Homeಕರ್ನಾಟಕ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

- Advertisement -
- Advertisement -

ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ (ಬಿಫೆಸ್) 13 ಆವೃತ್ತಿ ಗುರುವಾರ ಸಂಜೆ ಉದ್ಘಾಟನೆಯಾಗಿದ್ದು, ಕಾರ್ಯಕ್ರಮದಲ್ಲಿ ವಿ.ಡಿ.ಸಾವರ್ಕರ್‌ ಕಟೌಟ್‌‌ ಪ್ರದರ್ಶಿಸಲಾಗಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ನಡೆಯುತ್ತಿರುವ ಬಿಫೆಸ್‌ 13 ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮ ಗುರುವಾರ ಸಂಜೆ ನಡೆಯಿತು. ಈ ಸಂದರ್ಭದಲ್ಲಿ ಸಾವರ್ಕರ್‌ ಕಟೌಟ್‌ಅನ್ನು ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯಿ ಪಟೇಲ್ ಕಟೌಟ್‌ ಜೊತೆಯಲ್ಲಿ ಪ್ರದರ್ಶಿಸಲಾಗಿದೆ.

ಸಾವರ್ಕರ್‌ ಬಲಪಂಥೀಯ ಪಡೆಯ ಐಕಾನ್‌. ಜೊತೆಗೆ ಬ್ರಿಟಿಷರಿಗೆ ಹಲವು ಭಾರಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿರುವುದು ಮತ್ತೆ ಮತ್ತೆ ಚರ್ಚೆಯಾಗುತ್ತಿದೆ. ರಾಷ್ಟ್ರಪಿತ ಗಾಂಧೀಜಿಯವರ ಹತ್ಯೆಯ ಜೊತೆಗೂ ಸಾವರ್ಕರ್‌ ಹೆಸರು ತಳುಕು ಹಾಕಿಕೊಂಡಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವರ್ಕರ್‌ ಕುರಿತು ಪೋಸ್ಟ್‌ ಹಾಕಿದ್ದನ್ನು ಹಲವು ಕನ್ನಡಿಗರು ಕಟುವಾಗಿ ಟೀಕಿಸಿದ್ದರು. ಆದರೀಗ ಬಿಜೆಪಿ ನೇತೃತ್ವದ ಸರ್ಕಾರ ಸಾವರ್ಕರ್‌ ಪ್ರೇಮವನ್ನು ಮತ್ತೆ ಪ್ರದರ್ಶಿಸಿದೆ.

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದಲ್ಲಿ (ಜಿಕೆವಿಕೆ) ಗುರುವಾರ ಸಂಜೆ 4.30ಕ್ಕೆ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರ ರಾಷ್ಟ್ರೀಯ ಸಮಾವೇಶ ಭವನದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಜೆ ಆರು ಗಂಟೆಯ ಬಳಿಕ ಕಾರ್ಯಕ್ರಮ ಚಾಲನೆ ಪಡೆಯಿತು.

ಇದನ್ನೂ ಓದಿರಿ: ಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆ ಮೇಲೆ ಸಿಎಂ ಅವರನ್ನು ಕರೆಯುವ ಮುನ್ನ ಮುಖ್ಯಮಂತ್ರಿಯವರ ಕುರಿತು ಒಂದು ಕಿರು ವಿಡಿಯೊ ಪ್ರದರ್ಶಿಸಿ ಪರಿಚಯಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ನಟಿ ಡಾ.ಭಾರತೀ ವಿಷ್ಣುವರ್ಧನ್‌, ಮಲಯಾಳಂ ನಿರ್ದೇಶಕ ಪ್ರಿಯದರ್ಶನ್ ಅವರ ಕುರಿತೂ ಕಿರು ವಿಡಿಯೊ ಪ್ರದರ್ಶಿಸಲಾಯಿತು. ಸಚಿವ ಮುನಿರತ್ನ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ನಿರ್ಮಾಪಕ ರಾಕ್‌ಲೈಕ್‌ ವೆಂಕಟೇಶ್‌, ಅಶ್ವಿನಿ ಪುನಿತ್‌ ರಾಜ್‌ಕುಮಾರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್‌, ವಾರ್ತಾ ಇಲಾಖೆಯ ಆಯಕ್ತ ಪಿ.ಎಸ್‌.ಹರ್ಷ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್‌ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ಸುಮಾರು 20 ನಿಮಿಷಗಳ ಕಾಲ ಬಸವರಾಜು ಬೊಮ್ಮಾಯಿಯವರು ಮಾತನಾಡಿದರು. ನಂತರ ಕಾರ್ಯಕ್ರಮದಲ್ಲಿ ಹಾಜರಿದ್ದ ಅತಿಥಿಗಳು ಮಾತನಾಡಿದರು.

ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಹಾಗೂ ಇತರರು ತೆರಳಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ನೀಡಲಾಯಿತು. ಮೂರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಮೊದಲ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗ ಬೆಳೆದುಬಂದ ಹಾದಿಯ ಕುರಿತು ಪ್ರದರ್ಶಿಸಲಾಯಿತು. ಎರಡನೆಯದರಲ್ಲಿ  ಪುನೀತ್‌ ರಾಜ್‌ಕುಮಾರ್‌ ಅಭಿನಯದ ವಿವಿಧ ಚಿತ್ರಗೀತೆಗಗಳಿಗೆ ನೃತ್ಯ ಮಾಡಲಾಯಿತು. ಆ ಮೂಲಕ ಪುನೀತ್ ರಾಜ್‌ಕುಮಾರ್‌ ಅವರಿಗೆ ಗೌರವ ಸಲ್ಲಿಸಲಾಯಿತು.

ಮೂರನೇ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾದರಿ ವ್ಯಕ್ತಿಗಳ (ರೋಲ್‌ ಮಾಡೆಲ್‌) ಕುರಿತು ನೃತ್ಯ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ, ಗಾಂಧೀಜಿ, ಝಾನ್ಸಿರಾಣಿ ಲಕ್ಷ್ಮೀಬಾಯಿ, ಸೈರಾ ನರಸಿಂಹರೆಡ್ಡೆ, ಸುಭಾಷ್ ಚಂದ್ರ ಬೋಸ್‌, ಒನಕೆ ಓಬವ್ವ ಸೇರಿದಂತೆ ಹಲವರನ್ನು ಸ್ಮರಿಸಲಾಯಿತು.

ಇದನ್ನೂ ಓದಿರಿ: ಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ಮಾದರಿ ವ್ಯಕ್ತಿತ್ವಗಳ ಪೈಕಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಇರಲಿಲ್ಲ. ಈ ಪ್ರದರ್ಶನದ ಅಂತ್ಯದಲ್ಲಿ ಎಲ್ಲ ಕಲಾವಿದರು ಒಟ್ಟಿಗೆ ವೇದಿಕೆ ಮೇಲೆ ನಿಂತಾಗ ನೃತ್ಯ ತಂಡವು ಸರ್ದಾರ್ ವಲ್ಲಭಬಾಯಿ ಪಟೇಲ್‌ ಮತ್ತು ವಿ.ಡಿ.ಸಾವರ್ಕರ್‌ ಅವರ ಸುಮಾರು ಹತ್ತು ಅಡಿ ಎತ್ತರದ ಕಟೌಟ್ ಪ್ರದರ್ಶಿಸಿತು.

ಬಿಜೆಪಿ ತನ್ನ ಹಿಡನ್ ಅಜೆಂಡಾಗಳನ್ನು ತುರುಕಲು ಪ್ರತಿಷ್ಟಿತ ಚಲನಚಿತ್ರೋತ್ಸವವನ್ನು ಬಳಸುತ್ತಿದೆಯೇ ಎಂದು ಕೇಳಲು ಅಕಾಡೆಮಿಯ ಅಧ್ಯಕ್ಷ ಸುನೀಲ್‌ ಪುರಾಣಿಕ್ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು.

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಸುನಿಲ್‌ ಪುರಾಣಿಕ್‌, “ನಮ್ಮ ವೀರ ಸಾವರ್ಕರ್‌ ಏನು ಭಯೋತ್ಪಾದಕನೆ? ಆಜಾದಿ ಕಾ ಅಮೃತ ಮಹೋತ್ಸವ ಎಂದು ಕಾರ್ಯಕ್ರಮ ಮಾಡುತ್ತಿದ್ದೇವೆ. ಭಗತ್‌ಸಿಂಗ್‌, ವೀರ ಸಾವರ್ಕರ್‌, ಚಂದ್ರಶೇಖರ್‌ ಆಜಾದ್ ಮೊದಲಾದವರನ್ನು ಸ್ಮರಿಸಲಾಗಿದೆ” ಎಂದು ತಿಳಿಸಿದರು.

ಅಂಬೇಡ್ಕರ್‌ ಅವರನ್ನೇಕೆ ವೇದಿಕೆ ಮೇಲೆ ತರಲಿಲ್ಲ ಎಂದು ಕೇಳಿದ್ದಕ್ಕೆ, “ಆಜಾದಿ ಕಾ ಅಮೃತ ಮಹೋತ್ಸವ ಮಾಡುತ್ತಿದ್ದೇವೆ.  ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರನ್ನು ಸ್ಮರಿಸಿದ್ದೇವೆ. ಅಂಬೇಡ್ಕರ್‌ ಅವರು ಬರೆದ ಸಂವಿಧಾನದಲ್ಲೇ ನಾವು ಬದುಕುತ್ತಿದ್ದೇವೆ” ಎಂದು ಹೇಳಿದರು.

ಶಿವಾಜಿಯನ್ನು ವೇದಿಕೆ ಮೇಲೆ ತಂದಿದ್ದರ ಕುರಿತು ಪ್ರಶ್ನಿಸಿದಾಗ, “ಸಂಗೊಳ್ಳಿ ರಾಯಣ್ಣ, ಝಾನ್ಸಿರಾಣಿ ಲಕ್ಷ್ಮೀಬಾಯಿ ಅವರಂತೆ ಶಿವಾಜಿಯೂ ಕೂಡ ಹೋರಾಟಗಾರ. ಭಾರತೀಯತೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಹೋರಾಡಿದ ವ್ಯಕ್ತಿಯನ್ನು ನೀವು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಅನ್ನುತ್ತೀರಾ?” ಎಂದು ಪ್ರಶ್ನಿಸಿದರು.

ಟಿಪ್ಪು ಅವರನ್ನೇಕೆ ಕೈ ಬಿಟ್ಟಿದ್ದೀರಿ ಎಂದಿದ್ದಕ್ಕೆ, “ಹತ್ತು ನಿಮಿಷದಲ್ಲಿ ಎಷ್ಟು ಜನರನ್ನು ತೋರಿಸಲು ಆಗುತ್ತದೆ. ಟಿಪ್ಪು ನನ್ನ ದೃಷ್ಟಿಯಲ್ಲಿ ವಿವಾದಾತ್ಮಕ ವ್ಯಕ್ತಿ” ಎಂದು ತಿಳಿಸಿದರು. ಶಿವಾಜಿಯೂ ಕೂಡ ವಿವಾದಾತ್ಮಕ ವ್ಯಕ್ತಿಯಲ್ಲವೇ, ಕನ್ನಡಿಗರಿಗೆ ಶಿವಾಜಿಯಿಂದ ಅನ್ಯಾಯವಾಗಿಲ್ಲವೇ ಎಂದರೆ, “ನಮ್ಮ ದೃಷ್ಟಿಯಲ್ಲಿ ಶಿವಾಜಿ ಅಪ್ರತಿಮ ದೇಶಭಕ್ತ. ನೀವು ದೇಶಭಕ್ತಿ, ದೇಶ ಅಂತಾ ಮಾತನಾಡಿ, ಅಥವಾ ಕನ್ನಡ ಪ್ರೇಮ, ಮರಾಠಿ ಅಂತ ಮಾತನಾಡಿ. ಆರು ಲಕ್ಷ ಜನ ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ. ಹತ್ತು ನಿಮಿಷದಲ್ಲಿ ಎಲ್ಲರನ್ನೂ ತೋರಿಸಲು ಆಗುತ್ತಾ?” ಎಂದು ಕೇಳಿದರು.


ಇದನ್ನೂ ಓದಿರಿ: ‘BIFFes’ ಎಂಬ ಅಂತಾರಾಷ್ಟ್ರೀಯ, Sorry ‘ಕನ್ನಡ ಅಂತಾರಾಷ್ಟ್ರೀಯ ಸಿನಿಮೋತ್ಸವ!’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಗಜ್ಯೋತಿ ಬಸವಣ್ಣನವರ ಕರ್ನಾಟಕ ಈಗ ಬಲಪಂಥೀಯರ ಮುಷ್ಠಿ ಯಲ್ಲಿ, ಅವರ ತತ್ವಾಧರಿತ
    ಕಾರ್ಯ ಕ್ರಮಗಳನ್ನು ಸಿಕ್ಕ ಸಿಕ್ಕ ವೇದಿಕೆಗಳನ್ನು ಉಪಯೋಗಿಸಿ ಕೊಂಡು ತರಾತುರಿ ಯಲ್ಲಿ ಜಾರಿಗೆ ತರುವುದು ಅವರ ಹುನ್ನಾರ. ಇವರ ದರ್ಬಾರು ತಾತ್ಕಾಲಿಕವಾಗಬೇಕು. ಅದಕ್ಕೆ ಮತದಾರರು ಕಾರಣವಾಗಬೇಕು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...