Homeಮುಖಪುಟಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳ ಸ್ಥಿತಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

ಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳ ಸ್ಥಿತಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

- Advertisement -
- Advertisement -

ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡುತ್ತಿರುವ ಸಂದರ್ಭದಲ್ಲಿ ಉಕ್ರೇನ್‌ನಲ್ಲಿ ಹಲವು ಭಾರತೀಯ ವಿದ್ಯಾರ್ಥಿಗಳು ಸಿಕ್ಕಿಕೊಂಡಿದ್ದಾರೆ. ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬ ಸಾವನಪ್ಪಿದ್ದಾನೆ. ಈ ಎಲ್ಲಾ ಸಂದಿಗ್ದ ಪರಿಸ್ಥಿತಿಗೆ ಕೇಂದ್ರ ಬಿಜೆಪಿ ಸರ್ಕಾರದ ಅನಿಶ್ಚಿತ ಮತ್ತು ಬೇಜವಾಬ್ದಾರಿ ನೀತಿ-ನಿಲುವುಗಳೂ ಕಾರಣ ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕಳೆದ ಕೆಲವು ತಿಂಗಳಿಂದ ಯುಕ್ರೇನ್ – ರಷ್ಯಾ ನಡುವೆ ಯಾವುದೇ ಕ್ಷಣದಲ್ಲಿ ಯುದ್ಧ ಸ್ಪೋಟವಾಗಬಹುದೆಂಬ ವರದಿಗಳ ಹಿನ್ನೆಲೆಯಲ್ಲಿ ಹಲವಾರು ದೇಶಗಳು ತಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ವಾಪಸು ಕರೆಸಿಕೊಳ್ಳುವ ಪ್ರಯತ್ನ ಪ್ರಾರಂಭಿಸಿತ್ತು. ಆದರೆ ಭಾರತ ಮಾತ್ರ ಯುದ್ಧ ಶುರುವಾಗುವವರೆಗೆ ಭಾರತೀಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಮೋದಿಯವರು ಮುನ್ನೆಚ್ಚರಿಕೆ ವಹಿಸಲಿಲ್ಲ ಎಂದು ದೂರಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರದ ಈ ನಿರ್ಲಕ್ಷ್ಯದಿಂದಾಗಿಯೇ ಕರ್ನಾಟಕದ ಯುವ ವಿದ್ಯಾರ್ಥಿ ನವೀನ್ ಪ್ರಾಣ ಕಳೆದುಕೊಂಡು, ಆತನ ಹೆತ್ತವರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಆ ವಿದ್ಯಾರ್ಥಿಯ ಸಹಪಾಠಿಗಳು ಮತ್ತು ಹೆತ್ತವರ ಹೇಳಿಕೆಗಳೇ ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿವೆ ಪ್ರಧಾನಿ ಮೋದಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರು ಸಕಾಲದಲ್ಲಿ ಈ ವಿದ್ಯಾರ್ಥಿಗಳ ನೆರವಿಗೆ ಧಾವಿಸಿ, ಅವರನ್ನು ಭಾರತಕ್ಕೆ ಕರೆತಂದಿದ್ದರೆ ಅಮೂಲ್ಯವಾದ ಜೀವವೊಂದು ಉಳಿಯುತ್ತಿತ್ತು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಮ್ಮೊಳಗಿನ ರಾಜಕೀಯ ಭಿನ್ನಾಭಿಪ್ರಾಯಗಳು, ಸೈದ್ಧಾಂತಿಕ ವ್ಯತ್ಯಾಸಗಳು ಏನೇ ಇದ್ದರೂ ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಬಿಜೆಪಿ ಸರ್ಕಾರ ಕೈಗೊಳ್ಳುವ ನಿರ್ಧಾರವನ್ನು ಬೆಂಬಲಿಸುವುದು ನಮ್ಮ ಕರ್ತವ್ಯವಾಗಿದೆ. ಆದರೆ ಯುಕ್ರೇನ್‌ನ ಬಹಳಷ್ಟು ಪ್ರದೇಶಗಳಲ್ಲಿ ಆ ದೇಶದ ಜನ ಮತ್ತು ಸೈನಿಕರು ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ-ದೌರ್ಜನ್ಯಗಳನ್ನು ನಡೆಸುತ್ತಿರುವುದು ಮಾತ್ರವಲ್ಲ, ಅಪಹರಿಸಿಕೊಂಡು ಹೋಗಿರುವ ಘಟನೆಗಳು ಕೂಡಾ ವರದಿಯಾಗಿವೆ. ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಯುದ್ಧಗ್ರಸ್ತ ದೇಶದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚಾರಣೆ ಭಾರತಕ್ಕೆ ಹೊಸದೇನಲ್ಲ. ಹಿಂದೆಯೂ ಗಲ್ಪ್ ಯುದ್ಧ ನಡೆಯುತ್ತಿದ್ದಾಗ ಸುಮಾರು ಒಂದೂವರೆ ಲಕ್ಷ ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿತ್ತು. ಲಿಬಿಯಾದ ಯುದ್ಧದ ಸಮಯದಲ್ಲಿ ಸುಮಾರು 15,000 ಮತ್ತು ಯೆಮನ್ ಯುದ್ಧ ಕಾಲದಲ್ಲಿ ಅಂದಾಜು 5000 ಭಾರತೀಯರನ್ನು ಆಗಿನ ಕಾಂಗ್ರೆಸ್ ಸರ್ಕಾರ ಭಾರತಕ್ಕೆ ಕರೆತಂದಿತ್ತು. ಕಾಂಗ್ರೆಸ್ ಸರ್ಕಾರ ಇಲ್ಲವೇ ಕಾಂಗ್ರೆಸ್ ಪಕ್ಷ ಆ ಕಾರ್ಯಾಚರಣೆ ಬಗ್ಗೆ ಮೋದಿ
ಸರ್ಕಾರದಂತೆ ಪ್ರಚಾರ ಮಾಡಿ, ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡಿರಲಿಲ್ಲ. ಆದರೆ ಮೋದಿ ಕೇಂದ್ರ ಸರ್ಕಾರ ಯುಕ್ರೇನ್ ನಿಂದ ಭಾರತೀಯರನ್ನು ಕರೆತರುವ ಕಾರ್ಯಚಾರಣೆಗೂ ಗಂಗಾ ನದಿಯ ಹೆಸರು ಕೊಟ್ಟು ಅದನ್ನು ಉತ್ತರ ಪ್ರದೇಶದ ಚುನಾವಣೆಯ ಪ್ರಚಾರದಲ್ಲಿ ಬಳಸಲು ಹೊರಟಿದೆ. ಇದು ಭಾರತೀಯ ಜನತಾ ಪಕ್ಷದ ಕ್ಷುಲ್ಲಕ ರಾಜಕೀಯದ ದುರ್ಬುದ್ಧಿಗೆ ಸಾಕ್ಷಿ ಎಂದಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕವಿಟ್ಟುಕೊಂಡು ಯುಕ್ರೇನ್ ನಲ್ಲಿ ಸಂಕಷ್ಟದಲ್ಲಿರುವ ಭಾರತೀಯರನ್ನು ವಾಪಸು ಕರೆತರುವ ಪ್ರಯತ್ನವನ್ನು ಮಾಡಬೇಕು. ಇದೇ ವೇಳೆ ಬಿಜೆಪಿ
ಸರ್ಕಾರ ಯುಕ್ರೇನ್ ಮತ್ತು ರಷ್ಯಾ ದೇಶಗಳ ಜೊತೆ ಮಾತುಕತೆ ನಡೆಸಿ ಭಾರತೀಯರ ಸುರಕ್ಷತೆಯನ್ನು ಖಾತರಿಪಡಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಸರ್ಕಾರಿ ವೈದ್ಯಕೀಯ ಸೀಟಿಗೂ ನಿಗಧಿಗಿಂತ ನಾಲ್ಕು ಪಟ್ಟು ಅಧಿಕ ಶುಲ್ಕ ವಸೂಲಿ ಮಾಡುತ್ತಿರುವ KLE ಕಾಲೇಜು: ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...