Homeಕರ್ನಾಟಕಸುಧಾಕರ್‌‌ ಸದನದಲ್ಲೇ ಕ್ಷಮೆ ಕೇಳಬೇಕು: ಬಿಜೆಪಿ ಶಾಸಕ ಹರ್ಷವರ್ಧನ್‌ ಆಗ್ರಹ

ಸುಧಾಕರ್‌‌ ಸದನದಲ್ಲೇ ಕ್ಷಮೆ ಕೇಳಬೇಕು: ಬಿಜೆಪಿ ಶಾಸಕ ಹರ್ಷವರ್ಧನ್‌ ಆಗ್ರಹ

"ಬೌದ್ಧಧರ್ಮದಿಂದ ಹಾಗೆ ಆಗಿದೆ, ಹೀಗೆ ಆಗಿದೆ ಎಂದು ಬಾಯಿ ಚಪಲಕ್ಕಾಗಿ ಸಚಿವರು ಏನೇನೋ ಮಾತನಾಡಬಾರದು" ಎಂದಿರುವ ಹರ್ಷವರ್ಧನ್‌ ಅವರು ಸಚಿವರಿಗೆ ಇತಿಹಾಸ ಪಾಠ ಮಾಡಿದ್ದಾರೆ.

- Advertisement -
- Advertisement -

ಬೌದ್ಧಧರ್ಮದ ಕುರಿತು ಆಕ್ಷೇಪಾರ್ಹವಾಗಿ ಮಾತನಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ಸದನದಲ್ಲೇ ಕ್ಷಮೆ ಕೇಳಬೇಕು. ವಿರೋಧ ಪಕ್ಷಗಳು ಇದರ ಕುರಿತು ಸದನದಲ್ಲಿ ಮಾತನಾಡಿದರೆ, ನಾನೂ ಅವರೊಂದಿಗೆ ಧ್ವನಿಗೂಡಿಸುತ್ತೇನೆ ಎಂದು ಬಿಜೆಪಿ ಶಾಸಕ ಬಿ.ಹರ್ಷವರ್ಧನ್‌ ಹೇಳಿದ್ದಾರೆ.

ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಹರ್ಷವರ್ಧನ್ ಅವರು, ಸುಧಾಕರ್‌ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದು ಬೌದ್ಧ ಧರ್ಮದ ಇತಿಹಾಸವನ್ನು ವಿವರಿಸಿದ್ದಾರೆ.

“ರಕ್ತಪಾತವನ್ನು ನೋಡಿ ನೊಂದು ಸಾಮ್ರಾಟ್‌ ಅಶೋಕ ಬೌದ್ಧಧರ್ಮವನ್ನು ಸ್ವೀಕರಿಸಿದರು. ಬಳಿಕ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದರು. ಅಷ್ಟು ಶ್ರೇಷ್ಟತೆ ಬೌದ್ಧಧರ್ಮಕ್ಕೆ ಇದೆ. ಹೀಗಾಗಿ ಬೌದ್ಧಧರ್ಮದ ಕುರಿತು ಅಷ್ಟು ಲಘುವಾಗಿ ಸಚಿವರು ಮಾತನಾಡಬಾರದು” ಎಂದು ಪ್ರತಿಕ್ರಿಯಿಸಿದ್ದಾರೆ.

“ಭಾರತದ ರಾಷ್ಟ್ರಧ್ವಜದಲ್ಲಿರುವ ಅಶೋಕ ಚಕ್ರವು ಬೌದ್ಧ ಧರ್ಮದ ಸಂಕೇತ. ರಾಷ್ಟ್ರ ಲಾಂಛನವೂ ಬೌದ್ಧಧರ್ಮದ ಪ್ರೇರಣೆಯಿಂದ ಬಂದಿದೆ. ಇಂದು ನಾವು ಅದನ್ನೆಲ್ಲ ಅನುಸರಿಸುತ್ತಿದ್ದೇವೆ. ಬೌದ್ಧಧರ್ಮದಿಂದ ಹಾಗೆ ಆಗಿದೆ, ಹೀಗೆ ಆಗಿದೆ ಎಂದು ಏನೋ ಬಾಯಿ ಚಪಲಕ್ಕಾಗಿ ಸಚಿವರು ಏನೇನೋ ಮಾತನಾಡಬಾರದು” ಎಂದು ಎಚ್ಚರಿಸಿದ್ದಾರೆ.

“ಸಚಿವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಅವರು ಕೂಡಲೇ ಕ್ಷಮಾಪಣೆ ಕೇಳಬೇಕು. ಸದನದಲ್ಲಿ ವಿರೋಧ ಪಕ್ಷಗಳು ಇದರ ಕುರಿತು ಧ್ವನಿ ಎತ್ತಿದರೆ ನಾನು ಕೂಡ ಇದಕ್ಕೆ ಧ್ವನಿಗೂಡಿಸುತ್ತೇನೆ. ಸಚಿವರು ಸದನದಲ್ಲೇ ಕ್ಷಮಾಪಣೆ ಕೇಳಲಿ. ಬೌದ್ಧಧರ್ಮದ ಕುರಿತು ಲಘವಾಗಿ ಮಾತನಾಡುವುದು ಬೇಡ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಆರೋಗ್ಯ ಸಚಿವರ ಮನಸ್ಸು ಅನಾರೋಗ್ಯ: ಕಾಂಗ್ರೆಸ್‌‌‌‌ ನಾಯಕ, ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ

“ಬೌದ್ಧಧರ್ಮದ ಇತಿಹಾಸ ಬೇಡ, ಸಾಮ್ರಾಟ್ ಅಶೋಕನ ಕುರಿತು ತಿಳಿದುಕೊಳ್ಳಿ ಸಾಕು. ರಷ್ಯಾ ಅಧ್ಯಕ್ಷ ಉಕ್ರೇನ್‌ ವಶಪಡಿಸಿಕೊಳ್ಳಲು ಹೊರಟಿದ್ದಾನೆ. ಸಾಮ್ರಾಟ್ ಅಶೋಕ ಅಫಘಾನಿಸ್ತಾನ, ಶ್ರೀಲಂಕಾ, ಬರ್ಮಾವರೆಗೂ ಸಾಮ್ರಾಜ್ಯ ವಿಸ್ತರಿಸಿದ್ದ. ಅಂಥವನು ಕಳಿಂಗ ಯುದ್ಧದ ಬಳಿಕ ಶಸ್ತ್ರಾಸ್ತ್ರ ತ್ಯಜಿಸುತ್ತಾನೆಂದರೆ ಅವನ ಮನಸ್ಸಿಗೆ ಎಷ್ಟು ನೋವಾಗಿರಬೇಡ” ಎಂದು ಹರ್ಷವರ್ಧನ ಹೇಳಿದ್ದಾರೆ.

“ಅಶೋಕ ಬೌದ್ಧಧರ್ಮವನ್ನು ಸ್ವೀಕರಿಸಿ ತನ್ನ ಮಕ್ಕಳನ್ನು ಶ್ರೀಲಂಕಾಕ್ಕೆ ಕಳುಹಿಸಿ ಬೌದ್ಧಧರ್ಮದ ಬಗ್ಗೆ ಪ್ರಚಾರ ಮಾಡುತ್ತಾನೆ. ಶ್ರೀಲಂಕಾದಂತಹ ದೇಶದಲ್ಲಿ ಬೌದ್ಧಧರ್ಮವೇ ಇಂದಿಗೂ ಇದೆ. ನಮ್ಮ ದೇಶದಲ್ಲಿ ಬೌದ್ಧಧರ್ಮ ಯಾಕೆ ಇಲ್ಲವಾಯಿತು ಎಂಬ ಚರ್ಚೆ ಬೇರೆ ಮಾಡೋಣ” ಎಂದಿದ್ದಾರೆ.

ಬಾಬಾ ಸಾಹೇಬ್‌ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹಿಂದೂ ಧರ್ಮವನ್ನು ತ್ಯಜಿಸುವುದಾಗಿ ಹೇಳಿದ ಮೇಲೆ ಎಲ್ಲ ಧರ್ಮಗಳ ಬಗ್ಗೆ ಅಧ್ಯಯನ ಮಾಡಿದರು. ಇಸ್ಲಾಂ, ಕ್ರೈಸ್ತ, ಸಿಖ್‌ ಧರ್ಮಗಳ ಕುರಿತು ಚಿಂತಿಸಿದರು. ಕೊನೆಗೆ ಅವರು ಆಯ್ಕೆ ಮಾಡಿದ್ದು ಬೌದ್ಧಧರ್ಮವನ್ನು. ಅಷ್ಟು ಶ್ರೇಷ್ಠತೆ ಹಾಗೂ ಪಾವಿತ್ರ್ಯತೆ ಬೌದ್ಧಧರ್ಮದಲ್ಲಿ ಇದೆ. ಸಚಿವರು ಮಾತನಾಡುವಾಗ ಈ ಎಲ್ಲಾ ವಿಷಯವನ್ನು ಗಮನದಲ್ಲಿ ಇಟ್ಟುಕೊಂಡು ಮಾತನಾಡಬೇಕು. ಅವರು ಕೂಡಲೇ ಕ್ಷಮಾಪಣೆ ಕೇಳಬೇಕು” ಎಂದು ಆಗ್ರಹಿಸಿದ್ದಾರೆ.

ಏನಿದು ವಿವಾದ?

ಚಿಕ್ಕಬಳ್ಳಾಪುರ ತಾಲ್ಲೂಕು ಬ್ರಾಹ್ಮಣರ ಸಂಘವು ಇತ್ತೀಚೆಗೆ ಏರ್ಪಡಿಸಿದ್ದ ‘ನಿವೃತ್ತ ನೌಕರರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, “ಭಾರತವನ್ನು ಬೌದ್ಧಧರ್ಮದ ಅಪಾಯದಿಂದ ಕಾಪಾಡಿದ್ದು ಬ್ರಾಹ್ಮಣರ ಹೆಗ್ಗಳಿಕೆಯಾಗಿದೆ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು.

“ಬೌದ್ಧಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿಶಂಕರಾಚಾರ್ಯರಿಗೆ ಸಲ್ಲುತ್ತದೆ” ಎಂದು ಸುಧಾಕರ್‌ ಹೇಳಿದ್ದರು.

“ವಿಜ್ಞಾನಕ್ಕೂ ಮೊದಲು ಮಾನವ ಸಮಾಜಕ್ಕೆ ದಿಕ್ಕುದೆಸೆ ತೋರಿ ಆಚಾರ್ಯ ಸ್ಥಾನದಲ್ಲಿರುವ ಬ್ರಾಹ್ಮಣ ಸಮುದಾಯ ಎಲ್ಲಾ ಸಮಾಜದ ಕಾರ್ಯಕ್ರಮಗಳಿಗೂ ನೈತಿಕ ಬಲ ತುಂಬಿ ಆಗುವಂತೆ ಮಾಡುವ ಶಕ್ತಿಯನ್ನು ಹೊಂದಿದೆ. ಇಂದು ಭಾರತೀಯ ಸಂಸ್ಕೃತಿ, ಆಚಾರ ವಿಚಾರ ವಿಶ್ವಮಾನ್ಯವಾಗಿದ್ದರೆ ಅದರ ಶ್ರೇಯ ಈ ಸಮುದಾಯಕ್ಕೆ ಸಲ್ಲಬೇಕು. ಈ ನಿಟ್ಟಿನಲ್ಲಿ ಸಾವಿರಾರು ವರ್ಷದಿಂದ ನಾಗರಿಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿರುವ ಬ್ರಾಹ್ಮಣ ಸಮುದಾಯವು ವಿಶೇಷ ಗೌರವ ಸ್ಥಾನವನ್ನು ಹೊಂದಿದೆ” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಭಾರತವನ್ನು ಬೌದ್ಧಧರ್ಮದ ಅಪಾಯದಿಂದ ಕಾಪಾಡಿದ್ದು ಬ್ರಾಹ್ಮಣರು: ಸಚಿವ ಸುಧಾಕರ್‌ ಹೇಳಿಕೆಗೆ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...