Homeಮುಖಪುಟ‘ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದ ನಾಗರಿಕರನ್ನು ಉಕ್ರೇನ್‌‌‌ನಿಂದ ಸ್ಥಳಾಂತರಿಸಲು ಸಾಧ್ಯವಾಯಿತು’: ಉತ್ತರ ಪ್ರದೇಶ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ...

‘ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದ ನಾಗರಿಕರನ್ನು ಉಕ್ರೇನ್‌‌‌ನಿಂದ ಸ್ಥಳಾಂತರಿಸಲು ಸಾಧ್ಯವಾಯಿತು’: ಉತ್ತರ ಪ್ರದೇಶ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ

ಭಾರತೀಯ ವಿದ್ಯಾರ್ಥಿಗಳು ಅಲ್ಲಿ ಕಷ್ಟಪಡುತ್ತಿರುವಾಗ, ಪ್ರಧಾನಿ ಮೋದಿ ಒಂದಿಷ್ಟು ಕೂಡಾ ನಾಚಿಕೆ ಇಲ್ಲದೆ, ಒಂದಿಷ್ಟು ಜನರನ್ನು ಸ್ಥಳಾಂತರಿಸಿದ್ದನ್ನು ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದ ಒಕ್ಕೂಟ ಸರ್ಕಾರವು ಉಕ್ರೇನ್‌ನಿಂದ ನಾಗರಿಕರನ್ನು ಸ್ಥಳಾಂತರಿಸಲು ಸಾಧ್ಯವಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಚುನಾವಣಾ ಪ್ರಚಾರದಲ್ಲಿ ಬುಧವಾರ ಹೇಳಿದ್ದಾರೆ. ಉಕ್ರೇನ್‌ನಿಂದ ಭಾತೀಯರನ್ನು ವಾಪಾಸು ಕರೆತರಲು ಸರ್ಕಾರವು ಯಾವುದೇ ಪ್ರಯತ್ನವನ್ನು ಕೈಚೆಲ್ಲುವುದಿಲ್ಲ ಎಂದು ಅವರು ಹೇಳಿದ್ದಾರೆ.

“ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದಾಗಿ ನಾವು ಉಕ್ರೇನ್‌ನಿಂದ ನಾಗರಿಕರನ್ನು ಸ್ಥಳಾಂತರಿಸಲು ಸಾಧ್ಯವಾಯಿತು” ಎಂದು ಯುಪಿಯ ಸೋನ್‌ಭದ್ರಾದಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳ ಸ್ಥಿತಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ 

“ಸಶಸ್ತ್ರ ಪಡೆಗಳ ಶೌರ್ಯ ಮತ್ತು ‘ಮೇಕ್ ಇನ್ ಇಂಡಿಯಾ’ವನ್ನು ಪ್ರಶ್ನಿಸುವವರು ದೇಶವನ್ನು ಬಲಿಷ್ಠಗೊಳಿಸಲಾರರು” ಎಂದು ಅವರು ಪ್ರತಿಪಕ್ಷಗಳ ವಿರುದ್ಧ, ವಿಶೇಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶದ ಚುನಾವಣೆಗಳ ಬಿರುಸಿನ ಪ್ರಚಾರದ ಮಧ್ಯದಲ್ಲಿ, ಉಕ್ರೇನ್ ಬಿಕ್ಕಟ್ಟು ಮತ್ತು ಅಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟವು ದೇಶದಾದ್ಯಂತ ಕೇಂದ್ರ ಸರ್ಕಾರದ ವಿರುದ್ದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಉಕ್ರೇನ್‌ನಲ್ಲಿರುವ ಹಲವಾರು ಭಾರತೀಯ ವಿದ್ಯಾರ್ಥಿಗಳು ಭಾರತೀಯ ರಾಯಭಾರ ಕಚೇರಿಯು ಯಾವುದೆ ಕೆಲಸವನ್ನು ಮಾಡುತ್ತಿಲ್ಲ ಎಂದು ಆರೋಪಿಸಿ ವಿಡಿಯೊವನ್ನು ಸಾಮಾಜಿಕ ಜಾಲತಾಣದಗಳಲ್ಲಿ ಹರಿಯಬಿಡುತ್ತಿದ್ದಾರೆ.

ಪ್ರಧಾನಿಯ ಈ ಹೇಳಿಕೆಯ ವಿರುದ್ಧ ಭಾರತದ ಅನಿವಾಸಿ ಕಾಂಗ್ರೆಸ್ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ರೊಮಾನಿಯಾ ಗಡಿಯ ಪರಿಸ್ಥಿತಿ ಹೀಗಿದೆ ಎಂದು ಹೇಳಿ ಟ್ವಿಟರ್‌ನಲ್ಲಿ ವಿಡಿಯೊವನ್ನು ಅಪ್‌ಲೋಡ್‌ ಮಾಡಿದೆ. ವಿಡಿಯೊದಲ್ಲಿ ವಿದ್ಯಾರ್ಥಿಗಳ ಗುಂಪು ತಮ್ಮ ಸಂಕಷ್ಟ ಹೇಳಿಕೊಳ್ಳುತ್ತಾರೆ.

ಪ್ರಧಾನಿಯ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿ ಸಂಘಟನೆ ಕೆವಿಎಸ್‌ ಸಂಚಾಲಕ ಸರೋವರ್‌ ಬೆಂಕಿಕೆರೆ, “ಈ ಪ್ರಧಾನಿಗೆ ಒಂದಿಷ್ಟು ಕೂಡಾ ನಾಚಿಕೆ ಇಲ್ಲ. ಭಾರತ ಸರ್ಕಾರವು ಗಲ್ಫ್‌ ಯುದ್ಧದ ಸಮಯದಲ್ಲಿ ಒಂದು ಲಕ್ಷಕ್ಕಿಂತಲೂ ಹೆಚ್ಚು ಭಾರತೀಯರನ್ನು ಸ್ಥಳಾಂತರಿಸಿತ್ತು. ಆದರೆ ಅವತ್ತಿನ ಸರ್ಕಾರವು ಇದನ್ನು ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿಲ್ಲ. ಅಲ್ಲಿ ಯುದ್ಧ ನಡೆಯುತ್ತದೆ ಎಂದು ತಿಳಿದಿದ್ದರೂ, ಭಾರತೀಯ ಪ್ರಜೆಗಳ ಬಗ್ಗೆ ಯಾವುದೇ ಯೋಚನೆ ಇಲ್ಲದೆ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದರು. ಇದೀಗ ಒಬ್ಬ ವಿದ್ಯಾರ್ಥಿಯ ಹತ್ಯೆಯಾದ ನಂತರ, ವಿದ್ಯಾರ್ಥಿಗಳನ್ನೇ ತಪ್ಪಿತಸ್ಥರನ್ನಾಗಿ ಮಾಡಲಾಗುತ್ತಿದೆ. ಜನರಿಗೆ ನೆರವಾಗುವುದನ್ನು ಬಿಟ್ಟು ಬೇರೆಲ್ಲವನ್ನೂ ಈ ಸರ್ಕಾರ ಮಾಡುತ್ತಿದೆ” ಎಂದು ಹೇಳಿದ್ದಾರೆ

ಇದನ್ನೂ ಓದಿ: ಕೇಂದ್ರ ಸರ್ಕಾರ ಮತ್ತು ಗೋದಿ ಮಿಡಿಯಾಗಳಿಗೆ ಛೀಮಾರಿ ಹಾಕುತ್ತಿರುವ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...