Homeಮುಖಪುಟಉಕ್ರೇನ್‌- ರಷ್ಯಾ ವಾರ್‌: ಯುರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ

ಉಕ್ರೇನ್‌- ರಷ್ಯಾ ವಾರ್‌: ಯುರೋಪ್‌ನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ

ಜಪೋರಿಝಿಯಾ ಪರಮಾಣು ಸ್ಥಾವರ ಸ್ಫೋಟಿಸಿದರೆ, ಚೋರ್ನೋಬಿಲ್‌ಗಿಂತ 10 ಪಟ್ಟು ದೊಡ್ಡ ದುರಂತವಾಗುತ್ತದೆ: ಉಕ್ರೇನ್‌

- Advertisement -
- Advertisement -

ಕೀವ್‌: ರಷ್ಯಾ ದಾಳಿಯ ಬಳಿಕ ಉಕ್ರೇನ್‌ನಲ್ಲಿರುವ ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ರಷ್ಯಾದ ಪಡೆಗಳು ಅಗ್ನಿಶಾಮಕ ದಳದ ಮೇಲೆ ಗುಂಡಿನ ದಾಳಿ ಮುಂದುವರಿಸಿವೆ ಎಂದು ಜಪೋರಿಝಿಯಾ ಪರಮಾಣು ಸ್ಥಾವರದ ಬಳಿಯ ಪಟ್ಟಣದ ಮೇಯರ್ ತಿಳಿಸಿದ್ದಾರೆ.

“ಝಪೊರಿಝಿಯಾ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ರಷ್ಯಾದ ಪಡೆಗಳು ಕ್ಷಪಣಿ ದಾಳಿ ನಡೆಸಿದ ಪರಿಣಾಮವಾಗಿ ಬೆಂಕಿ ಕಾಣಿಸಿಕೊಂಡಿದೆ” ಎಂದು ಇಲ್ಲಿನ ವಕ್ತಾರ ಆಂಡ್ರೇ ತುಜ್ ವಿಡಿಯೊ ಮೂಲಕ ತಿಳಿಸಿದ್ದಾರೆ. ಯಾವುದೇ ವಿಕಿರಣ ಘಟನೆ ಸಂಭವಿಸಬಹುದೇ ಎಂದು ನಿಕಟವಾಗಿ ಗಮನಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ತಕ್ಷಣದಲ್ಲಿ ವಿಕಿರಣ ಘಟನೆ ವರದಿಯಾಗಿಲ್ಲ. ಅಗತ್ಯ ಉಪಕರಣಗಳು ಬೆಂಕಿಗೆ ಸಿಲುಕಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಆದರೆ ಆಕ್ರಮಣಕಾರಿ ಪಡೆಗಳು ಮುಂದೆ ಏನು ಮಾಡಬಹುದು ಎಂಬುದು ಸ್ಪಷ್ಟವಾಗಿಲ್ಲ.

ಚೆರ್ನೋಬಿಲ್ ಪರಮಾಣು ದುರಂತವನ್ನು “ಪುನರಾವರ್ತನೆ” ಮಾಡಲು ರಷ್ಯಾ ಪ್ರಯತ್ನಿಸುತ್ತಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮರ್ ಝೆಲೆನ್ಸ್ಕಿ ಆರೋಪಿಸಿದ್ದಾರೆ. ಜಪೋರಿಝಿಯಾ ಪರಮಾಣು ಸ್ಥಾವರದಲ್ಲಿನ ಬಿಕ್ಕಟ್ಟಿನ ಬಗ್ಗೆ ಯುಎಸ್ ಅಧ್ಯಕ್ಷ ಜೋ ಬಿಡನ್ ಸೇರಿದಂತೆ ಅಂತಾರಾಷ್ಟ್ರೀಯ ನಾಯಕರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ.

“ರಷ್ಯಾ ಹೊರತುಪಡಿಸಿ ಯಾವುದೇ ದೇಶವು ಪರಮಾಣು ಶಕ್ತಿ ಘಟಕಗಳ ಮೇಲೆ ಗುಂಡು ಹಾರಿಸಿಲ್ಲ” ಎಂದು ಝೆಲೆನ್ಸ್ಕಿ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಯುರೋಪಿನ ಅತಿದೊಡ್ಡ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಬೆಂಕಿ ಕಾಣಿಸಿಕೊಂಡ ನಂತರ ದಾಳಿಯನ್ನು ನಿಲ್ಲಿಸುವಂತೆ ರಷ್ಯಾದ ಪಡೆಗಳಿಗೆ ಉಕ್ರೇನಿಯನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಶುಕ್ರವಾರ ಕರೆ ನೀಡಿದ್ದಾರೆ.

ಆಗ್ನೇಯ ಉಕ್ರೇನ್‌ನ ಕೈಗಾರಿಕಾ ನಗರವಾದ ಜಪೋರಿಝಿಯಾದಲ್ಲಿನ ಈ ಸ್ಥಾವರವು ದೇಶದ ಪರಮಾಣು ಶಕ್ತಿಯ ಅಂದಾಜು 40 ಪ್ರತಿಶತವನ್ನು ಪೂರೈಸುತ್ತದೆ.

“ಜಪೋರಿಝಿಯಾ ಸ್ಥಾವರ ಸ್ಫೋಟಿಸಿದರೆ, ಚೋರ್ನೋಬಿಲ್‌ಗಿಂತ 10 ಪಟ್ಟು ದೊಡ್ಡ ದುರಂತವಾಗುತ್ತದೆ. ರಷ್ಯನ್ನರು ತಕ್ಷಣವೇ ಬೆಂಕಿಯನ್ನು ನಿಲ್ಲಿಸಬೇಕು.  ಅಗ್ನಿಶಾಮಕ ಸಿಬ್ಬಂದಿಗೆ ಅವಕಾಶ ನೀಡಬೇಕು. ಭದ್ರತಾ ವಲಯವನ್ನು ಸ್ಥಾಪಿಸಬೇಕು” ಎಂದು ಕುಲೇಬಾ ಟ್ವೀಟ್ ಮಾಡಿದ್ದಾರೆ.

ರಷ್ಯಾದ ಪಡೆಗಳು “ಎಲ್ಲಾ ಕಡೆಯಿಂದ” ಗುಂಡು ಹಾರಿಸುತ್ತಿವೆ ಎಂದು ಅವರು ಬರೆದಿದ್ದಾರೆ.

1986ರ ಚೆರ್ನೋಬಿಲ್ ದುರಂತದ ಸ್ಥಳವನ್ನು ಒಳಗೊಂಡಂತೆ ಉಕ್ರೇನ್‌ನ ಪರಮಾಣು ಸ್ಥಳಗಳಲ್ಲಿನ ಎಲ್ಲಾ ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಯುಎನ್‌ನ ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯು ವಿಶ್ವಸಂಸ್ಥೆಯಲ್ಲಿ ಈಗಾಗಲೇ ರಷ್ಯಾವನ್ನು ಒತ್ತಾಯಿಸಿದೆ.


ಇದನ್ನೂ ಓದಿರಿ: ಉಕ್ರೇನ್‌- ರಷ್ಯಾ ಯುದ್ಧ: ಭಾರತೀಯ ವಿದ್ಯಾರ್ಥಿಯ ಮೇಲೆ ಗುಂಡಿನ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...