Homeಅಂಕಣಗಳುಬಹುಜನ ಭಾರತ; ಸೋತು ಗೆಲ್ಲುವುದೇ ಯುಕ್ರೇನ್?

ಬಹುಜನ ಭಾರತ; ಸೋತು ಗೆಲ್ಲುವುದೇ ಯುಕ್ರೇನ್?

- Advertisement -
- Advertisement -

ರಷ್ಯಾ ಮತ್ತು ಯುಕ್ರೇನಿನ ನಡುವೆ ನಡೆದಿದ್ದ ಮಾತುಕತೆಗಳ ಭೂಮಿಕೆಯನ್ನು ಮತ್ತು ಚದುರಂಗದಾಟದ ಹಾಸನ್ನೇ ಎಳೆದು ಕಿತ್ತೆಸೆದು ನೇರವಾಗಿ ಯುದ್ಧವನ್ನು ಹೇರಿದ್ದಾರೆ ಪುಟಿನ್. ನವನಾಜಿಗಳಿಂದ ಮತ್ತು ಅಮೆರಿಕೆಯು ಬೆಂಬಲಿಸಿ ಸುರಿದಿರುವ ಶಸ್ತ್ರಾಸ್ತ್ರಗಳಿಂದ ಯುಕ್ರೇನನ್ನು ಮುಕ್ತಗೊಳಿಸುವುದು ಈ ಯುದ್ಧದ ಉದ್ದೇಶವೆಂದು ಸಾರಿದ್ದಾರೆ.

ಭಾರತದ ಪಾಲಿಗೆ ಪಾಕಿಸ್ತಾನ ಹೇಗೋ, ರಷ್ಯಾದ ಪಾಲಿಗೆ ಯುಕ್ರೇನ್ ಹಾಗೆ. ಭಾರತದ ಪರ ಪಾಕಿಸ್ತಾನವನ್ನು ಭಾರತ ಬಯಸುವಂತೆ ರಷ್ಯಾ ಪರ ಯುಕ್ರೇನನ್ನು ನಾವು ಬಯಸುತ್ತೇವೆ ಎಂಬುದು ರಷ್ಯಾದ ಅನಧಿಕೃತ ಅಂಬೋಣ.

ರಷ್ಯಾ ಮತ್ತು ಪಶ್ಚಿಮ ಜಗತ್ತಿನ ನಡುವಣ ತಿಸ್ರದಲ್ಲಿ ಯುಕ್ರೇನ್ ಪ್ರಜೆಗಳು ಬಡವಾಗುತ್ತಿದ್ದಾರೆ. ಅನಗತ್ಯ ಯುದ್ಧದ ವಿನಾಶವನ್ನು ಅವರ ಮೇಲೆ ಹೇರಲಾಗಿದೆ. ತಿಸ್ರದ ಈ ಬೆಂಕಿ ಇಡೀ ವಿಶ್ವವನ್ನೇ ತನ್ನ ಒಡಲಿಗೆ ಸೆಳೆಯದಿರಲಿ.

ರಷ್ಯಾದ ದಾಳಿಯನ್ನು ಖಂಡಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯ ಗೊತ್ತುವಳಿಯನ್ನು ತನ್ನ ವಿಟೋ ಅಧಿಕಾರ ಚಲಾಯಿಸಿ ನಿಷ್ಫಲಗೊಳಿಸಿದೆ ರಷ್ಯಾ. ಮುಂದಿನ ಹೆಜ್ಜೆಯಾಗಿ ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿ ಈ ಕುರಿತು ಸಭೆ ಸೇರಲಿದೆ. ರಷ್ಯಾದ ನಡೆಯನ್ನು ವಾಗ್ದಂಡನೆಗೆ ಗುರಿಪಡಿಸುವುದು ಈ ಸಭೆಯ ಉದ್ದೇಶ. ತನ್ನ ಈ ನಡೆಗೆ 80 ದೇಶಗಳ ಬೆಂಬಲವನ್ನು ಪಡೆದುಕೊಂಡಿದೆ.

ಈ ವಾಗ್ದಂಡನೆಯ ಗೊತ್ತುವಳಿ ಅಂಗೀಕಾರವಾಗದಂತೆ ವಿಟೋ ಅಧಿಕಾರ ಚಲಾಯಿಸುವ ಅವಕಾಶ ರಷ್ಯಾಕ್ಕೆ ಈ ಸಭೆಯಲ್ಲಿ ಇರುವುದಿಲ್ಲ. ಆಫ್ರಿಕನ್ ದೇಶಗಳೂ ಸೇರಿದಂತೆ ಅಭಿವೃದ್ಧಿಶೀಲ ದೇಶಗಳು ಈ ಹಿಂದಿನಂತೆ ರಷ್ಯಾದ ಪರವಾಗಿ ಮತ ಚಲಾಯಿಸುವ ಅಥವಾ ಮತದಾನದಲ್ಲಿ ಭಾಗವಹಿಸದಿರುವ ಸಾಧ್ಯತೆಯೂ ಈಗ ಇಲ್ಲ. ರಷ್ಯಾದ ನಡೆಯನ್ನು ಕೀನ್ಯಾ ಈಗಾಗಲೇ ಬಲವಾಗಿ ಖಂಡಿಸಿರುವುದೇ ಬದಲಾಗಿರುವ ಈ ನಿಲುವಿನ ನಿಚ್ಚಳ ಸೂಚನೆ. ಅಂತಾರಾಷ್ಟ್ರೀಯ ಅಭಿಮತ ರಷ್ಯಾದ ವಿರುದ್ಧವಾಗಿ ತಿರುಗತೊಡಗಿದೆ. ಈ ಹಿನ್ನೆಲೆಯಲ್ಲಿ ಚೀನಾ ಕೂಡ ರಷ್ಯಾದೆಡೆ ತೋರುತ್ತ ಬಂದಿರುವ ತನ್ನ ಮೆದು ನೀತಿಯನ್ನು ಕೈಬಿಡುವ ಒತ್ತಡ ಎದುರಿಸಲಿದೆ. ಭಾರತ ಕೂಡ ಇಂದಲ್ಲ ನಾಳೆ ಇದೇ ನೀತಿಯನ್ನು ತಳೆಯಬೇಕಾದೀತು.

ಅಮೆರಿಕ ಸಂಯುಕ್ತ ಸಂಸ್ಥಾನಗಳು ಮತ್ತು ಐರೋಪ್ಯ ಒಕ್ಕೂಟ ಒಟ್ಟಾಗಿ ರಷ್ಯಾದ ಮೇಲೆ ಏಕಪಕ್ಷೀಯ ನಿರ್ಬಂಧಗಳನ್ನು ಈಗಾಗಲೇ ಹೇರಿವೆ. ಯುಕ್ರೇನ್ ಮೇಲಿನ ರಷ್ಯಾ ದಾಳಿಯ ಮೊನಚನ್ನು ಈ ನಿರ್ಬಂಧಗಳು ಮೊಂಡುಮಾಡುವ ಮತ್ತು ದಾಳಿಯ ದೀರ್ಘಾವಧಿಯನ್ನು ಮೊಟಕಾಗಿಸುವ ನಿರೀಕ್ಷೆಯನ್ನು ಅಮೆರಿಕ ಮತ್ತು ಐರೋಪ್ಯ ಒಕ್ಕೂಟ ಹೊಂದಿದೆ. ಯುಕ್ರೇನಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುವ ಭರವಸೆ ನೀಡಿವೆ ಅಮೆರಿಕ ಮತ್ತು ಜರ್ಮನಿ. ಆದರೆ ನೇರ ವಿದೇಶಿ ಸೇನಾ ನೆರವು ಹಾಗೂ ವಾಯದಾಳಿಯ ಬೆಂಬಲ ದೊರೆಯದೆ, ಕೇವಲ ತನ್ನ ಸ್ವಂತ ಬಲದಿಂದಲೇ ರಷ್ಯಾ ದಾಳಿಯನ್ನು ಯುಕ್ರೇನ್ ಹಿಮ್ಮೆಟ್ಟಿಸುವುದು ಅಸಾಧ್ಯ.

ರಷ್ಯಾದ ಈ ದಾಳಿಯನ್ನು ರಷ್ಯಾದ ಮಿತ್ರದೇಶಗಳು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಹೆಚ್ಚು ಕಾಲ ಸಮರ್ಥಿಸುವ ಸ್ಥಿತಿಯಲ್ಲಿ ಇಲ್ಲ. ರಷ್ಯಾ ಬೆನ್ನಿಗೆ ಬಲವಾಗಿ ನಿಲುತ್ತ ಬಂದಿರುವ ಚೀನಾ ದೇಶ ಕೂಡ ಈ ಮಾತಿಗೆ ಹೊರತಲ್ಲ.

ತಾನು ಗೆದ್ದೆನೆಂದು ಪುಟಿನ್ ಬೀಗಬಹುದು. ಆದರೆ ಅವರು ಗೆದ್ದು ಸೋಲಲಿದ್ದಾರೆ. ಯುಕ್ರೇನ್‌ನ ಜನ ಸೋತು ಗೆಲ್ಲಲಿದ್ದಾರೆ. ಈ ಗೆಲುವು ಸೋಲುಗಳ ನಡುವಣ ರಕ್ತಪಾತ, ಕಣ್ಣೀರು, ಸಾವುನೋವು, ವಿನಾಶದ ಬೆಲೆ ಕಟ್ಟಲಾದೀತೇ?

ರಷ್ಯಾದ ಮಿಲಿಟರಿ ಶಕ್ತಿಗೆ ಹೆದರಿ ದಂಗುಬಡಿದು ಆರಂಭದಲ್ಲೇ ಶರಣಾದೀತು ಎಂಬ ನಿರೀಕ್ಷೆಯನ್ನು ಯುಕ್ರೇನ್ ಹುಸಿಮಾಡಿದೆ. ದಿಟ್ಟ ಪ್ರತಿರೋಧ ತೋರಿರುವ ಯುಕ್ರೇನ್ ಸೇನೆ ಸುಲಭಕ್ಕೆ ಮಣಿಯುವುದಿಲ್ಲವೆಂದು ಸಾಬೀತುಮಾಡಿದೆ. ವಿಶ್ವಾದ್ಯಂತ ಬ್ರಹ್ಮಾಸ್ತ್ರವನ್ನು ಎದುರಿಸುತ್ತಿರುವ ಗುಬ್ಬಿ ಎಂಬ ಅನುಕಂಪ ಮೆಚ್ಚುಗೆಯನ್ನು ಗಳಿಸಿದೆ. ಜನಸಾಮಾನ್ಯರೂ ಸೇನೆಯ ಸಮವಸ್ತ್ರ ಧರಿಸಿ ಶಸ್ತ್ರಗಳನ್ನು ಕೈಗೆತ್ತಿಕೊಂಡು ಸೆಣಸುತ್ತಿದ್ದಾರೆ. ಯುಕ್ರೇನ್ ಅಧ್ಯಕ್ಷ ವೋಲೋಡಿಮಿರ್ ಝೆಲೆಸ್ಸ್ಕಿ ನಿಜ ನಾಯಕಮಣಿಯಂತೆ ತಮ್ಮ ಸೇನೆಯ ಮುಂಚೂಣಿಯಲ್ಲಿದ್ದು ಮುನ್ನಡೆಸುತ್ತಿದ್ದಾರೆ. ತಮ್ಮ ಜನರ ಜೊತೆ ಗಟ್ಟಿಯಾಗಿ ನಿಂತಿದ್ದಾರೆ. ಅಮೆರಿಕದ ಕೈಗೊಂಬೆಯಾಗಿರುವ ನವನಾಜೀವಾದಿ ಎಂಬ ರಷ್ಯಾದ ನಿಂದನೆ ಅವರಿಗೆ ಅಂಟಿದಂತಿಲ್ಲ.

ತನ್ನ ಅನುಗಾಲದ ಮಿತ್ರ ರಷ್ಯಾ ದೇಶ ತನ್ನ ನೆರೆಹೊರೆಯ ದುರ್ಬಲ ಸ್ವತಂತ್ರ ಸಾರ್ವಭೌಮ ದೇಶದ ಮೇಲೆ ನಡೆಸಿರುವ ಈ ಹಿಂಸಾತ್ಮಕ ಯುದ್ಧವನ್ನು ಖಚಿತವಾಗಿ ಖಂಡಿಸುವ ಸ್ಥಿತಿಯಲ್ಲಿ ಭಾರತ ಇಲ್ಲ. ಆದರೆ ಪುಟಿನ್ ದಾಳಿ ಮುಂಬರುವ ದಿನಗಳಲ್ಲಿ ಮತ್ತಷ್ಟು ವಿನಾಶಕಾರಿಯಾದರೆ ಭಾರತ ಮೌನ ಮುರಿಯಲೇಬೇಕಾಗುತ್ತದೆ.

ಯುದ್ಧ ನಡೆಸುತ್ತಿರುವ ಪುಟಿನ್ ತಮ್ಮ ದೇಶವಾಸಿಗಳಲ್ಲಿ ಅಸ್ಮಿತೆಯ ಸಂಕಟದೊಂದಿಗೆ ಆರ್ಥಿಕ ಸಂಕಟವನ್ನೂ ಹುಟ್ಟುಹಾಕಿದ್ದಾರೆ. ರಷ್ಯಾದ ನಾಗರಿಕರ ಹತ್ತಾರು ಲಕ್ಷ ಬಂಧು-ಮಿತ್ರರು ಯುಕ್ರೇನಿನಲ್ಲಿದ್ದಾರೆ. ಯುಕ್ರೇನಿನ ಮೇಲೆ ಯುದ್ಧ ಹೇರಿರುವ ರಷ್ಯಾದ ನಡೆಯನ್ನು ರಷ್ಯಾದ ನಾಗರಿಕರು ಬಲವಾಗಿ ವಿರೋಧಿಸಿದ್ದಾರೆ. ಯುಕ್ರೇನಿನೊಂದಿಗೆ ತಾವು ಸಾರಿರುವುದು ಪೂರ್ಣಪ್ರಮಾಣದ ಯುದ್ಧ ಎಂಬ ಸಂಗತಿಯನ್ನು ತಮ್ಮ ನಾಗರಿಕರಿಂದ ಮುಚ್ಚಿಡಲು ಪ್ರಯತ್ನಿಸಿದ್ದಾರೆ. ಈ ಯುದ್ಧವನ್ನು ಯುದ್ಧವೆಂದು ಕರೆಯದಂತೆ ರಷ್ಯನ್ ಸಮೂಹ ಮಾಧ್ಯಮಗಳಿಗೆ ತಾಕೀತು ಮಾಡಿದ್ದಾರೆ. ನಿಧಾನವಾಗಿ ಆದರೆ ನಿಶ್ಚಿತವಾಗಿ ಆರ್ಥಿಕ ತಳಮಳ ರಷ್ಯಾ ಜನಜೀವನಕ್ಕೆ ಬಿಸಿಮುಟ್ಟಿಸತೊಡಗಿದೆ. ಪಶ್ಚಿಮ ಜಗತ್ತು ಹೇರುತ್ತಿರುವ ನಿರ್ಬಂಧಗಳು ಮತ್ತು ಡಾಲರ್-ರೂಬಲ್ ವಿನಿಮಯ ದರ ಕುಸಿತದ ಬೆಳವಣಿಗೆಗಳು ಬೆಲೆ ಏರಿಕೆಯ ಝಳವನ್ನು ಹೆಚ್ಚಿಸುತ್ತಿವೆ. ಪುಟಿನ್‌ರನ್ನು ಮಹಾನ್ ಎಂದು ಗಟ್ಟಿಯಾಗಿ ಜಯಕಾರ ಹಾಕುತ್ತಿದ್ದ ಜನದನಿಗಳು ಕ್ಷೀಣಗೊಳ್ಳತೊಡಗಿವೆ. ಭಿನ್ನದನಿಗಳನ್ನು ಉಕ್ಕಿನ ಹಸ್ತದಿಂದ ಹಿಸುಕಿ ಹತ್ತಿಕ್ಕುವ ಸೂಚನೆಗಳು ನಿಚ್ಚಳವಾಗತೊಡಗಿವೆ. ಯುಕ್ರೇನ್ ಮೇಲಿನ ದಾಳಿ ದಟ್ಟ, ಹಿಂಸಾತ್ಮಕ ಹಾಗೂ ವಿನಾಶಕಾರಿಯಾದಷ್ಟೂ ರಷ್ಯಾದ ಜನಮಾನಸದಲ್ಲಿ ಪುಟಿನ್ ವರ್ಚಸ್ಸು ಕುಸಿಯಲಿದೆ. ಈ ಯಾವ ಕಾರಣಗಳೂ ಪುಟಿನ್ ಅವರನ್ನು ವಿಚಲಿತಗೊಳಿಸಿಲ್ಲ.

ರಷ್ಯಾ ಮತ್ತು ಯುಕ್ರೇನಿನ ನಡುವೆ ನಡೆದಿದ್ದ ಮಾತುಕತೆಗಳ ಭೂಮಿಕೆಯನ್ನು ಮತ್ತು ಚದುರಂಗದಾಟದ ಹಾಸನ್ನೇ ಎಳೆದು ಕಿತ್ತೆಸೆದು ನೇರವಾಗಿ ಅಲ್ಲಿನ ಜನರ ಮೇಲೆ ಯುದ್ಧವನ್ನು
ಹೇರಿದ್ದಾರೆ ಪುಟಿನ್. ನವನಾಜಿಗಳಿಂದ ಮತ್ತು ಅಮೆರಿಕೆಯು ಬೆಂಬಲಿಸಿ ಸುರಿದಿರುವ ಶಸ್ತ್ರಾಸ್ತ್ರಗಳಿಂದ ಯುಕ್ರೇನನ್ನು ಮುಕ್ತಗೊಳಿಸುವುದು ಈ ಯುದ್ಧದ ಉದ್ದೇಶವಂತೆ.

ಹಾಲಿ ಪ್ರಧಾನಿ ವೊಲೋಡೋಮಿರ್ ಝೆಲೆಸ್ಕಿ ಅವರ ಆಡಳಿತದಲ್ಲಿ ನ್ಯಾಟೋದತ್ತ ಹೆಚ್ಚುಹೆಚ್ಚು ನಿಶ್ಚಿತವಾಗಿ ವಾಲಿದ ಯುಕ್ರೇನ್ ರಷ್ಯಾದ ಜೊತೆಗಿನ ವಾಣಿಜ್ಯ ವ್ಯಾಪಾರವನ್ನೂ ತಗ್ಗಿಸಿದ್ದು ಪುಟಿನ್ ಅವರನ್ನು ಕೆರಳಿಸಿದೆ.

ರಷ್ಯಾ ಮತ್ತು ಪಶ್ಚಿಮ ಜಗತ್ತಿನ ನಡುವಣ ತಿಸ್ರದಲ್ಲಿ ಯುಕ್ರೇನ್ ಪ್ರಜೆಗಳು ಬಡವಾಗುತ್ತಿದ್ದಾರೆ. ಅನಗತ್ಯ ಯುದ್ಧದ ವಿನಾಶವನ್ನು ಅವರ ಮೇಲೆ ಹೇರಲಾಗಿದೆ. ಈ ದುರ್ಬಲ ದೇಶದ ಮೇಲೆ ಅಣ್ವಸ್ತ್ರಗಳನ್ನು ಪ್ರಯೋಗಿಸುವ ಬೆದರಿಕೆಯನ್ನು ಪುಟಿನ್ ಹಾಕಿದ್ದಾರೆ. ದುರ್ಬಲ ಯುಕ್ರೇನ್ ಮಾತುಕತೆಯ ಮೇಜಿಗೆ ಬರಲು ಒಪ್ಪಿದೆ. ಪುಟಿನ್ ಯುದ್ಧ ಗೆಲ್ಲಬಹುದೇ ವಿನಾ ಮನಸುಗಳನ್ನಲ್ಲ


ಇದನ್ನೂ ಓದಿ: ಯುದ್ಧಪಿಪಾಸು ಶಕ್ತಿಗಳ ಮತ್ತು ಪಾಪ್ಯುಲಿಸ್ಟ್ ಮುಖಂಡರ ನಡುವೆ ನಲುಗುತ್ತಿರವ ಮುಗ್ಧ ಜನರ ಪ್ರಾಣ

ಇದನ್ನೂ ಓದಿ: ರಷ್ಯಾ-ಉಕ್ರೇನ್ ಬಿಕ್ಕಟ್ಟು: 352 ಉಕ್ರೇನಿಯನ್ ನಾಗರಿಕರು ಸಾವು, 1,684 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...