Homeಮುಖಪುಟ‘ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದ ನಾಗರಿಕರನ್ನು ಉಕ್ರೇನ್‌‌‌ನಿಂದ ಸ್ಥಳಾಂತರಿಸಲು ಸಾಧ್ಯವಾಯಿತು’: ಉತ್ತರ ಪ್ರದೇಶ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ...

‘ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದ ನಾಗರಿಕರನ್ನು ಉಕ್ರೇನ್‌‌‌ನಿಂದ ಸ್ಥಳಾಂತರಿಸಲು ಸಾಧ್ಯವಾಯಿತು’: ಉತ್ತರ ಪ್ರದೇಶ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ

ಭಾರತೀಯ ವಿದ್ಯಾರ್ಥಿಗಳು ಅಲ್ಲಿ ಕಷ್ಟಪಡುತ್ತಿರುವಾಗ, ಪ್ರಧಾನಿ ಮೋದಿ ಒಂದಿಷ್ಟು ಕೂಡಾ ನಾಚಿಕೆ ಇಲ್ಲದೆ, ಒಂದಿಷ್ಟು ಜನರನ್ನು ಸ್ಥಳಾಂತರಿಸಿದ್ದನ್ನು ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದ ಒಕ್ಕೂಟ ಸರ್ಕಾರವು ಉಕ್ರೇನ್‌ನಿಂದ ನಾಗರಿಕರನ್ನು ಸ್ಥಳಾಂತರಿಸಲು ಸಾಧ್ಯವಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಚುನಾವಣಾ ಪ್ರಚಾರದಲ್ಲಿ ಬುಧವಾರ ಹೇಳಿದ್ದಾರೆ. ಉಕ್ರೇನ್‌ನಿಂದ ಭಾತೀಯರನ್ನು ವಾಪಾಸು ಕರೆತರಲು ಸರ್ಕಾರವು ಯಾವುದೇ ಪ್ರಯತ್ನವನ್ನು ಕೈಚೆಲ್ಲುವುದಿಲ್ಲ ಎಂದು ಅವರು ಹೇಳಿದ್ದಾರೆ.

“ಭಾರತದ ಶಕ್ತಿ ಹೆಚ್ಚುತ್ತಿರುವುದರಿಂದಾಗಿ ನಾವು ಉಕ್ರೇನ್‌ನಿಂದ ನಾಗರಿಕರನ್ನು ಸ್ಥಳಾಂತರಿಸಲು ಸಾಧ್ಯವಾಯಿತು” ಎಂದು ಯುಪಿಯ ಸೋನ್‌ಭದ್ರಾದಲ್ಲಿ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಉಕ್ರೇನ್‌ನಲ್ಲಿನ ಭಾರತೀಯ ವಿದ್ಯಾರ್ಥಿಗಳ ಸ್ಥಿತಿಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ 

“ಸಶಸ್ತ್ರ ಪಡೆಗಳ ಶೌರ್ಯ ಮತ್ತು ‘ಮೇಕ್ ಇನ್ ಇಂಡಿಯಾ’ವನ್ನು ಪ್ರಶ್ನಿಸುವವರು ದೇಶವನ್ನು ಬಲಿಷ್ಠಗೊಳಿಸಲಾರರು” ಎಂದು ಅವರು ಪ್ರತಿಪಕ್ಷಗಳ ವಿರುದ್ಧ, ವಿಶೇಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಪ್ರದೇಶದ ಚುನಾವಣೆಗಳ ಬಿರುಸಿನ ಪ್ರಚಾರದ ಮಧ್ಯದಲ್ಲಿ, ಉಕ್ರೇನ್ ಬಿಕ್ಕಟ್ಟು ಮತ್ತು ಅಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಸಂಕಷ್ಟವು ದೇಶದಾದ್ಯಂತ ಕೇಂದ್ರ ಸರ್ಕಾರದ ವಿರುದ್ದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಉಕ್ರೇನ್‌ನಲ್ಲಿರುವ ಹಲವಾರು ಭಾರತೀಯ ವಿದ್ಯಾರ್ಥಿಗಳು ಭಾರತೀಯ ರಾಯಭಾರ ಕಚೇರಿಯು ಯಾವುದೆ ಕೆಲಸವನ್ನು ಮಾಡುತ್ತಿಲ್ಲ ಎಂದು ಆರೋಪಿಸಿ ವಿಡಿಯೊವನ್ನು ಸಾಮಾಜಿಕ ಜಾಲತಾಣದಗಳಲ್ಲಿ ಹರಿಯಬಿಡುತ್ತಿದ್ದಾರೆ.

ಪ್ರಧಾನಿಯ ಈ ಹೇಳಿಕೆಯ ವಿರುದ್ಧ ಭಾರತದ ಅನಿವಾಸಿ ಕಾಂಗ್ರೆಸ್ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ರೊಮಾನಿಯಾ ಗಡಿಯ ಪರಿಸ್ಥಿತಿ ಹೀಗಿದೆ ಎಂದು ಹೇಳಿ ಟ್ವಿಟರ್‌ನಲ್ಲಿ ವಿಡಿಯೊವನ್ನು ಅಪ್‌ಲೋಡ್‌ ಮಾಡಿದೆ. ವಿಡಿಯೊದಲ್ಲಿ ವಿದ್ಯಾರ್ಥಿಗಳ ಗುಂಪು ತಮ್ಮ ಸಂಕಷ್ಟ ಹೇಳಿಕೊಳ್ಳುತ್ತಾರೆ.

ಪ್ರಧಾನಿಯ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿ ಸಂಘಟನೆ ಕೆವಿಎಸ್‌ ಸಂಚಾಲಕ ಸರೋವರ್‌ ಬೆಂಕಿಕೆರೆ, “ಈ ಪ್ರಧಾನಿಗೆ ಒಂದಿಷ್ಟು ಕೂಡಾ ನಾಚಿಕೆ ಇಲ್ಲ. ಭಾರತ ಸರ್ಕಾರವು ಗಲ್ಫ್‌ ಯುದ್ಧದ ಸಮಯದಲ್ಲಿ ಒಂದು ಲಕ್ಷಕ್ಕಿಂತಲೂ ಹೆಚ್ಚು ಭಾರತೀಯರನ್ನು ಸ್ಥಳಾಂತರಿಸಿತ್ತು. ಆದರೆ ಅವತ್ತಿನ ಸರ್ಕಾರವು ಇದನ್ನು ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿಲ್ಲ. ಅಲ್ಲಿ ಯುದ್ಧ ನಡೆಯುತ್ತದೆ ಎಂದು ತಿಳಿದಿದ್ದರೂ, ಭಾರತೀಯ ಪ್ರಜೆಗಳ ಬಗ್ಗೆ ಯಾವುದೇ ಯೋಚನೆ ಇಲ್ಲದೆ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದರು. ಇದೀಗ ಒಬ್ಬ ವಿದ್ಯಾರ್ಥಿಯ ಹತ್ಯೆಯಾದ ನಂತರ, ವಿದ್ಯಾರ್ಥಿಗಳನ್ನೇ ತಪ್ಪಿತಸ್ಥರನ್ನಾಗಿ ಮಾಡಲಾಗುತ್ತಿದೆ. ಜನರಿಗೆ ನೆರವಾಗುವುದನ್ನು ಬಿಟ್ಟು ಬೇರೆಲ್ಲವನ್ನೂ ಈ ಸರ್ಕಾರ ಮಾಡುತ್ತಿದೆ” ಎಂದು ಹೇಳಿದ್ದಾರೆ

ಇದನ್ನೂ ಓದಿ: ಕೇಂದ್ರ ಸರ್ಕಾರ ಮತ್ತು ಗೋದಿ ಮಿಡಿಯಾಗಳಿಗೆ ಛೀಮಾರಿ ಹಾಕುತ್ತಿರುವ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...