Homeಚಳವಳಿಲಕ್ಷಾಂತರ ಮಕ್ಕಳಿಗೆ ಶಿಕ್ಷಣ ಸಿಗಲು ಕಾರಣರಾದ ನಿಜವಾದ ಶಿಕ್ಷಣದ ಸಂತ ಅನಿಲ್ ಸದ್ಗೋಪಾಲ್

ಲಕ್ಷಾಂತರ ಮಕ್ಕಳಿಗೆ ಶಿಕ್ಷಣ ಸಿಗಲು ಕಾರಣರಾದ ನಿಜವಾದ ಶಿಕ್ಷಣದ ಸಂತ ಅನಿಲ್ ಸದ್ಗೋಪಾಲ್

ಭೊಪಾಲ್ ನಲ್ಲಿ ಸಂಭವಿಸಿದ ಅನಿಲ ದುರಂತ ಮತ್ತು ಅದರಿಂದಾದ ಸಾವು-ನೋವುಗಳನ್ನು ನೋಡಿ ನೊಂದರು. ಅಲ್ಲಿಂದ ಅವರು ಸಂತ್ರಸ್ಥ ಕುಟುಂಬಗಳಿಗೆ ನ್ಯಾಯಯುತ ಪರಿಹಾರಕ್ಕಾಗಿ ಹೋರಾಟಗಳನ್ನು ಮುನ್ನಡೆಸಿದರು.

- Advertisement -
- Advertisement -

| ನಾನುಗೌರಿ ಡೆಸ್ಕ್ |

ಬಯೋಕೆಮೆಸ್ಟ್ರಿ ಮತ್ತು ಮಾಲಿಕ್ಯುಲರ್ ಬಯಾಲಿಜಿ ವಿಷಯದಲ್ಲಿ 1963ರಲ್ಲಿಯೇ ಅಮೇರಿಕಾಕ್ಕೆ ಹೋಗಿ ಸಂಶೋಧನೆ ನಡೆಸಿದ್ದ ಅನಿಲ್ ಸದ್ಗೋಪಾಲ್‍ರವರು ಭಾರತಕ್ಕೆ ಬಂದು ಮಾಡಿದ್ದು ಏನು ಗೊತ್ತೇ? ಮಧ್ಯಪ್ರದೇಶದ ಹೋಶಂಗಬಾದ್ ಜಿಲ್ಲೆಯ ಪಲಿಯ ಪಿಪಾರಿಯ ಎಂಬ ಹಳ್ಳಿಗಳಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಕೃಷಿ, ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಪಾಠ ಮಾಡುತ್ತಿದ್ದರು. ವೈಜ್ಞಾನಿಕ ರೀತಿಯಲ್ಲಿ ಪಶು ಸಂಗೋಪನೆ ಮತ್ತು ಕಡಿಮೆ ಖರ್ಚಿನಲ್ಲಿ ನೀರಾವರಿಯ ವಿಧಾನಗಳ ಕುರಿತು ಪಾಠ ಮಾಡುತ್ತಿದ್ದ ಇವರ ನಂತರ 1972ರಲ್ಲಿ ಮಕ್ಕಳ ವಿಜ್ಞಾನ ಕಲಿಕೆಯ ಮೇಲೆ ಗಮನ ಹರಿಸಿದರು.

ನಂತರ ಇದು ಹೋಶಂಗಬಾದ್ ಸೈನ್ಸ್ ಟೀಚಿಂಗ್ ಪ್ರೊಗ್ರಾಮ್ ಎಂದೇ ಪ್ರಖ್ಯಾತವಾಯಿತು. ಅನಿಲ್ ಸದ್ಗೋಪಾಲ್ ರವರು ಕಿಶೋರ್ ಭಾರತಿ ಎಂಬ ತಮ್ಮ ಸಂಸ್ಥೆಯ ಮೂಲಕ 16 ಶಾಲೆಗಳಲ್ಲಿ ಆರಂಭಿಸಿದ ಈ ಮಾತೃಭಾಷೆಯಲ್ಲಿ ವಿಜ್ಞಾನ ಕಲಿಕೆ ಕಾರ್ಯಕ್ರಮ ಯಶಸ್ವಿಯಾದ್ದರಿಂದ ಸರ್ಕಾರ ಇಡೀ ಹೋಶಂಗಬಾದ್ ಜಿಲ್ಲೆಗೆ ವಿಸ್ತರಿಸಿತು. ಇದಕ್ಕೂ ಮೊದಲು ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್‍ನಲ್ಲಿ ಸ್ವಲ್ಪ ಕಾಲ ಕೆಲಸ ಮಾಡಿದ್ದ ಅನಿಲ್ ಸದ್ಗೋಪಾಲ್‍ರವರು ಅಲ್ಲಿಂದ, ದೆಹಲಿ ವಿ.ವಿಯಿಂದ ಎಲ್ಲಾ ಕಡೆಗಳಿಂದ ವಿಜ್ಞಾನಿಗಳು ಈ ಪ್ರಯೋಗದಲ್ಲಿ ಪಾಲುದಾರರಾಗುವಂತೆ ಮಾಡಿದರು.

1982ರಲ್ಲಿ ಏಕಲವ್ಯ ಸಂಸ್ಥೆ ಆರಂಭಿಸಿ ಶಾಲಾ ಮಕ್ಕಳೊಡನೆ ಕೆಲಸ ಮಾಡುತ್ತಿದ್ದ ಸದ್ಗೋಪಾಲ್‍ರವರು 1984ರಲ್ಲಿ ಪಕ್ಕದ ಭೊಪಾಲ್ ನಲ್ಲಿ ಸಂಭವಿಸಿದ ಅನಿಲ ದುರಂತ ಮತ್ತು ಅದರಿಂದಾದ ಸಾವು-ನೋವುಗಳನ್ನು ನೋಡಿ ನೊಂದರು. ಅಲ್ಲಿಂದ ಅವರು ಸಂತ್ರಸ್ಥ ಕುಟುಂಬಗಳಿಗೆ ನ್ಯಾಯಯುತ ಪರಿಹಾರಕ್ಕಾಗಿ ಹೋರಾಟಗಳನ್ನು ಮುನ್ನಡೆಸಿದರು.

ಸದ್ಗೋಪಾಲ್‍ರವರ ಅಪಾರ ವಿದ್ವತ್ತು ಮತ್ತು ಜ್ಞಾನವನ್ನು ಮನಗಂಡಿದ್ದ ಭಾರತ ಸರ್ಕಾರ 1990ರಲ್ಲಿ ಆಚಾರ್ಯ ರಾಮಮೂರ್ತಿ ರಿವ್ಯೂ ಕಮಿಟಿಗೆ ಇವರನ್ನು ಸದಸ್ಯರನ್ನಾಗಿ ನೇಮಿಸಲಾಯಿತು. 1986ರ ಹೊಸ ಶಿಕ್ಷಣ ನೀತಿಯನ್ನು ವಿಮರ್ಶೆಗೊಳಪಡಿಸುವುದು ಇವರ ಜವಾಬ್ದಾರಿಯಾಗಿತ್ತು. ಆದರೆ ಶಿಕ್ಷಣ ಸಾರ್ವತ್ರಿಕರಣದಿಂದ ಹಿಂದೆ ಸರಿಯುವ ನೀತಿಗಳನ್ನು ಜಾರಿಗೊಳಿಸಲು ಮುಂದಾಗಿದ್ದರಿಂದ ಅವರು ಆ ಸಮಿತಿಗೆ ರಾಜಿನಾಮೆ ನೀಡಿ ಹೊರಬಂದರು.

ಇದೇ ಸಂದರ್ಭದಲ್ಲಿ ಛತ್ತಿಸ್‍ಘಡ ಮುಕ್ತಿ ಮೋರ್ಚಾದ ಸ್ಥಾಪಕರಾಗಿದ್ದ ಬಹುದೊಡ್ಡ ಹೋರಾಟ ಹೋರಾಟಗಾರ ಶಂಕರ್ ಗುಹಾ ನಿಯೋಗಿಯವರ ಹತ್ಯೆಯಾಗಿತ್ತು. ಈ ಕುರಿತು ಹೆಚ್ಚಿನ ಸಂಶೋಧನೆ ಮತ್ತು ಪುಸ್ತಕ ಬರೆಯಲು ಸದ್ಗೋಪಾಲ್‍ರವರು 1992 ರಲ್ಲಿ ದೆಹಲಿಗೆ ಬಂದರು. 1994ರಲ್ಲಿ ದೆಹಲಿ ವಿ.ವಿಯಲ್ಲಿ ಪ್ರಾಧ್ಯಾಪಕರಾಗಿ ಸೇರಿದರು. 1998ರಿಂದ 2001ರವರೆಗೆ ಡಿರ್ಪಾಟೆಮೆಂಟ್ ಆಫ್ ಎಜುಕೇಷನ್‍ನ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು.

ವಿಜ್ಞಾನ ಚಳವಳಿಯಲ್ಲಿ ಸದಾ ಮುಂದಿದ್ದ ಇವರು ಜನ ವಿಜ್ಞಾನ ಚಳವಳಿ ಜಾಥಾದ ಮುಖ್ಯಸ್ಥರಾಗಿದ್ದರು. 2004ರಲ್ಲಿ ಇವರನ್ನು ಸೆಂಟ್ರಲ್ ಅಡ್ವೈಸರಿ ಬೋರ್ಡ್ ಆಫ್ ಎಜುಕೇಷನ್‍ನ ಸದಸ್ಯರನ್ನಾಗಿ ನೇಮಿಸಲಾಯಿತು. ಆನಂತರ 2005ರಲ್ಲಿ ಈಗ ಜಾರಿಯಲ್ಲಿರುವ ಆರ್‍ಟಿಈ ಶಿಕ್ಷಣ ಹಕ್ಕು ಕಾಯ್ದೆಯ ರಚನಾ ಸಮಿತಿಯ ಸದಸ್ಯರಾಗಿದ್ದರು. ದೇಶದ ಎಲ್ಲಾ ಮಕ್ಕಳಿಗೂ ಉಚಿತ ಮತ್ತು ಸಮಾನ ಶಿಕ್ಷಣವನ್ನು ಜಾರಿಗೊಳಿಸುವುದು, ತಾರತಮ್ಯವನ್ನು ನಿವಾರಿಸುವಂತಹ ಮಹತ್ವದ ಅಂಶಗಳನ್ನು ಅದರಲ್ಲಿ ಇವರು ಸೇರಿಸಿದ್ದರು. ಆದರೆ ಇವರು ಭಾಗವಾಗಿದ್ದ ಸಮಿತಿ ಸಲ್ಲಿಸಿದ ವರದಿಯನ್ನು ಸಂಪೂರ್ಣವಾಗಿ ತಿದ್ದುಪಡಿ ಮಾಡಿ ಕೇಂದ್ರ ಸರ್ಕಾರ ಮಂಡಿಸಿತು. ಇದರಿಂದ ಬೇಸರಗೊಂಡ ಇವರು ತಮ್ಮ ವಿರೋಧವನ್ನು ದಾಖಲಿಸಿ ಸಮಿತಿಗೆ ರಾಜಿನಾಮೇ ನೀಡ ಹೊರಬಂದರು.

ಆಗ ಅವರು ಆರ್‍ಟಿಈಯನ್ನು ಜಾರಿಗೊಳಿಸುವ ಮುನ್ನ ತಿದ್ದುಪಡಿ ಮಾಡಬೇಕೆಂಬ ಆಂದೋಲನವನ್ನು ಶುರು ಮಾಡಿದರು. ಸಮಾನ ಶಾಲೆಯನ್ನು ಜಾರಿಗೆ ತರಬೇಕೇಂಬುದು ಅವರ ಪ್ರಮುಖ ಹಕ್ಕೊತ್ತಾಯವಾಗಿತ್ತು.

ಒಂದು ಹಳ್ಳಿಯನ್ನು/ ನಗರದ ನಿಗಧಿತ ಪ್ರದೇಶ ತೆಗೆದುಕೊಂಡರೆ ಅಲ್ಲಿ ಒಂದೇ ಸುಸಜ್ಜಿತ ಸರ್ಕಾರಿ ಶಾಲೆ ಇರಬೇಕು. ಆ ನೆರಹೊರೆಯ ಎಲ್ಲಾ ಜಾತಿ ವರ್ಗದ ಮಕ್ಕಳು ಅದೇ ಶಾಲೆಗೆ ಬರಬೇಕು. (ಶ್ರೀಮಂತ – ಬಡವ, ಮೇಲುಜಾತಿ-ತಳಸಮುದಾಯ ಎಲ್ಲರೂ ಸೇರಿ) ಆಗ ಅಲ್ಲಿನ ಶಿಕ್ಷಕರು ಅತ್ಯುತ್ತಮವಾಗಿ ಬೋಧಿಸುವುದಲ್ಲದೇ ಉತ್ತಮ ಗುಣಮಟ್ಟದ ಶಿಕ್ಷಣ ಸಾಧ್ಯ ಎಂಬುದು ಇವರ ಕನಸಾಗಿತ್ತು. ಇದನ್ನೇ ನೆರೆಹೊರೆ ಆಧಾರಿತ ಸಮಾನ ಶಾಲಾ ಪದ್ದತಿಯೆಂದು ಕರೆದು ಇದರ ಜಾರಿಗಾಗಿ ಒತ್ತಾಯಿಸಿದರು.

ನಂತರ 2009ರಲ್ಲಿ ಇವರು ಶಿಕ್ಷಣದ ಹಕ್ಕಿಗಾಗಿ ಅಖಿಲ ಭಾರತ ವೇದಿಕೆಯನ್ನು ಪ್ರಾರಂಭಿಸಿದರು. ಶಿಕ್ಷಣ ತಜ್ಞರು, ಪ್ರಾಧ್ಯಾಪಕರು, ಪೋಷಕರು, ವಿದ್ಯಾರ್ಥಿಗಳು, ಚಳವಳಿಗಾರರು ಎಲ್ಲರನ್ನು ಒಳಗೊಂಡಿರುವ ಈ ವೇದಿಕೆ ಶಿಕ್ಷಣದ ವ್ಯಾಪರವನ್ನು ತಡೆಗಟ್ಟಿ ಸಮಾನ ಶಾಲೆಗಳು ಜಾರಿಯಾಗಬೇಕೆಂದು ಒತ್ತಾಯಿಸುತ್ತಿದೆ. ಅನಿಲ್ ಸದ್ಗೋಪಾಲ್‍ರವರು ಹಲವು ಬಾರಿ ಕರ್ನಾಟಕಕ್ಕೂ ಬಂದು ಶಿಕ್ಷಣದ ಕುರಿತು ಹಲವು ಮಹತ್ವದ ಉಪನ್ಯಾಸಗಳನ್ನು ನೀಡಿದ್ದಾರೆ.

79 ವರ್ಷದ ಇಂತಹ ಸರಳಜೀವಿ, ಈಗಲೂ ದಿನಕ್ಕೆ ನಿಜವಾಗಿಯೂ 18ಗಂಟೆಗಿಂತಲೂ ಹೆಚ್ಚು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಈ ಶಿಕ್ಷಣ ಸಂತನನ್ನು ಜ್ಞಾಪಿಸಿಕೊಳ್ಳಲು ಒಂದು ಕಾರಣವಿದೆ. ಮೊನ್ನೆಯಷ್ಟೇ ಇವರಿಗೆ ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್ ವತಿಯಿಂದ ಕೊಡಲಾಗುವ ಹೋಮಿಬಾಬ ಅವಾರ್ಡ್ ಪಡೆದಿದ್ದಾರೆ. ಪ್ರತಿ ಎರಡು ವರ್ಷಕ್ಕೊಮ್ಮೆ ಶಿಕ್ಷಣ ಮತ್ತು ವಿಜ್ಞಾನ ಚಳವಳಿಯಲ್ಲಿ ತೊಡಗಿಸಿಕೊಳ್ಳುವವರಿಗೆ ಕೊಡಲಾಗುವ ಈ ಪ್ರಶಸ್ತಿ ಅನಿಲ್ ಸದ್ಗೋಪಾಲ್‍ರವರು ವಿಜ್ಞಾನ ಚಳವಳಿಗೆ ನೀಡಿದ ಜೀವಮಾನದ ಸಾಧನೆಗಾಗಿ ನೀಡಲಾಗಿದೆ.

ಪ್ರಶಸ್ತಿ ಪಡೆದು ಮಾತನಾಡಿರುವ ಅನಿಲ್ ಸದ್ಗೋಪಾಲ್‍ರವರು ಈ ಪ್ರಶಸ್ತಿ ನಮ್ಮ ಇಡೀ ತಂಡಕ್ಕೆ ಸೇರಬೇಕು. ಅವರಿಲ್ಲದಿದ್ದರೆ ನಾನೊಬ್ಬನೇ 1972ರಿಂದ ಇಲ್ಲಿವರೆಗೂ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎನ್ನುವ ಮೂಲಕ ತಮ್ಮ ವಿನಯತೆಯನ್ನು ಮೆರೆದಿದ್ದಾರೆ. ಅವರ ಹೋರಾಟಕ್ಕೆ ಜಯ ಸಿಗಲೆಂದು ಆಶಿಸೋಣ.

ಇದನ್ನು ಓದಿ: ಅತ್ಯುತ್ತಮ ಶಿಕ್ಷಣ ನೀಡುವ ರಾಷ್ಟ್ರಗಳಲ್ಲಿ ಫಿನ್‍ಲ್ಯಾಂಡ್ ನಂಬರ್ 1 ಆಗಿದ್ದು ಹೇಗೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...