Homeಮುಖಪುಟಸಮಸ್ಯೆ ಮೀಸಲಾತಿಯಲ್ಲಿಲ್ಲ, ಬದಲಿಗೆ NEET ನಲ್ಲಿದೆ: ನೀಟ್ ರದ್ಧತಿಗೆ ಕನ್ನಡಿಗರ ಆಗ್ರಹ

ಸಮಸ್ಯೆ ಮೀಸಲಾತಿಯಲ್ಲಿಲ್ಲ, ಬದಲಿಗೆ NEET ನಲ್ಲಿದೆ: ನೀಟ್ ರದ್ಧತಿಗೆ ಕನ್ನಡಿಗರ ಆಗ್ರಹ

ಲಕ್ಷಾಂತರ ರೂಪಾಯಿ ದುಡ್ಡುಕೊಟ್ಟು ಟ್ಯೂಶನ್ ಕೊಡಿಸಲು ಆಗುವ ಶ್ರೀಮಂತರಿಗೆ ಮಾತ್ರ ಅನುಕೂಲವಾಗುವಂತಹಾ NEET ಪರೀಕ್ಷಾ ವ್ಯವಸ್ತೆಯನ್ನು ಕರ್ನಾಟಕ ಕೈಬಿಡಬೇಕು.

- Advertisement -
- Advertisement -

ರಷ್ಯಾ ಉಕ್ರೇನ್ ಮೇಲೆ ಯುದ್ದ ಸಾರಿದ್ದು, ಕನ್ನಡಿಗ ವೈದ್ಯ ವಿದ್ಯಾರ್ಥಿಯ ಸಾವು ಕನ್ನಡಿಗರನ್ನು ಕೆರಳಿಸಿದೆ. ಅಲ್ಲದೆ ಪ್ರತಿಭಾವಂತ ಕನ್ನಡಿಗರೇಕೆ ವಿದ್ಯಾಭ್ಯಾಸಕ್ಕೆ ವಿದೇಶಗಳಿಗೆ ಹೋಗಿ ಬಲಿಯಾಗಬೇಕು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಈ ಹಿನ್ನೆಲೆಯಲ್ಲಿ NEET ಪರೀಕ್ಷೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದ್ದು, ಕೂಡಲೇ ಅದನ್ನು ರದ್ದಗೊಳಿಸಬೇಕೆಂಬ ಗಟ್ಟಿ ದನಿ ಕೇಳಿಬಂದಿದೆ.

ಇಂದು ಕನ್ನಡಿಗರು ನೀಟ್ ವಿರುದ್ಧ ಟ್ವಿಟರ್‌ನಲ್ಲಿ ಅಭಿಯಾನ ನಡೆಸಿದ್ದಾರೆ. “ಒಂದೆಡೆ ಸೀಟಿಗೆ ಕೋಟಿಗಟ್ಟಲೆ ಹಣ ಬಾಚುವ ಕ್ಯಾಪಿಟೇಷನ್ ಲಾಬಿ, ಇನ್ನೊಂದೆಡೆ ಕನ್ನಡಿಗರ ಹಕ್ಕುಗಳನ್ನು ಕಸಿಯುತ್ತಿರುವ ನೀಟ್ ಎಂಬ ಷಡ್ಯಂತ್ರ. ಬಲಿಯಾಗುತ್ತಿರುವುದು ಕನ್ನಡಿಗರು” ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಿಡಿಕಾರಿದೆ.

ಕರ್ನಾಟಕವು ಭಾರತದಲ್ಲಿಯೇ ಅತಿ ಹೆಚ್ಚು MBBS ಕಾಲೇಜುಗಳು ಮತ್ತು ಸೀಟುಗಳನ್ನು ಹೊಂದಿದೆ. ಆದರೆ #NEET ನಿಂದಾಗಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಸೀಟು ಸಿಗುತ್ತಿಲ್ಲ. ಗ್ರಾಮೀಣ ಮತ್ತು ಕಡಿಮೆ ಆರ್ಥಿಕ ಹಿನ್ನೆಲೆಯ ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ಅಧ್ಯಯನದ ಕನಸನ್ನು ನನಸಾಗಿಸಲು ಇರುವ ಏಕೈಕ ಮಾರ್ಗವೆಂದರೆ ನೀಟ್ ರದ್ದುಗೊಳಿಸಬೇಕು ಎಂದು ಚೇತನ್ ಜೀರಾಳ್ ಟ್ವೀಟ್ ಮಾಡಿದ್ದಾರೆ.

ಲಕ್ಷಾಂತರ ರೂಪಾಯಿ ದುಡ್ಡುಕೊಟ್ಟು ಟ್ಯೂಶನ್ ಕೊಡಿಸಲು ಆಗುವ ಶ್ರೀಮಂತರಿಗೆ ಮಾತ್ರ ಅನುಕೂಲವಾಗುವಂತಹಾ NEET ಪರೀಕ್ಷಾ ವ್ಯವಸ್ತೆಯನ್ನು ಕರ್ನಾಟಕ ಕೈಬಿಡಬೇಕು. #BanNeet ಎಂದು ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ 3200 MBBS ಸೀಟುಗಳೊಂದಿಗೆ 20 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. 3200 ಸೀಟುಗಳಲ್ಲಿ ಸುಮಾರು 480 ಸೀಟುಗಳನ್ನು ಕೇಂದ್ರೀಯ ಕೋಟಾಕ್ಕೆ ನೀಡಲಾಗಿದೆ. ಕಟ್ಟಡ ನಮ್ಮದು, ಸೌಲಭ್ಯಗಳು ನಮ್ಮದು, ಅಧ್ಯಾಪಕರು ನಮ್ಮದು, ವಿಶ್ವವಿದ್ಯಾಲಯ ನಮ್ಮದು. ನಾವು ನಮ್ಮ ಸ್ಥಾನಗಳನ್ನು ಇತರರಿಗೆ ಏಕೆ ನೀಡಬೇಕು? ಎಂದು ಟ್ವಿಟರ್ ಬಳಕೆದಾರರೊಬ್ಬರು ಪ್ರಶ್ನಿಸಿದ್ದಾರೆ.

ಶೇ.95 ಅಂಕ ಪಡೆದ ಎಸ್ಸಿ ಎಸ್ಟಿ ವಿದ್ಯಾರ್ಥಿಗಳೂ ಸಹ ವೈದ್ಯಕೀಯ ಸೀಟು ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಮೀಸಲಾತಿಯನ್ನು ದೂಷಿಸುವುದನ್ನು ನಿಲ್ಲಿಸಿ ಮತ್ತು ನೀಟ್ ಅನ್ನು ದೂಷಿಸಿ. ಸಮಸ್ಯೆ ಪರಿಹಾರಕ್ಕೆ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಿ, ಪ್ರತಿಮೆಗಳ ಬದಲಿಗೆ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಿ. ಕ್ಯಾಪಿಟೇಶನ್ ಮಾಫಿಯಾವನ್ನು ನಿಯಂತ್ರಿಸಿ ಎಂದು ಚೇತನ್ ಕೃಷ್ಣ ಒತ್ತಾಯಿಸಿದ್ದಾರೆ.

7245 ಮೆಡಿಕಲ್ ಸೀಟುಗಳು ಇರುವ ಕರ್ನಾಟಕದಿಂದ ಅತಿ ಹೆಚ್ಚು ಸೀಟುಗಳನ್ನು ಬೇರೆ ರಾಜ್ಯಗಳಿಗೆ ಹಂಚುವ ವ್ಯವಸ್ಥೆಯೇ ನೀಟ್. ಒಂದು ದೇಶ, ಒಂದು ಪರೀಕ್ಷೆ ಹೆಸರಲ್ಲಿ ಒಕ್ಕೂಟ ಸರ್ಕಾರ ಕನ್ನಡದ ಮಕ್ಕಳ ಹಕ್ಕನ್ನು ಕಸಿದಿದೆ.‌ ಅದರ ಪರಿಣಾಮವಾಗಿಯೇ ಕನ್ನಡದ ಮಕ್ಕಳು ಹೊರದೇಶಗಳಿಗೆ ಹೋಗುವಂತಾಗಿದೆ. #BanNeet #RIPNaveen ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ  ಟ್ವೀಟ್ ಮಾಡಿದ್ದಾರೆ.

NEET ಎಂಬುದು ಪದೇ ಪದೇ ಬಡವರ ವಿರೋಧಿ, ಒಕ್ಕೂಟ ವ್ಯವಸ್ಥೆಯ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ. ಇದರಿಂದ ನಗರದ ಶ್ರೀಮಂತರಿಗೆ ಮಾತ್ರ ಲಾಭ. ಗ್ರಾಮೀಣ, ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಹ ಅವಕಾಶಗಳಿಂದ ವಂಚಿತರಾಗಿದ್ದಾರೆ. ಒಟ್ಟಾಗಿ ನಿಂತು ಈ ದಬ್ಬಾಳಿಕೆ ವಿರುದ್ಧ ಹೋರಾಡುವ ಸಮಯ ಇದಾಗಿದೆ. ನೀಟ್ ರದ್ದುಗೊಳಿಸೋಣ ಎಂದು ಶ್ರುತಿ ಮರುಳಪ್ಪ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೇಂದ್ರ ಸರ್ಕಾರ ಮತ್ತು ಗೋದಿ ಮಿಡಿಯಾಗಳಿಗೆ ಛೀಮಾರಿ ಹಾಕುತ್ತಿರುವ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...