Homeಮುಖಪುಟಪಶ್ಚಿಮ ಬಂಗಾಳ ಸ್ಥಳೀಯ ಚುನಾವಣೆಯಲ್ಲಿ ಟಿಎಂಸಿ ದಿಗ್ವಿಜಯ - ಒಂದೂ ಪುರಸಭೆ ಗೆಲ್ಲದ ಬಿಜೆಪಿ-ಕಾಂಗ್ರೆಸ್!

ಪಶ್ಚಿಮ ಬಂಗಾಳ ಸ್ಥಳೀಯ ಚುನಾವಣೆಯಲ್ಲಿ ಟಿಎಂಸಿ ದಿಗ್ವಿಜಯ – ಒಂದೂ ಪುರಸಭೆ ಗೆಲ್ಲದ ಬಿಜೆಪಿ-ಕಾಂಗ್ರೆಸ್!

ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷ ನಾಯಕ ಸುವೇಂದು ಅಧಿಕಾರಿಯವರ ಭದ್ರಕೋಟೆಯಾಗಿದ್ದ ಕಂಠಿ ಪುರಸಭೆಯನ್ನು ಟಿಎಂಸಿ ಗೆದ್ದುಕೊಂಡಿದ್ದು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ನಡೆದ ನಗರ ಸ್ಥಳೀಯ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದ್ದು, ಚುನಾವಣೆ ನಡೆದ 107 ಪುರಸಭೆಗಳ ಪೈಕಿ 103 ಪುರಸಭೆಗಳನ್ನು ಟಿಎಂಸಿ ಗೆದ್ದುಕೊಂಡಿದೆ. ಈ ಮೂಲಕ ವಿಪಕ್ಷಗಳಿಗೆ ಮಣ್ಣು ಮುಕ್ಕಿಸಿದೆ.

ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷ ನಾಯಕ ಸುವೇಂದು ಅಧಿಕಾರಿಯವರ ಭದ್ರಕೋಟೆಯಾಗಿದ್ದ ಕಂಠಿ ಪುರಸಭೆಯನ್ನು ಟಿಎಂಸಿ ಗೆದ್ದುಕೊಂಡಿದ್ದು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

ಇದೆಲ್ಲದರ ನಡುವೆ, ಇತ್ತೀಚೆಗಷ್ಟೇ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವ ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಪಕ್ಷವು ಡಾರ್ಜಿಲಿಂಗ್ ಪುರಸಭೆಯನ್ನು ಗೆದ್ದುಕೊಂಡಿದ್ದು, ಅಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯನ್ನು ಮಣಿಸಿದೆ. ಡಾರ್ಜಿಲಿಂಗ್ ಮುನ್ಸಿಪಾಲಿಟಿಯ ಒಟ್ಟು 32 ಸ್ಥಾನಗಳಲ್ಲಿ 18 ಸ್ಥಾನಗಳನ್ನು ಜಿಜೆಎಂ ಗೆದ್ದುಕೊಂಡು ಅಧಿಕಾರ ಹಿಡಿದಿದೆ.

ಕೆಲವು ಪಟ್ಟಣಗಳಲ್ಲಿ ಕೆಲವು ವಾರ್ಡ್‌ಗಳನ್ನು ಬಿಜೆಪಿ ಮತ್ತು ಕಾಂಗ್ರೆಸ್ ಗೆದ್ದಿದ್ದರೂ ಯಾವುದೇ ಪುರಸಭೆಯಲ್ಲಿ ಅಧಿಕಾರ ಹಿಡಿಯುವಷ್ಟ ಸ್ಥಾನಗಳನ್ನು ಗೆಲ್ಲಲಾಗಿಲ್ಲ.

ಸಿಪಿಐ (ಎಂ) ನೇತೃತ್ವದ ಎಡರಂಗವು ನಾಡಿಯಾ ಜಿಲ್ಲೆಯ ತಾಹೆರ್ಪುರ ಪುರಸಭೆಯಲ್ಲಿ ಗೆಲುವು ಸಾಧಿಸಿದೆ. ಅದು 27 ಪುರಸಭೆಗಳಲ್ಲಿ ಟಿಎಂಸಿ ಎಲ್ಲಾ ವಾರ್ಡ್‌ಗಳನ್ನು ಗೆದ್ದುಕೊಂಡಿದ್ದು, ಆ ಪುರಸಭೆಗಳಲ್ಲಿ ಪ್ರತಿಪಕ್ಷವೇ ಇಲ್ಲದಂತಾಗಿದೆ.

ಮುರ್ಷಿದಾಬಾದ್‌ನ ಬೆಲ್ದಂಗಾ, ಪುರುಲಿಯಾದಲ್ಲಿ ಝಲ್ಡಾ, ಹೂಗ್ಲಿಯ ಚಂಪ್ದಾನಿ ಪುರಸಭೆಗಳಲ್ಲಿ ಯಾವುದೇ ಪಕ್ಷವು ಸ್ಪಷ್ಟ ಬಹುಮತವನ್ನು ಗಳಿಸಲು ಸಾಧ್ಯವಾಗಿಲ್ಲ. ಈ ಪುರಸಭೆಗಳಲ್ಲಿ ಅತ್ರಂತ್ರ ಸ್ಥಿತಿ ನಿರ್ಮಾಣವಾಗಿದೆ. ಸ್ವತಂತ್ರ ಅಭ್ಯರ್ಥಿಗಳು ಈ ಪುರಸಭೆಗಳಲ್ಲಿ ಅಡಳಿತ ರಚಿಸುವ ಪಕ್ಷಗಳಿಗೆ ಕೀಲಿ ಕೈ ಆಗಲಿದ್ದಾರೆ.

ಕಳೆದ ನಾಲ್ಕು ದಶಕಗಳಿಂದ ಸುವೇಂಧು ಅಧಿಕಾರಿ ಕುಟುಂಬದ ತೆಕ್ಕೆಯಲ್ಲಿದ್ದ ಕಂಠಿ ಪುರಸಭೆಯನ್ನು ಟಿಎಂಸಿ ಕಿತ್ತುಕೊಂಡಿದೆ. ಈ ಪುರಸಭೆಯಲ್ಲಿ ಸುವೇಂದು ಅಧಿಕಾರಿ ಅವರ ತಂದೆ ಸಿಸಿರ್ ಅಧಿಕಾರಿ ಅವರು 1981-86 ರಿಂದ ಐದು ವರ್ಷಗಳನ್ನು ಹೊರತುಪಡಿಸಿ, 1971- 2009 ರವರೆಗೆ 25 ವರ್ಷಗಳ ಕಾಲ ಪುರಸಭೆಯ ಅಧ್ಯಕ್ಷರಾಗಿದ್ದರು. ನಂತರ, ಅವರು ಸಂಸದರಾಗಿ ಆಯ್ಕೆಯಾದರು. ಬಳಿಕ, ಕಂಠಿ ಪುರಸಭೆಯ ಅಧಿಕಾರ ಸಿಶಿರ್ ಅವರ ಕಿರಿಯ ಪುತ್ರ ದಿಬ್ಯೇಂದು ಅಧಿಕಾರಿ ವಹಿಸಿಕೊಂಡಿದ್ದರು. ಆ ನಂತರ, 2016 ರಲ್ಲಿ ಸಿಶಿರ್ ಅವರ ಮೂರನೇ ಮಗ ಸೌಮೇಂದು ಅಧಿಕಾರಿ ಅವರು ಕಂಠಿ ಪುರಸಭೆಯ ಅಧ್ಯಕ್ಷರಾಗಿದ್ದರು. ಇದೀಗ, ಸುವೇಂದು ಅಧಿಕಾರಿ ಕುಟುಂಬದ ಭದ್ರಕೋಟಿಯನ್ನು ಟಿಎಂಸಿ ಬೇಧಿಸಿದೆ.

ಉಳಿದಂತೆ, ಕೂಚ್ಬೆಹಾರ್ ಜಿಲ್ಲೆಯ ದಿನ್ಹತಾ ಪುರಸಭೆಯನ್ನು ಟಿಎಂಸಿ ಅವಿರೋಧವಾಗಿ ಗೆದ್ದುಕೊಂಡಿದೆ. ಇಲ್ಲಿ ಮತದಾನ ನಡೆದಿಲ್ಲ.


ಇದನ್ನೂ ಓದಿ; ಸಮಸ್ಯೆ ಮೀಸಲಾತಿಯಲ್ಲಿಲ್ಲ, ಬದಲಿಗೆ NEET ನಲ್ಲಿದೆ: ನೀಟ್ ರದ್ಧತಿಗೆ ಕನ್ನಡಿಗರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...