Homeಮುಖಪುಟಭಾರತದ ದೀಪಾ ಕರ್ಮಾಕರ್‌ ಅವರನ್ನು ಅಮಾನತು ಮಾಡಿದ ಅಂತಾರಾಷ್ಟ್ರೀಯ ಜಿಮ್ನಾಸ್ಟಿಕ್ಸ್‌ ಫೆಡರೇಷನ್

ಭಾರತದ ದೀಪಾ ಕರ್ಮಾಕರ್‌ ಅವರನ್ನು ಅಮಾನತು ಮಾಡಿದ ಅಂತಾರಾಷ್ಟ್ರೀಯ ಜಿಮ್ನಾಸ್ಟಿಕ್ಸ್‌ ಫೆಡರೇಷನ್

- Advertisement -
- Advertisement -

ಹೊಸದಿಲ್ಲಿ: ಭಾರತದ ಜಿಮ್ನಾಸ್ಟಿಕ್ ದೀಪಾ ಕರ್ಮಾಕರ್ ಅವರನ್ನು ಅಂತಾರಾಷ್ಟ್ರೀಯ ಜಿಮ್ನಾಸ್ಟಿಕ್ಸ್‌ ಫೆಡರೇಷನ್ (ಎಫ್‌ಐಜಿ) ಅಮಾನತು ಮಾಡಿದೆ. ಈ ವಿಷಯದ ಕುರಿತು ಭಾರತ ಜಿಮ್ನಾಸ್ಟಿಕ್ಸ್ ಫೆಡರೇಷನ್ ಅಚ್ಚರಿ ವ್ಯಕ್ತಪಡಿಸಿದ್ದು, ತಮಗೆ ಮಾಹಿತಿಯೇ ಇಲ್ಲ ಎಂದೂ ಹೇಳಿದೆ.

ಎಫ್‌ಐಜಿಯ ವೆಬ್‌ಸೈಟ್‌ನಲ್ಲಿ ದೀಪಾ ಅವರ ಹೆಸರು ಅಮಾನತು ಪಟ್ಟಿಯಲ್ಲಿದೆ. ಭಾರತದ ಜಿಮ್ನಾಸ್ಟ್‌ಗಳೆಲ್ಲರ ಹೆಸರುಗಳೆಲ್ಲವೂ ಈ ವೆಬ್‌ಸೈಟ್‌ನಲ್ಲಿವೆ. ಆದರೆ ದೀಪಾ ಅವರ ಹೆಸರಿನ ಮುಂದೆ ಅಮಾನತು ಎಂದು ಗುರುತಿಸಲಾಗಿದೆ.

ಉಳಿದವರೆಲ್ಲರನ್ನೂ ಸಕ್ರಿಯ ಎಂದು ಗುರುತಿಸಲಾಗಿದೆ. 2016ರ ರಿಯೊ ಒಲಿಂಪಿಕ್ಸ್‌ನ ವಾಲ್ಟ್‌ನಲ್ಲಿ ದೀಪಾ ನಾಲ್ಕನೇ ಸ್ಥಾನ ಗಳಿಸಿ ಗಮನ ಸೆಳೆದಿದ್ದರು. ಆದರೆ, ಗಾಯದ ಸಮಸ್ಯೆಯಿಂದಾಗಿ ಅವರು 2019 ರಿಂದ ಯಾವುದೇ ಸ್ಪರ್ಧೆಯಲ್ಲಿಯೂ ಭಾಗವಹಿಸಿರಲಿಲ್ಲ.

ಇದನ್ನೂ ಓದಿ: ಈ ಗುಲಾಬಿಯಿಂದ ಏನು ಮಾಡುವುದು?’: ಕೇಂದ್ರ ಸರ್ಕಾರದ ವಿರುದ್ಧ ಉಕ್ರೇನ್‌ನಿಂದ ಹಿಂತಿರುಗಿದ ವಿದ್ಯಾರ್ಥಿ ಆಕ್ರೋಶ

ಎಫ್‌ಐಜಿಯಿಂದ ಈ ಕುರಿತು ನಮಗೆ ಯಾವುದೇ ಸಂದೇಶ ಬಂದಿಲ್ಲ. ಅವರನ್ನು ಅಮಾನತಿನಲ್ಲಿಡಲು ಕಾರಣವೇನು ಎಂಬುದೂ ಗೊತ್ತಿಲ್ಲ. ಇದು ಸತ್ಯವೋ ಅಥವಾ ಆಕಸ್ಮಿಕವಾಗಿ ನಡೆದಿರುವುದೋ ತಿಳಿದಿಲ್ಲ. ಎಫ್‌ಐಜಿಯೊಂದಿಗಿನ ಮಾತುಕತೆಯಿಂದಷ್ಟೇ ತಿಳಿಯಬೇಕಿದೆ’ ಎಂದು ಜಿಎಫ್‌ಐ ಅಧ್ಯಕ್ಷ ಸುಧೀರ್ ಮಿತ್ತಲ್ ತಿಳಿಸಿದ್ದಾರೆ.

ಅಗರ್ತಲಾದಲ್ಲಿರುವ ದೀಪಾ ಮತ್ತು ಅವರ ಕೋಚ್ ವಿಶ್ವೇಶ್ವರ್ ನಂದಿ ಅವರಿಂದ ಮಾಹಿತಿ ಪಡೆಯಲು ಮಾಡಿದ ಪ್ರಯತ್ನಗಳು ಫಲಿಸಲಿಲ್ಲ. ಅವರು ಫೋನ್ ಕರೆಗಳನ್ನು ಸ್ವೀಕರಿಸುತ್ತಿಲ್ಲ. ಅಶಿಸ್ತು ಅಥವಾ ನಿಯಮ ಉಲ್ಲಂಘನೆಗಾಗಿ ಎಫ್‌ಐಜಿ ಇಂತಹ ಕ್ರಮ ತೆಗೆದುಕೊಂಡಿರಬೇಕು. ಆದರೆ ಅಂತಹ ಯಾವುದೇ ಆರೋಪ ಅವರ ಮೇಲಿಲ್ಲ. ಆ ಕಾರಣಕ್ಕೂ ಅವರ ಮೇಲೆ ಅಮಾನತು ಹಾಕಿರುವ ಸಾಧ್ಯತೆಗಳಿಲ್ಲ‘ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಎಟಿ&ಎಸ್ ಕಾರ್ಮಿಕರ ಧರಣಿಗೆ 365 ದಿನಗಳು ತುಂಬಿದ ಸಂದರ್ಭದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....