Homeಚಳವಳಿಲಕ್ಷಾಂತರ ಮಕ್ಕಳಿಗೆ ಶಿಕ್ಷಣ ಸಿಗಲು ಕಾರಣರಾದ ನಿಜವಾದ ಶಿಕ್ಷಣದ ಸಂತ ಅನಿಲ್ ಸದ್ಗೋಪಾಲ್

ಲಕ್ಷಾಂತರ ಮಕ್ಕಳಿಗೆ ಶಿಕ್ಷಣ ಸಿಗಲು ಕಾರಣರಾದ ನಿಜವಾದ ಶಿಕ್ಷಣದ ಸಂತ ಅನಿಲ್ ಸದ್ಗೋಪಾಲ್

ಭೊಪಾಲ್ ನಲ್ಲಿ ಸಂಭವಿಸಿದ ಅನಿಲ ದುರಂತ ಮತ್ತು ಅದರಿಂದಾದ ಸಾವು-ನೋವುಗಳನ್ನು ನೋಡಿ ನೊಂದರು. ಅಲ್ಲಿಂದ ಅವರು ಸಂತ್ರಸ್ಥ ಕುಟುಂಬಗಳಿಗೆ ನ್ಯಾಯಯುತ ಪರಿಹಾರಕ್ಕಾಗಿ ಹೋರಾಟಗಳನ್ನು ಮುನ್ನಡೆಸಿದರು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಬಯೋಕೆಮೆಸ್ಟ್ರಿ ಮತ್ತು ಮಾಲಿಕ್ಯುಲರ್ ಬಯಾಲಿಜಿ ವಿಷಯದಲ್ಲಿ 1963ರಲ್ಲಿಯೇ ಅಮೇರಿಕಾಕ್ಕೆ ಹೋಗಿ ಸಂಶೋಧನೆ ನಡೆಸಿದ್ದ ಅನಿಲ್ ಸದ್ಗೋಪಾಲ್‍ರವರು ಭಾರತಕ್ಕೆ ಬಂದು ಮಾಡಿದ್ದು ಏನು ಗೊತ್ತೇ? ಮಧ್ಯಪ್ರದೇಶದ ಹೋಶಂಗಬಾದ್ ಜಿಲ್ಲೆಯ ಪಲಿಯ ಪಿಪಾರಿಯ ಎಂಬ ಹಳ್ಳಿಗಳಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಕೃಷಿ, ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಪಾಠ ಮಾಡುತ್ತಿದ್ದರು. ವೈಜ್ಞಾನಿಕ ರೀತಿಯಲ್ಲಿ ಪಶು ಸಂಗೋಪನೆ ಮತ್ತು ಕಡಿಮೆ ಖರ್ಚಿನಲ್ಲಿ ನೀರಾವರಿಯ ವಿಧಾನಗಳ ಕುರಿತು ಪಾಠ ಮಾಡುತ್ತಿದ್ದ ಇವರ ನಂತರ 1972ರಲ್ಲಿ ಮಕ್ಕಳ ವಿಜ್ಞಾನ ಕಲಿಕೆಯ ಮೇಲೆ ಗಮನ ಹರಿಸಿದರು.

ನಂತರ ಇದು ಹೋಶಂಗಬಾದ್ ಸೈನ್ಸ್ ಟೀಚಿಂಗ್ ಪ್ರೊಗ್ರಾಮ್ ಎಂದೇ ಪ್ರಖ್ಯಾತವಾಯಿತು. ಅನಿಲ್ ಸದ್ಗೋಪಾಲ್ ರವರು ಕಿಶೋರ್ ಭಾರತಿ ಎಂಬ ತಮ್ಮ ಸಂಸ್ಥೆಯ ಮೂಲಕ 16 ಶಾಲೆಗಳಲ್ಲಿ ಆರಂಭಿಸಿದ ಈ ಮಾತೃಭಾಷೆಯಲ್ಲಿ ವಿಜ್ಞಾನ ಕಲಿಕೆ ಕಾರ್ಯಕ್ರಮ ಯಶಸ್ವಿಯಾದ್ದರಿಂದ ಸರ್ಕಾರ ಇಡೀ ಹೋಶಂಗಬಾದ್ ಜಿಲ್ಲೆಗೆ ವಿಸ್ತರಿಸಿತು. ಇದಕ್ಕೂ ಮೊದಲು ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‍ನಲ್ಲಿ ಸ್ವಲ್ಪ ಕಾಲ ಕೆಲಸ ಮಾಡಿದ್ದ ಅನಿಲ್ ಸದ್ಗೋಪಾಲ್‍ರವರು ಅಲ್ಲಿಂದ, ದೆಹಲಿ ವಿ.ವಿಯಿಂದ ಎಲ್ಲಾ ಕಡೆಗಳಿಂದ ವಿಜ್ಞಾನಿಗಳು ಈ ಪ್ರಯೋಗದಲ್ಲಿ ಪಾಲುದಾರರಾಗುವಂತೆ ಮಾಡಿದರು.

1982ರಲ್ಲಿ ಏಕಲವ್ಯ ಸಂಸ್ಥೆ ಆರಂಭಿಸಿ ಶಾಲಾ ಮಕ್ಕಳೊಡನೆ ಕೆಲಸ ಮಾಡುತ್ತಿದ್ದ ಸದ್ಗೋಪಾಲ್‍ರವರು 1984ರಲ್ಲಿ ಪಕ್ಕದ ಭೊಪಾಲ್ ನಲ್ಲಿ ಸಂಭವಿಸಿದ ಅನಿಲ ದುರಂತ ಮತ್ತು ಅದರಿಂದಾದ ಸಾವು-ನೋವುಗಳನ್ನು ನೋಡಿ ನೊಂದರು. ಅಲ್ಲಿಂದ ಅವರು ಸಂತ್ರಸ್ಥ ಕುಟುಂಬಗಳಿಗೆ ನ್ಯಾಯಯುತ ಪರಿಹಾರಕ್ಕಾಗಿ ಹೋರಾಟಗಳನ್ನು ಮುನ್ನಡೆಸಿದರು.

ಸದ್ಗೋಪಾಲ್‍ರವರ ಅಪಾರ ವಿದ್ವತ್ತು ಮತ್ತು ಜ್ಞಾನವನ್ನು ಮನಗಂಡಿದ್ದ ಭಾರತ ಸರ್ಕಾರ 1990ರಲ್ಲಿ ಆಚಾರ್ಯ ರಾಮಮೂರ್ತಿ ರಿವ್ಯೂ ಕಮಿಟಿಗೆ ಇವರನ್ನು ಸದಸ್ಯರನ್ನಾಗಿ ನೇಮಿಸಲಾಯಿತು. 1986ರ ಹೊಸ ಶಿಕ್ಷಣ ನೀತಿಯನ್ನು ವಿಮರ್ಶೆಗೊಳಪಡಿಸುವುದು ಇವರ ಜವಾಬ್ದಾರಿಯಾಗಿತ್ತು. ಆದರೆ ಶಿಕ್ಷಣ ಸಾರ್ವತ್ರಿಕರಣದಿಂದ ಹಿಂದೆ ಸರಿಯುವ ನೀತಿಗಳನ್ನು ಜಾರಿಗೊಳಿಸಲು ಮುಂದಾಗಿದ್ದರಿಂದ ಅವರು ಆ ಸಮಿತಿಗೆ ರಾಜಿನಾಮೆ ನೀಡಿ ಹೊರಬಂದರು.

ಇದೇ ಸಂದರ್ಭದಲ್ಲಿ ಛತ್ತಿಸ್‍ಘಡ ಮುಕ್ತಿ ಮೋರ್ಚಾದ ಸ್ಥಾಪಕರಾಗಿದ್ದ ಬಹುದೊಡ್ಡ ಹೋರಾಟ ಹೋರಾಟಗಾರ ಶಂಕರ್ ಗುಹಾ ನಿಯೋಗಿಯವರ ಹತ್ಯೆಯಾಗಿತ್ತು. ಈ ಕುರಿತು ಹೆಚ್ಚಿನ ಸಂಶೋಧನೆ ಮತ್ತು ಪುಸ್ತಕ ಬರೆಯಲು ಸದ್ಗೋಪಾಲ್‍ರವರು 1992 ರಲ್ಲಿ ದೆಹಲಿಗೆ ಬಂದರು. 1994ರಲ್ಲಿ ದೆಹಲಿ ವಿ.ವಿಯಲ್ಲಿ ಪ್ರಾಧ್ಯಾಪಕರಾಗಿ ಸೇರಿದರು. 1998ರಿಂದ 2001ರವರೆಗೆ ಡಿರ್ಪಾಟೆಮೆಂಟ್ ಆಫ್ ಎಜುಕೇಷನ್‍ನ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು.

ವಿಜ್ಞಾನ ಚಳವಳಿಯಲ್ಲಿ ಸದಾ ಮುಂದಿದ್ದ ಇವರು ಜನ ವಿಜ್ಞಾನ ಚಳವಳಿ ಜಾಥಾದ ಮುಖ್ಯಸ್ಥರಾಗಿದ್ದರು. 2004ರಲ್ಲಿ ಇವರನ್ನು ಸೆಂಟ್ರಲ್ ಅಡ್ವೈಸರಿ ಬೋರ್ಡ್ ಆಫ್ ಎಜುಕೇಷನ್‍ನ ಸದಸ್ಯರನ್ನಾಗಿ ನೇಮಿಸಲಾಯಿತು. ಆನಂತರ 2005ರಲ್ಲಿ ಈಗ ಜಾರಿಯಲ್ಲಿರುವ ಆರ್‍ಟಿಈ ಶಿಕ್ಷಣ ಹಕ್ಕು ಕಾಯ್ದೆಯ ರಚನಾ ಸಮಿತಿಯ ಸದಸ್ಯರಾಗಿದ್ದರು. ದೇಶದ ಎಲ್ಲಾ ಮಕ್ಕಳಿಗೂ ಉಚಿತ ಮತ್ತು ಸಮಾನ ಶಿಕ್ಷಣವನ್ನು ಜಾರಿಗೊಳಿಸುವುದು, ತಾರತಮ್ಯವನ್ನು ನಿವಾರಿಸುವಂತಹ ಮಹತ್ವದ ಅಂಶಗಳನ್ನು ಅದರಲ್ಲಿ ಇವರು ಸೇರಿಸಿದ್ದರು. ಆದರೆ ಇವರು ಭಾಗವಾಗಿದ್ದ ಸಮಿತಿ ಸಲ್ಲಿಸಿದ ವರದಿಯನ್ನು ಸಂಪೂರ್ಣವಾಗಿ ತಿದ್ದುಪಡಿ ಮಾಡಿ ಕೇಂದ್ರ ಸರ್ಕಾರ ಮಂಡಿಸಿತು. ಇದರಿಂದ ಬೇಸರಗೊಂಡ ಇವರು ತಮ್ಮ ವಿರೋಧವನ್ನು ದಾಖಲಿಸಿ ಸಮಿತಿಗೆ ರಾಜಿನಾಮೇ ನೀಡ ಹೊರಬಂದರು.

ಆಗ ಅವರು ಆರ್‍ಟಿಈಯನ್ನು ಜಾರಿಗೊಳಿಸುವ ಮುನ್ನ ತಿದ್ದುಪಡಿ ಮಾಡಬೇಕೆಂಬ ಆಂದೋಲನವನ್ನು ಶುರು ಮಾಡಿದರು. ಸಮಾನ ಶಾಲೆಯನ್ನು ಜಾರಿಗೆ ತರಬೇಕೇಂಬುದು ಅವರ ಪ್ರಮುಖ ಹಕ್ಕೊತ್ತಾಯವಾಗಿತ್ತು.

ಒಂದು ಹಳ್ಳಿಯನ್ನು/ ನಗರದ ನಿಗಧಿತ ಪ್ರದೇಶ ತೆಗೆದುಕೊಂಡರೆ ಅಲ್ಲಿ ಒಂದೇ ಸುಸಜ್ಜಿತ ಸರ್ಕಾರಿ ಶಾಲೆ ಇರಬೇಕು. ಆ ನೆರಹೊರೆಯ ಎಲ್ಲಾ ಜಾತಿ ವರ್ಗದ ಮಕ್ಕಳು ಅದೇ ಶಾಲೆಗೆ ಬರಬೇಕು. (ಶ್ರೀಮಂತ – ಬಡವ, ಮೇಲುಜಾತಿ-ತಳಸಮುದಾಯ ಎಲ್ಲರೂ ಸೇರಿ) ಆಗ ಅಲ್ಲಿನ ಶಿಕ್ಷಕರು ಅತ್ಯುತ್ತಮವಾಗಿ ಬೋಧಿಸುವುದಲ್ಲದೇ ಉತ್ತಮ ಗುಣಮಟ್ಟದ ಶಿಕ್ಷಣ ಸಾಧ್ಯ ಎಂಬುದು ಇವರ ಕನಸಾಗಿತ್ತು. ಇದನ್ನೇ ನೆರೆಹೊರೆ ಆಧಾರಿತ ಸಮಾನ ಶಾಲಾ ಪದ್ದತಿಯೆಂದು ಕರೆದು ಇದರ ಜಾರಿಗಾಗಿ ಒತ್ತಾಯಿಸಿದರು.

ನಂತರ 2009ರಲ್ಲಿ ಇವರು ಶಿಕ್ಷಣದ ಹಕ್ಕಿಗಾಗಿ ಅಖಿಲ ಭಾರತ ವೇದಿಕೆಯನ್ನು ಪ್ರಾರಂಭಿಸಿದರು. ಶಿಕ್ಷಣ ತಜ್ಞರು, ಪ್ರಾಧ್ಯಾಪಕರು, ಪೋಷಕರು, ವಿದ್ಯಾರ್ಥಿಗಳು, ಚಳವಳಿಗಾರರು ಎಲ್ಲರನ್ನು ಒಳಗೊಂಡಿರುವ ಈ ವೇದಿಕೆ ಶಿಕ್ಷಣದ ವ್ಯಾಪರವನ್ನು ತಡೆಗಟ್ಟಿ ಸಮಾನ ಶಾಲೆಗಳು ಜಾರಿಯಾಗಬೇಕೆಂದು ಒತ್ತಾಯಿಸುತ್ತಿದೆ. ಅನಿಲ್ ಸದ್ಗೋಪಾಲ್‍ರವರು ಹಲವು ಬಾರಿ ಕರ್ನಾಟಕಕ್ಕೂ ಬಂದು ಶಿಕ್ಷಣದ ಕುರಿತು ಹಲವು ಮಹತ್ವದ ಉಪನ್ಯಾಸಗಳನ್ನು ನೀಡಿದ್ದಾರೆ.

79 ವರ್ಷದ ಇಂತಹ ಸರಳಜೀವಿ, ಈಗಲೂ ದಿನಕ್ಕೆ ನಿಜವಾಗಿಯೂ 18ಗಂಟೆಗಿಂತಲೂ ಹೆಚ್ಚು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಈ ಶಿಕ್ಷಣ ಸಂತನನ್ನು ಜ್ಞಾಪಿಸಿಕೊಳ್ಳಲು ಒಂದು ಕಾರಣವಿದೆ. ಮೊನ್ನೆಯಷ್ಟೇ ಇವರಿಗೆ ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ ವತಿಯಿಂದ ಕೊಡಲಾಗುವ ಹೋಮಿಬಾಬ ಅವಾರ್ಡ್ ಪಡೆದಿದ್ದಾರೆ. ಪ್ರತಿ ಎರಡು ವರ್ಷಕ್ಕೊಮ್ಮೆ ಶಿಕ್ಷಣ ಮತ್ತು ವಿಜ್ಞಾನ ಚಳವಳಿಯಲ್ಲಿ ತೊಡಗಿಸಿಕೊಳ್ಳುವವರಿಗೆ ಕೊಡಲಾಗುವ ಈ ಪ್ರಶಸ್ತಿ ಅನಿಲ್ ಸದ್ಗೋಪಾಲ್‍ರವರು ವಿಜ್ಞಾನ ಚಳವಳಿಗೆ ನೀಡಿದ ಜೀವಮಾನದ ಸಾಧನೆಗಾಗಿ ನೀಡಲಾಗಿದೆ.

ಪ್ರಶಸ್ತಿ ಪಡೆದು ಮಾತನಾಡಿರುವ ಅನಿಲ್ ಸದ್ಗೋಪಾಲ್‍ರವರು ಈ ಪ್ರಶಸ್ತಿ ನಮ್ಮ ಇಡೀ ತಂಡಕ್ಕೆ ಸೇರಬೇಕು. ಅವರಿಲ್ಲದಿದ್ದರೆ ನಾನೊಬ್ಬನೇ 1972ರಿಂದ ಇಲ್ಲಿವರೆಗೂ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎನ್ನುವ ಮೂಲಕ ತಮ್ಮ ವಿನಯತೆಯನ್ನು ಮೆರೆದಿದ್ದಾರೆ. ಅವರ ಹೋರಾಟಕ್ಕೆ ಜಯ ಸಿಗಲೆಂದು ಆಶಿಸೋಣ.

ಇದನ್ನು ಓದಿ: ಅತ್ಯುತ್ತಮ ಶಿಕ್ಷಣ ನೀಡುವ ರಾಷ್ಟ್ರಗಳಲ್ಲಿ ಫಿನ್‍ಲ್ಯಾಂಡ್ ನಂಬರ್ 1 ಆಗಿದ್ದು ಹೇಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...