್ತು ಎಂದು ಪರಿಗಣಿಸಬೇಕು. ಆದರೆ ಪ್ರಸ್ತತ ಸಂದರ್ಭದಲ್ಲಿ ಹಿರಿಯರನ್ನು ಕಡೆಗಣಿಸಲಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಇಂದಿನ ಯುವ ಸಮುದಾಯ ಹಿರಿಯ ಅನುಭವವನ್ನು ತಿಳಿದುಕೊಂಡು ಉತ್ತಮವಾದ ಜೀವನವನ್ನು ರೂಪಿಸಿಕೊಳ್ಳಬೇಕು ಎನ್ನುತ್ತಾರೆ.

ಸಮಾಜ ಮುಖಿ ಕೆಲಸಗಳ ಮೂಲಕ, ಜನಪರ ಪತ್ರಿಕೋದ್ಯಮದ ಮೂಲಕ ದುಡಿಯುತ್ತಿರುವ ರುದ್ರೇಶ್ವರ್‌ರವರ ಕೆಲಸಗಳು ಯಶಸ್ವಿಯಾಗಲಿ. ಅವರಿಂದ ಮತ್ತಷ್ಟು ಜನಪರ ಕೆಲಸಗಳು ಹೊರಹೊಮ್ಮಲಿ ಎಂಬುದು ನಮ್ಮ ಆಶಯ.


ಇದನ್ನೂ ಓದಿ; ಎಲೆಮರೆ -39: ಊರನ್ನೇ ರಂಗಭೂಮಿ ಮಾಡಿದ ಶಿಕ್ಷಕ ಅಶೋಕ ತೋಟ್ನಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...